Breaking News

Yearly Archives: 2021

ಉತ್ತರ ಕನ್ನಡದ ಮಹಿಳೆಯಿಂದ ಅಂಗಾಂಗ ದಾನ; ಧಾರವಾಡದಿಂದ ಬೆಂಗಳೂರಿಗೆ ಮಹಿಳೆಯ ಲಿವರ್ ಏರ್​ಲಿಫ್ಟ್

ಧಾರವಾಡ: ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಲಿವರ್​ನ್ನು ಏರ್‌ಲಿಫ್ಟ್ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಬೆಂಗಳೂರಿಗೆ ಮೂಲಕ ರವಾನಿಸಲಾಗಿದೆ. ಲೀವರ್​ನ್ನು ಹುಬ್ಬಳಿಯ ವಿಮಾನ ನಿಲ್ದಾಣಕ್ಕೆ ರವಾನಿಸಲು ಗ್ರೀನ್ ಕಾರಿಡಾರ್ ಮೂಲಕ ಅಂಬ್ಯುಲೆನ್ಸ್‌ಗೆ ಪೊಲೀಸರು ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಅಂಗಾಗ ದಾನ ಮಾಡಿದ ಮಹಿಳೆಯ ಜತೆ ಪೊಲೀಸ್ ಇಲಾಖೆಯೂ ಮಾನವೀಯ ಕಾರ್ಯದಲ್ಲಿ ಕೈಜೋಡಿಸಿದೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಗ ದಾನ ಮಾಡಲಾಗಿದೆ. ಉತ್ತರ …

Read More »

ಹುಬ್ಬಳ್ಳಿಯಲ್ಲಿ 10 ಜನರ ಕಣ್ಣು ಕಿತ್ತುಕೊಂಡ ಬ್ಲ್ಯಾಕ್ ಫಂಗಸ್- ಒಟ್ಟು 46 ಮಂದಿಗೆ ದೃಷ್ಟಿ ದೋಷ

ಹುಬ್ಬಳ್ಳಿ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿರುವ ಸೋಂಕಿನ ತೀವ್ರತೆ ಕಡಿಮೆಯಾಗುವ ಮೊದಲೇ ಕರಿ ಮಾರಿ ಬ್ಲ್ಯಾಕ್​ ಫಂಗಸ್​ ತನ್ನ ಕರಾಳತೆಯನ್ನು ತೋರುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೂ 10 ಮಂದಿ ಫಂಗಸ್​​ನಿಂದ ಸಂಪೂರ್ಣ ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ 46 ಜನರಿಗೆ ದೃಷ್ಟಿ ದೋಷ ಕಂಡು ಬಂದಿತ್ತು. ಕೊರೊನಾದಿಂದ ಗುಣಮುಖರಾದ ವ್ಯಕ್ತಿಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡು ಬರುತ್ತಿದ್ದು, ಹಲವರಿಗೆ ಮೂಗಿನ ಮೂಲಕವೂ ಬ್ಲ್ಯಾಕ್ ಹಬ್ಬಿ, ಕಣ್ಣಿನ ನರಗಳಿಗೆ …

Read More »

ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ …

Read More »

ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ ಸಸಿ ನೆಡುವ ಕಾರ್ಯಕ್ರಮಕ್ಕೆ ರಮೇಶ್ ಜಾರಕಿಹೊಳಿ ಚಾಲನೆ

ಗೋಕಾಕ: ಸದ್ಯಕ್ಕೆ ಗೋಕಾಕ ನಗರದ ಎಲ್ಲಾ ರೀತಿಯ ಅಭಿವೃದ್ಧಿ ಹಾಗೂ, ಇನ್ನಿತರ ಕೆಲಸ ಕಾರ್ಯ ಗಳಲ್ಲಿ ರಮೇಶ್ ಜಾರಕಿಹೊಳಿ ಹೆಚ್ಚಿನ ಒತ್ತನ ಕೊಡುತ್ತಿದ್ದಾರೆ. ಇಂದು ಗೋಕಾಕ ನಗರದ ಗ್ರಾಮೀಣ ಮಂಡಲದ ರೈತ ಮೋರ್ಚಾ ವತಿಯಿಂದ ಗೋಕಾಕ ನಗರದ ಹೊರವಲಯದ ಯೋಗಿ ಕೊಳ್ಳ ರಸ್ತೆ ಮಾರ್ಗದಲ್ಲಿ 200 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾದ ಸಾಹುಕಾರ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯ ಕ್ರಮಕ್ಕೆ ಸಸಿ …

Read More »

ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು.ಮಕ್ಕಳ ಮನೆಯ ಅಂಗಳದ ಆಟಕ್ಕೆ ಬ್ರೇಕ್

ಬೆಳಗಾವಿ- ಬೆಳಗಾವಿ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ವಿಪರೀತವಾಗಿದೆ.ಪ್ರತಿಯೊಂದು ಬಡವಾಣೆಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ನಗರದಲ್ಲಿ ಭೌ…ಬೌ..ಚಳುವಳಿ ಶುರುವಾಗಿದೆ. ಪ್ರಾಣಿ ದಯಾಮಯಿಗಳ ವಿಶೇಷ ಕಾಳಜಿಯಿಂದಾಗಿ ಬೆಳಗಾವಿಯಲ್ಲಿ ಬೀದಿ ನಾಯಿಗಳ ಸಂತತಿ ಹೆಚ್ಚಾಗಿದ್ದು.ಮಕ್ಕಳು ಮನೆಯ ಅಂಗಳದಲ್ಲಿ ಆಟ ಆಡುವದೇ ಕನಸಿನ ಮಾತಾಗಿದೆ.ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು.ಮಕ್ಕಳ ಮನೆಯ ಅಂಗಳದ ಆಟಕ್ಕೆ ಬ್ರೇಕ್ ಬಿದ್ದಿದೆ. ನಾಯಿಗಳ ಸಂತತಿ ಕಂಟ್ರೋಲ್ ಮಾಡಲು,ಬೆಳಗಾವಿ ಮಹಾನಗರ ಪಾಲಿಕೆ ಪ್ರತಿ ವರ್ಷ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ …

Read More »

ಕೋವಿಡ್ ಸಂಕಟದ ಸಮಯದಲ್ಲಿ ನೆರವಿಗೆ ಧಾವಿಸದ ಕಾಂಗ್ರೆಸ್ನಿಂದ ಮೊಸಳೆ ಕಣ್ಣೀರು: ಕ್ಯಾ.ಕಾರ್ಣಿಕ್

ಬೆಂಗಳೂರು: ತಾವು ಆಯ್ಕೆಯಾದ ಕ್ಷೇತ್ರದ ಜನರ ಸಹಾಯಕ್ಕೆ ಕೋವಿಡ್ ಸಂಕಟದ ಸಂದರ್ಭದಲ್ಲಿ ಧಾವಿಸದ ಕಾಂಗ್ರೆಸ್‍ನ ಮಹಾನ್ ನಾಯಕರುಗಳು ಈಗ “ಡೆತ್ ಆಡಿಟ್”ನ ಕುರಿತಾಗಿ ಮಾತನಾಡುತ್ತ ರಾಜ್ಯಾದ್ಯಂತ ಪ್ರವಾಸ ಮಾಡುವ ಹೇಳಿಕೆ ನೀಡಿರುವುದು ರಾಜಕೀಯ ಸೋಗಲಾಡಿತಕ್ಕೆ ಒಂದು ಸ್ಪಷ್ಟ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಟೀಕಿಸಿದ್ದಾರೆ. ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಸಂತ್ರಸ್ತ ಜನರ ನೆರವಿಗೆ ಧಾವಿಸದ ಕಾಂಗ್ರೆಸ್ ಕೇವಲ ಟ್ವಿಟರ್ ಅಭಿಯಾನದ ಮೂಲಕ ಕೇಂದ್ರ …

Read More »

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ನದಿಯಂತಾದ ಮಸ್ಕಿ ರಸ್ತೆಗಳು. ಮನೆಗಳಿಗೆ ನುಗ್ಗಿದ ನೀರು

ರಾಯಚೂರು: ರಾಯಚೂರು ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಸ್ಕಿ ಪಟ್ಟಣದ ಗಾಂಧಿನಗರ ಬಡಾವಣೆಯಲ್ಲಿ ಭಾರಿ ಮಳೆಯ ಕಾರಣ ಭಾರಿ ಪ್ರಮಾಣದ ನೀರು ರಸ್ತೆ ಮೇಲೆ ಹರಿದು ಮನೆಗಳಿಗೆ ನುಗ್ಗಿದ್ದು ನಿವಾಸಿಗಳಿಗೆ ತೊಂದರೆಯಾಗಿದೆ. ಮಸ್ಕಿಯ ಅನೇಕ ರಸ್ತೆ, ಬಡಾವಣೆಗಳು ನದಿಗಳಾಂಗಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ, ಅವಾಂತರ ಸೃಷ್ಟಿಸಿದ್ದು, ಮನೆಯಿಂದ ನೀರು ಹೊರಹಾಕಲು ಜನ ಹರಸಾಹಸ ನಡೆಸಿದ್ದಾರೆ. ಮಸ್ಕಿ ಪಟ್ಟಣ ಅನೇಕ ಭಾಗದಲ್ಲಿ …

Read More »

ಜುಲೈ ಅಂತ್ಯದೊಳಗೆ 51.6 ಕೋಟಿ ಡೋಸ್ ಲಸಿಕೆ ನೀಡಿಕೆ; ಕೇಂದ್ರದಿಂದ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ

ದೆಹಲಿ: ಜುಲೈ ತಿಂಗಳ ಅಂತ್ಯದೊಳಗೆ ಅಂದರೆ, ಜುಲೈ 31ರ ಒಳಗೆ 51.6 ಕೋಟಿ ಡೋಸ್ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ ಮಾಡಿದೆ. ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 94 ಕೋಟಿ ಜನರಿದ್ದಾರೆ. 94 ಕೋಟಿ ಜನರಿಗೆ 188 ಕೋಟಿ ಡೋಸ್ ಲಸಿಕೆಯ ಅಗತ್ಯವಿದೆ. ಹೀಗಾಗಿ ಆಗಸ್ಟ್‌ನಿಂದ ಡಿಸೆಂಬರ್‌ಗೆ 135 ಕೋಟಿ ಡೋಸ್ ನೀಡಲಾಗುತ್ತದೆ. ಅಗತ್ಯವಿರುವಷ್ಟು ಲಸಿಕೆ ಆಗಸ್ಟ್-ಡಿಸೆಂಬರ್ ಅವಧಿಯಲ್ಲಿ ಲಭ್ಯವಾಗಲಿದೆ ಎಂದು …

Read More »

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾದಕ ವಸ್ತುಗಳ ಸರಬರಾಜು ನಿಯಂತ್ರಣಕ್ಕೆ ರೂಪಿಸಲಾಗಿರುವ ಎನ್‌ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ಕರ್ನಾಟಕದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಜೊತೆಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ …

Read More »

ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ, 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯವೇ ಇಲ್ಲ

ಬೆಂಗಳೂರು: ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ ಇವೆ. 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ. 18 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಫ್ಯಾನ್‌ ಇಲ್ಲ. ಇದನ್ನು ಸರಿಪಡಿಸಲು ಪ್ರತ್ಯೇಕ ಹಣಕಾಸಿನ ಲಭ್ಯತೆ ಇಲ್ಲ ಎಂದು ಸ್ವತಃ ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಒಪ್ಪಿಕೊಂಡಿದೆ. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಲಾದ ಲಿಖೀತ …

Read More »