ಬೆಂಗಳೂರು: ಕೋವಿಡ್ ತುರ್ತು ಪರಿಸ್ಥಿತಿ ನಿರ್ವಹಣೆಯಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ)ವನ್ನು ಅತ್ಯುತ್ತಮವಾಗಿ ಬಳಕೆ ಮಾಡಿದ ರಾಜಧಾನಿ ಬೆಂಗಳೂರಿಗೆ ಸ್ಮಾರ್ಟ್ ಸಿಟಿ ವಿಶೇಷ ಪುರಸ್ಕಾರ ಲಭಿಸಿದೆ. ದೇಶದ ವಿವಿಧೆಡೆ ಸ್ಮಾರ್ಟ್ ಸಿಟಿ ಯೋಜನೆ ಗಳ 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಸ್ಪರ್ಧೆಗಳಲ್ಲಿ ಕೇಂದ್ರ ಸರಕಾರದ ವತಿಯಿಂದ ಈ ಪುರಸ್ಕಾರ ನೀಡಲಾಗಿದೆ. ಕಾಮಗಾರಿಗಳಲ್ಲಿ ಪದವೀಧರರಿಗೆ ಇಂಟರ್ನ್ ಶಿಪ್ ನೀಡುವ ಯೋಜನೆಯ ವಿಭಾಗದಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿಯನ್ನು ರನ್ನರ್ ಅಪ್ ಎಂದು ಘೋಷಿಸಲಾಗಿದೆ. ಹವಾಮಾನ …
Read More »Yearly Archives: 2021
ಸಾರಿಗೆ ಮುಷ್ಕರ: ಡಿ.31ರ ವರೆಗೆ ನಿಷೇಧ
ಬೆಂಗಳೂರು: ಅಗತ್ಯ ಸೇವೆಗಳ ಅಡಿಯಲ್ಲಿ ಸಾರಿಗೆ ನೌಕರರ ಮುಷ್ಕರವನ್ನು ಇದೇ 30ರವರೆಗೆ ನಿಷೇಧಿಸಿದ್ದ ರಾಜ್ಯ ಸರ್ಕಾರ, ಇದೀಗ ಡಿ. 31ರವರೆಗೆ ಆ ಆದೇಶವನ್ನು ವಿಸ್ತರಿಸಿದೆ. ‘ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ- 2013ರಡಿ ಅಗತ್ಯ ಸೇವೆಗಳಲ್ಲಿ ಮುಷ್ಕರ ನಿಷೇಧಿಸಿ, ಫೆ. 2ರಂದು ಆದೇಶ ಹೊರಡಿಸಲಾಗಿತ್ತು. ಪ್ರತಿ ಆರು ತಿಂಗಳಿಗೊಮ್ಮೆ ಇಂಥ ಆದೇಶ ಹೊರಡಿಸಲಾಗುತ್ತದೆ’ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ ‘ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಮತ್ತೆ ಮುಷ್ಕರಕ್ಕೆ …
Read More »ಲಾಕ್ ಡೌನ್, ನೌಕರರ ಮುಷ್ಕರದಿಂದ ಕೆಎಸ್ ಆರ್ ಟಿಸಿಗೆ 4,000ಕೋಟಿ ರೂ ನಷ್ಟ- ಲಕ್ಷ್ಮಣ ಸವದಿ
ಬೆಳಗಾವಿ: ಲಾಕ್ ಡೌನ್ ಮತ್ತು ನೌಕರರ ಮಷ್ಕರದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಕಳೆದ 15 ತಿಂಗಳಲ್ಲಿ 4,000 ಕೋಟಿ ರೂ ನಷ್ಟ ಅನುಭವಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೊದಲನೇ ಅಲೆ ನಂತರ ಕೆಎಸ್ ಆರ್ ಟಿಸಿ ನೌಕರರು ಮುಷ್ಕರಕ್ಕೆ ಇಳಿದರು. ಮುಷ್ಕರ ಕೊನೆಗೊಳಿಸುತ್ತಿದ್ದಂತೆ ಸಾಂಕ್ರಾಮಿಕದ ಎರಡನೇ ಅಲೆ ಆರಂಭವಾಯಿತು. ಇಲಾಖೆ …
Read More »ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ. ಜುಲೈ 1ರಿಂದ ಡಿಸೆಂಬರ್ 31ರವರೆಗೆ …
Read More »ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ, ರಾಜ್ಯದ ರಾಜೀವ್ ಚಂದ್ರಶೇಖರ್ ಸೇರಿ 27 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್ ವಿಸ್ತರಣೆ ಅಥವಾ ಪುನರ್ರಚನೆಯ ಕುರಿತು ಯಾವುದೇ ಅಧಿಕೃತ ಮಾತುಗಳು ಇಲ್ಲದಿದ್ದರೂ ಸಂಪುಟ ವಿಸ್ತರಣೆಯಂತೂ ಖಚಿತವೆಂದು ಹೇಳಲಾಗುತ್ತಿದೆ. ಪ್ರಮುಖ ನಾಯಕರಾದ ಜ್ಯೋತಿರಾಧಿತ್ಯ ಸಿಂಧ್ಯ, ಸುಶೀಲ್ ಮೋದಿ, ಸರ್ಬಾನಂದ ಸೋನೋವಾಲ್, ನಾರಾಯಣ ರಾಣೆ ಮತ್ತು ಭೂಪೆಂದ್ರ ಯದವ್ ಸೇರಿದಂತೆ 27 ಮಂದಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ. ನರೇಂದ್ರ ಮೋದಿ ಸಂಪುಟಕ್ಕೆ ಸೇರುವ ಹೊಸ ಮಂತ್ರಿಗಳೆಂದರೆ, ಮಧ್ಯಪ್ರದೇಶದ ಕಾಂಗ್ರೆಸ್ ಮಾಜಿ …
Read More »ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!
ದಾವಣಗೆರೆ: ಜನಪ್ರತಿನಿಧಿಗಳೆಂದರೆ ಸಾಮಾನ್ಯವಾಗಿ ಭೇಟಿಗೆ ಸಿಗುವುದೇ ಅಪರೂಪ. ಇನ್ನು ಏನಾದರೂ ಕೆಲಸ ಆಗಬೇಕೆಂದರೆ ಗೆದ್ದ ಮೇಲೆ ಅವರು ಪ್ರಜೆಗಳ ಪಾಲಿಗೆ ಗಗನಕುಸುಮ. ಹೀಗಿರುವಾಗ ಇಲ್ಲೊಬ್ಬ ಜನಪ್ರತಿನಿಧಿ ತನ್ನ ತಮ್ಮನ ಮದುವೆಗಾಗಿ ಎರಡು ದಿನ ರಜೆ ತೆಗೆದುಕೊಳ್ಳಲಿಕ್ಕೂ ಅರ್ಜಿ ಹಾಕಿ ಮನವಿ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮಪಂಚಾಯಿತಿಯ ಅರೇಹಳ್ಳಿ ಗ್ರಾಮದ ವಾರ್ಡ್-04ರ ಸದಸ್ಯ ಚೇತನ್ ಕುಮಾರ್ ಅರೇಹಳ್ಳಿ ಹೀಗೆ ರಜೆ ಅರ್ಜಿ ಸಲ್ಲಿಸಿ ವಿನಂತಿಸಿಕೊಳ್ಳುವ ಮೂಲಕ ಹಲವರ …
Read More »ಪೊಲೀಸರೊಂದಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಾಗ್ವಾದ
ಬಾಗಲಕೋಟೆ : ಜಿಲ್ಲೆಯ ಇಳಕಲ್ಲ ನಗರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪೊಲೀಸರೊಂದಿಗೆ ವಾಗ್ವಾದ ನಡೆದ ಪ್ರಸಂಗ ಶನಿವಾರ ಸಂಜೆ ನಡೆದಿದೆ. ಮಾಜಿ ಶಾಸಕ ಕಾಶಪ್ಪನವರ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ವಿಚಾರಣೆಗೆ ಹಾಜರಾಗುವ ಜಾಮೀನುಸಹಿತ ವಾರೆಂಟ್ ಜಾರಿಯಾಗಿದ್ದು, ಅದನ್ನು ತಲುಪಿಸಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಇದಕ್ಕೂ ಮುಂಚೆ ಕಾಶಪ್ಪನವರ ಮನೆಯಲ್ಲಿ ಕೌಟುಂಬಿಕ ಜಗಳ ನಡೆದಿದೆ ಎಂದು ಅಕ್ಕ-ಪಕ್ಕದ ಮನೆಯವರು ಫೋನ್ ಕಾಲ್ ಮಾಡಿ, ದೂರಿದ್ದರು. …
Read More »ದಕ್ಷಿಣ ಕನ್ನಡ: ಪದವಿ ವಿದ್ಯಾರ್ಥಿಗಳಿಗೆ, ಭೋಧಕರಿಗೆ ಕೋವಿಡ್ ಲಸಿಕೆ ನಾಳೆಯಿಂದ
ಮಂಗಳೂರು: ಮುಂದಿನ ತಿಂಗಳಿಂದ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಸೋಮವಾರದಿಂದ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್, ಪ್ಯಾರಾಮೆಡಿಕಲ್ ಕಾಲೇಜುಗಳ 18 ವರ್ಷ ಮೇಲಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಭ್ಯತೆಗೆ ಅನುಗುಣವಾಗಿ ಲಸಿಕಾ ಶಿಬಿರ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ಕುಮಾರ್ ಹೇಳಿದ್ದಾರೆ. ಜೂನ್ 28 ರಿಂದ ಜಿಲ್ಲೆಯ ಎಲ್ಲ …
Read More »ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್ ಪರಿಹಾರ ಪ್ಯಾಕೇಜ್; ಧಾರವಾಡ ಆಟೋ ಚಾಲಕರ ಆಕ್ರೋಶ
ಧಾರವಾಡ: ಕರ್ನಾಟಕ ಸರ್ಕಾರ ಕೊರೊನಾ ಲಾಕ್ಡೌನ್ ಪರಿಣಾಮ ಸಂತ್ರಸ್ತರಾದ ಕೆಲ ವರ್ಗದವರಿಗೆ ಪರಿಹಾರ ಘೋಷಿಸಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುತ್ತಿಲ್ಲ ಎಂಬ ಕೂಗು ಎದ್ದಿದೆ. ಅದರಲ್ಲೂ ಆಟೋ ಚಾಲಕರಿಗೆ ಪರಿಹಾರ ಕೈಗೆ ಬಾರದೆ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಘೋಷಿಸಿದ್ದ 3 ಸಾವಿರ ರೂ. ಪರಿಹಾರ ಮೊತ್ತ ರಾಜ್ಯದ ಅನೇಕ ಕಡೆ ಆಟೋ ಚಾಲಕರಿಗೆ ಇನ್ನೂ ತಲುಪಿಲ್ಲ. ಧಾರವಾಡದಲ್ಲಿಯೂ ಆಟೋ ಚಾಲಕರಿಗೆ ಪರಿಹಾರ ಸಿಗದಿರುವುದರಿಂದ ಭಾರೀ ಆಕ್ರೋಶ …
Read More »ಮನೆಗೆ ಬಂದ ಸೊಸೆಯ ಹಾಗೆ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ ,ಯಡಿಯೂರಪ್ಪ ಬಿಜೆಪಿ ಬಿಟ್ಟರೆ ಬರೋದು 40 ಸೀಟು ಮಾತ್ರ : ಸಿಎಂ.ಇಬ್ರಾಹಿಂ
ಬೆಂಗಳೂರು: ಮನೆಗೆ ಬರುವಾಗ ಸೊಸೆ ಹೊಸದಾಗಿಯೇ ಬರುವುದು. ಸೊಸೆಗೆ ನೀನು ವಲಸೆ ಬಂದವಳೆಂದು ಹೇಳಲು ಆಗುತ್ತದೆಯೇ? ಸ್ವಲ್ಪ ದಿನವಾದರೆ ಅವಳ ಕೈಗೆ ಕೀಲಿ ಕೈ ಹೋಗುತ್ತದೆ. ಹಾಗೆಯೇ ಈಗ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ. ಹಾಗಾಗಿ ವಲಸಿಗ, ಹೊಸಬ ಎನ್ನುವ ಭೇದಭಾವ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅವರು,ಸಿದ್ದರಾಮಯ್ಯನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಮುಂದೆ ತಂದವರು ಯಾರು? ಇಂತವನೊಬ್ಬ …
Read More »