Breaking News
Home / 2021 (page 5)

Yearly Archives: 2021

ಭಾರತದಲ್ಲಿ ಒಂದೇ ದಿನ 13,154 ಮಂದಿಗೆ ಕೊರೊನಾವೈರಸ್!

ನವದೆಹಲಿ, ಡಿಸೆಂಬರ್ 30: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರ ಮಧ್ಯೆ ಓಮಿಕ್ರಾನ್ ರೂಪಾಂತರ ಸೋಂಕಿತರ ಸಂಖ್ಯೆಯು 961ಕ್ಕೆ ಏರಿಕೆಯಾಗಿದೆ.   ಕಳೆದ 24 ಗಂಟೆಗಳಲ್ಲಿ 13,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 268 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ …

Read More »

ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಒಂದೆಡೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ( Karnataka BJP Government ) ಸಿಎಂ ಬದಲಾವಣೆ ಇಲ್ಲ ಅಂತ ವರಿಷ್ಠರೇ ಹೇಳಿದ್ದಾರೆ. ಮತ್ತೊಂದೆಡೆ ಸಚಿವ ಸಂಪುಟ ವಿಸ್ತರಣೆ ( Karnataka Cabinet Expansion ) ಬಗ್ಗೆ ಯಾವುದೇ ಸುಳಿವು ಕೂಡ ಇಲ್ಲ. ಹೀಗೆ ಇರುವಾಗಲೇ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಅನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( MLA Basanagouda Patil …

Read More »

ಸಿಎಂ ತವರಲ್ಲೇ ಮುದುಡಿದ ಕಮಲ, ಸಚಿವ ಶ್ರೀರಾಮುಲು ಕ್ಷೇತ್ರದಲ್ಲೂ ಬಿಜೆಪಿಗೆ ಭಾರಿ ಹಿನ್ನಡೆ!

ಹಾವೇರಿ/ ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಕ್ಷೇತ್ರವಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕು ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ ತೆಕ್ಕೆಗೆ ಬಂಕಾಪುರ ಪುರಸಭೆ ಒಲಿದಿದೆ.   ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪುರಸಭೆ, ಹಾವೇರಿ ತಾಲೂಕಿನ ಗುತ್ತಲ ಪಪಂ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಹಿನ್ನಡೆಯಾಗಿದ್ದು, ಎರಡೂ ಕಡೆಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಗುತ್ತಲ ಪಪಂನ ಒಟ್ಟು 18 ಸ್ಥಾನಗಳಲ್ಲಿ 11 ರಲ್ಲಿ ಗೆದ್ದಿರುವ ಕಾಂಗ್ರೆಸ್ …

Read More »

ಕಂದಾಯ ಇಲಾಖೆ: ITI, PUC, B.E ಪಾಸ್‌; 3000 ಭೂಮಾಪಕರ ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಪೋಡಿ ಮುಕ್ತ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲು 3000 ಭೂಮಾಪಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ನೇಮಕಾತಿ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿ ನಂತರ ತಡೆ ಹಿಡಿದಿತ್ತು. ಇದೀಗ ಮತ್ತೆ ನೇಮಕಾತಿಗೆ ಚಾಲನೆ ನೀಡಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ (rdservices.karnataka.gov.in ) ಜನವರಿ 21ರೊಳಗೆ ಅರ್ಜಿ ಸಲ್ಲಿಸಬೇಕು. ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಭೂಮಾಪಕ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆ …

Read More »

ವಿಷ್ಣುವರ್ಧನ್ ಪುಣ್ಯಸ್ಮರಣೆ: ಹೋಟೆಲಲ್ಲಿ ವಿಷ್ಣು ಕಳೆದ ಜೀವನದ ಕೊನೇ ಕ್ಷಣ ಮೆಲುಕು ಹಾಕಿದ ಸಿಬ್ಬಂದಿ

ಮೈಸೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ.ವಿಷ್ಣುವರ್ಧನ್ ಅವರು 12ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅವರ ಹಳೆಯ ನೆನಪುಗಳನ್ನು ಖಾಸಗಿ ಹೋಟೆಲ್​ ಸಿಬ್ಬಂದಿಯೊಬ್ಬರು ಮೆಲುಕು ಹಾಕಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಿಷ್ಣುವರ್ಧನ್​ ಅವರು ಜೀವನದ ಕೊನೆಯ ದಿನಗಳನ್ನು ಕಳೆದಿದ್ದರು. ಈ ಬಗ್ಗೆ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿರುವ ಹೋಟೆಲ್​ ಮ್ಯಾನೇಜರ್​ ಶ್ರೀನಿವಾಸ ಹಳೆಯ ಕ್ಷಣಗಳನ್ನು ಸ್ಮರಿಸಿದ್ದಾರೆ. 2009ರ ಡಿಸೆಂಬರ್ 10 ರಿಂದ ವಿಷ್ಣು ಅವರು ನಮ್ಮ ಹೋಟೆಲ್‌ನಲ್ಲೇ ಇದ್ದರು. ಕಾಲಿಗೆ ನೋವಾಗಿದ್ದರಿಂದ …

Read More »

ಗಂಡನನ್ನ ಜೈಲಿನಿಂದ ಬಿಡಿಸಲು ಸಹಾಯ ಮಾಡೋ ನೆಪದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ಉತ್ತರಪ್ರದೇಶ : ಮಹಿಳೆಯೊಬ್ಬಳಿಗೆ ಆಕೆಯ ಗಂಡನನ್ನ ಜೈಲಿನಿಂದ ಹೊರತರಲು ಸಹಾಯ ಮಾಡೋದಾಗಿ ವಕೀಲ ಹಾಗೂ ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಅಪರಾಧಗಳ ಆಗರ ಉತ್ತರ ಪ್ರದೇಶದಲ್ಲಿ ನಡೆದಿದೆ..   ಮಹೇಶ್ , ವಿಕಾಸ್ ಹಾಗೂ ದೇವೇಂದ್ರ ಎಂಬಾತ ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.. ಈ ಬಗ್ಗೆ ಮಹಿಳೆಯು, ವಕೀಲರು ಸಹಾಯ ಮಾಡುವ ನೆಪದಲ್ಲಿ ನನ್ನನ್ನು ನೋಯ್ಡಾದಲ್ಲಿರುವ ಕಚೇರಿಗೆ ಕರೆಸಿಕೊಂಡು ಅಲ್ಲಿ ಅವನು ಮತ್ತು …

Read More »

ಕೊಪ್ಪಳದಲ್ಲಿ ಕಾಂಗ್ರೆಸ್​ಗೆ ಬಲ, ಕಮಲಕ್ಕಿಲ್ಲ ಸ್ಪಷ್ಟ ಗರಿ: ಜೆಡಿಎಸ್- ಪಕ್ಷೇತರರೇ ನಿರ್ಣಾಯಕ

ಕೊಪ್ಪಳ: ಜಿಲ್ಲೆಯ 5 ನಗರ,‌ ಸ್ಥಳೀಯ‌ ಸಂಸ್ಥೆಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಎರಡರಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬಂದರೆ, ಉಳಿದ ಮೂರರಲ್ಲಿ ಜೆಡಿಎಸ್ ಹಾಗೂ ಪಕ್ಷೇತರರು ನಿರ್ಣಾಯಕರಾಗಲಿದ್ದಾರೆ.ಕಾರಟಗಿ ಪುರಸಭೆಯ 23 ಸ್ಥಾನಗಳಲ್ಲಿ ಬಿಜೆಪಿ -11, ಕಾಂಗ್ರೆಸ್-11, ಜೆಡಿಎಸ್-1 ಸ್ಥಾನ ಪಡೆದಿದೆ. ಕೈ-ಕಮಲ‌ ಸಮಬಲ ಸಾಧಿಸಿದ್ದು, ಜೆಡಿಎಸ್ ನಿರ್ಣಾಯಕ ಪಾತ್ರವಹಿಸಲಿದೆ. ಭಾಗ್ಯನಗರ ಪಟ್ಟಣದ 19 ಸ್ಥಾನಗಳಲ್ಲಿ ಕಾಂಗ್ರೆಸ್-8, ಬಿಜೆಪಿ-9, ಇಬ್ಬರು ಪಕ್ಷೇತರರು ಗೆದ್ದಿದ್ದಾರೆ. ಬಿಜೆಪಿ ಹೆಚ್ಚು ಸ್ಥಾನ ಬಪಡೆದರೂ ಬಹುಮತಕ್ಕೆ …

Read More »

ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ

ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …

Read More »

ಬೆಳಗಾವಿಯ ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಫಲಿತಾಂಶ

ಬೆಳಗಾವಿ: 58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿಯ 5 ಪುರಸಭೆ ಹಾಗೂ 11 ಪಟ್ಟಣ ಪಂಚಾಯತ್ ಚುನಾವಣೆಗಳ ಫಲಿತಾಂಶ ಈ ಕೆಳಗಿನಂತಿದೆ. 1.ಅಥಣಿ ಪುರಸಭೆ ಒಟ್ಟು ವಾರ್ಡ್‌ಗಳು – 27, ಕಾಂಗ್ರೆಸ್ – 15, ಬಿಜೆಪಿ – 9, ಜೆಡಿಎಸ್ -1, ಪಕ್ಷೇತರ – 3 2. ಹಾರೂಗೇರಿ ಪುರಸಭೆ ಒಟ್ಟು ವಾರ್ಡ್‌ಗಳು – 23, ಕಾಂಗ್ರೆಸ್ – 7, ಬಿಜೆಪಿ – 15, ಜೆಡಿಎಸ್ -00, …

Read More »

ಸಿಎಂ ಬೊಮ್ಮಾಯಿಗೆ ಮುಖಭಂಗ; ಹುಬ್ಬಳ್ಳಿಯಲ್ಲಿ 14 ಸ್ಥಾನ ಪಕ್ಷೇತರರ ಪಾಲು!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತವರಿನಲ್ಲೇ ಬಿಜೆಪಿ ಒಂದೂ ಸ್ಥಾನ ಗೆಲ್ಲದೇ ಆಘಾತಕ್ಕೆ ಒಳಗಾಗಿದ್ದರೆ, ಎಲ್ಲಾ 14 ಸ್ಥಾನಗಳಲ್ಲೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ. ಎಂಕೆ ಹುಬ್ಬಳ್ಳಿಯ ಎಲ್ಲಾ 14 ಸ್ಥಾನಗಳೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ರಾಜಕೀಯ ಪಕ್ಷಗಳನ್ನು ಮತದಾರ ಸಂಪೂರ್ಣವಾಗಿ ತಿರಸ್ಕರಿಸಿದ್ದಾನೆ. ಈ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಉಳಿದಂತೆ ಹಾವೇರಿಯ ಬಂಕಾಪುರ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ …

Read More »