ರಂಗಭೂಮಿ ಕಲಾವಿದೆ, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ವೇರ್ ಈಸ್ ಪಿಂಕಿ’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ನ್ಯೂಯಾರ್ಕ್ನ ಇಂಡಿಯನ್ ಫಿಲಂ ಫೆಸ್ಟಿವಲ್ನಲ್ಲಿ ‘ವೇರ್ ಈಸ್ ಪಿಂಕಿ’ (ಪಿಂಕಿ ಎಲ್ಲಿ) ಚಿತ್ರಕ್ಕೆ ಎರಡು ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ನಟಿ ವಿಭಾಗದಲ್ಲಿ ವಿಶೇಷ ಗಮನ ಸೆಳೆದಿದೆ. ಈ ಕುರಿತು ಅಕ್ಷತಾ ಪಾಂಡವಪುರ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ …
Read More »Yearly Archives: 2021
ಮೈಕ್ರೊಸಾಫ್ಟ್ ಎಡ್ಜ್ ಬದಲಾವಣೆಗಳೊಂದಿಗೆ
ಬ್ರೌಸರ್ ಎಂದ ಕೂಡಲೇ ಹಲವರಿಗೆ ನೆನಪಾಗುವುದು ಗೂಗಲ್ ಕ್ರೋಮ್ ಹಾಗೂ ಮೊಜಿಲ್ಲಾ ಫೈರ್ಫಾಕ್ಸ್. ಈ ವಿಷಯದಲ್ಲಿ ಹಿಂದೆ ಉಳಿದಿದ್ದ ಮೈಕ್ರೊಸಾಫ್ಟ್ ತನ್ನ ಬ್ರೌಸರ್ ಲೋಪಗಳನ್ನು ಸರಿಪಡಿಸಿ ಹಲವು ವೈಶಿಷ್ಟ್ಯಗಳನ್ನು ಸೇರಿಸಿದೆ. ಅಂತರ್ಜಾಲದಲ್ಲಿ ಮಾಹಿತಿಯನ್ನು ಕಲೆ ಹಾಕುವುದಕ್ಕೆ, ಯಾವುದಾದರೂ ಸೇವೆ ಪಡೆಯುವುದಕ್ಕೆ – ಹೀಗೆ ಹಲವು ನಿತ್ಯಕೆಲಸಗಳಿಗೆ ಬ್ರೌಸರ್ಗಳು ನೆರವಾಗುತ್ತಿವೆ. ಆದರೆ ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ನಿಖರವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಕಡಿಮೆ ಮೊಮೊರಿ ಹಾಗೂ ಪ್ರೊಸೆಸರ್ ಶಕ್ತಿಯನ್ನು ಕಡಿಮೆ …
Read More »K.L.E. ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನ
ಬೆಳಗಾವಿ: ಐಡಿಯಾ ಅಭಿವೃದ್ಧಿ, ಮೌಲ್ಯಮಾಪನ ಮತ್ತು ಪ್ರಯೋಗಾಲಯ ಸ್ಥಾಪಿಸಲು ಇಲ್ಲಿನ ಕೆಎಲ್ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನವನ್ನು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಮಂಜೂರು ಮಾಡಿದೆ. ‘ರಾಷ್ಟ್ರ ಮಟ್ಟದ ಅತ್ಯಂತ ಕಠಿಣ ಆಯ್ಕೆ ಪ್ರಕ್ರಿಯೆಯಲ್ಲಿ 210 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 49 ಕಾಲೇಜುಗಳಿಗೆ ಮಾತ್ರ ಇಷ್ಟು ದೊಡ್ಡ ಪ್ರಮಾಣದ ಅನುದಾನ ಲಭಿಸಿದೆ. ಇದು ನಮ್ಮ ಕಾಲೇಜು ನಿರ್ವಹಿಸುವ ಗುಣಮಟ್ಟದ ಮಾನದಂಡಗಳನ್ನು ಸಾಬೀತುಪಡಿಸಿದೆ’ …
Read More »ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – ಅಗ್ನಿಶಾಮಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಅಗ್ನಿಶಾಮಕ ಅಧಿಕಾರಿಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್ಲೈನ್ ನೋಂದಣಿ-ಕಮ್-ಅಪ್ಲಿಕೇಶನ್ ಜೂನ್ 15, 2021 ರಿಂದ ಪ್ರಾರಂಭವಾಗಿದ್ದು ಜೂನ್ 28, 2021 ರಂದು ಮುಕ್ತಾಯಗೊಳ್ಳುತ್ತದೆ. ಎಸ್ಬಿಐ ಅಗ್ನಿಶಾಮಕ ಅಧಿಕಾರಿ ಉದ್ಯೋಗ 2021 ಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಸ್ಬಿಐ ಎಸ್ಒ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಡಿಸೆಂಬರ್ 31, 2020 ರ …
Read More »ಸಾರಿಗೆ ನೌಕರರ ಕೂಟದಲ್ಲಿ ಒಡಕು, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತಿರುಗಿಬಿದ್ದ ಪದಾಧಿಕಾರಿಗಳು
ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ರಾಜ್ಯದ್ಯಂತ ನಡೆಸಿದ್ದ ಮುಷ್ಕರ ಯಾವುದೇ ಪ್ರಯೋಜನವಿಲ್ಲದೇ ತಾರ್ಕಿಕ ಅಂತ್ಯ ಕಂಡಿದೆ. ಸಾರಿಗೆ ನೌಕರರ ಕೂಟದಲ್ಲಿ ಒಡಕುಮೂಡಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಕೆಲವು ಪದಾಧಿಕಾರಿಗಳು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು, ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೆಲವು ಪದಾಧಿಕಾರಿಗಳು ತಿರುಗಿಬಿದ್ದಿದ್ದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅಧ್ಯಕ್ಷ ಚಂದ್ರು ಅವರ ಏಕಪಕ್ಷೀಯ ನಿರ್ಧಾರದಿಂದ …
Read More »ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ನಿರ್ಮಾಣ: ಡಿಸಿಎಂ ಸವದಿ
ಬೆಂಗಳೂರು: ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಅವಶ್ಯಕತೆ ಇರುವಂತಹ ಯಂತ್ರ ಹಾಗೂ ಸಾಮಾಗ್ರಿಗಳು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು …
Read More »ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ಕೊಡುತ್ತಾ?
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ಕೊಡುತ್ತಾ? ಅಥವಾ ಅವರ ವಿರೋಧಿ ಬಣಕ್ಕೆ ಶಾಕ್ ಕೊಡುತ್ತಾ? ರಾಜ್ಯ ಬಿಜೆಪಿಯಲ್ಲಿ ಮುಂದೇನು? ಭಿನ್ನಮತ ಶಮನವಾಗುತ್ತಾ ಇಲ್ವಾ? ಈ ಎಲ್ಲಾ ಪ್ರಶ್ನೆಗಳಿಗೆ, ಗೊಂದಲಗಳಿಗೆ ಉತ್ತರ ಸಿಗುವ ಕಾಲ ಸನ್ನಿಹಿತವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಪ್ರತಿನಿಧಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಯಡಿಯೂರಪ್ಪ ಕೂಡ ಇನ್ನು ಎರಡು ವರ್ಷವೂ ನಾನೇ ಸಿಎಂ ಎನ್ನುತ್ತಿದ್ದಾರೆ. ಆದರೆ ಬಿಎಸ್ವೈ ವಿರೋಧಿಗಳು …
Read More »ವಿಜಯಪುರ: ಶಿಕ್ಷಕನ ಅರಸಿ ಬಂದ ಒಂಬತ್ತು ಸರ್ಕಾರಿ ನೌಕರಿ!
ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸೋದು ಕಷ್ಟ. ಅದರಲ್ಲೂ ಅದೃಷ್ಟ ಚೆನ್ನಾಗಿರಬೇಕು ಎಂಬ ಪರಿಸ್ಥಿತಿ ಇದೆ. ಆದರೆ, ಇಲ್ಲೊಬ್ಬ ಪ್ರತಿಭಾನ್ವಿತರೊಬ್ಬರಿಗೆ ಇದುವರೆಗೆ ಒಂದಲ್ಲ, ಎರಡಲ್ಲ, ಬರಬ್ಬೊರಿ ಒಂಬತ್ತು ವಿವಿಧ ಸರ್ಕಾರಿ ನೌಕರಿ ಅರಸಿ ಬಂದಿವೆ! ಹೌದು, ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ಕೃಷಿಕರಾದ ಮಲ್ಕಪ್ಪ ಹಳೇಮನಿ ಮತ್ತು ಬಸಮ್ಮ ದಂಪತಿ ಪುತ್ರ ಮಹೇಶ ಹಳೇಮನಿ ಅವರು ಇದುವರೆಗೆ ಬರೆದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ತೇರ್ಗಡೆಯಾಗಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. …
Read More »ಸತೀಶ ಜಾರಕಿಹೊಳಿ ಪುತ್ರ, ಪುತ್ರಿ ರಾಜಕೀಯ ಪ್ರವೇಶ
ಬೆಳಗಾವಿ: ಯಮಕನಮರಡಿ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಪುತ್ರ ರಾಹುಲ್ ಜಾರಕಿಹೊಳಿ ಅವರನ್ನು ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪರಿಚಯಿಸಿದರು. ಇದರೊಂದಿಗೆ, ಸಕ್ರಿಯ ರಾಜಕಾರಣಕ್ಕೆ ಪ್ರವೇಶದ ಸಂದೇಶ ರವಾನಿಸಿದರು. ‘ರಾಹುಲ್ ಮಂಗಳವಾರದಿಂದಲೇ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ’ ಎಂದು ಸತೀಶ ಪ್ರಕಟಿಸಿದರು. ರಾಹುಲ್ ಅವರನ್ನು ಪಾಲ್ಗೊಂಡಿದ್ದ ಸದಸ್ಯರು ಹಾಗೂ ಮುಖಂಡರು ಸ್ವಾಗತಿಸಿದರು. ತಾವು ನಿರ್ದೇಶಕರಾಗಿರುವ ಸತೀಶ ಶುಗರ್ಸ್ …
Read More »ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಕೊರೊನಾ ಸೋಂಕಿನ ಪ್ರಮಾಣ ಎರಡಂಕಿಗೆ ಬಂದಿದ್ದು, ಸಕ್ರಿಯ ಪ್ರಕರಣಗಳು ಇಳಿಕೆ ಆಗಿದೆ. ಮಂಗಳವಾರ ಒಂದೇ ದಿನ ಕೇವಲ 95 ಜನರಿಗೆ ಸೋಂಕು ತಗುಲಿದೆ. 797 ಜನ ಗುಣಮುಖರಾಗಿದ್ದಾರೆ. ಸೋಂಕಿನ ಪ್ರಮಾಣ ಇಳಿಮುಖ ಆಗುತ್ತಿರುವುದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಈವರೆಗೆ 73687 ಜನರಿಗೆ ಸೋಂಕು ತಗುಲಿದಂತಾಗಿದ್ದು, 68465 ಜನ ಚೇತರಿಸಿಕೊಂಡ0ತಾಗಿದೆ. ಸದ್ಯ 4515 ಸಕ್ರಿಯ ಪ್ರಕರಣಗಳು ಇವೆ. ಬೆಳಗಾವಿ …
Read More »