ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಮಾಡಿದ ಸಿಟಿ ಪ್ರಕರಣ ಸಂಬಂಧ ಇಂದು ಮಹತ್ವದ ವಿಚಾರಣೆ ನಡೆಯಿತು. ತಿಂಗಳಾನುಗಟ್ಟಲೇ ತಲೆಮರೆಸಿಕೊಂಡು, ಕೋರ್ಟ್ನಿಂದ ಜಾಮೀನು ಪಡೆದಿರುವ ಆರೋಪಿಗಳಾದ ನರೇಶ್ಗೌಡ ಹಾಗೂ ಶ್ರವಣ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಆಡುಗೋಡಿ ಟೆಕ್ನಿಕಲ್ ಸೆಲ್ನಲ್ಲಿ ಇಬ್ಬರು ಆರೋಪಿಗಳನ್ನು ಪ್ರತ್ಯೇಕವಾಗಿ ಎಸಿಪಿ ಧರ್ಮೇಂದ್ರ ವಿಚಾರಣೆ ನಡೆಸಿದರು. ನ್ಯಾಯಾಲಯದ ಆದೇಶದ ಪ್ರತಿ ಹಾಗೂ ಷರತ್ತುಗಳನ್ನು ಪೂರೈಕೆ ಮಾಡಿರುವ ಬಗ್ಗೆ ಪರಿಶೀಲನೆ ಬಳಿಕ …
Read More »Yearly Archives: 2021
ನಾಯಕತ್ವ ಬದಲಾವಣೆ ಚರ್ಚೆ | ದೆಹಲಿಗೆ ಅರವಿಂದ ಬೆಲ್ಲದ್; ವರಿಷ್ಠರ ಭೇಟಿ ಸಾಧ್ಯತೆ
ನವದೆಹಲಿ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ದೌಡಾಯಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೆಲ್ಲದ್ ಅವರ ದೆಹಲಿಯ ದಿಢೀರ್ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ಬೆಲ್ಲದ್ ಅವರು ಸಚಿವ ಸಿ.ಪಿ. ಯೋಗೇಶ್ವರ್ ಅವರೊಂದಿಗೆ ಮೇ ಮೂರನೇ ವಾರ ದೆಹಲಿಗೆ ಬಂದಿದ್ದರು. ಆಗ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಬೇಕೆಂಬ ಅವರ ಪ್ರಯತ್ನಗಳು ಫಲಿಸಿರಲಿಲ್ಲ ಎನ್ನಲಾಗಿತ್ತು. ಇದೀಗ ಬೆಲ್ಲದ್ …
Read More »ಕೋವಿಡ್: ಕರ್ನಾಟಕದಲ್ಲಿ 42 ಮಕ್ಕಳು ಅನಾಥ
ಬೆಂಗಳೂರು: ಕೋವಿಡ್ ಎರಡನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 42 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆ. ಇವರ ಬದುಕು ಡೋಲಾಯಮಾನವಾಗಿದೆ. ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, …
Read More »ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ
ಬನಹಟ್ಟಿ: ತೈಲ ಬೆಲೆ ಹಾಗೂ ಅದರ ಉತ್ಪನ್ನಗಳ ಬೆಲೆಗಳ ಏರಿಕೆಯಿಂದಾಗಿ ದೇಶದ ರೈತರು, ವ್ಯಾಪಾರಸ್ಥರು ಕೂಲಿ ಕಾರ್ಮಿಕರು ದಾರುಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಇವರೆಲ್ಲರ ಮೇಲೆ ಕಾಳಜಿ ಇಲ್ಲ. ಕೇಂದ್ರ ಸರ್ಕಾರದವರು ಸೇವಕರಲ್ಲ, ಅವರು ವ್ಯಾಪಾರಿಗಳು. ಅವರು ಜನರ ರಕ್ತ ಹೀರುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವೆ ಹಾಗೂ ರಾಜ್ಯ ಕಾಂಗ್ರೆಸ್ ವಕ್ತಾರರಾದ ಉಮಾಶ್ರೀ ಆರೋಪಿಸಿದರು. ಅವರು ಶನಿವಾರ ಬನಹಟ್ಟಿಯ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ …
Read More »ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ
ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಜೊತೆಗೆ ಪೊಲೀಸ್ ಬ್ಯಾಂಡ್ನಿಂದ ರಾಷ್ಟ್ರಗೀತೆ ನುಡಿಸಿ ಗೌರವ ನೀಡಲಾಯಿತು. ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು. ಡಾ.ಸಿದ್ದಲಿಂಗಯ್ಯ ಚಿತೆಗೆ ಪುತ್ರ ಗೌತಮ್ ಅಗ್ನಿ ಸ್ಪರ್ಶ ಮಾಡಿದರು. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ …
Read More »ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ
ದೆಹಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಚಾರ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಈ ಬಗ್ಗೆ ಕಾಂಗ್ರೆಸ್ ಮರುಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಶಾ ಆಳ್ವಿಕೆಯ ಅಂತ್ಯಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ನಡೆಸುತ್ತಿದ್ದಾರೆ ಎಂದು …
Read More »ಪ್ರಧಾನಿ ಮೋದಿ, ಸಿಎಂ ಬಿ.ಎಸ್.ವೈ. ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ಜನರ ಜೀವ ಹಿಂಡುವ ಇಂಥ ಸರ್ಕಾರ ಹಿಂದೆಂದೂ ನೋಡಿಲ್ಲ ಎಂದು ವಾಗ್ದಾಳಿ
ಬೆಂಗಳೂರು: ಪ್ರಧಾನಿ ಮೋದಿ ತಿಗಣೆ ತರ ದೇಶದ ಜನರ ರಕ್ತ ಹೀರುತ್ತಿದ್ದಾರೆ. ಒಂದೆಡೆ ಜನರು ಕೋವಿಡ್ ನಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಇನ್ನೊಂದೆಡೆ ತೈಲ ಬೆಲೆಯಿಂದ ಹಿಡಿದು ಅಗತ್ಯ ವಸ್ತುಗಳವರೆಗೂ ಎಲ್ಲದರ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಜನಸಾಮಾನ್ಯರು ಬದುಕು ನಡೆಸುವುದಾದರೂ ಹೇಗೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೋದಿ, ಮೋದಿ ಎಂದು ಹುಡುಗರು ಘೋಷಣೆಗಳನ್ನು ಕೂಗುತ್ತಿದ್ದರು. ಕೊರೊನಾ ಓಡಿಸಲೆಂದು ಪ್ರಧಾನಿ ಮೋದಿ ಹೇಳಿದಂತೆ ಗಂಟೆ, …
Read More »ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿ A.S.I.
ಬೆಂಗಳೂರು: ಎಎಸ್ಐ ಒಬ್ಬರು 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಎಸ್ಐ ದಯಾನಂದ ತನ್ನಿಂದ 5 ಲಕ್ಷ ರೂಪಾಯಿ ಲಂಚ ಪಡೆದುಕೊಂಡಿರುವುದಾಗಿ ಆರೋಪಿಸಿ ಈ ಬಗ್ಗೆ ಸ್ವತ: ಭರತ್ ಶೆಟ್ಟಿ ಸಿಸಿಟಿವಿ ವಿಡಿಯೋ ಸಮೇತ ಎಎಸ್ಐ ವಿರುದ್ಧ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಉದ್ಯಮಿ ಭರತ್ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ವ್ಯಕ್ತಿಯೊಬ್ಬರು ನಿವೇಶನ ವಂಚನೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲು …
Read More »ಸಾಲುಮರದ ತಿಮ್ಮಕ್ಕ ಪುರಸ್ಕಾರಗಳ ಮ್ಯೂಸಿಯಂಗೆ ಚಿಂತನೆ
XMINEWSಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರಿಗೆ ಸಿಕ್ಕಿರುವ ಪುರಸ್ಕಾರಗಳ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಸ್ಥಾಪಿಸಲು ಸಾಗರೋತ್ತರ ಕನ್ನಡಿಗರ ಒಕ್ಕೂಟ ಮುಂದೆ ಬಂದಿದೆ. ಪರಿಸರ ದಿನಾಚರಣೆ ಅಂಗವಾಗಿ ಸಾಗರೋತ್ತರ ಕನ್ನಡಿಗರು ಆಯೋಜಿಸಿದ್ದ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ತಿಮ್ಮಕ್ಕ ಅವರ ಮನವಿ ಮೇರೆಗೆ, ಮ್ಯೂಸಿಯಂ ಸ್ಥಾಪಿಸಲು ಒಕ್ಕೂಟದ ಸದಸ್ಯರು ಮುಂದಿನ ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಸೌದಿ ಅರೇಬಿಯಾದಲ್ಲಿರುವ ಒಕ್ಕೂಟದ ಕಾರ್ಯದರ್ಶಿ ರವಿ ಮಹಾದೇವ ಭರವಸೆ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ತಿಮ್ಮಕ್ಕ, ತಮ್ಮ ಪರಿಸರ …
Read More »ಪತಿ ಜೊತೆ ಕಿರಿಕ್: 4 ವರ್ಷದ ಮಗನೊಂದಿಗೆ ನೂರು ಕಿ.ಮೀ ನಡೆದ ತಾಯಿ
ದಾವಣಗೆರೆ, ಜೂನ್ 12: ಪತಿಯೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಸುಮಾರು ನೂರಕ್ಕೂ ಹೆಚ್ಚು ಕಿಲೋಮೀಟರ್ವರೆಗೆ ನಾಲ್ಕು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ಕಾಲ್ನಡಿಗೆಯಲ್ಲಿ ಬಂದ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದ ನಾಗರತ್ನ ಅವರೇ ತನ್ನ ಪುಟ್ಟ ಮಗುವಿನೊಂದಿಗೆ ನಡೆದುಕೊಂಡು ಬಂದ ಮಹಿಳೆಯಾಗಿದ್ದಾಳೆ. ನಂತರ ದಾವಣಗೆರೆಯ ಕೆಟಿಜೆ ನಗರ ಪೊಲೀಸರು ಮಹಿಳೆಗೆ ತನ್ನ ಮಗುವಿನೊಂದಿಗೆ ಕಾರಿನಲ್ಲಿ ಹೋಗಲು ಅನುವು ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆ ಹಿನ್ನೆಲೆ ಶಿವಮೊಗ್ಗದ …
Read More »