Breaking News

Yearly Archives: 2021

ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ

ಮಹಾಲಿಂಗಪುರ : ಕಾರ್ಮಿಕ ಇಲಾಖೆಯಲ್ಲಿ ನೇಕಾರರನ್ನು ಕಾರ್ಮಿಕರು ಅಂತಾ ಸೇರಿಸಿ. ಪಾವರ್‌ ಲೂಮ್ ನೇಕಾರರಿಗೆ ಕನಿಷ್ಠ ಮೂರು ವರ್ಷ ನಿರಂತರ ಉಚಿತ ವಿದ್ಯುತ್ ನೀಡಬೇಕು. ಆ ನಿಟ್ಟಿನಲ್ಲಿ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ ಎಂದು ಮಾಜಿ ಸಚಿವೆ ಉಮಾಶ್ರೀ ಸರಕಾರಕ್ಕೆ ಮನವಿ ಮಾಡಿದರು. ಶುಕ್ರವಾರ ಪಟ್ಟಣದ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೃಹತ್ ಕೈಗಾರಿಕೆ ಹೊರತುಪಡಿಸಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿರ್ಜೀವವಾಗಿವೆ. ಅನೇಕರು ನೇಣಿಗೆ ಶರಣಾಗಿದ್ದಾರೆ. …

Read More »

ಕೋವಿಡ್ : ರಾಜ್ಯದಲ್ಲಿಂದು 52253 ಜನರು ಗುಣಮುಖ; 22823 ಪಾಸಿಟಿವ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೆ ಅವಧಿಯಲ್ಲಿ ಹೊಸದಾಗಿ 22823 ಜನರಿಗೆ ಕೋವಿಡ್ ಪಾಸಿಟಿವ್ ‍ಪ್ರಕರಣ ವರದಿಯಾಗಿದೆ. ಇಂದು ಸಂಜೆ ( ಮೇ.28) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:27.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 22823 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ, ಹಾಗೂ …

Read More »

ರೇಪ್ ಮಾಡುವಾಗ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ್ದ ನೀಚ ಕಾಮುಕರು

ಬೆಂಗಳೂರು : ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್​​ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ‌‌. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು. ವಿಡಿಯೋ ಕಾಲ್ ಮಾಡಿ ಬಾಂಗ್ಲಾದ ಸ್ನೇಹಿತರಿಗೆ ತೋರಿಸಿದ್ದ ಆರೋಪಿಗಳು..ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣ‌ದ ಮೊದಲ ಆರೋಪಿ ರಿದಾಯ್ ಬಾಬು …

Read More »

ಪ್ರೇಮಿ ಜೊತೆ ಸೇರಿ 2ನೇ ಗಂಡನ ಕೊಲ್ಲಿಸಿದ 5 ಮಕ್ಕಳ ತಾಯಿ!

ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆ ಆಗಿದ್ದ 5 ಮಕ್ಕಳ ತಾಯಿ ಪ್ರಿಯಕರನ ಜೊತೆಗೂಡಿ ಎರಡನೇ ಗಂಡನನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ನೋಯ್ಡಾದ ಬದನ್ಯುವಿನ ನಿವಾಸಿ ಸುಶೀಲಾ ತನ್ನ ಮೊದಲನೇ ಗಂಡ ಲಾಲಾರಾಮ್​ನನ್ನು 5 ಮಕ್ಕಳೊಂದಿಗೆ ತೊರೆದು ಸಂತ್ರಾಮ್​ ಎಂಬಾತನನ್ನು ಎರಡನೇ ಮದುವೆ ಆಗಿ ನಯಾ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಸಂತ್ರಾಮ್ ಜೊತೆ10ರಿಂದ 20 ವರ್ಷ ಸಂಬಂಧ ಹೊಂದಿದ್ದ ಸುಶೀಲಾ, ಅದೇ ಗ್ರಾಮದ ಬದನ್ಯುವಿನ ನಿವಾಸಿ ಮನೋಜ್​ …

Read More »

ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು.

ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪ್ರೇಮಿಗಳ ವೈವಾಹಿಕ ಜೀವನ ದುರಂತ ಅಂತ್ಯ ಕಂಡಿದೆ. ಆತ್ಮಹತ್ಯೆಯಿಂದ ಪತ್ನಿ ಸಾವಿಗೀಡಾದ ಬೆನ್ನಿಗೇ ಪತಿಯೂ ನೇಣು ಹಾಕಿಕೊಂಡಿದ್ದಾನೆ. ಪತಿ ಪುನೀತ್ (21) ಹಾಗೂ ಹರ್ಷಿತಾ (19) ಮೃತಪಟ್ಟ ದಂಪತಿ. ಆತ್ಮಹತ್ಯೆ ಮಾಡಿಕೊಂಡಿರುವ ಸತಿ-ಪತಿ ಇಬ್ಬರೂ ಮಾಗಡಿ ಚೆನ್ನೇನಹಳ್ಳಿ ನಿವಾಸಿಗಳಾಗಿದ್ದು, ಮದುವೆ ಬಳಿಕ ಹೇರೋಹಳ್ಳಿಯಲ್ಲಿ ವಾಸವಾಗಿದ್ದರು. ಇಂದು ಸಂಜೆ ನಾಲ್ಕು ಗಂಟೆಗೆ ಪತಿ ಪುನೀತ್ ಮನೆಗೆ ಮರಳಿದಾಗ ಪತ್ನಿ ನೇಣು ಹಾಕಿಕೊಂಡಿದ್ದ ಸ್ಥಿತಿಯಲ್ಲಿ ಇರುವುದು …

Read More »

ನಾನು ಗರ್ಭಿಣಿ, ಹೊಟ್ಟೆ ನೋವು ಎಂದರೂ ಬಿಡುತ್ತಿಲ್ಲ: ಪೊಲೀಸರ ವಿರುದ್ಧ ಮಹಿಳೆ ಆರೋಪ

ಮೈಸೂರು, : ಕೊರೋನ ಲಾಕ್ ಡೌನ್ ಹಿನ್ನಲೆಯಲ್ಲಿ ವಾಹನ ತಪಾಸಣೆ ವೇಳೆ ಗರ್ಭಿಣಿ ಮಹಿಳೆ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಗರ್ಭಿಣಿ ಮಹಿಳೆ ಕಣ್ಣೀರಿಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ರಾಮಸ್ವಾಮಿ ವೃತ್ತದಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಸಂಬಂಧಿಯೊಂದಿಗೆ ವಾಹನದಲ್ಲಿ ಬರುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರು ತಡೆದಿದ್ದಾರೆ. ನಾನು ಗರ್ಭಿಣಿ, ಆಸ್ಪತ್ರೆಗೆ ಹೋಗುತ್ತಿದ್ದೇನೆ ಎಂದರೂ ಲೇಡಿ ಸಬ್ ಇನ್ಸ್ ಪೆಕ್ಟರ್ ಬಿಡಲಿಲ್ಲ. ಇದರಿಂದ ಮಹಿಳೆ ಮತ್ತು ಮಹಿಳಾ …

Read More »

ಮದ್ವೆಯಾಗಿ ನಾಲ್ಕೇ ದಿನಗಳಲ್ಲಿ ಕರೊನಾಗೆ ಬಲಿಯಾದ ಯುವತಿ; ಸೋಂಕಿರುವುದು ಆಕೆಯ ಮರಣದ ಬಳಿಕ ಗೊತ್ತಾಯಿತು..!

ಶಿವಮೊಗ್ಗ: : ಮದುವೆಯಾಗಿ ಕೇವಲ ನಾಲ್ಕು ದಿನಕ್ಕೆ ನವ ವಿವಾಹಿತೆಯೊಬ್ಬಳು ಕರೊನಾಕ್ಕೆ ಬಲಿಯಾಗಿರುವ ಘಟನೆ ಶುಕ್ರವಾರ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಹರಿಗೆ ನಿವಾಸಿ ಪೂಜಾ (24) ಮೃತಪಟ್ಟ ನವ ವಿವಾಹಿತೆ. ಹೊರವಲಯದ ನಿದಿಗೆ ಟಿಇಎಸ್ ಕಾಲನಿಯ ಪೂಜಾಳನ್ನು ಹರಿಗೆ ನಿವಾಸಿ ಮಹೇಶ್ ಮದುವೆಯಾಗಿದ್ದ. ನಗರದ ನಿದಿಗೆ ಟಿಇಎಸ್ ಕಾಲನಿಯ ವಧುವಿನ ಮನೆಯಲ್ಲಿಯೇ ಸೋಮವಾರ ಮದುವೆಯಾಗಿತ್ತು. ಆದರೆ ಎರಡೇ ದಿನಗಳಲ್ಲಿ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿತ್ತು. ಒಂದೆರಡು ದಿನ ಮೆಡಿಕಲ್‌ನಿಂದ ಮಾತ್ರೆಗಳನ್ನು …

Read More »

ಆರೋಗ್ಯ ಇಲಾಖೆಯ ನೌಕರ ಕುಟುಂಬವೇ ಅನಾಥ!

ಜಮಖಂಡಿ: ತಾಲೂಕಿನ ಚಿಕ್ಕಲಕಿ ಕ್ರಾಸ್‌ನ ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು,ಕುಟುಂಬವೇ ಈಗ ಅನಾಥ ವಾಗಿದೆ. ತಾಲೂಕಿನ ಚಿಕ್ಕಲಕಿ ಕ್ರಾಸ್‌ದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ದುಂಡಪ್ಪ ಮುರನಾಳ (39) ಕೊರೊನಾ ಸೋಂಕಿನಿಂದ 13ರಂದು ಮೃತಪಟ್ಟಿದ್ದಾರೆ. ಆನವಾಡ ಪುನರ್‌ ವಸತಿ ಕೇಂದ್ರದಲ್ಲಿವಾಸವಿರುವ ದುಂಡಪ್ಪ ಮುರನಾಳ ಅವರಿಗೆ ಪತ್ನಿ ದಾನಮ್ಮಾ, ಪುತ್ರ ಸೃಜನ ಹಾಗೂ ಪುತ್ರಿ ಶ್ರೀನಿಧಿ ಮಕ್ಕಳಿದ್ದಾರೆ. 2010ರಲ್ಲಿ ಬೀದರ ಜಿಲ್ಲೆಯಲ್ಲಿ ಆರೋಗ್ಯ …

Read More »

ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಲಾಕ್ ಡೌನ್ ನಂತರ ಬೆಳಗಾವಿಯಲ್ಲಿ ಅಧಿಕಾರ ಸ್ವೀಕಾರ,ಕೆಎಟಿ ವಿಚಾರಣೆ ನಡೆಸಿ ಅವರ ಅಮಾನತನ್ನು ರದ್ದುಪಡಿಸಿದೆ..

ಬೆಂಗಳೂರು  – ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅಮಾನತು ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ವಿಷ್ಣುತೀರ್ಥ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ಅಮಾನ್ಯಗೊಳಿಸಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಅವರ ಅಮಾನತನ್ನು ರದ್ಧುಪಡಿಸಿದೆ. ಜೊತೆಗೆ ಬೆಳಗಾವಿಯಲ್ಲೇ ಪುನಃ ಅಧಿಕಾರ ಮುಂದುವರಿಸುವಂತೆ ಸೂಚಿಸಿದೆ.  ಆಸ್ತಿ ನೊಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೊಂದಣಿ ಮಾಡಲಾಗಿದೆ. ಇದರಿಂದ ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟವಾಗಿದೆ ಎಂದು ಆರೋಪಿಸಿ ಬೆಳಗಾವಿ ಸಬ್ …

Read More »

ಪತಿಯನ್ನು ಜಿಲ್ಲಾಸ್ಪತ್ರೆಗೆ ತಳ್ಳುಗಾಡಿಯಲ್ಲಿ ಕರೆತಂದ ಪತ್ನಿ

ಗದಗ: ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ ಡೌನ್‌ ಘೋಷಣೆಯಾಗಿದ್ದರಿಂದ ವಾಹನ ಸಿಗದೇ ಮಹಿಳೆಯೊಬ್ಬರು ಪತಿಯನ್ನು ಸುಮಾರು 4 ಕಿ.ಮೀ. ದೂರದ ಜಿಲ್ಲಾ ಆಸ್ಪತ್ರೆಗೆ ತಳ್ಳುಗಾಡಿಯಲ್ಲೇ ಕರೆದೊಯ್ದ ಮನಕಲುಕುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಇಲ್ಲಿನ ಸಿದ್ಧರಾಮೇಶ್ವರ ನಗರದ ಗೋವಿಂದಪ್ಪ ಎಂಬಾತ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ತಿಂಗಳ ಹಿಂದೆ ಶಸ್ತ್ರ ಚಿಕಿತ್ಸೆ ನಡೆಸಿದ್ದ ವೈದ್ಯರು ಒಂದು ಕಾಲು ತೆಗೆದಿದ್ದರು. ಇಂದು ಮತ್ತೆ ಚಿಕಿತ್ಸೆ ಪಡೆದು, ಕಾಲಿಗೆ ಡ್ರೆಸ್ಸಿಂಗ್‌ ಮಾಡಿಸಿಕೊಂಡು ಔಷಧತೆಗೆದುಕೊಂಡು ಹೋಗಲು …

Read More »