Breaking News

Yearly Archives: 2021

ರೈತರ ಹೋರಾಟಕ್ಕೆ 6 ತಿಂಗಳು: ಬೇಡಿಕೆ ಈಡೇರಿಸಿ, ಕಾಯಿದೆಗಳನ್ನು ವಾಪಸ್ ಪಡೆಯಲು ಸಿದ್ದು ಆಗ್ರಹ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಆರು ತಿಂಗಳಾಗಿದ್ದು ಬೇಡಿಕೆಗಳನ್ನು ಪ್ರಜಾತಾಂತ್ರಿವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಿರಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದ ಆರ್ಥಿಕ ಭದ್ರತೆಯನ್ನು ನಾಶ ಮಾಡುವ ಮತ್ತು ರೈತರ, ಕಾರ್ಮಿಕರ ಪಾಲಿಗೆ ಮಾರಣಾಂತಿಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಮೋದಿಯವರ ಸರ್ಕಾರ ಜಾರಿಗೆ ತಂದು ಒಂದು ವರ್ಷವಾಗುತ್ತಿದೆ. ಪ್ರತಿಭಟನೆಯ …

Read More »

ಜನ್ಮದಿನಕ್ಕೆ ಬಟ್ಟೆ ಕೊಡಿಸಲಿಲ್ಲ ಅಂತ ನವವಿವಾಹಿತೆ ಆತ್ಮಹತ್ಯೆ: ಕೊಲೆ ಕೇಸು ದಾಖಲು!

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸದೇ ಗಂಡ ರೇಗಾಡಿದ್ದರಿಂದ ನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಪುತ್ರಿ ಮಮತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಯುವಕ ಮಹದೇವ ಅಲಿಯಾಸ್ ಮಣಿಕಂಠ ಮೂರು ತಿಂಗಳ ಅಪ್ರಾಪ್ತೆಯಾಗಿದ್ದ ಮಮತಾಳನ್ನು ಅಪಹರಿಸಿ ಮದುವೆಯಾಗಿದ್ದ. ಜನ್ಮದಿನವಾದ ಇಂದು ಹೊಸಬಟ್ಟೆ ಕೊಡಿಸುವಂತೆ ಗಂಡ ಮಣಿಕಂಠನಿಗೆ ಕೇಳಿದ್ದಾಳೆ. …

Read More »

ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ

ಶಿವಮೊಗ್ಗ: ಮದುವೆ ಆದ ಮೇಲೆ ಹೆಂಡತಿಯನ್ನ ಚೆನ್ನಾಗಿ ಓದಿಸಿದ್ದ. ಕೆಎಎಸ್​ ಅಧಿಕಾರಿ ಸ್ಥಾನಕ್ಕೇರಲೂ ಬೆನ್ನೆಲುಬಾಗಿ ನಿಂತಿದ್ದ. ತಾನು ಕಂಡಿದ್ದ ಕನಸು ನನಸಾದ ಖುಷಿಯಲ್ಲಿ ಬದುಕಿನ ಪಯಣ ನಡೆಸಬೇಕಿದ್ದವ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ. ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಈತ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ನಾನಂತೂ ಓದಿಲ್ಲ ಹಾಗಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಕನಸುಕಂಡಿದ್ದ‌. ಹೀಗಾಗಿ …

Read More »

ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ.. ಸೂಚಿಸಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಶಾಸನ ಎಸ್.ರಾಮಪ್ಪ ಕಿಡಿ

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಆರೋಪ ಮಾಡಿದ್ದು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದರು ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ಹೊರ ಹಾಕಿದ್ದಾರೆ. ಕೊರೊನಾ ಲಾಕ್ಡೌನ್ ವೇಳೆ ಹರಿಹರದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರಾಜನಹಳ್ಳಿಯಲ್ಲಿ ಗ್ರಾಮಸ್ಥರು ಟಿಪ್ಪರ್ ತಡೆದು ಆಕ್ರೋಶ ಹೊರ ಹಾಕಿದ್ದರು. ಈ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 …

Read More »

ಕೋವಿಡ್​ ಸೋಂಕಿತರ ಕುಟುಂಬಸ್ಥರಿಗೆ ಸ್ಥಳೀಯರ ಕಿರುಕುಳ.. ಬೆಂಕಿ ಹಚ್ಚಿಕೊಂಡು ಸಾಯ್ತೀವಿ. ಕಣ್ಣೀರಿಟ್ಟ ಮಹಿಳೆಯರು

ಅರಕಲಗೂಡು: ಕೋವಿಡ್ ಕೇರ್ ಸೆಂಟರ್​​​​​ಗೆ ದಾಖಲಾಗಿರುವ ರೋಗಿಗಳ ಕುಟುಂಬಸ್ಥರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ತಾಲೂಕಿನ ಎಚ್.ಆರ್.ಪಿ. ವಡ್ಡರಹಳ್ಳಿ ಗ್ರಾಮದ ವಿವಿಧ ಮನೆಯ ಐವರು ಪುರುಷರಿಗೆ ಕೋವಿಡ್ ಸೋಂಕು ದೃಢವಾಗಿದ್ದ ಹಿನ್ನೆಲೆ ಅವರೆಲ್ಲ ಕೋವಿಡ್ ಸೆಂಟರ್​​ಗೆ ದಾಖಲಾಗಿದ್ದರು. ಈ ವೇಳೆ, ಗ್ರಾಮದಲ್ಲಿ ರೋಗಿಯ ಕುಟುಂಬದಲ್ಲಿರುವ ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದು, ಮನೆಯಿಂದ ಹೊರ ಬಾರದಂತೆ ತಾಕೀತು ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ವಿಡಿಯೋದಲ್ಲಿ ಆರೋಪಿಸಿದ್ದಾರೆ. ನಮಗೆ ಅಗತ್ಯ …

Read More »

ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ; ಬಾಲಕಿ ರಕ್ಷಣೆ

ಬಾಗಲಕೋಟೆ: ಕೊರೊನಾ ಲಾಕ್ ಡೌನ್ ನಡುವೆ ಗ್ರಾಮಗಳಲ್ಲಿ ಮತ್ತೆ ಬಾಲ್ಯವಿವಾಹ ಪದ್ಧತಿಗಳು ಹೆಚ್ಚುತ್ತಿವೆ. ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ ಮಾಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.   ಗ್ರಾಮದಲ್ಲಿ ಬಾಲ್ಯವಿವಾಹ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾಮಾರಿಸಿದ ಪೋಷಕರು ನಮ್ಮ ಮನೆಯಲ್ಲಿ ಸಾವಾಗಿದೆ. ನಾವೇಕೆ ಈಗ ವಿವಾಹ ಮಾಡಿಸಲಿ ಎಂದು ಹೇಳಿದ್ದರು. ಪೋಷಕರ …

Read More »

ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ …

Read More »

ದ್ವಿತೀಯ ಪಿಯುಸಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರ್ಚುಯಲ್ ಸಭೆ ನಡೆಸಲಿದ್ದಾರೆ. ಶಿಕ್ಷಣ ತಜ್ಞರು, ಶಿಕ್ಷಕರು, ಶಾಲೆಗಳ ಆಡಳಿತ ಮಂಡಳಿ, ಪೋಷಕರೊಂದಿಗೆ ಸಚಿವರು ಶೀಘ್ರವೇ ಸಭೆ ನಡೆಸಲಿದ್ದು, ಸೋಂಕು ಕಡಿಮೆಯಾದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪರೀಕ್ಷಾ ವಿಧಾನ ಹೇಗಿರಬೇಕು ಎಂದು ಸಚಿವರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಕಳೆದ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ …

Read More »

6 ರಾಜ್ಯಗಳಿಗೆ 24 ಗಂಟೆಗಳಲ್ಲಿ 969 ಟನ್ ಆಕ್ಸಿಜನ್‌ ಸಾಗಿಸಿದ ರೈಲ್ವೆ ಇಲಾಖೆ

ನವದೆಹಲಿ: “ಪ್ರತಿಕೂಲ ಹವಾಮಾನದ ಮಧ್ಯೆಯೂ 12 ಆಕ್ಸಿಜನ್ ಎಕ್ಸ್‌ಪ್ರೆಸ್‌ ರೈಲುಗಳು 24 ಗಂಟೆಗಳ ಅವಧಿಯೊಳಗೆ 6 ರಾಜ್ಯಗಳಿಗೆ 969 ಟನ್ ದ್ರವ ವೈದ್ಯಕೀಯ ಆಕ್ಸಿಜನ್‌ ಅನ್ನು ಸಾಗಿಸಿವೆ” ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಮೂರು ರೈಲುಗಳು ತಮಿಳುನಾಡಿಗೆ ತಲುಪಿದರೆ, ನಾಲ್ಕು ಆಂಧ್ರಪ್ರದೇಶಕ್ಕೆ, ತಲಾ ಒಂದೊಂದು ರೈಲುಗಳು ದೆಹಲಿ, ಮಧ್ಯಪ್ರದೇಶ, ಉತ್ತರಪ್ರದೇಶ, ಅಸ್ಸಾಂ ಹಾಗೂ ಕೇರಳಕ್ಕೆ ತಲುಪಿವೆ. “ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಿಂದ ಈ ರೈಲುಗಳು ಆಕ್ಸಿಜನ್‌ ಸಂಗ್ರಹಿಸಿಕೊಂಡು …

Read More »

ಶಾಸಕನ ಅಮಾನವೀಯ ನಡೆಗೆ ಮೃತಪಟ್ಟ ವೈದ್ಯ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ರೂ ನೆರವಿಗೆ ಬಾರದೇ ನಿರ್ಲಕ್ಷ್

ಚಿಕ್ಕಮಗಳೂರು: ಅಪಘಾತದಲ್ಲಿ ವೈದ್ಯರೊಬ್ಬರು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದರೂ, ಸಮೀಪದಲ್ಲೇ ಇದ್ದ ಶಾಸಕರೊಬ್ಬರು ಸಹಾಯಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ. ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಕೋವಿಡ್ ವಾರಿಯರ್ ಡಾ. ರಮೇಶ್ ಕುಮಾರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ. ಅಪಘಾತದ ನಂತರ …

Read More »