Breaking News

Yearly Archives: 2021

ರಾಯಚೂರು ವಿದ್ಯುದಾಗಾರದಲ್ಲಿ ಕೊರೊನಾಘಾತ: 5 ಮಂದಿ ಕೊರೊನಾಗೆ ಬಲಿ; ಆಡಳಿತ ಮಂಡಳಿ ನಿರ್ಲಕ್ಷ್ಯ, ಆತಂಕ ಇನ್ನೂ ಅಧಿಕ

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಮೇಲೆ ‌ಕೊರೊನಾ ಕರಿ ನೆರಳು ಬೀರಿದೆ. ಕೊರೊನಾ ಆತಂಕದಲ್ಲೇ ಕೆಲಸ ಮಾಡುತ್ತಿರುವ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ನೌಕರರು ಕೊರೊನಾ 2ನೇ ಅಲೆಯಿಂದಾಗಿ ಬೆಚ್ಚಿಬಿದ್ದಿದ್ದಾರೆ. ಆಡಳಿತ ಮಂಡಳಿ ನಿರ್ಲಕ್ಷ್ಯ ಧೋರಣೆಯಿಂದಾಗಿ ನೌಕರರಲ್ಲಿ ಕೊರೊನಾ ಆತಂಕ ಇನ್ನೂ ಅಧಿಕವಾಗಿದೆ. ಕೊರೊನಾ ಪಾಸಿಟಿವ್ ಆದ ಆರ್‌ಟಿಪಿಎಸ್‌ನ ನಾಲ್ವರು ಉದ್ಯೋಗಿಗಳು ಕೊವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಒಂದು ತಿಂಗಳ ಅಂತರದಲ್ಲಿ ಐದು ಮಂದಿ ನೌಕರರು ಕೊವಿಡ್ ಗೆ ಬಲಿಯಾಗಿದ್ದಾರೆ. …

Read More »

ಡಿಸಿಎಂ ಹೋದ 10 ನಿಮಿಷದ ನಂತರ ಧರೆಗುರುಳಿದ ಮರ: ಅಪಾಯದಿಂದ ಪಾರು

ಮೈಸೂರು ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ವರ್ಷಧಾರೆ ಸುರಿಯಿತು. ನಗರದಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಸುರಿದ ಮಳೆಗೆ ಹಲವೆಡೆ ರಸ್ತೆಗಳು ಕೆರೆ, ಕಾಲುವೆಗಳಂತೆ ತುಂಬಿಕೊಂಡಿದ್ದವು. ಇದೇ ವೇಳೆ ಜೆಎಲ್‌ಬಿ ರಸ್ತೆಯಲ್ಲಿ ಎಸ್‌ಡಿಎಂ ಕಾಲೇಜು ಮುಂಭಾಗದ ರಸ್ತೆಯಲ್ಲೇ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಬರುವ ಐದತ್ತು ನಿಮಿಷಗಳ ಅಂತರದಲ್ಲೇ ಮರವೊಂದು ಧರೆಗುರುಳಿದೆ. ಸಕಾಲಕ್ಕೆ ಆಗಮಿಸಿದ ಅಭಯ-೧ ತಂಡದ ಮಂಜುನಾಥ್ ಡಿ, ಪ್ರಭು,ಮಹದೇವ್,ಸುರೇಂದ್ರ, ಮನು, ವಿಕ್ರಂ ಮರವನ್ನು …

Read More »

ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ

ವಿಜಯನಗರ: ಲಾಕ್​ಡೌನ್​ ಸಂದರ್ಭದಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ ಹೊಸಪೇಟೆಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸರ್​ ನನ್ನ ತಮ್ಮನನ್ನು ಬಿಟ್ಟುಬಿಡಿ ಎಂದು ವ್ಯಾಪಾರಿಯೊಬ್ಬರು ಕೇಳಿಕೊಂಡು ಬಂದಿದ್ದರು. ಈ ವೇಳೆ ಮಾತನಾಡಿದ ಇನ್ಸ್​ಪೆಕ್ಟರ್​, ದಯಮಾಡಿ ನಿಮಗೆ ಕೈ ಮುಗಿದು ಕೇಳುವೆ ಜನರನ್ನು ಬದುಕಿಸಿ ಎಂದರು. ನಿಮಗೆ ದುಡ್ಡು ಬೇಕು, ನಮಗೆ ಜನ ಬೇಕು. ನಾವು ಕೂಡ ಹೆಂಡತಿ …

Read More »

ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ :B.S.Y.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾಗಿರುವ ನಿರ್ಬಂಧಗಳ ಬೆನ್ನಲ್ಲೇ ರಾಜ್ಯ ಸರಕಾರ ಭರ್ಜರಿ ಪ್ಯಾಕೇಜ್ ಘೋಷಣೆ ಮಾಡಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸಾಲ ಮರುಪಾವತಿದಾರರಿಗೆ ಬಿಗ್ ರಿಲೀಪ್ ಕೊಟ್ಟಿದ್ದು, ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ ನೀಡಿದೆ. ರೈತರು ಹಾಗೂ ಸ್ವಸಹಾಯ ಸಂಘಗಳಿಂದ ಸಾಲ ಪಡೆದಿರುವವರಿಗೆ ಸಾಲದ ಕಂತುಗಳ ಮರು ಪಾವತಿಗೆ ಮೂರು ತಿಂಗಳ ಕಾಲ ಅವಕಾಶವನ್ನು ಕಲ್ಪಿಸಿದೆ. ಜುಲೈ ಅಂತ್ಯದ ವರೆಗೆ ಸಾಲದ …

Read More »

ಸಿ ಟಿ ರವಿ ವಿರುದ್ದ ಕಾಂಗ್ರೆಸ್‌ ನಿಂದ ಪೋಲೀಸ್‌ ದೂರು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್‌ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದು, ಅವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಹನುಮಂತ ನಗರ ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸಿ.ತೇಜೇಶ್ ಕುಮಾರ್ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದ್ದಾರೆ. ‘ಸಿ.ಟಿ.ರವಿ ಅವರು ಕೊರೊನಾ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ಹಲವು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ …

Read More »

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಡಾ.ಎಂ.ಆರ್‌.ರವಿ ಎತ್ತಂಗಡಿ

ಚಾಮರಾಜನಗರ: ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಹೊಣೆಯಾಗಿಸಿ ಸ್ಥಳ ನೀಡದೇ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಫೆ‌.13ರಂದೇ ಚಾಮರಾಜನಗರ ಡಿಸಿ ರವಿ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಬಿ‌.ಸಿ.ಸತೀಶ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಬಳಿಕ ಕೆಲವು ಬೆಳವಣಿಗೆಗಳು ನಡೆದು ರವಿ ಗಡಿಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು. ದುರಂತ ನಡೆದ ಬಳಿಕ ನಡೆದ ನ್ಯಾಯಾಂಗ ತನಿಖೆಯಲ್ಲಿ …

Read More »

ಕೊವಿಡ್ ಪರೀಕ್ಷೆಯನ್ನು ಮನೆಯಲ್ಲಿ ನಾವೇ ಮಾಡಿಕೊಳ್ಳಬಹುದು; ಐಸಿಎಂಆರ್​ನಿಂದ ಬಿಡುಗಡೆಯಾಯ್ತು ಹೊಸ ಕಿಟ್

ದೆಹಲಿ: ಕೊವಿಡ್-19 ಪರೀಕ್ಷೆಯನ್ನು ನಮಗೆ ನಾವೇ ಮಾಡಿಕೊಳ್ಳಬಹುದು. ಯಾವುದೇ ವೈದ್ಯಕೀಯ ಸಿಬ್ಬಂದಿಯ ಇರುವಿಕೆಯ ಹೊರತಾಗಿ, ಕೊರೊನಾ ಪರೀಕ್ಷೆಯನ್ನು ನಾವೇ ಮಾಡಿಕೊಳ್ಳಬಹುದು. ಈ ನೂತನ ವ್ಯವಸ್ಥೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಇಂದು (ಮೇ 19) ಸೂಚನೆ ನೀಡಿದೆ. ನಮಗೆ ನಾವೇ ಕೊರೊನಾ ಪರೀಕ್ಷೆ ನಡೆಸುವುದು ಹೇಗೆ ಎಂಬ ಬಗ್ಗೆ ಸೂಚನೆ ನೀಡಿದ ಐಸಿಎಂಆರ್ ಕೊವಿಸೆಲ್ಫ್ ಎಂಬ ಕಿಟ್​ನ ಬಗ್ಗೆ ವಿವರಣೆ ನೀಡಿದೆ. ಸ್ವತಃ ನಮಗೆ ನಾವೇ ಕೊವಿಡ್-19 ಪರೀಕ್ಷೆ …

Read More »

ಆಹಾರ ಪೊಟ್ಟಣಗಳ ಮೇಲೆ ಕೊರೊನಾ ಸೋಂಕಿತರಿಗೆ ವಿಶೇಷ ಸಂದೇಶ ಕಳುಹಿಸಿದ ಬಾಲಕ

ಸಂಪೂರ್ಣ ವಿಶ್ವವೇ ಸಂಕಷ್ಟದಲ್ಲಿರುವ ಈ ಕಾಲದಲ್ಲಿ ಆತ್ಮವಿಶ್ವಾಸ ತುಂಬಬಲ್ಲ ಸಣ್ಣ ಮಾತೂ ಸಹ ಭಾರೀ ಖುಷಿಯನ್ನ ಕೊಡಬಹುದು. ಇದೇ ಮಾತನ್ನ ಅತ್ಯಂತ ಚಿಕ್ಕ ವಯಸ್ಸಿಗೆ ಅರ್ಥ ಮಾಡಿಕೊಂಡ ಬಾಲಕನೊಬ್ಬ ತನ್ನ ತಾಯಿ ಕೋವಿಡ್​ ರೋಗಿಗಳಿಗೆಂದು ತಯಾರು ಮಾಡಿದ್ದ ಊಟದ ಪ್ಯಾಕೆಟ್​ಗಳ ಮೇಲೆ ‘ಖುಷಿಯಾಗಿರಿ’ ಎಂದು ಬರೆದಿದ್ದಾನೆ. ಬಾಲಕ ಈ ರೀತಿ ಆಹಾರ ಪೊಟ್ಟಣಗಳ ಮೇಲೆ ಸಂದೇಶ ಬರೆಯುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆದ …

Read More »

ಹಂಪಿಯ 70ಕ್ಕೂ ಹೆಚ್ಚು ಖಾಸಗಿ ಗೈಡ್​​ಗಳಿಗೆ ಸಹಾಯ ಮಾಡಿದ ಮಾತೃ ಹೃದಯಿ ಡಾ.ಸುಧಾಮೂರ್ತಿ

ವಿಜಯನಗರ: ಈ ಕೊರೊನಾ ಬಂದಾಗಿನಿಂದ ಒಂದಲ್ಲ ಒಂದು ಸಮಸ್ಯೆ ಎಲ್ಲರನ್ನೂ ಕಾಡ್ತಿದೆ. ಯಾರನ್ನೂ ಬಿಡದ ಈ ಕೊರೊನಾದಿಂದಾಗಿ, ಅದೆಷ್ಟೋ ಜನರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಸಂಕಷ್ಟಕ್ಕೆ ಸಿಲುಕಿದವರಿಗೆ ಹಲವರು ನೆರವಿನ ಹಸ್ತವನ್ನೂ ಚಾಚಿದ್ದಾರೆ. ಅದರಲ್ಲಿ, ಸದಾ ಎಲ್ಲರ ಕಷ್ಟಗಳಿಗೆ ಸ್ಪಂದಿಸೋ ಮಾತೃ ಹೃದಯಿ ಡಾ.ಸುಧಾಮೂರ್ತಿ ಮಿಡಿದಿದ್ದಾರೆ. ಹಂಪಿ ಪ್ರವಾಸಿ ಗೈಡ್ಸ್‌ಗಳಿಗೆ ನೆರವಿನ ಸಹಾಯ ಹಸ್ತ ನೀಡಿದ್ದಾರೆ ಸುಧಾಮೂರ್ತಿ. ಕೊರೊನಾ ಹೊಡೆತಕ್ಕೆ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ …

Read More »

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ : ಸಮೀಕ್ಷೆ

ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗದ ವಿನಾಶಕಾರಿ ಎರಡನೇ ತರಂಗವನ್ನು ಹತೋಟಿಗೆ ತರಲು ದೇಶವು ತೀವ್ರವಾಗಿ ಹೆಣಗಾಡುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ ಎಂದು ಸಮೀಕ್ಷೆಯೊಂದು ಮಂಗಳವಾರ ಹೇಳಿದೆ. ಕೊರೋನಾ ಬಿಕ್ಕಟ್ಟು ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನಾಯಕತ್ವ ವಿಫಲವಾಗಿದ್ದು ಈ ಹಿನ್ನಲೆಯಲ್ಲಿ ಅವರ ಜನಪ್ರಿಯತೆಯ ಗ್ರಾಫ್ ಕುಸಿತವಾಗಿದೆ ಎಂದು ಭಾರತೀಯ ಮತ್ತು ಅಮೆರಿಕದ ಡೇಟಾ ಇಂಟಲಿಜೆನ್ಸಿ ಸಂಸ್ಥೆಯ ಸಮೀಕ್ಷೆ ಹೊರಹಾಕಿದೆ. 2014 ರಲ್ಲಿ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ …

Read More »