Breaking News

Yearly Archives: 2021

ಅತ್ತೆಯ ಒಡವೆ ಅಳಿಯ ದಾನ ಮಾಡಿದಂತೆ ಪ್ರಧಾನಿ ನಡೆ: ದಿನೇಶ್ ಗುಂಡೂರಾವ್

ಬೆಂಗಳೂರು, : ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟ ಮಾದರಿಯಲ್ಲಿಯೇ ಪ್ರಚಾರಕ್ಕಾಗಿ ಕೋವಿಡ್ ಲಸಿಕೆಯನ್ನು ವಿದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟೀಕಿಸಿದರು. ಸೋಮವಾರ ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ. ಇದು ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಆಗಿದೆ ಎಂದರು. ವಿದೇಶಗಳಲ್ಲೂ ಕೋವಿಡ್ ಲಸಿಕೆ …

Read More »

ಪ್ರತಿಯೊಬ್ಬರಿಗೂ 10 ಸಾವಿರ ಸಹಾಯಧನ ಕೊಡಿ, ಏನು ನಿಮ್ಮಪ್ಪನ ಮನೆಯ ಗಂಟು ಕೊಡುತ್ತಿರಾ?: ಸಿದ್ದರಾಮಯ್ಯ ;

ಕೋಲಾರ; ಜಿಲ್ಲೆಯ ಕೆಜಿಎಫ್​ನಲ್ಲಿ ಕೊರೋನಾ ವಾರಿಯರ್ಸ್​ಗೆ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಕೆಜಿಎಫ್​ ನಗರದ ನಗರಸಭೆ ಕ್ರೀಡಾಂಗಣದಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ, ವಿಆರ್ ಸುದರ್ಶನ್, ವಲ್ಲಾಲ್ ಮುನಿಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ …

Read More »

ವಿಜಯಪುರದ ಬಿಜೆಪಿ ರೆಬೆಲ್ ಶಾಸಕ ಯತ್ನಾಳ್ ಬಿಎಸ್ ವೈ ವಿರುದ್ಧ ಮತ್ತೆ ವೈಲೆಂಟ್

ವಿಜಯಪುರ: ಹೆಮ್ಮಾರಿ ಕೊರೊನಾ ರಾಜ್ಯವನ್ನೇ ಹಿಂಡಿ ಹಿಪ್ಪೆ ಮಾಡುತ್ತಿರುವ ಬೆನ್ನಲ್ಲೆ ಮತ್ತೆ ರಾಜಕೀಯ ಗುದ್ದಾಟ ಶುರುವಾಗಿದೆ. ವಿಜಯಪುರದ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವೈಲೆಂಟ್ ಆಗಿದ್ದು, ಎಂದಿನಂತೆ ಸಿಎಂ ಬಿಎಸ್ ವೈ ವಿರುದ್ಧ ಕಿಡಿಕಾರಿದ್ದಾರೆ. (ಸೋಮವಾರ) ಆರೋಗ್ಯ ಸಚಿವರ ಭೇಟಿ ಬಳಿಕ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ವಿಚಾರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾರ್ಯ ನಮಗೆ ತೃಪ್ತಿ ತಂದಿಲ್ಲ ಎಂದು ನೇರವಾಗಿ ಆರೋಪಿಸಿದ್ದಾರೆ. ರಾಜ್ಯದಲ್ಲಿ …

Read More »

ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ

ರಾಜ್ಯದಲ್ಲಿ ಲಾಕ್​ಡೌನ್​ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್​ಡೌನ್​​ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್​ ನಿರಾಣಿ ಲಾಕ್​ಡೌನ್​ ಮುಂದುವರಿಕೆ ಬಗ್ಗೆ ಸೂಚನೆ ನೀಡಿದ್ರು. ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡುಬರ್ತಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕನ್ನ …

Read More »

ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …

Read More »

ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …

Read More »

ಹಸಿದ ಹೊಟ್ಟೆಗೆ ಆಸರೆಯಾದ ಶಿವಣ್ಣ ದಂಪತಿ

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್‍ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ. ಶಿವರಾಜ್‍ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರಿಗೆ ಪತ್ನಿ ಗೀತಾ ಶಿವರಾಜ್‍ಕುಮಾರ್ ಸಾಥ್ ನೀಡಿದ್ದಾರೆ. ನಾಗವಾರದಲ್ಲಿರುವ ತಮ್ಮ ನಿವಾಸದ ಸುತ್ತಮುತ್ತಲಿನ ಏರಿಯಾದಲ್ಲಿರುವ ನೂರಾರು ಜನರಿಗೆ ನಿತ್ಯವು ಆಹಾರ ಒದಗಿಸುವ ಕೆಲಸವನ್ನು ಶಿವರಾಜ್‍ಕುಮಾರ್-ಗೀತಾ ದಂಪತಿ ಮಾಡುತ್ತಿದ್ದಾರೆ. ಶಿವಣ್ಣ ಬಾಯ್ಸ್ ಹೆಸರಿನ ತಂಡವೊಂದು …

Read More »

ಶುಲ್ಕ ಪಾವತಿಗೆ ಒತ್ತಡ; ಬೆಂಗಳೂರು ಖಾಸಗಿ ಶಾಲಾ ಆಡಳಿತ ಮಂಡಳಿಯ ವರ್ತನೆಯಿಂದ ಪೋಷಕರು ಕಂಗಾಲು

ಬೆಂಗಳೂರು: ಕೊರೊನಾ ಎರಡನೇ ಅಲೆ ದೇಶದಲ್ಲಿ ಅತ್ಯಂತ ವೇಗವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಈ ಬೆನ್ನೆಲ್ಲೆ ದಿನಗೂಲಿ ಕಾರ್ಮಿಕರು, ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದರೆ ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳದ ಖಾಸಗಿ ಶಾಲೆಗಳು ಮಾತ್ರ ಶುಲ್ಕ ಕಟ್ಟಿಸಿಕೊಳ್ಳಲು ಮುಂದಾಗಿದೆ. ಮೇ 24ರವರೆಗೆ ಶಾಲೆಗಳ …

Read More »

ಹೆಣಗಳ ಪಕ್ಕದಲ್ಲೇ ಸೋಂಕಿತರಿಗೆ ಚಿಕಿತ್ಸೆ, ಚಿತ್ರದುರ್ಗದಲ್ಲಿ ಭಯಾನಕ ವ್ಯವಸ್ಥೆ

ಚಿತ್ರದುರ್ಗ : ಕೊರೋನಾ ಸೋಂಕಿನ ಚಿಕಿತ್ಸೆಗೆ ಒಂದೇ ವಾರ್ಡಿನಲ್ಲಿ  ದಾಖಲಾಗಿದ್ದ ಮೂವರು ಸೋಂಕಿತರು ಸಾವನ್ನಪ್ಪಿ ಗಂಟೆಗಳೇ ಕಳೆದಿದ್ದವು. ಸೋಂಕಿತರು ಮೃತಪಟ್ಟಿರೋ ಸುದ್ದಿ ತಿಳಿದರೂ ಮೃತ ದೇಹಗಳನ್ನ ಬೇರೆ ಕಡೆಗೆ ಸ್ಥಳಾಂತರ ಮಾಡದೆ ಚಿತ್ರದುರ್ಗ ಜಿಲ್ಲಾ  ಕೋವಿಡ್  ಆಸ್ಪತ್ರೆ ಸಿಬ್ಬಂದಿ, ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದರು ಅನ್ನೋ ಆರೋಪಗಳು ಕೇಳಿ ಬಂದಿವೆ. ಈ ದೃಶ್ಯವನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿದ ಸೋಂಕಿತ ವಕೀಲರೊಬ್ಬರು ಆಸ್ಪತ್ರೆಯ ಅವ್ಯವಸ್ಥೆಯನ್ನ ಬಯಲು ಮಾಡಿ ಜಿಲ್ಲಾಡಳಿತದ ಬೇಜವಬ್ದಾರಿಯನ್ನ ತೋರಿಸಿ ಛೀಮಾರಿ …

Read More »

ಕೊರೊನಾ ಹಬ್ಬಲು ಬಿಜೆಪಿ ಕಾರಣ: ಸತೀಶ್​ ಜಾರಕಿಹೊಳಿ

ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಸತೀಶ್​​ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …

Read More »