Breaking News

Yearly Archives: 2021

ಕುವೈತ್ ನಿಂದ ಧಾರವಾಡಕ್ಕೆ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: ಭಾರತ ಸರ್ಕಾರದ ವಿದೇಶಾಂಗ ಮಂತ್ರಾಲಯ ಮತ್ತು ವಾಣಿಜ್ಯ ಮಂತ್ರಾಲಯದಿಂದ ಬೇರೆ ಬೇರೆ ರಾಷ್ಟ್ರಗಳ ಜೊತೆ ಭಾರತದ ಉತ್ತಮ ಸಂಬಂಧ ಹೊಂದಿರುವದರಿಂದ ಮತ್ತು ಜಾಗತಿಕ ಟೆಂಡರ್ ಮೂಲಕ ಆಕ್ಸಿಜನ್ ಆಮದು ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸೋಮವಾರ ಬೆಳಿಗ್ಗೆ, ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಪ್ರಾಕ್ಸಿಯರ್ ಆಕ್ಸಿಜನ್ ಮರುಪೂರ್ಣ (ರೀಫಿಲ್ಲಿಂಗ್) ಘಟಕಕ್ಕೆ ಭೇಟಿ ನೀಡಿ, ಘಟಕದಿಂದ ಟ್ಯಾಂಕರ್ ಗೆ ಆಕ್ಸಿಜನ್ ತುಂಬುವ ಕಾರ್ಯ ಪರೀಶಿಲಿಸಿದ ನಂತರ …

Read More »

ಪರೀಕ್ಷೆಯಲ್ಲಿ ಹಿಮ್ಸ್‌ ಪ್ರಥಮ

ಹಾಸನ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌)ಯ ಪ್ರಯೋಗಾಲಯವು ಸಾಮರ್ಥ್ಯ ಮೀರಿಪರೀಕ್ಷೆಗಳನ್ನು ನಡೆಸಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.ಪ್ರತಿನಿತ್ಯ 2000 ಮಾದರಿಗಳ ಪರೀಕ್ಷೆ ನೀಡಿ ವರದಿನೀಡುವ ಸಾಮರ್ಥ್ಯ ಹೊಂದಿರುವ ಪ್ರಯೋಗಾಲವು ಕೊರೊನಾ ಸಮಸ್ಯೆ ಉಲ್ಬಣವಾದ ಸಂದರ್ಭದಲ್ಲೆಲ್ಲಾಗರಿಷ್ಠ ಪರೀಕ್ಷೆಗಳನ್ನು ನಡೆಸಿ ಮೊದಲ ಸ್ಥಾನ ಪಡೆದಿದೆ. 2016 ರಲ್ಲಿ ಕೇಂದ್ರ ಸರ್ಕಾರದ ಸಹಾಯ ಧನದಿಂದವಿಆರ್‌ಡಿಎಲ್‌ (ಬೈರಲ್‌ ರೀಸರ್ಚ್‌ ಡಯೋಗ್ನಾಸ್ಟಿಕ್‌ಲ್ಯಾಬೋರೇಟರಿ) ಪ್ರಾರಂಭವಾಗಿದೆ. ಕೊರೊನಾಮೊದಲ ಅಲೆ ಪ್ರಾರಂಭಕ್ಕೆ ಪೂರ್ವದಲ್ಲಿ ರಾಜ್ಯದಲ್ಲಿದ್ದಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮೂರು ಕೇಂದ್ರಗಳಪೈಕಿ ಹಾಗೂ ಇಡೀ …

Read More »

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ರದ್ದು ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನ ಹೆಚ್ಚಳ ಹಿನ್ನಲೆಯಲ್ಲಿ ನಡೆಯಬೇಕಾಗಿದ್ದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಇದರ ಕುರಿತು ಅನೇಕ ವದಂತಿಗಳು ಹರಡುತ್ತಿದ್ದು, ಅವುಗಳನ್ನು ಸಚಿವ ಸುರೇಶ್ ಕುಮಾರ್ ತಳ್ಳಿಹಾಕಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಎರಡನೆ ವರ್ಷದ ಅಂತಿಮ ಪರೀಕ್ಷೆ ರದ್ದುಪಡಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿದ್ದು, ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು ಕೇವಲ ವದಂತಿಯಾಗಿದೆ, ಪರೀಕ್ಷೆ ರದ್ದುಪಡಿಸುವ ಸಂಬಂಧ ರಾಜ್ಯ …

Read More »

ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್

ಬೆಳಗಾವಿ: ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್ ನೀಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಪರಿಶೀಲನೆ ನಡೆಸಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ ಪರಾಜಿತ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ನೇತೃತ್ವದಲ್ಲಿ ಪುಂಡರು ಬಿಮ್ಸ್ ಆಸ್ಪತ್ರೆಗೆ ನುಗ್ಗಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ನಿರುಪಯುಕ್ತ ಬೆಡ್‍ಗಳ ಬಳಿ ನಿಂತು ವೀಡಿಯೋ ಮಾಡಿಕೊಂಡು ಪೋಸ್ ನಿಡಿದ್ದಾರೆ. ಎಂಇಎಸ್ ಪುಂಡ ಶುಭಂ ಶೆಲ್ಕೆ …

Read More »

ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಶೀಘ್ರವಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದು ಆರೋಗ್ಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ …

Read More »

ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್: ಸಿದ್ದರಾಮಯ್ಲ

ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಕೂಡ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ …

Read More »

ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…

ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …

Read More »

ವರ್ಷದ ರಜೆಗೆ ಬಂದಿದ್ದ ಸೈನಿಕ ತೋಟದ ಮನೆಯಲ್ಲಿ ಕ್ವಾರಂಟೈನ್

ಹಾವೇರಿ: ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರಿದಿದೆ. ವರ್ಷದ ರಜೆಗೆ ಬಂದಿದ್ದ ಸೈನಿಕ ಮನೆಗೆ ಹೋಗದೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ತೋಟದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಗ್ರಾಮದ ಹೊರವಲಯದಲ್ಲಿ ಇರುವ ಶಶಿಧರ ಎಲಿಗಾರ ಎಂಬುವರ ತೋಟದ ಮನೆಯಲ್ಲಿ ಸೈನಿಕ ಮಾಲತೇಶ ಕ್ವಾರಂಟೈನ್ ಆಗಿದ್ದಾರೆ. ನವದೆಹಲಿಯಲ್ಲಿ ಸೈನಿಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಾಲತೇಶ ತಿಪ್ಪಕ್ಕನವರ ಮನೆಗೆ ತೆರಳದೆ ನೇರವಾಗಿ ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿ ಸೈನಿಕ ಮಾಲತೇಶ …

Read More »

ಭಾರತದಲ್ಲಿ ತಗ್ಗಿದ್ದ ಕೊರೋನಾ ಅಬ್ಬರ : 24 ಗಂಟೆಯಲ್ಲಿ 2.81 ಲಕ್ಷ ಹೊಸ ಕೇಸ್, 4106 ಸಾವು..!

ನವದೆಹಲಿ,ಮೇ.17-ಅಂತೂ ಇಂತೂ ಕೊರೊನಾ ಸೋಂಕು ಭಾರಿ ಇಳಿಮುಖದತ್ತ ಮುಖ ಮಾಡಿದೆ. ಒಂದೇ ದಿನದಲ್ಲಿ ನಾಲ್ಕು ಲಕ್ಷ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇದೀಗ 2.81 ಲಕ್ಷಕ್ಕೆ ಇಳಿದಿದೆ. ನಿನ್ನೆಯಿಂದ 2,81,386 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು, ಇದು ಕಳೆದ 27 ದಿನಗಳಲ್ಲಿ ದಾಖಾಲಾದ ಅತ್ಯಂತ ಕಡಿಮೆ ಪ್ರಮಾಣ ಎಂದು ಗುರುತಿಸಲಾಗಿದೆ.2,81 ಲಕ್ಷ ಮಂದಿ ಹೊಸ ಸೋಂಕಿತರಿಂದಾಗಿ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,49 ಕೋಟಿ ಗಡಿ ದಾಟಿದೆ.ಸೋಂಕು ಕಡಿಮೆಯಾದರೂ ಸಾವಿನ …

Read More »

ಮ ಕೊರೊನಾಗೆ ಬೆಳಗಾವಿಯಲ್ಲಿ ಶಿಕ್ಷಕ ಅಣ್ಣ-ತಮ್ ಬಲಿ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಮಹಾಮಾರಿಗೆ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ತೋಪಿನಕಟ್ಟಿ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಸಹೋದರರಿಬ್ಬರೂ 4 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಅಣ್ಣ ಪಿ.ಕೆ.ಕುಂಬಾರ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದರ ಬೆನ್ನಲ್ಲೆ ತಮ್ಮ ನಾರಾಯಣ ಕುಂಬಾರ್ ಗೂ ಸೋಂಕು ಹರಡಿತ್ತು. ಇಬ್ಬರಿಗೂ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಾಲ್ಕು …

Read More »