ಸಲ್ಮಾನ್ ಖಾನ್ ನಟನೆಯ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್’ ಚಿತ್ರ ಮೊದಲ ದಿನ ಒಟಿಟಿಯಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ಆದರೆ, ವಿಮರ್ಶಕರಿಂದ ಸಿನಿಮಾಗೆ ಮೆಚ್ಚುಗೆ ಬಂದಿಲ್ಲ. ಇದು ಸಲ್ಮಾನ್ ಖಾನ್ ಅವರನ್ನು ಅಪ್ಸೆಟ್ ಮಾಡಿದೆ. ಹೀಗಾಗಿ, ಅವರು ದಕ್ಷಿಣ ಭಾರತದ ಸಿನಿಮಾ ಮೇಲೆ ಕಣ್ಣಿಟ್ಟಿದ್ದಾರೆ. 2017ರಲ್ಲಿ ತೆರೆಕಂಡಿದ್ದ ‘ಟೈಗರ್ ಜಿಂದಾ ಹೇ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಸಲ್ಲುಗೆ ಅಂಥ ಯಶಸ್ಸು ಸಿಕ್ಕಿಲ್ಲ. ‘ರೇಸ್-3’, ‘ಭಾರತ್’, ‘ದಬಾಂಗ್ …
Read More »Yearly Archives: 2021
ತಾಯಿನಾಡ ಜನರ ಸಂಕಷ್ಟಕ್ಕೆ ಮಿಡಿದ ಸಾಗರದಾಚೆ ಕನ್ನಡಿಗರು; ದುಬೈನಿಂದ ಕರ್ನಾಟಕಕ್ಕೆ ಹರಿದು ಬಂತು ಸಹಾಯ ಹಸ್ತ
ಬೆಂಗಳೂರು: ಕೊರೊನಾ ಎರಡನೇ ಅಲೆ ಭಾರತದಲ್ಲಿ ಬಹಳ ವೇಗದಲ್ಲಿ ಮತ್ತು ಬಹಳ ಅಪಾಯಕಾರಿಯಾಗಿ ಹರಡುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಕೊವಿಡ್ ಕಾರಣ ಸಾವು-ನೋವುಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಕಳೆದ ಹಲವು ದಿನಗಳಿಂದ ಕರ್ನಾಟಕವನ್ನು ಲಾಕ್ಡೌನ್ ಮಾಡಲಾಗಿದೆ. ಇದರಿಂದಾಗಿ ದಿನಗೂಲಿ ಜನರು ಮತ್ತು ನಿರ್ಗದಿಕರು ಸೇರಿ ಹಲವು ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಕೆಲವರಿಗೆ ಒಂದೊತ್ತಿನ ಊಟಕ್ಕೆ ಸಹ ಇಲ್ಲದ ಪರಿಸ್ಥಿತಿ ಇದ್ದು, ಇಂತಹರವರ ನೆರವಿಗೆ ಈಗ ದುಬೈನ ಕನ್ನಡಿಗರು ನಿಂತಿದ್ದಾರೆ. ದುಬೈನಲ್ಲಿ ಕಾರ್ಯಾಚರಿಸುತ್ತಿರುವ …
Read More »ಬಾದಾಮಿ ಕ್ಷೇತ್ರಕ್ಕೆ ಮೂರು ಆಂಬುಲೆನ್ಸ್ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ : ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಮೂರು ಆಂಬುಲೆನ್ಸ್ ಗಳನ್ನು ನೀಡಿದ್ದಾರೆ. ಇಂದು ಮೂರು ವಾಹನಗಳನ್ನು ತಾಲೂಕು ಆಡಳಿತಕ್ಕೆ ಆಧಿಕಾರಿಗಳ ಮೂಲಕ ಹಸ್ತಾಂತರಿಸಲಾಯಿತು. ಈ ಆಂಬ್ಯುಲೆನ್ಸ್ ಗಳು ಬಾದಾಮಿ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಕೋವಿಡ್ ಸೋಂಕಿತರಿಗೆ ನೆರವಾಗಲಿವೆ. ಇದೇ ವೇಳೆ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಇನ್ನು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಪಕ್ಷದ …
Read More »ಮೇ 21 ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ
ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 90 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 6.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು …
Read More »ಖಾಕಿ ಪಡೆಯಿಂದ ಹಸಿದವರಿಗೆ ಊಟ, ಗದಗದಲ್ಲಿ ಅಲೆಮಾರಿಗಳ ಪಾಲಿಗೆ ಇವರೇ ಅನ್ನದಾತರು !
ಗದಗ: ಅವರೆಲ್ಲಾ ಕೊರೊನಾ ವಾರಿಯರ್ಸಗಳು. ಸರಕಾರ ಜಾರಿ ಮಾಡಿರೋ ಲಾಕ್ಡೌನ್ ಯಶಸ್ಸು ಕಾಣ್ತಾಯಿದ್ರೆ ಇವರೇ ಕೇಂದ್ರ ಬಿಂದು. ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಇತ್ತ ತಮ್ಮ ಹಸಿವನ್ನೂ ಲೆಕ್ಕಿಸದೇ ಜನರಿಗೆ ರಕ್ಷಕರಾದವರು. ಆದ್ರೆ ಅದೇ ಆರಕ್ಷಕರೀಗ ಇಲ್ಲಿ ಅನ್ನದಾತರೂ ಆಗಿದ್ದಾರೆ. ಲಾಠಿ ಹಿಡಿದ ಕೈಗಳು ಅನ್ನದ ಕೈಯನ್ನೂ ಹಿಡಿದಿವೆ. ಕೊರೊನಾ ಎಲ್ಲರ ಬದುಕನ್ನು ನುಂಗಿ ನೀರು ಕುಡಿತಿದೆ. ಅದರಲ್ಲೂ ಬಡ ಹಾಗೂ ನಿರ್ಗತಿಕರ ಪಾಡಂತೂ ಹೇಳತೀರದಾಗಿದೆ. ಅಲೆಮಾರಿ ಕುಟುಂಬಗಳ ಬದುಕು ದುಸ್ಥರವಾಗಿದೆ. …
Read More »1,418 ಪೊಲೀಸ ಸಿಬ್ಬಂದಿಗಳಿಗೆ ವಕ್ಕರಿಸಿದ ವೈರಸ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ನಲುಗುತ್ತಿದೆ. ಬರೋಬ್ಬರಿ 1418 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಮಾಹಾಮಾರಿ ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, 13 ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ. 725 ಪೊಲೀಸರು ಹೋಂ ಐಸೋಲೇಟ್ ಆಗಿದ್ದಾರೆ. ಸಿಲಿಕಾನ್ ಸಿಟಿಯ 655 ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ಸ್ ಆಗಿರುವ ಪೊಲೀಸರೇ ಇದೀಗ ವೈರಸ್ ಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Read More »ನಾವ್ ಕೊರೋನ ಹೋದ್ರೂ ಆಸ್ಪತ್ರೆ ಬಿಟ್ ಹೋಗಲ್ಲ!’
ಕೊರೋನಾ ಪರಿಸ್ಥಿತಿ ಹೇಗಾಗಿದೆ ಅಂದ್ರೆ ರೋಗಿಗಳು ಗುಣಮುಖರಾದ್ರು ಆಸ್ಪತ್ರೆ ಇಂದ ಹೋಗೋ ಮನಸ್ಸು ಮಾಡ್ತ ಇಲ್ಲಾ. ಇಂತಹ ವಿಚಿತ್ರ ಘಟನೆ ಬಾಗಲಕೋಟೆಯ ಆಸ್ಪತ್ರೆಗಳಲ್ಲಿ ನಡೆದಿದೆ. ಇಲ್ಲಿ ಒಂದುಕಡೆ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತ ಇದ್ರೆ , ಚಿಕಿತ್ಸೆ ಪಡೆದು ಗುಣ ಮುಖರಾದ್ರು ಮನೆಗೆ ತೆರಳದ ರೋಗಿಗಳು ಇನ್ನೊಂದು ಕಡೆ. ಯಾಕೆ ಈ ರೋಗಿಗಳು ಆಸ್ಪತ್ರೆ ಬಿಟ್ಟು ಮನೆಗೆ ಹೋಗಲು ಕೇಳಲ್ಲ ಅಂತ ವಿಚಾರಿಸಿದ ಜಿಲ್ಲಾಡಳಿತಕ್ಕೆ, ರೋಗಿಗಳ ಉತ್ತರ ಕೇಳಿ ದಂಗಾಗಿದೆ. …
Read More »ರಾಯಚೂರು ಹಾಗೂ ಹುಬ್ಬಳ್ಳಿಯಲ್ಲಿ ಕಂಡುಬಂದ ಬ್ಲ್ಯಾಕ್ ಫಂಗಸ್ ಕಾಯಿಲೆ
ರಾಯಚೂರು: ನಿರಂತರ ಆಕ್ಸಿಜನ್ ಬಳಕೆ ಜತೆಗೆ ಇನ್ನಿತರ ಕಾರಣಗಳಿಂದ ಬರುವ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಕಾಯಿಲೆ ಜಿಲ್ಲೆಯ ಇದೀಗ ರಾಜ್ಯದ ಇನ್ನು ಹಲವು ಕಡೆಗಳಲ್ಲಿ ಕಂಡುಬರುತ್ತಿದ್ದು, ಕರ್ನಾಟಕದಲ್ಲಿಯೂ ಇದು ವೇಗವಾಗಿ ಹಬ್ಬುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ಇದುವರೆಗೂ ಬೆಂಗಳೂರಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಈ ಕಾಯಿಲೆ ರಾಯಚೂರು ಹಾಗೂ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ. ರಾಯಚೂರಿನಲ್ಲಿ ನಾಲ್ವರಲ್ಲಿ ಕಾಣಿಸಿಕೊಂಡಿದ್ದು, ಒಪೆಕ್ ಕೋವಿಡ್ ಕೇಂದ್ರದಲ್ಲಿ ದಾಖಲಾದ ಮೂವರು ಹಾಗೂ ಖಾಸಗಿ ಆಸ್ಪತ್ರೆಯ ಒಬ್ಬ ರೋಗಿಯಲ್ಲಿ ಈ ಕಾಯಿಲೆ …
Read More »ಮಾಸ್ಕ್ ಹಾಕದೆ ರೋಗಿಗಳಿಗೆ ಚಿಕಿತ್ಸೆ! ಧೈರ್ಯ ತುಂಬುವ ಯತ್ನ ಎಂದ ಡಾ. ರಾಜು
ಬೆಂಗಳೂರು: ನಗರದ ಮೂಡಲಪಾಳ್ಯ ವೃತ್ತದಲ್ಲಿರುವ ಸಾಗರ್ ಕ್ಲಿನಿಕ್ನಲ್ಲಿ ವೈದ್ಯರು, ಶುಶ್ರೂಷಕರು ಸೇರಿದಂತೆ ಯಾವುದೇ ವೈದ್ಯಕೀಯ ಸಿಬ್ಬಂದಿ ಮಾಸ್ಕ್ ಹಾಕದೆ, ಸ್ಯಾನಿಟೈಸರ್ ಬಳಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ನಾಗರಿಕರು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ‘ರೋಗಿಗಳಿಗೆ ಧೈರ್ಯ ತುಂಬಬೇಕು ಎಂದು ಸಾಗರ್ ಕ್ಲಿನಿಕ್ನ ಡಾ. ರಾಜು ಕೃಷ್ಣಮೂರ್ತಿ ಮತ್ತು ಅವರ ಸಿಬ್ಬಂದಿ ಮಾಸ್ಕ್ ಹಾಕದೆ, ಪಿಪಿಇ ಕಿಟ್ ಧರಿಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. …
Read More »ಅನುಕಂಪದ ಆಧಾರದ ಮೇಲಿನ ಕೆಲಸಕ್ಕೆ ಕುತ್ತು; ನ್ಯಾಯಕ್ಕೆ ಮೊರೆಯಿಟ್ಟ ಲೀಲಾವತಿ
ಚಿತ್ರದುರ್ಗ, (ಮೇ.16) : ಅನುಕಂಪದ ಆಧಾರದ ಮೇಲೆ ಪಡೆದ ಗ್ರಂಥಪಾಲಕ ಹುದ್ದೆಯಲ್ಲಿ ನಾನು ಮುಂದುವರಿಯಲು ನನಗೆ ನ್ಯಾಯ ಕೊಡಿಸಿ ಎಂದು ಲೀಲಾವತಿ ಕೋರಿದ್ದಾರೆ. ಹಿರಿಯೂರು ತಾಲ್ಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ಬಿ.ಬಸವರಾಜ್ ಎಂಬುವ ವ್ಯಕ್ತಿ 2007 ರಿಂದ ಗ್ರಂಥಪಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ 2020 ಮಾರ್ಚ್ 14 ರಂದು ಅವರು ಆಕಸ್ಮಿಕವಾಗಿ ಮೃತಪಟ್ಟರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರ ಶಿಫಾರಸ್ಸಿನ ಆಧಾರದ ಮೇಲೆ ಮೃತನ ಪತ್ನಿ …
Read More »