Breaking News

Yearly Archives: 2021

ಸಿಇಟಿ ಪರೀಕ್ಷೆ ಮುಂದೂಡಿಕೆ: ದಿನಾಂಕ ಮರು ನಿಗದಿ ಮಾಡಲಾಗಿದೆ.

ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ. ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆಯಾದ ಕಾರಣ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ …

Read More »

ಕೊರೋನಾಗೆ ಬಲಿಯಾದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್

ಬೆಂಗಳೂರು,ಮೇ.12- ದಕ್ಷತೆಗೆ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್(70) ಅವರು ಕೊರೊನಾಗೆ ಬಲಿಯಾಗಿದ್ದಾರೆ. ದಿ. ಮಾಜಿ ವಿಧಾನ ಪರಿಷತ್ ಸದಸ್ಯ ವೀರಣ್ಣ ಗೌಡ ಅವರ ಪುತ್ರರಾದ ಕೆ.ವಿ.ಆರ್. ಠಾಗೂರ್ ಅವರು ಸದಾ ಹಸನ್ಮುಖಿಯಾಗಿ, ಉತ್ಸಾಹದಿಂದಲೇ ಎಲ್ಲರನ್ನು ಬೆನ್ನುತಟ್ಟಿ ಬೆಳೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸರಳ,ಸಜ್ಜನ ಅಧಿಕಾರಿಯೆಂದೇ ಗುರುತಿಸಿ ಕೊಂಡಿದ್ದ ಠಾಗೂರರು ಸಾಹಿತ್ಯ …

Read More »

ಹೆಲ್ಮೆಟ್ ಧರಿಸದ ಬೈಕ್​ ಸವಾರನಿಗೆ ದಂಡ ಹಾಕಿದ ಎಸ್​ಐಗೆ ನಡುರಸ್ತೆಯಲ್ಲೇ ಎಸಿ, ತಹಸೀಲ್ದಾರ್ ಅವಾಜ್​! ವಿಡಿಯೋ ವೈರಲ್​

ಮಂಡ್ಯ: ಹೆಲ್ಮೆಟ್​ ಹಾಕದೆ ಬೈಕ್​ನಲ್ಲಿ ಬಂದ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕಿದ ಸಬ್​ಇನ್​ಸ್ಪೆಕ್ಟರ್​ಗೆ ನಡು ರಸ್ತೆಯಲ್ಲೇ ನಿಂತು ಎಸಿ ಮತ್ತು ತಹಸೀಲ್ದಾರ್ ಅವಾಜ್​ ಹಾಕಿರುವ ವಿಡಿಯೋ ವೈರಲ್​ ಆಗಿದೆ. ಇನ್ನುಂದೆ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕದಂತೆ ಪೊಲೀಸರಿಗೆ ಎಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಕುಂಞ ಅಹಮದ್ ವಾರ್ನಿಗ್​ ಮಾಡಿರುವ ಘಟನೆ ನಾಗಮಂಗಲದಲ್ಲಿ ಸಂಭವಿಸಿದೆ.  ನಾಗಮಂಗಲ ಟೌನ್ ಪೊಲೀಸ್ ಠಾಣೆ ಎಸ್‌ಐ ರವಿಶಂಕರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡುತ್ತಿದ್ದರು, …

Read More »

ಹಳೆ ವೀಡಿಯೋಗೆ ಧ್ವನಿ ; ಪೊಲೀಸರಿಂದ ಪದ್ಮಾ ಹರೀಶ್ ವಿಚಾರಣೆ

ಬೆಂಗಳೂರು, : ಮುಂಬೈ ಪೊಲೀಸರು ವೃದ್ಧ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋಗೆ ಹಿನ್ನೆಲೆ ಧ್ವನಿ ಕೊಟ್ಟಿದ್ದ ಕೈ ಪಕ್ಷದ ಮಹಿಳಾ ಮಣಿ ತೊಂದರೆಯಲ್ಲಿ ಸಿಲುಕಿದ್ದಾರೆ. ಕರ್ನಾಟಕ ಪೊಲೀಸರಿಗೆ ಛೀಮಾರಿ ಹಾಕಿ ವೈರಲ್ ಮಾಡಿದ್ದ ಕೈ ಪಕ್ಷದ ಮಹಿಳಾ ಮಣಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಕುರಿತು ನಗರ ಪೊಲೀಸ್ ಆಯುಕ್ತ ಕಮಲಪಂತ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕೈ ಪಕ್ಷದ ನಾಯಕಿ ಇದೀಗ …

Read More »

She for Society: ಕೊರೋನಾ ವಾರಿಯರ್ಸ್ ಆದ ಬೆಂಗಳೂರಿನ ಮಹಿಳಾ ಬೈಕರ್ಸ್; ಸೋಂಕಿತರಿಗೆ ಉಚಿತ ಆಂಬುಲೆನ್ಸ್ ಸೇವೆ…

ಕೊರೋನಾ ವಿರುದ್ಧದ ಹೋರಾಟಕ್ಕೆ ಹಲವಾರು ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಅವುಗಳಲ್ಲಿ ಬೆಂಗಳೂರಿನ ಮಹಿಳಾ ಬೈಕರ್‌ಗಳ ತಂಡ ಕೂಡ ಒಂದು. ಹೌದು, ಕಳೆದ ಒಂದು ವಾರದಿಂದ ಉಚಿತ ಆಂಬುಲೆನ್ಸ್ ಸೇವೆ ನೀಡುತ್ತಿರುವ ಈ ಲೇಡಿ ಬೈಕರ್ಸ್ ಗ್ಯಾಂಗ್ ಎಲ್ಲರಿಗೂ ಮಾದರಿಯಾಗಿದೆ. ‘ಶೀ ಫಾರ್ ಸೊಸೈಟಿ’ ಸೈನಿಕರ ಹಾಗೂ ಸೈನಿಕರ ಕುಟುಂಬಗಳಿಗೆ ನೆರವಾಗಲು ಕೆಲ ವರ್ಷಗಳ ಹಿಂದೆ ಪ್ರಾರಂಭವಾದ ತಂಡ. ಹರ್ಷಿಣಿ ವೆಂಕಟೇಶ್ ಸಾರಥ್ಯದಲ್ಲಿ ಹತ್ತು ಜನರ ಮಹಿಳಾ ಬೈಕರ್‌ಗಳು ಸೇರಿ …

Read More »

ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟ ಸ್ಥಗಿತ

ಪಣಜಿ, : ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.ಗೋವಾದಲ್ಲಿರುವ ಏಕಮಾತ್ರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಾಬೊಲಿಮ್‌ನಲ್ಲಿ ಸೆಪ್ಟೆಂಬರ್ ವರೆಗೆ ರಾತ್ರಿ ಹೊತ್ತು ವಿಮಾನ ಸಂಚಾರ ನಿಷೇಧಿಸಲಾಗಿದೆ. ಟಾಟಾ ಪವರ್ ಎಸ್‌ಡಿ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ, ಸಂಜೆಯ ಸಮಯದಲ್ಲಿ ಕಾಮಗಾರಿಯನ್ನು ನಡೆಸುತ್ತಿದೆ. ರಾತ್ರಿ ಹೊತ್ತು ವಿಮಾನ ಹಾರಾಟ ನಿಷೇಧಿಸುವುದರಿಂದ ನಾಗರಿಕ ವಿಮಾನ ಕಾರ್ಯಾಚರಣೆಗೆ ಅಷ್ಟೊಂದು ತೊಂದರೆಯಾಗುವುದಿಲ್ಲ ಎಂದು ಗೋವಾ ಏರ್‌ಪೋರ್ಟ್ ನಿರ್ದೇಶಕ ಗಗನ್ ಮಲಿಕ್ ಹೇಳಿದ್ದಾರೆ. ನವೀಕರಣ ನಡೆಯುತ್ತಿರುವ …

Read More »

ಮೈಸೂರು ತಲುಪಿದ ಆಮ್ಲಜನಕ ಟ್ಯಾಂಕ್‌

ಮೈಸೂರು: ಕೇಂದ್ರ ಸರ್ಕಾರವು ಆಮ್ಲಜನಕ ಎಕ್ಸ್‌ಪ್ರೆಸ್‌ನಲ್ಲಿ ಮಂಗಳವಾರ ಬೆಂಗಳೂರಿಗೆ ಸಾಗಿಸಿದ್ದ ಆಮ್ಲಜನಕದ ಒಂದು ಕಂಟೈನರ್‌ ಅನ್ನು (ಟ್ಯಾಂಕ್‌) ಬುಧವಾರ ಬೆಳಿಗ್ಗೆ ಮೈಸೂರಿಗೆ ತರಲಾಯಿತು. ಈ ಕಂಟೈನರ್‌ನಲ್ಲಿ 20 ಸಾವಿರ ಲೀಟರ್ ಆಮ್ಲಜನಕ ತುಂಬಿದೆ. ಈ ಆಮ್ಲಜನಕವನ್ನು ಸ್ಥಳೀಯವಾಗಿ ಶೇಖರಿಸಿ ಕೂಡಲೇ ಕಂಟೈನರ್‌ ಹಿಂದಿರುಗಿಸಬೇಕಿತ್ತು. ಆದರೆ, ಇಷ್ಟು ಆಮ್ಲಜನಕವನ್ನು ಸಂಗ್ರಹಿಸಲು ಬೇಕಾದ ಶೇಖರಣಾ ಘಟಕ ಮೈಸೂರು ಜಿಲ್ಲೆಯಲ್ಲಿ ಇರಲಿಲ್ಲ. ಹೀಗಾಗಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಕೋಪ ನಿರ್ವಹಣೆ ಕಾಯ್ದೆ ಪ್ರಯೋಗಿಸಿ …

Read More »

ಓಲಾ ಕ್ಯಾಬ್‌ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ:

ಬೆಂಗಳೂರು, ಮೇ12-ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಲನೆ ನೀಡಿದರು. ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರ್ಕಾರದ ಜತೆ ಗಿವ್‌ ಇಂಡಿಯಾ ಹಾಗೂ ಓಲಾ ಕ್ಯಾಬ್‌ ಕಂಪನಿಗಳು ಕೈಜೋಡಿಸಿವೆ.ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಇಡೀ ರಾಜ್ಯದಲ್ಲಿಯೇ ಮೊತ್ತ …

Read More »

ಮಾಧ್ಯಮಗಳ ಮೇಲೆ ನಿರ್ಭಂಧ ಸಾದ್ಯವಿಲ್ಲ ಎಂದ ಕೋರ್ಟ್‌

ಬೆಂಗಳೂರು: ಕರೊನಾದ ಭೀಕರತೆಯ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿರುವುದರಿಂದ ಟಿ.ವಿ ಚಾನೆಲ್‌ಗಳನ್ನೇ ದೂಷಿಸಿ ದಿನನಿತ್ಯವೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುವುದು ಹೊಸತೇನಲ್ಲ. ಯಾವುದೇ ವಿಷಯಗಳನ್ನು ಮಾಧ್ಯಮಗಳು ವರದಿ ಮಾಡಿದಾಗಲೂ ಇಂಥ ಟೀಕೆಗಳು ಬರುತ್ತವೆ.ಕರೊನಾದ ಕರಾಳ ಮುಖವನ್ನು ಬಿಚ್ಚಿಡುವ ಚಾನೆಲ್‌ಗಳನ್ನು ಎಡಬಿಡದೇ ನೋಡುತ್ತಾ ಅದರ ವಿರುದ್ಧ ದೂಷಿಸುವವರೇ ಹೆಚ್ಚಾಗಿ ಈ ರೀತಿಯ ಕಮೆಂಟ್‌ಗಳನ್ನು ಮಾಡುವುದು ತಿಳಿದ ವಿಷಯವೇ. ಹೀಗೆ ಮಾಧ್ಯಮಗಳನ್ನು ದೂಷಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ರೀತಿಯ …

Read More »

ರಾಜ್ಯಕ್ಕೆ 12 ದಿನಗಳಲ್ಲಿ 8 ಲಕ್ಷ ಡೋಸ್‌ ಲಸಿಕೆ ಪೂರೈಕೆ: ಮುಖ್ಯ ಕಾರ್ಯದರ್ಶಿ

ಬೆಂಗಳೂರು: ’45 ವರ್ಷ ದಾಟಿದವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುತ್ತಿದ್ದು, ಪ್ರತಿ 15 ದಿನಕ್ಕೆ 15 ಲಕ್ಷ ಡೋಸ್‌ ಲಸಿಕೆ ಕೊಡಬೇಕಿತ್ತು. ಆದರೆ, ರಾಜ್ಯಕ್ಕೆ 12 ದಿನಗಳಲ್ಲಿ 8 ಲಕ್ಷ ಮಾತ್ರ ಬಂದಿದೆ’ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ತಿಳಿಸಿದ್ದಾರೆ. ‘ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಕೊಡುತ್ತೇವೆ. 45 ವರ್ಷ ದಾಟಿದವರಿಗೆ ಕೊಡಲು 15 ದಿನಗಳಲ್ಲಿ 80 ಸಾವಿರ ಡೋಸ್‌ ಮಾತ್ರ ಕೋವ್ಯಾಕ್ಸಿನ್‌ ಲಸಿಕೆ ಬಂದಿದೆ. …

Read More »