ಹೊಸದಿಲ್ಲಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾಗೂ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಭಾಗಿಯಾಗಲಿದೆ. ಇದಕ್ಕಾಗಿ ಈಗಾಗಲೇ ತಂಡವನ್ನು ಆಯ್ಕೆ ಮಾಡಲಾಗಿದ್ದು, ಜೂನ್ 2ರಂದು ಕ್ರಿಕೆಟಿಗರು ಇಂಗ್ಲೆಂಡಿಗೆ ವಿಮಾನವೇರಲಿದ್ದಾರೆ. ಆದರೆ ಇದಕ್ಕೂ ಮುನ್ನ ಬಿಸಿಸಿಐ ಎಲ್ಲ ಆಟಗಾರರಿಗೂ ಖಡಕ್ ಸೂಚನೆಯೊಂದನ್ನು ರವಾನಿಸಿದೆ. ಈ ಪ್ರವಾಸಕ್ಕೂ ಮುನ್ನ ಎಲ್ಲ ಆಟಗಾರರು ಮುಂಬಯಿಗೆ ಆಗಮಿಸಿದ ಬಳಿಕ 14 ದಿನಗಳ ಕ್ವಾರಂಟೈನ್ಗೆ ಒಳಗಾಗಬೇಕಿದೆ. ಬಳಿಕ ಆಟಗಾರರಿಗೆ ಎರಡು ಬಾರಿ …
Read More »Yearly Archives: 2021
ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ನೂತನ ಸೂತ್ರ ಸಿದ್ಧ: ಶೆಟ್ಟರ್
ಬೆಂಗಳೂರು : ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ಈಗಾಗಲೇ ನೂತನ ಸೂತ್ರವನ್ನು ರಚಿಸಿದ್ದು, ಕೆಲವೇ ದಿನಗಳಲ್ಲಿ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್ ವತಿಯಿಂದ ಆಯೋಜಿಸಿದ್ದ ವೆಬಿನಾರ್ ನಲ್ಲಿ …
Read More »ಕೊವಿಶೀಲ್ಡ್ನ ಒಂದು ಡೋಸ್ನಿಂದ 80% ರಕ್ಷಣೆ : ಪಬ್ಲಿಕ್ ಹೆಲ್ತ್ ಇಂಗ್ಲೆಂಡ್ ವರದಿ
ಲಂಡನ್/ವಾಷಿಂಗ್ಟನ್: ಆಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆಯ ಒಂದು ಡೋಸ್ ಪಡೆದರೂ ಸೋಂಕಿನಿಂದ ಮರಣಹೊಂದುವ ಅಪಾಯ ಶೇ.80ರಷ್ಟು ತಗ್ಗುತ್ತದೆ ಎಂದು ಪಬ್ಲಿಕ್ ಹೆಲ್ತ್ ಇಂಗ್ಲೆಂಡ್ ಬಹಿರಂಗಪಡಿಸಿದ ಹೊಸ ದತ್ತಾಂಶ ತಿಳಿಸಿದೆ. ಅಂದರೆ, ಒಬ್ಬ ವ್ಯಕ್ತಿಯು ಕೊವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದರೂ, ಸೋಂಕಿನಿಂದ ಆತ ಸಾಯುವ ಸಾಧ್ಯತೆ ಶೇ.80ರಷ್ಟು ಕಡಿಮೆ. ಅದೇ ರೀತಿ, ಫೈಜರ್-ಬಯಾನ್ ಟೆಕ್ ಲಸಿಕೆಯ ಒಂದು ಡೋಸ್ ನಲ್ಲಿ ಮರಣದ ಅಪಾಯ ಶೇ.80ರಷ್ಟು ಹಾಗೂ ಎರಡನೇ ಡೋಸ್ ಬಳಿಕ ಇದು ಶೇ.97ರಷ್ಟು …
Read More »ಮಂಗಳವಾರದಿಂದ ಲಾಠಿ ಏಟಿನ ಬದಲಾಗಿ, ಅನಗತ್ಯ ಸಂಚಾರಿಗಳಿಗೆ ದಂಡ ವಿಧಿಸುವುದು ಮತ್ತು ವಾಹನಗಳನ್ನು ವಶಕ್ಕೆ ಪಡೆಯುವುದನ್ನು ವ್ಯಾಪಕ
ರಾಯಚೂರು: ಲಾಕ್ಡೌನ್ ಜಾರಿ ಬಿಗಿಗೊಳಿಸಿರುವ ಪೊಲೀಸರು ಮಂಗಳವಾರದಿಂದ ಲಾಠಿ ಏಟಿನ ಬದಲಾಗಿ, ಅನಗತ್ಯ ಸಂಚಾರಿಗಳಿಗೆ ದಂಡ ವಿಧಿಸುವುದು ಮತ್ತು ವಾಹನಗಳನ್ನು ವಶಕ್ಕೆ ಪಡೆಯುವುದನ್ನು ವ್ಯಾಪಕಗೊಳಿಸಿದ್ದಾರೆ. ಕೋವಿಡ್-19 ಎರಡನೇ ಅಲೆ ನಿಯಂತ್ರಣ ಕ್ರಮಗಳ ಜಾರಿಯು ಜನವರಿ 1 ರಿಂದ ಆರಂಭವಾಗಿದ್ದು, ಮೇ 10 ರವರೆಗೂ ಒಟ್ಟು 4,322 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೇ 10 ರಂದು ಒಂದೇ ದಿನ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 699 ಪ್ರಕರಣಗಳು , ಸಾಮಾಜಿಕ …
Read More »ವಾಹನ ಬಳಕೆ ನಿರ್ಬಂಧ: ಪೊಲೀಸರ ದಬ್ಬಾಳಿಕೆ: ದಲಿತ ಸಂಘರ್ಷ ಸಮಿತಿ ಆರೋಪ
ಬೆಂಗಳೂರು: ಕೋವಿಡ್ ಲಾಕ್ಡೌನ್ ನೆಪದಲ್ಲಿ ನಾಗರಿಕರ ವಾಹನ ಬಳಕೆಗೆ ಪೊಲೀಸರು ನಿರ್ಬಂಧಿಸುತ್ತಿದ್ದು, ನಾಗರಿಕರ ಮೇಲೆ ಪೊಲೀಸರು ನಡೆಸುತ್ತಿರುವ ದಬ್ಬಾಳಿಕೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಆರೋಪಿಸಿದ್ದಾರೆ. ವಾಹನ ಬಳಸದೆ ನಡೆದುಕೊಂಡೇ ಅಗತ್ಯ ವಸ್ತುಗಳ ಖರೀದಿಗೆ ಹೋಗುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಕೃಷಿ ಚಟುವಟಿಕೆ ಅವಕಾಶ ಇದ್ದರೂ, ಜಮೀನಿಗೆ ತೆರಳಲು ರೈತರು ಪರದಾಡಬೇಕಾಗಿದೆ. ಕೃಷಿ ಇಲಾಖೆಯಿಂದ ಪಾಸ್ ಪಡೆದುಕೊಂಡಿದ್ದರೂ ವಾಹನದಲ್ಲಿ ಹೋಗಲು ಅವಕಾಶ …
Read More »ಕೋವಿಡ್-19 ಆನ್ ಡ್ಯೂಟಿ ಸೌಲಭ್ಯ ದುರ್ಬಳಕೆ; ಆಚಾರ್ಯರಿಂದ ಕಾರು ಸೀಜ್
ವಿಜಯಪುರ: ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಿ ಪೊಲೀಸರು ಎಲ್ಲೆಡೆ ನಾಕಾ ಬಂದಿ ಹಾಕಿ ಕಾವಲು ಕಾಯುತ್ತಿದ್ದಾರೆ. ಇಷ್ಟಾಗಿಯೂ ಕೆಲವು ಮಂದಿ ಕಾನೂನು ಹಾಗೂ ಕಟ್ಟುನಿಟ್ಟು ನಿಯಮಗಳನ್ನು ತಪ್ಪಿಸಿ ಓಡಾಡಲು ಪ್ರಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆಗಳು ಕೇಳಿಬರುತ್ತಿವೆ. ಇಂತಹದ್ದೇ ಮತ್ತೊಂದು ವಿಜಯಪುರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅರ್ಜೆಂಟ್ ಕೋವಿಡ್-19 ಆನ್ ಡ್ಯೂಟಿ’ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು ಅರ್ಚಕರನ್ನು ಕರೆದೊಯ್ಯುತ್ತಿದ್ದ ಕಾರು ಕಂಡುಬಂದಿದ್ದು, ಅದನ್ನು …
Read More »ಕರ್ನಾಟಕಕ್ಕೆ ಆಕ್ಸಿಜನ್ ನೆರವು ನೀಡಿದ ಇಸ್ರೇಲ್
ಬೆಂಗಳೂರು: ಕೊರೊನಾದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಇಸ್ರೇಲ್ ದೇಶದಿಂದ ಇಂದು ರಾಜ್ಯಕ್ಕೆ 2 ಆಕ್ಸಿಜನ್ ಜನರೇಟರ್ಗಳನ್ನು ನೀಡುವ ಮೂಲಕವ ನೆರವು ನೀಡಿದೆ. ಇಂಡಿಯಾಕ್ಕೆ ಸಾಕಷ್ಟು ಬೆಂಬಲವನ್ನು ನೀಡಬಲ್ಲವು ಎಂದು ಹೆಮ್ಮೆಪಡುತ್ತವೆ. ಆಕ್ಸಿಜನ್ ಜನರೇಟರ್ಗಳನ್ನು ನಾವು ಕರ್ನಾಟಕಕ್ಕೆ ನೀಡುತ್ತೇವೆ. 100 ಕ್ಕಿಂತ ಹೆಚ್ಚು ರೋಗಿಗಳಿಗೆ ಸಾಕಾಗುಷ್ಟು ಆಕ್ಸಿಜನ್ ಉತ್ಪಾದಿಸುತ್ತೇವೆ ಎಂದು ಇಸ್ರೇಲ್ ರಾಯಭಾರಿ ಮಾಹಿತಿ ನೀಡಿದ್ದಾರೆ. ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಆಕ್ಸಿಜನ್ ಸಿಲಿಂಡರ್ಗಳನ್ನು ರಾಜ್ಯಕ್ಕೆ ಕಳುಹಸುತ್ತಿರುವುದಕ್ಕೆ ಧನ್ಯವಾದಗಳು. ಈ ಆಕ್ಸಿಜನ್ ಸಿಲಿಂಡರ್ಗಳಿಂದಾಗಿ ರಾಜ್ಯದಲ್ಲಿ …
Read More »ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ : ಸಿದ್ದು ಸವದಿ
ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ …
Read More »ಧಾರವಾಡದ 240 ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ
ಹುಬ್ಬಳ್ಳಿ: ಜಿಲ್ಲೆಯ ಪತ್ರಕರ್ತರ ಭವನದಲ್ಲಿ ಇಂದು 249 ಮಾಧ್ಯಮ ಪ್ರತಿನಿಧಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ರವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 240 ಮಾಧ್ಯಮ ಪ್ರತಿನಿಧಿಗಳು ಲಸಿಕೆಯನ್ನು ಸ್ವೀಕರಿಸಿದ್ದಾರೆ. …
Read More »ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ ಹೈಕೋರ್ಟ್ ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಸರ್ಕಾರಕ್ಕೆ ಸೂಚನೆ ನೀಡಿದೆ. ಕೋವಿಡ್ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ …
Read More »