Breaking News

Yearly Archives: 2021

ಬೈಕ್ ನಿಂದ ಕೆಳಕ್ಕೆ ಬಿದ್ದ ಮಹಿಳೆಗೆ ಆರೈಕೆ ಮಾಡಿದ ಮಸ್ಕಿ ಶಾಸಕ ತುರವಿಹಾಳ

ಮಸ್ಕಿ (ರಾಯಚೂರು): ಬಿಸಿಲಿನ ತಾಪ ತಾಳದೆ ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆಯನ್ನು ಶಾಸಕ ಆರ್. ಬಸನಗೌಡ ತುರವಿಹಾಳ ಆರೈಕೆ ಮಾಡಿದ ಘಟನೆ ಭಾನುವಾರ ಪಟ್ಟಣದಲ್ಲಿ ನಡೆಯಿತು. ಬೈಕ್ ಸವಾರನ ಹಿಂಬದಿ ಕುಳಿತಿದ್ದ ಮಹಿಳೆ ಬಿಸಿಲಿನ ತಾಪ ತಾಳಲಾರದೆ ಕೆಳಗೆ ಬಿದ್ದರು. ಬೈಕ್ ಹಿಂದಿಯೇ ತನ್ನ ಇನ್ನೊವಾ ಕಾರಿನಲ್ಲಿ ಹೊರಟಿದ್ದ ಶಾಸಕ ಬಸನಗೌಡ ತುರವಿಹಾಳ ಕೂಡಲೇ ತನ್ನ ವಾಹನದಿಂದ ಕೆಳಗೆ ಇಳಿದು ರಸ್ತೆ ಬದಿ ಬಿದ್ದಿದ್ದ ಮಹಿಳೆಗೆ ನೀರು ಕುಡಿಸಿ …

Read More »

ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಾನು ಮತ್ತು ನನ್ನ ತಂದೆ ಮೇಲೆ ದರ್ಪ ಮೆರೆದಿದ್ದಾರೆ ಎಂದು ಆರೋಪಿ

ನಂಜನಗೂಡು: ತಂದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಾಪಸ್‌ ಕರೆದುಕೊಂಡು ಬರುತ್ತಿದ್ದಾಗ, ಕೋವಿಡ್‌ ನಿಯಮದ ಹೆಸರಿನಲ್ಲಿ ವ್ಯಕ್ತಿಯೊಂದಿಗೆ ಪೊಲೀಸರು ಅಟ್ಟಹಾಸ ಮೆರೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಚಂದ್ರಶೇಖರಯ್ಯ ಎಂಬವರು ಪೊಲೀಸರಿಂದ ನಿಂದನೆಗೆ ಒಳಗಾದ ವ್ಯಕ್ತಿ. ಬಿಪಿ, ಶುಗರ್‌ ರೋಗಿ ತಂದೆಯನ್ನು ಎಂದಿನಂತೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಹುಲ್ಲಹಳ್ಳಿ ರಸ್ತೆ ಬಳಿ ಆದರ್ಶ ಶಾಲೆ ಬಳಿ ಚಂದ್ರಶೇಖರಯ್ಯ ವಾಪಸ್‌ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಪೊಲೀಸರು ಬೈಕ್‌ ತಡೆದು ತಪಾಸಣೆ ನಡೆಸಿದ್ದಾರೆ. …

Read More »

ಮೂರನೆ ಬಾರಿ ದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಣೆ, ಒಂದು ವಾರ ಮತ್ತೆ ಬಂದ್ ಆಗಲಿದೆ ದೆಹಲಿ

ನವದೆಹಲಿ : ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ರಾಜಧಾನಿ ದೆಹಲಿಯಲ್ಲಿ ಹೇರಲಾಗಿರುವ ಲಾಕ್ ಡೌನ್ ಮತ್ತೆ ವಿಸ್ತರಿಸಲಾಗಿದೆ . ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಈ ಮಾಹಿತಿ ನೀಡಿದ್ದಾರೆ . ಒಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ . ಮೇ 17 ರ ತನಕ ಲಾಕ್ ಡೌನ್ ಮುಂದುವರಿಯಲಿದ್ದು,ಲಾಕ್ ಡೌನ್ ಅವಧಿಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಅರವಿಂದ ಕೇಜ್ರವಾಲ್ ಸ್ಪಷ್ಟಪಡಿಸಿದ್ದಾರೆ . ಇದೀಗ ಮೂರನೆ ಬಾರಿ ದೆಹಲಿಯಲ್ಲಿ ಲಾಕ್ …

Read More »

ಅಚ್ಛೇದಿನ್? ನಳೀನ್ ಕುಮಾರ ಕಟೀಲು ಎಲ್ಲಿ ಅಡಗಿಕೊಂಡಿದ್ದಾರೆ?: ಲಕ್ಷ್ಮಿ ಹೆಬ್ಬಾಳಕರ್

ಕೊರೋನಾ ನಿಯಂತ್ರಣ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಸಂಪೂರ್ಣ ವಿಫಲವಾಗಿವೆ. ಇಡೀ ದೇಶದಲ್ಲಿ ಬೀದಿ ಬೀದಿಯಲ್ಲಿ ಹೆಣ ಸುಡುವಂತಾಗಿದೆ. ಎಲ್ಲಿ ಹೋಯಿತು ನಿಮ್ಮ ಅಚ್ಛೇ ದಿನ್? ನಮಗೆ ಅಚ್ಛೇ ದಿನ್ ಬೇಡ. 2013ರಲ್ಲಿದ್ದಂತಹ ದಿನಗಳೇ ಇದ್ದರೆ ಸಾಕು ಎಂದು ರಾಷ್ಟ್ರದ ಜನರು ಕೈ ಮುಗಿದು ಬೇಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ …

Read More »

ನೀವು ‘ಕೊರೋನಾ ಸೋಂಕಿತ’ರಾಗಿದ್ದೀರಾ.? ಹಾಗಿದ್ದರೇ ಭಯಬೇಡ.! ‘ಆನ್ ಲೈನ್’ನಲ್ಲೇ ‘ತಜ್ಞ ವೈದ್ಯ’ರಿಂದ ಸಲಹೆ ಪಡೆಯಿರಿ.!

ರಾಜ್ಯಾಧ್ಯಂತ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದೆ. ದಿನವೊಂದಕ್ಕೆ 40 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು ಹೊಸದಾಗಿ ಪರೀಕ್ಷೆಯಿಂದ ದೃಢಪಡುತ್ತಿದೆ. ಈ ಸಮಯದಲ್ಲಿ ಬೇಕಿರೋದು ಸೋಂಕಿತರಾದವರಿಗೆ ಧೈರ್ಯ. ಜೊತೆಗೆ ತಜ್ಞ ವೈದ್ಯರ ಸಲಹೆ. ಹಾಗಿದ್ದರೇ ನೀವು ಕೊರೋನಾ ಸೋಂಕಿತರಾಗಿದ್ದೀರಾ.? ಆಸ್ಪತ್ರೆಗೆ ಅನವಶ್ಯಕ ಭೇಟಿ ಕಡಿಮೆ ಮಾಡಿ, ತಜ್ಞ ವೈದ್ಯರಿಂದ ಆನ್ ಲೈನ್ ನಲ್ಲೇ ಹೇಗೆ ಚಿಕಿತ್ಸೆಯ ಸಲಹೆ ಪಡೆಯಬಹುದು ಎನ್ನುವ ಬಗ್ಗೆ ಮುಂದೆ ಓದಿ.. ಕೊರೋನಾ ಸೋಂಕಿನ ವೈರಸ್ ಅಬ್ಬದ …

Read More »

ಎಲ್ಲಾ ತಾಯಂದಿರಿಗೆ ವಿಶ್ವ ತಾಯಂದಿರ ದಿನದ ಶುಭಾಶಯಗಳು.

ಅಮ್ಮ ಎಂಬ ಪದ ಮಗು ತನ್ನ ಮೊದಲ ತೊದಲು ನುಡಿಯಲ್ಲೇ ಹೇಳುವ ಪದ. ಏನು ಅರಿಯದ ಸಮಯದಲ್ಲಿ ಒಡಲೊಳಗೆ ಬೆಚ್ಚಗೆ ಇರಿಸಿ ಕಾಪಾಡಿದ ಅಮ್ಮ ಇನ್ನು ಪ್ರಪಂಚಕ್ಕೆ ಲಗ್ಗೆಯಿಟ್ಟ ಮೇಲೆ ಪ್ರತಿ ಹೆಜ್ಜೆಯ ಜೊತೆಯಾದಳು ಅಮ್ಮ. ನಾವು ನಮ್ಮನ್ನು ಅರಿತುಕೊಳ್ಳುವ ಮೊದಲೇ ಅಮ್ಮನನ್ನು ಅವಲಂಬಿಸಿ ಪ್ರತಿ ಅಮ್ಮನ ಭಾವನೆಗಳಿಗೆ ಸ್ಪಂದಿಸಿರುತ್ತೇವೆ. ಜಗತ್ತಲ್ಲಿ ಅಮ್ಮನ ಪ್ರೀತಿ, ತ್ಯಾಗ ಮತ್ತು ವಾತ್ಸಲ್ಯಕ್ಕೆ ಮಿಗಿಲಾದವು ಯಾವುದು ಇಲ್ಲ. ಅವಳ ನಿಷ್ಕಲ್ಮಶದ ಪ್ರೀತಿಗೆ ನಾವು ಪ್ರತಿಯಾಗಿ …

Read More »

ಲಾರಿ ಚಾಲನೆ ವೇಳೆ ನಿದ್ರೆ: ಅಪಘಾತದಲ್ಲಿ ಚಾಲಕ ಚಿರನಿದ್ರೆಗೆ

ಪಾಂಡವಪುರ: ಮರಕ್ಕೆ ಲಾರಿ ಡಿಕ್ಕಿ ಹೊಡೆದು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆನ್ನಾಳು ಗ್ರಾಮದ ಗೇಟ್ ಬಳಿ ನಡೆದಿದೆ. ತಮಿಳುನಾಡು ರಾಜ್ಯದ ನಿವಾಸಿ, ಲಾರಿ ಚಾಲಕ ಕರಪಸ್ವಾಮಿ (26) ಮೃತ ವ್ಯಕ್ತಿ. ಕಳೆದ ರಾತ್ರಿ 12 ಗಂಟೆ ಸಮಯದಲ್ಲಿ ನಾಗಮಂಗಲ ಮಾರ್ಗದಿಂದ ತಮಿಳುನಾಡು ರಾಜ್ಯಕ್ಕೆ ಲಾರಿಯಲ್ಲಿ ತೆಂಗಿನ ಚಗರೆಯನ್ನು ತುಂಬಿಕೊಂಡು ತೆರಳುತ್ತಿದ್ದಾಗ ತಾಲ್ಲೂಕಿನ ಕೆನ್ನಾಳು ಗೇಟ್ ಬಳಿ ಚಾಲಕ ಕರಪಸ್ವಾಮಿ ನಿದ್ರೆಗೆ ಜಾರಿದಾಗ ಲಾರಿ ಮರಕ್ಕೆ ಡಿಕ್ಕಿ …

Read More »

ನಾಳೆ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಲಾಕ್ ಡೌನ್ : 10 ಗಂಟೆ ಬಳಿಕ ಹೊರಗೆ ಬಂದ್ರೆ ದಂಡ ಫಿಕ್ಸ್!

ಬೆಂಗಳೂರು : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಮೇ.10 ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಪರಿಷ್ಕೃತ ಮಾರ್ಗಸೂಚಿಯಂತೆ ಮೇ.10ರ ಬೆಳಿಗ್ಗೆ 6 ಗಂಟೆಯಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಮೊದಲು ನೈಟ್ ಕರ್ಪ್ಯೂ, ಆನಂತ್ರದ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಬಳಿಕ, ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಆದ್ರೇ.. ಕೊರೋನಾ ಮಾತ್ರ …

Read More »

ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಸೋಂಕಿತರ ನಾಪತ್ತೆ- ಮತ್ತೆ 6,029 ಮಂದಿ ಎಸ್ಕೇಪ್

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಉದ್ಯಾನ ನಗರಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆಯಿಂದ ನಿತ್ಯ ನೂರಾರು ಜನ ಸಾವನ್ನಪ್ಪುತ್ತಿದ್ದಾರೆ. ಇದೆಲ್ಲದರ ನಡುವೆ ಮತ್ತೊಂದು ಶಾಕಿಂಗ್ ಸುದ್ದಿ ಬಹಿರಂಗವಾಗಿದ್ದು, ಇಂದು ಸಹ 6,029 ಜನ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಜನರಲ್ಲಿ ಮತ್ತೆ ಆತಂಕ ಹೆಚ್ಚಿದೆ. ಕೊರೊನಾ ಕರ್ಫ್ಯೂ ಇದೀಗ ಮತ್ತೆ ಲಾಕ್‍ಡೌನ್ ಮಡಿರುವ ಮಧ್ಯೆ ನಗರದಲ್ಲಿ ಸೋಂಕಿತರು ನಾಪತ್ತೆಯಾಗಿದ್ದಾರೆ. ಈ ಹಿಂದೆ 10,835 ಜನ …

Read More »

18 ರಿಂದ 44 ವರ್ಷ ವಯಸ್ಸಿನವರಿಗೆ ನಾಳೆಯಿಂದ ಲಸಿಕೆ -ಡಾ.ಕೆ ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಕೋವಿಶೀಲ್ಡ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದ್ದು, ಈವರೆಗೂ ಒಟ್ಟು 6.5 ಲಕ್ಷ ಡೋಸ್ ಪೂರೈಕೆಯಾಗಿದೆ. ಹಾಗಾಗಿ ಮೇ 10 ರಿಂದ ರಾಜ್ಯಾದ್ಯಂತ 18 ರಿಂದ 44 ವರ್ಷ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ಟರ್‍ ನಲ್ಲಿ ಬರೆದುಕೊಂಡಿರುವ ಸುಧಾಕರ್, ಕೇಂದ್ರ ಸರ್ಕಾರ ಈವರೆಗೂ 99,58,190 …

Read More »