ಬೆಂಗಳೂರು,ಮೇ.5-ಕೊರೊನಾ ಸೋಂಕಿನಿಂದ ಮೃತಪಟ್ಟ ನಿಮ್ಮ ಕುಟುಂಬ ಸದಸ್ಯರ ಮೃತದೇಹಗಳ ಶವಸಂಸ್ಕಾರ ಸಮರ್ಪಕವಾಗುತ್ತಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲ ಅಂದರೆ ಮೃತದೇಹಗಳ ಅರೆಬೆಂದ ದೇಹದ ಭಾಗಗಳು ನಾಯಿ ನರಿ ಪಾಲಾಗಲಿದೆ.ಹೇಗೆ ಅಂತಿರಾ. ಹಾಗಾದರೆ ಈ ಸುದ್ದಿ ಓದಿ.. ನಗರದಲ್ಲಿ ದಿನೇ ದಿನೇ ನೂರಾರು ಮಂದಿ ಕೊರೊನಾ ಸೋಂಕಿನಿಂದ ಬಲಿಯಾಗುತ್ತಿದ್ದಾರೆ. ಸಾಯುತ್ತಿರುವವರ ಶವಗಳ ಸಂಸ್ಕಾರ ಮಾಡಲು ನಗರದಲ್ಲಿ ಸ್ಮಶಾನಗಳು ಸಾಕಾಗುತ್ತಿಲ್ಲ. ಹೀಗಾಗಿ ಪ್ರತಿನಿತ್ಯ ನೂರಾರು ಶವಗಳನ್ನು ಬೇಕಾಬಿಟ್ಟಿ ಸುಡಲಾಗುತ್ತಿದೆ. ಈಗಾಗಲೇ ಸುಮನಹಳ್ಳಿ ರುದ್ರಭೂಮಿಯಲ್ಲಿ ತಾಂತ್ರಿಕ …
Read More »Yearly Archives: 2021
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ
ಹೊಸಪೇಟೆ (ವಿಜಯನಗರ): ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ನಗರದ ರೋಟರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಕ್ಷನ್ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ರೋಟರಿ ವೃತ್ತದಲ್ಲಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು. ‘ಪೊಲೀಸ್ ಇಲಾಖೆಯಿಂದ ಅನುಮತಿ …
Read More »ಸಮಯಪ್ರಜ್ಞೆ ಮೆರೆದು 300 ಜನರ ಜೀವ ಉಳಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತಪಟ್ಟ ಘಟನೆ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಉಪ ವಿಭಾಗದ ಪೊಲೀಸರು ಸಾಹಸ ಮಾಡಿ 300 ಜನರ ಜೀವ ಕಾಪಾಡಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ 300 ಮಂದಿ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಮಂಗಳವಾರ ರಾತ್ರಿ ಆಕ್ಸಿಜನ್ ಕಡಿಮೆಯಾಗಿ ಪಡೆಯಲು ಆಸ್ಪತ್ರೆ ವಾಹನ ಹೊಸಕೋಟೆ ಪಿಲ್ಲಗುಂಪೆಗೆ ತೆರಳಿದ್ದು, ಕೇರಳದಿಂದ …
Read More »ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳ ಬಂಧನ
ದುಬೈ: ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ದುಬೈ ಪೊಲೀಸರ ಒಳನುಸುಳುವಿಕೆ ವಿಭಾಗದ ನಿರ್ದೇಶಕ ಕರ್ನಲ್ ಅಲಿ ಸೇಲಂ, ಓಡಿಹೋದ ಕೆಲಸಗಾರರನ್ನು ನೇಮಕ ಮಾಡುವುದರ ವಿರುದ್ಧ ಸಮಾಜಕ್ಕೆ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ಎಚ್ಚರಿಸಿದರು. ಅಭಿಯಾನದ ಭಾಗವಾಗಿ ರಂಜಾನ್ ಆರಂಭದಿಂದಲೂ ವಿವಿಧ ರಾಷ್ಟ್ರೀಯತೆಗಳಿಂದ ಓಡಿಹೋದ 54 ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ಈ ಸಮಯದಲ್ಲಿ ಗೃಹ ಕಾರ್ಮಿಕರು ಕಾನೂನು ಉಲ್ಲಂಘಿಸುವ ಹೆಚ್ಚಳವಿದೆ, …
Read More »ಕೊರೊನಾ ಸೋಂಕಿತೆಗೆ ಬೆಡ್ ಕೊಡಿಸಿದ್ದಕ್ಕೆ 1.20 ಲಕ್ಷ ರೂ. ಸುಲಿಗೆ
ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ. ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ …
Read More »ಆಯಂಬುಲೆನ್ಸ್ ಕಾದು ಕಾದು ರಸ್ತೆಯಲ್ಲೇ ಕುಸಿದು ಮೃತಪಟ್ಟ ಯುವಕ;
ಕೊಡಗು: ಎರಡು ದಿನಗಳಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಗೆ ತೆರಳಲು ಆಯಂಬುಲೆನ್ಸ್ಗಾಗಿ ಕಾದು ಕಾದು ಕೊನೆಗೆ ರಸ್ತೆಯಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆ ಬಜಗುಂಡಿಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿಯ ಯುವಕ ಮನು ಮೃತ ಯುವಕ. ಎರಡು ದಿನಗಳಿಂದ ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಯುವಕ ಮನು ಮೊನ್ನೆಯಷ್ಟೇ ಸೋಮವಾರಪೇಟೆ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದನಂತೆ. ಆದರೆ ಯುವಕನಿಗೆ ತೀವ್ರವಾಗಿ ಜ್ವರ ಮತ್ತು ಕೆಮ್ಮು ಇದ್ದಿದ್ದರಿಂದ ಆತನನ್ನು ಮಡಿಕೇರಿ …
Read More »ವಿಜಯಪುರ : ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ವಿಜಯಪುರ: ರಾಜ್ಯಾದ್ಯಂತ ಹಲವೆಡೆ ಬುಧವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಭಾರಿ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಜೊತೆಗೆ ನಾಲ್ಕು ಆಡುಗಳು ಸಿಡಿಲಿನಿಂದ ಸಾವನಪ್ಪಿವೆ. ಅಶೋಕರಾಮ ಕಾರಜೋಳ(48), ಬಾಷಾಸಾಬ್ ಕರಜಗಿ(40) ಮತ್ತು ಜಾವಿದ್ ಹಾಜಿಸಾಬ್ ಜಾಲಗೇರಿ(33) ಸಾವಿಗೀಡಾಗಿದ್ದಾರೆ. ಸಬೀನಾ ಮತ್ತು ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಲದಿಂದ ಬರುವ ವೇಳೆ ಗಾಳಿ, ಮಳೆ ಆರಂಭವಾದ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಟಕ್ಕೆ ದರ್ಗಾ …
Read More »ಬೆಡ್ ಬ್ಲಾಕಿಂಗ್ ದಂಧೆಯ ಅತೀ ದೊಡ್ಡ ಜಾಲ – ಇಬ್ಬರು ವೈದ್ಯರು ಸೇರಿ 17 ಮಂದಿ ಅರೆಸ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ವ್ಯಾಪ್ತಿಯಲ್ಲಿ ನಡೆದಿದ್ದ ಕೋವಿಡ್ ಬೆಡ್ ಬ್ಲಾಕಿಂಗ್ ದಂಧೆ ಸುದ್ದಿ ಅಲ್ಲೋಲಕಲ್ಲೋಲ ಉಂಟು ಮಾಡಿತ್ತು. ಸಂಸದ ತೇಜಸ್ವಿ ಸೂರ್ಯ ಭೇಟಿ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಸೂಕ್ತ ತನಿಖೆಯ ಭರವಸೆ ನೀಡಿದ್ರು. ಅಲ್ಲದೇ ಪ್ರಕರಣವನ್ನು ಕಳೆದ ರಾತ್ರಿಯೇ ಸಿಸಿಬಿಗೆ ಕೂಡ ವರ್ಗಾಯಿಸಿದ್ರು. ಈ ಬೆನ್ನಲ್ಲೇ ತನಿಖೆ ಶುರು ಮಾಡಿದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜಯನಗರ ಠಾಣೆಗೆ ಭೇಟಿ ಕೊಟ್ಟು, ಆರೋಪಿಗಳಾದ ರೋಹಿತ್, ನೇತ್ರಾ ವಿಚಾರಣೆ ನಡೆಸಿದ್ರು. …
Read More »ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಬಂಧಿಸಿದ ಪೊಲೀಸರು
ಹುಬ್ಬಳ್ಳಿ: ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪಾರ್ಟ್ಮೆಂಟ್ನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧರ್ಮರಾಮ್ ಧರ್ಮೆಂದ್ರ ಗೋವರ್ಧನ ರಾಮ್ ಚೌಧರಿ ಎಂಬವನು ಬಂಧಿತ ಆರೋಪಿಯಾಗಿದ್ದಾನೆ. ಹುಬ್ಬಳ್ಳಿ ದೇಶಪಾಂಡೆನಗರದ ಗುರು ಅಪಾರ್ಟ್ಮೆಂಟ್ನ ಮಹೇಶ ಎಂಬವರ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜಸ್ಥಾನ ಮೂಲದ …
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …
Read More »