Breaking News

Yearly Archives: 2021

ಒತ್ತಡ: ವೈದ್ಯನಿಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ ನರ್ಸ್; ವಿಡಿಯೋ ವೈರಲ್

ರಾಮ್ ಪುರ: ನರ್ಸ್ ಒಬ್ಬರು ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾಮ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಮರಣ ಪ್ರಮಾಣ ಪತ್ರದ ವಿಷಯವಾಗಿ ವಾಗ್ವಾದ ನಡೆದ ಪರಿಣಾಮವಾಗಿ ನರ್ಸ್ ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ವರದಿಗಳ ಪ್ರಕಾರ ಅದಾಗಲೇ ರೋಗಿಗಳಿಂದ ತುಂಬಿದ್ದ ವೈದ್ಯರಿದ್ದ ಕೋಠಡಿಗೆ ಬಂದ ನರ್ಸ್ ಮೃತರೋರ್ವರ ಮರಣ ಪ್ರಮಾಣಪತ್ರ ನೀಡುವಂತೆ ಕೇಳಿದರು. ತಕ್ಷಣವೇ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಯಿತು. …

Read More »

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.   ಎರಡು ದಿನಗಳಿಂದ ಕೆಮ್ಮು-ಜ್ವರದಿಂದ ಬಳಲುತ್ತಿದ್ದ ಹೊರಟ್ಟಿ ಅವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ವೈದ್ಯರ ಸಲಹೆ ಮೇರೆಗೆ ಹೊರಟ್ಟಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Read More »

ಮನೆಗೆ ನುಗ್ಗಿ ಒಂಟಿ ಮಹಿಳೆಯ ಹತ್ಯೆಗೆ ಯತ್ನಿಸಿ ಮನೆ ದರೋಡೆ

ಮಡಿಕೇರಿ: ಮನೆಗೆ ನುಗ್ಗಿ ಒಂಟಿ ಮಹಿಳೆಯ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿ, ಮನೆ ದರೋಡೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಹಾರ್ತಿಬೈಲ್ ಬಳಿ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಸರೋಜಿನಿ(60) ಎಂದು ಗುರುತಿಸಲಾಗಿದೆ. ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ಸಂಜೀವಿನಿ ಒಬ್ಬರೇ ರಾತ್ರಿ ಸಮಯದಲ್ಲಿ ಮನೆಯಲ್ಲಿ ಇದ್ದರು. ಇದೇ ಸಂದರ್ಭದಲ್ಲಿ ಬಂದ ಮುಸುಕುಧಾರಿಗಳು ಮಹಿಳೆಗೆ ಹಲ್ಲೆ ಮಾಡಿ ಕತ್ತು ಹಿಸುಕಿದ್ದಾರೆ. …

Read More »

ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯುವರಿಗೆ ಆನ್ ಲೈನ್ ನಲ್ಲಿ ನೋಂದಿಣಿಗೆ ಇಂದಿನಿಂದ ಅವಕಾಶ

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯುವರಿಗೆ ಆನ್ ಲೈನ್ ನಲ್ಲಿ ನೋಂದಿಣಿಗೆ ಇಂದಿನಿಂದ ಅವಕಾಶ ನೀಡಲಾಗಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ವ್ಯಾಕ್ಸಿನ್ ಪಡೆಯಲು ಇಚ್ಛಿಸುವವರು ಕೋವಿನ್ ವೆಬ್ ಸೈಟ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. * www,cowin.gov.in ವೆಬ್ ಸೈಟ್ ಗೆ ಭೇಟಿ ನೀಡಿ …

Read More »

ಮಾಸ್ಕ್ ಧರಿಸದೆ ವಿವಾಹದಲ್ಲಿ ಭಾಗವಹಿಸಿದ್ದ ಕಾಗೇರಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕೊರೊನಾ ಸೋಂಕು ದೃಢ

ಕಾರವಾರ: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶಿರಸಿಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಸೋಂಕು ಪತ್ತೆಯಾಗಿದ್ದರೂ ಯಾವುದೇ ರೀತಿಯ ಲಕ್ಷಣಗಳು ಇಲ್ಲ ಹಾಗೂ ಆರೋಗ್ಯವಾಗಿದ್ದಾರೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ  ತಿಳಿಸಿದ್ದಾರೆ. ಸಧ್ಯ ಕಾಗೇರಿಯವರು ಹೋಮ್ ಐಸೋಲೇಶನ್‍ನಲ್ಲಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಾಗಿಲ್ಲ. ಇತ್ತೀಚಿಗೆ ಸಭಾಧ್ಯಕ್ಷರ ಸಂಪರ್ಕಕ್ಕೆ ಬಂದವರು ಸ್ವಯಂ ಪ್ರೇರಿತವಾಗಿ …

Read More »

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ ವ್ಯಸನಿಯಾದ ಭೀಮಪ್ಪ, ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಿದ್ಯಾನಗರ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಧಿಕರಿಗೆ ಹಸ್ತಾಂತರ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ …

Read More »

ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಅಂತ್ಯಕ್ರಿಯೆ

ಬ್ಯಾಡಗಿ: ಕೊರೊನಾ ರೋಗದಿಂದ ಮೃತಪಟ್ಟ ಹಿಂದೂ ಯುವಕನೊಬ್ಬನ ಅಂತ್ಯಕ್ರಿಯೆಯನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ನಾಲ್ವರು ನೆರವೇರಿಸಿ ಮಾನವೀಯತೆ ಹಾಗೂ ಸೌಹಾರ್ದತೆ ತೋರಿದ ಘಟನೆ ತಾಲೂಕಿನ ಖುರ್ದವೀರಾಪುರದಲ್ಲಿ ಸೋಮವಾರ ನಡೆದಿದೆ. ಖುರ್ದವೀರಾಪುರದ ಶಿವಪ್ಪ ಮಾರ್ತಾಂಡಪ್ಪ ಕುಮ್ಮೂರು (ಜೋಗಿಹಳ್ಳಿ)(45) ಕಳೆದ ಹಲವು ವರ್ಷದಿಂದ ಪಾವಗಡದಲ್ಲಿ ವಾಸವಾಗಿದ್ದ. ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಈತ ಪತ್ನಿ ಸೇರಿದಂತೆ ಕುಟುಂಬದ ಇನ್ನಿತರ ಸದಸ್ಯರನ್ನು ಬಿಟ್ಟು ರಾಣೆಬೆನ್ನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ. ಬಳಿಕ ಕೊರೊನಾ ಪರೀಕ್ಷೆ …

Read More »

ಸಿರಗುಪ್ಪ ಬಳಿ ಕಾರು- ಲಾರಿ ನಡುವೆ ಭೀಕರ ಅಪಘಾತ: ಚಿಂಚೋಳಿಯ ನಾಲ್ವರ ಸಾವು

ಚಿಂಚೋಳಿ(ಕಲಬುರ್ಗಿ ಜಿಲ್ಲೆ): ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಿದ ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ. ಮೃತರು ಚಿಂಚೋಳಿ ತಾಲ್ಲೂಕಿನ ಚಿಮ್ಮಾಈದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದವರಾಗಿದ್ದಾರೆ. ಲಾಕ್‌ಡೌನ್ ಜಾರಿಯಿಂದಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ ಲಾರಿ ಗುದ್ದಿದೆ ಆಗ ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ (ತಂದೆ) ಬಸವರಾಜ ಭೀಮರಾವ ಬೆಳ್ಳೂರು(52), …

Read More »

ಅಘೋಷಿತ ಲಾಕ್​ಡೌನ್ ವೇಳೆಯೂ ಬಿಎಂಟಿಸಿ ಬಸ್ ಸಂಚಾರಕ್ಕೆ ಅನುಮತಿ; ಇವರಷ್ಟೇ ಮಾತ್ರ ಪ್ರಯಾಣಿಸಬಹುದು?

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ರಾಜ್ಯದಲ್ಲಿ ಅಘೋಷಿತ ಲಾಕ್​ಡೌನ್ ಘೋಷಣೆ ಮಾಡಿದೆ. ಈ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ವೇಳೆ ಎಲ್ಲ ಸಾರಿಗೆ ಓಡಾಟವನ್ನು ನಿಷೇಧಿಸಲಾಗಿದೆ. ಆದರೆ, ಕೆಲವು ನಿರ್ದಿಷ್ಟ ಉದ್ಯೋಗಿಗಳ ಓಡಾಟದ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 7ರವರೆಗೆ ಬಿಎಂಟಿಸಿ ಬಸ್ …

Read More »

ಅಘೋಷಿತ ಲಾಕ್​ಡೌನ್ ವೇಳೆ ಏನಿರುತ್ತೆ, ಏನಿರಲ್ಲ, ನಿಯಮಗಳನ್ನು ವಿವರಿಸಿದ ಪೊಲೀಸ್ ಕಮಿಷನರ್ ಕಮಲ ಪಂಥ್

ಬೆಂಗಳೂರು: ಕರ್ನಾಟಕ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ ಇವತ್ತು ರಾತ್ರಿ 9 ಗಂಟೆಯಿಂದ ಹೊಸ ಗೈಡ್ ಲೈನ್ಸ್ ಜಾರಿಯಲ್ಲಿ ಇರುತ್ತೆ. ಈ ಮಾರ್ಗಸೂಚಿ ಪ್ರಕಾರ, ಬೆಳಗ್ಗೆ 6 ಗಂಟೆಯಿಂದ ಹತ್ತು ಗಂಟೆವರೆಗೂ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ನೀಡಲಾಗಿದೆ. ಹೋಮ್ ಡಿಲಿವರಿಗೆ ಅವಕಾಶ, ಇ ಕಾಮರ್ಸ್ ಗೆ ಅವಕಾಶ ಕಲ್ಪಿಸಲಾಗಿದೆ. ಬಾರ್, ಪಬ್​ಗಳಲ್ಲಿ ಮದ್ಯ ಪಾರ್ಸಲ್ ಗೆ ಅವಕಾಶ ಇದೆ. ಹತ್ತು ಗಂಟೆಯ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ. …

Read More »