Breaking News

Yearly Archives: 2021

ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ

ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ …

Read More »

ಇಂದು ರಾತ್ರಿಯಿಂದ ‘ಕರ್ನಾಟಕದಲ್ಲಿ 14 ದಿನ ಕೊವಿಡ್ ಕರ್ಫ್ಯೂ’: ಏನಿರುತ್ತೆ? ಏನಿರಲ್ಲ? ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ

ಬೆಂಗಳೂರು: ಕರೊನ ಮಟ್ಟ ಹಾಕುವ ನಿಟ್ಟಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಅಂದ ಹಾಗೇ 14 ದಿನಗಳ ತನಕ ಪ್ರತಿ ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ …

Read More »

ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಗೆ ಕೊರೋನಾ ಪಾಸಿಟಿವ್

ನವದೆಹಲಿ : ಕೇಂದ್ರೀಯ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೂ ಕೊರೊನಾ ವೈರಸ್ ಪಾಸಿಟಿವ್ ವರದಿಯಾಗಿದೆ ಎಂದು ತಿಳಿದು ಬಂದಿದೆ. ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಭೂಷಣ್ ಅವರನ್ನು ಕಳೆದ ವರ್ಷ ಜುಲೈನಲ್ಲಿ ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಅವರು ಕಳೆದ ವರ್ಷ ಕೊರೊನಾ ವೈರಸ್ ಮೊದಲ ಅಲೆಯ ಸಮಯದಲ್ಲಿ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ಬಳಿಕ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಭೂಷಣ್ ೧೯೮೭ ರ ಬ್ಯಾಚ್ ಬಿಹಾರ ಕೇಡರ್ …

Read More »

ಮೇ 10ರವರೆಗೆ KSRTC, BMTC ಬಸ್, ಮೆಟ್ರೋ ಸಂಚಾರ ಬಂದ್,ಕೊರೊನಾ ಕಂಟ್ರೋಲ್‍ಗೆ ಬರದಿದ್ರೆ ಲಾಕ್‍ಡೌನ್ ಮುಂದುವರಿಕೆ

ಬೆಂಗಳೂರು: ಮಂಗಳವಾರ ರಾತ್ರಿ 9 ಗಂಟೆಯಿಂದ ಇಡೀ ಕರುನಾಡು ಸಂಪೂರ್ಣ ಸ್ತಬ್ಧವಾಗಲಿದೆ. ಲಾಕ್‍ಡೌನ್ ಹಿನ್ನೆಲೆ ಸಾರಿಗೆ ಬಸ್ ಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದೇ ವೇಳೆ ಮೇ 10ರವರೆಗೆ ಕೊರೊನಾ ನಿಯಂತ್ರಣಕ್ಕೆ ಬರದಿದ್ರೆ ಲಾಕ್‍ಡೌನ್ ಮುಂದುವರಿಯಲಿದೆ ಎಂದು ಸಿಎಂ ತಿಳಿಸಿದರು. ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯವಸ್ತುಗಳ (ದಿನಸಿ, ತರಕಾರಿ, ಹಾಲು, ಹಣ್ಣು) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮದ್ಯದಂಗಡಿಗಳಿಗೆ …

Read More »

‘ಕೊರೊನಾ ತಡೆಗೆ ಜನರು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕು”

ಹುಬ್ಬಳ್ಳಿ ಏ 26 : ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಜನರು ಸೋಂಕು ತಡೆಗಟ್ಟಲು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಲಹೆ ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ದವಾಗಿದೆ. ಈಗಾಗಲೇ 1.22 ಲಕ್ಷ ರೆಮ್ ಡಿಸಿವಿಯರ್ ನೀಡಿದ್ದೇವೆ. ಕೇಂದ್ರ ಸರ್ಕಾರ ಹೊಸದಾಗಿ 551 ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಅನುಮತಿ ‌ನೀಡಿದೆ ಎಂದರು. ಲಾಕ್ …

Read More »

ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

ನಿಮಗೆ ನೆನಪಿದೆಯಾ? ಕಳೆದ ವರ್ಷ, ಕೊರೊನಾ ಮೊದಲ ಅಲೆ ಅಪ್ಪಳಿಸಿದಾಗ, ಎಲ್ಲೆಲ್ಲೂ ವೈದ್ಯಕೀಯ ವೆಂಟಿಲೇಟರ್​ಗಾಗಿ ಹಾಹಾಕಾರ ಎದ್ದಿತ್ತು. ಹೌದು. ಅದೇ ರೀತಿ ಹೈಡ್ರೋಕ್ಸಿಕ್ಲೋರೊಕ್ವಿನ್​ (ಎಚ್​ಸಿಕ್ಯೂ) ಮಾತ್ರೆಗೂ ಬೇಡಿಕೆ ತುಂಬಾ ಇತ್ತು. ಭಾರತ ಅಮೇರಿಕಕ್ಕೆ (ಎಚ್​ಸಿಕ್ಯೂ) ಮಾತ್ರೆಯನ್ನು ಕಳಿಸಿತ್ತು. ಭಾರತ ಸರ್ಕಾರ ಹೊಸ ಹೊಸ ವೆಂಟಿಲೇಟರ್​ ತಯಾರಿಸಲು ಕರೆ ಕೊಟ್ಟಿತ್ತು. ಅದು ಹೇಗೋ, ಭಾರತದಲ್ಲಿ ಕೊರೊನಾ ವೈರಾಣು ಮಣ್ಣುಮುಕ್ಕಿತು. ನಾವು ಬೇರೆಲ್ಲಾ ದೇಶಗಳಿಗಿಂತಲೂ ಸುಲಭವಾಗಿ ಕೊವಿಡ್​ 19 ಯುದ್ಧದಲ್ಲಿ ಗೆದ್ದುಬಿಟ್ಟೆವು ಎಂದು …

Read More »

ರಾಜ್ಯ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್ : ‘ಕೋವಿಡ್ ನಿರ್ವಹಣೆ’ಗಾಗಿ ‘1 ತಿಂಗಳ ವೇತನ’ ಕಡಿತ

ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಅಬ್ಬರಿಸಿದೆ. ಈ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಅಲ್ಲದೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳೋದಕ್ಕಾಗಿ ರಾಜ್ಯದ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತಗೊಳಿಸುವಂತ ನಿರ್ಧಾರವನ್ನು ಕೂಡ ಕೈಗೊಂಡಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿನ …

Read More »

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು …

Read More »

ಲಾಕ್‍ಡೌನ್ ಘೋಷಣೆ ಬೆನ್ನಲ್ಲೇ ಬಾರ್ ಮುಂದೆ ಫುಲ್ ಕ್ಯೂ

ಬೆಂಗಳೂರು: ರಾಜ್ಯದಲ್ಲಿ ನಾಳೆ ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಜನತಾ ಲಾಕ್‍ಡೌನ್ ಹಿನ್ನೆಲೆ ಮದ್ಯಪ್ರಿಯರು ಬಾರ್‍ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಗೆ ಮುಂದಾಗಿರುವ ಸನ್ನಿವೇಶ ನಗರದ ಬಹುತೇಕ ಮದ್ಯದಂಗಡಿಗಳ ಮುಂದೆ ಕಂಡು ಬರುತ್ತಿದೆ. ಸರ್ಕಾರ ಮದ್ಯದಂಗಡಿಗಳನ್ನು ಕೂಡ ಮುಚ್ಚಿದರೆ ‘ಎಣ್ಣೆ’ ಮುಂದಿನ ಹದಿನಾಲ್ಕು ದಿನ ಸಿಗಲಾರದು ಎಂಬ ನಿಟ್ಟಿನಲ್ಲಿ ಮದ್ಯಪ್ರಿಯರು ಮದ್ಯ ಖರೀದಿಗಾಗಿ ಮದ್ಯದಂಗಡಿಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ಕೈಚೀಲದಲ್ಲಿ ಎಣ್ಣೆ ತುಂಬಿಕೊಂಡು …

Read More »

ಕುಟುಂಬದ 18 ಜನರಿಗೆ ಸೋಂಕು ತಗುಲಿತ್ತು, ಇಂಥ ರೋಗ ವೈರಿಗಳಿಗೂ ಬರಬಾರದು:ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ನಿರ್ಲಕ್ಷ್ಯ ಮಾಡಿದ್ದರಿಂದ ನಮ್ಮ ಮನೆಯಲ್ಲಿ ಹದಿನೆಂಟು ಜನ ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢವಾಗಿತ್ತು. ದೇವರ ದಯೆಯಿಂದ ಎಲ್ಲರೂ ಗುಣಮುಖರಾಗಿದ್ದೇವೆ. ಕೊರೊನಾ ಬಗ್ಗೆ ನಾವೂ ನಿರ್ಲಕ್ಷ್ಯ ಮಾಡಿದ್ದೆವು. ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕೊರೊನಾ ಸೂೀಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು. ಕೋವಿಡ್ ವಾರಿಯರ್ಸ್ ದೇವರಾಗಿ ನಮ್ಮ ಕಣ್ಣಿಗೆ ಕಾಣಿಸುತ್ತಿದ್ದಾರೆ. …

Read More »