Breaking News

Yearly Archives: 2021

₹ 20 ಸಾವಿರಕ್ಕೆ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ!

ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪರೀಕ್ಷಾ ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರುತ್ತಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.   ‘ಮರಿಯಣ್ಣಪಾಳ್ಯದ ಎಂ. ರಾಕೇಶ್ (37), ಹೆಬ್ಬಾಳ ಕೆಂಪಾಪುರದ ಕೆ. ಕೃಷ್ಣ (27), ಕೊತ್ತನೂರಿನ ಹನುಮಂತಪ್ಪ ಲೇಔಟ್‌ನ ತನ್ವಯ್ ದೇಬ್‌ರಾಯ್ (33) ಹಾಗೂ ಎಚ್‌ಬಿಆರ್ ಲೇಔಟ್‌ನ ಹೈದರ್ ಅಲಿ (37) ಬಂಧಿತರು. ಅವರಿಂದ 682 ನಕಲಿ ಅಂಕಪಟ್ಟಿಗಳು ಹಾಗೂ 18 …

Read More »

ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದ ಅತ್ಯಾಚಾರ ಆರೋಪಿಗೆ ಜಾಮೀನು, ಅಕ್ರಮ ಸಂಬಂಧಕ್ಕೆ ಇಬ್ಬರ ಒಪ್ಪಿಗೆ ಇತ್ತು ಎಂದ ಹೈಕೋರ್ಟ್

ಬೆಂಗಳೂರು: ವಿವಾಹಿತೆಯಾಗಿರುವ ಸಂತ್ರಸ್ತೆ ಮಹಿಳೆಯು ಬೆಳಗಿನ ಜಾವ ಆರೋಪಿಗೆ ವಿಡಿಯೊ ಕರೆ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳ ಚಿತ್ರಗಳನ್ನು ಆತ ಸೆರೆ ಹಿಡಿದಿದ್ದಾನೆ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ, ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದೆ.   ಕೊಪ್ಪಳ ಜಿಲ್ಲೆಯ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ ನಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಬಸನಗೌಡ ಅಲಿಯಾಸ್ ಬಸವರಾಜ್ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ …

Read More »

ಲಾಕ್ ಡೌನ್, ಶಾಲಾ, ಕಾಲೇಜು ಮುಚ್ಚುವ ಕುರಿತು ಸಿಎ ಹೇಳಿದ್ದೇನು?

ದಾವಣಗೆರೆ : ಸರ್ಕಾರದ ಮುಂದೆ ಲಾಕ್ ಡೌನ್ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ. ಶಾಲಾ -ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.   ರೂಪಾಂತರಿ ವೈರಸ್ ಕಂಡು ಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಲಾಗಿದೆ. …

Read More »

ಶಿಕ್ಷಕ ಹುದ್ದೆ ನಿರೀಕ್ಷಿತರಿಗೆ ಗುಡ್‌ ನ್ಯೂಸ್‌ : ವಿವಿ, ಕಾಲೇಜುಗಳಲ್ಲಿ ಖಾಲಿ ಇರುವ ಅಧ್ಯಾಪಕರ ನೇಮಕಾತಿಗೆ ʼUGCʼ ಅಧಿಸೂಚನೆ

ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ವಿಶ್ವವಿದ್ಯಾನಿಲಯ ಅನುದಾನ ಆಯೋಗವು ದೇಶಾದ್ಯಂತ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಸಂಸ್ಥೆಗಳು ಮತ್ತು ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯುಜಿಸಿ ಹೊರಡಿಸಿರುವ ನೋಟಿಸ್ ಪ್ರಕಾರ, ಅಧ್ಯಾಪಕರಲ್ಲಿ (Faculty) ಕಾಯಂ ನೇಮಕಾತಿಗೆ ಸಂಬಂಧಿಸಿದಂತೆ ಸೂಚನೆಗಳನ್ನ ನೀಡಲಾಗಿದೆ. ಏಪ್ರಿಲ್ 1, 2021ರ ಪ್ರಕಾರ, ದೆಹಲಿ ವಿಶ್ವವಿದ್ಯಾನಿಲಯದಲ್ಲಿ (DU) …

Read More »

LPG ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ 900 ರೂಪಾಯಿಗಲ್ಲ 587ಕ್ಕೆ ಸಿಗಲಿದೆ ಸಿಲಿಂಡರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಜನ ಸಾಮಾನ್ಯರನ್ನ ಬೆಚ್ಚಿ ಬೀಳಿಸಿದೆ. ಅಗತ್ಯ ವಸ್ತುಗಳ ಬೆಲೆಯೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಬೆಲೆ ಸಾರ್ವಕಾಲಿಕ ಗರಿಷ್ಠ 900 ರೂ.ಗೆ ಏರಿಕೆಯಾಗಿದೆ. ಅದ್ರಂತೆ, ದಿನ ಬಳಕೆಯ ವಸ್ತುಗಳ ಜತೆಗೆ 900 ರೂ.ಗೆ ಗ್ಯಾಸ್ ಸಿಲಿಂಡರ್ ಖರೀದಿಸುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಇನ್ನು ಕೆಲ ದಿನಗಳಿಂದ ಸರ್ಕಾರ ನೀಡುವ ಗ್ಯಾಸ್ …

Read More »

ಶವದ ಹೆಬ್ಬೆಟ್ಟು ಒತ್ತಿಸಿಕೊಂಡವರಿಗೆ ಅಟಕಾಯಿಸಿಕೊಂಡ ದುರಾದೃಷ್ಟ; ಪೊಲೀಸರಿಂದ FIR​ ದಾಖಲು

ಮೈಸೂರು: ಆಸ್ತಿ ಕಬಳಿಕೆಗಾಗಿ ಮೃತ ವೃದ್ದೆಯ ಹೆಬ್ಬೆಟ್ಟು ಗುರುತು ಪಡೆದ ಪ್ರಕರಣ ಸಂಬಂಧಿಸಿ ಹೆಬ್ಬೆಟ್ಟು ಸಹಿ ಪಡೆದದವರ ಮೇಲೆ ವಿದ್ಯಾರಣ್ಯಪುರಂನಲ್ಲಿ ಠಾಣೆಯಲ್ಲಿ FIR ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಜಯಮ್ಮ ನವೆಂಬರ್ 16 ರಂದು ಮೃತಪಟ್ಟಿದ್ದರು. ಅಂತಿಮ ದರ್ಶನ ಪಡೆಯಲು ಸಂಬಂಧಿಕರಾದ ಕಾವ್ಯ ತೆರಳಿದ್ದಾಗ ಮೃತ ಜಯಮ್ಮರ ಅಕ್ಕನ ಮಗ ಸುರೇಶ ಎಂಬುವರು 6-7 ಬೆಲೆಯುಳ್ಳ ಭದ್ರತಾ ಪತ್ರಗಳಿಗೆ ಶವದ ಹೆಬ್ಬೆಟ್ಟಿನ ಗುರುತು ಒತ್ತಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಿನಗೆ …

Read More »

ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯಲ್ಲೂ ವಿವಾದಿತ 3 ಕೃಷಿ ಕಾಯ್ದೆ ವಾಪಸ್ -​ಸಂಭ್ರಮದಲ್ಲಿ ಮುಳುಗಿದ ರೈತರು 

ನವದೆಹಲಿ: ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಇಂದಿನ ರಾಜ್ಯಸಭೆ ಸಂಸತ್ ಕಲಾಪದಲ್ಲಿ ವಾಪಸ್ ಪಡೆಯಲಾಗಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದಂತೆ ಈಗ ಕಲಾಪದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವ ಸಂಬಂಧ ಬಿಲ್ ಮಂಡಿಸಿದರು. ರೈತರ ಉತ್ಪಾದನೆ ವ್ಯಾಪಾರ …

Read More »

ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ವೇಳೆ ಮೃತ ಸಿದ್ದರಾಜುವಿಗೆ ರಾತ್ರಿ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ವಿಷಯ ತಿಳಿದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಭೇಟಿ …

Read More »

12 ಸಂಸದರನ್ನು ಅಮಾನತುಗೊಳಿಸಿ ಆದೇಶ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವೇಳೆ ಅಶಿಸ್ತು ತೋರಿದ ಪ್ರತಿಪಕ್ಷದ 12 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಆಗಸ್ಟ್ ನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತು ತೋರಿದ್ದ ಕಾಂಗ್ರೆಸ್ ನ 6, ಟಿಎಂಸಿ ಹಾಗೂ ಶಿವಸೇನೆಯ ತಲಾ ಇಬ್ಬರು ಹಾಗೂ ಸಿಪಿಐ ಮತ್ತು ಸಿಪಿಎಂ ನಿಂದ ತಲಾ ಒಬ್ಬರು ಸಂಸದರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು ಒಟ್ಟು 12 ಸಂಸದರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿರ್ಣಯ …

Read More »

ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಗಲಾಟೆ ಶುರು

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇದರೊಂದಿಗೆ ಲೋಕಸಭೆಯ ಕಲಾಪವನ್ನು ಮುಂದೂಡಲಾಗಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾನೂನುಗಳನ್ನು ಹಿಂಪಡೆಯುವ ಕುರಿತು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಕೆಲವೇ ಸಮಯದಲ್ಲಿ ಕೃಷಿ ಕಾನೂನು ಹಿಂಪಡೆಯುವ ಮಸೂದೆಯನ್ನು ಲೋಕಸಭೆಯು ಅಂಗೀಕರಿಸಲಾಯ್ತು. ಲೋಕಸಭೆಯಲ್ಲಿ ಮಸೂದೆ ಕುರಿತು …

Read More »