Breaking News

Yearly Archives: 2021

ಮೇ ಮಧ್ಯದಲ್ಲಿ ದೇಶದಲ್ಲಿ ದಿನದಲ್ಲಿ 5 ಸಾವಿರ ಜನ ಕೊರೋನಾಗೆ ಬಲಿಯಾಗಲಿದ್ದಾರೆ : ಶಾಕಿಂಗ್ ವರದಿ ನೀಡಿದ ಅಧ್ಯಯನ

ನವದೆಹಲಿ : ಕೊರೊನಾ ವೈರಸ್ ಪ್ರೇರಿತ ಸಾವುಗಳ ಭಾರತದ ದೈನಂದಿನ ಸಂಖ್ಯೆ ಮೇ ಮಧ್ಯಭಾಗದಲ್ಲಿ 5,600 ಕ್ಕೆ ಏರಬಹುದು ಎಂದು ಅಮೆರಿಕದ ಅಧ್ಯಯನವು ಎಚ್ಚರಿಸಿದೆ. ಇದರರ್ಥ ಏಪ್ರಿಲ್ ಮತ್ತು ಆಗಸ್ಟ್ ನಡುವೆ ದೇಶದಲ್ಲಿ ಸುಮಾರು ಮೂರು ಲಕ್ಷ ಜನರು ಕೋವಿಡ್-19 ಗೆ ಪ್ರಾಣ ಕಳೆದುಕೊಳ್ಳಬಹುದು. COVID-19 projections’ ಎಂಬ ಶೀರ್ಷಿಕೆಯ ಈ ಅಧ್ಯಯನವನ್ನು ವಾಷಿಂಗ್ಟನ್ ವಿಶ್ವವಿದ್ಯಾಲಯದ ಆರೋಗ್ಯ ಮೆಟ್ರಿಕ್ಸ್ ಮತ್ತು ಮೌಲ್ಯಮಾಪನ ಸಂಸ್ಥೆ (ಐಎಚ್ ಎಂಇ) ನಡೆಸಿತು. ಈ ವರ್ಷದ …

Read More »

ರೈಲು ಪ್ರಯಾಣಿಕರೇ ಗಮನಿಸಿ : ‘ವೇಟಿಂಗ್ ಲಿಸ್ಟ್’ ಪ್ರಯಾಣಿಕರಿಗೆ ಅವಕಾಶವಿಲ್ಲ

ಬೆಂಗಳೂರು : ದೇಶಾದ್ಯಂತ ಕೊರೋನಾ ಸೋಂಕಿನ 2ನೇ ಅಲೆಯ ಅರ್ಭಟ ಜೋರಾಗಿದೆ. ಈ ಸಂದರ್ಭದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ. ರಾಜ್ಯದಲ್ಲೂ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ರೈಲ್ವೆ ಇಲಾಖೆ ಕೂಡ ಕೊರೋನಾ ನಿಯಂತ್ರಣಕ್ಕೆ ಶಿಸ್ತು ಕ್ರಮ ಕೈಗೊಂಡಿದ್ದು, ಅಂತರ್ ರಾಜ್ಯ ರೈಲುಗಳ ವೇಟಿಂಗ್ ಲೀಸ್ಟ್ ಟಿಕೇಟ್ ಹೊಂದಿರುವ ಪ್ರಯಾಣಿಕರಿಗೆ ರೈಲು ಹತ್ತೋದಕ್ಕೆ ನಿರ್ಬಂಧ ವಿಧಿಸಲಾಗಿದೆ. …

Read More »

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ- ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿ: ಮಹಾನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಇಂದು ಸಂಜೆ ಭಾರೀ ಮಳೆಯಾಗಿದೆ. ಮಿಂಚು, ಗುಡುಗು, ಬಿರುಗಾಳಿ ಸಹಿತ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಸಾಕಷ್ಟು ಹಾನಿ ಸಂಭವಿಸಿದೆ. ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಮರಗಳು ಧರೆಗುರುಳಿವೆ. ಬೇಸಿಗೆಯ ಧಗೆಗೆ ಸುರಿದ ಮಳೆ ತಂಪನ್ನೆರೆಯಿತು. ಆದರೆ ವೀಕೆಂಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಾರುಕಟ್ಟೆಗೆ ಆಗಮಿಸಿದ್ದ ಜನತೆ ಏಕಾಏಕಿ ಮಳೆಯಿಂದಾಗಿ ಪರದಾಡುವಂತಾಯಿತು. ಸಂಜೆ 6 ಗಂಟೆ …

Read More »

ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಅಲ್ಲ.

ಪ್ರಧಾನಿ‌ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್ ನಿಯಂತ್ರಿಸಿ. ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು …

Read More »

ಮೊನ್ನೆ ಬಸ್ ನಿಂದ‌ ಇಳಿಸಿ ಕೇಸ್ ಹಾಕಿಸಿದ್ರಿ! ಇವತ್ತು ನೋಡಿದ್ರೆ ನೀವೇ ಮಾಸ್ಕ್ ಹಾಕಿಲ್ಲ.

ಉಡುಪಿ ಡಿಸಿ ಅವರು ಉತ್ತರಿಸಲೇ ಬೇಕು… ಮೆಹಂದಿಯಲ್ಲಿ ಭಾಗವಹಿಸಿ, ಮಾಸ್ಕ್ ಹಾಕದೇ‌ ಇರೋ ವ್ಯಕ್ತಿ ನೀವೇ ಆಗಿದ್ದರೆ… ಖಂಡನೀಯ!! ಮದುವೆಗೆ ಮಾತ್ರ ಅವಕಾಶ, ಮೆಹಂದಿಗೆ ಇಲ್ಲ ಈ‌ ನಿಯಮ ಜನ ಸಾಮಾನ್ಯರಿಗೆ ಮಾತ್ರವಾ? ಅದೂ ಅಲ್ಲದೆ ಮೊನ್ನೆ ಬಸ್ ನಿಂದ‌ ಇಳಿಸಿ ಕೇಸ್ ಹಾಕಿಸಿದ್ರಿ! ಇವತ್ತು ನೋಡಿದ್ರೆ ನೀವೇ ಮಾಸ್ಕ್ ಹಾಕಿಲ್ಲ… ತಪ್ಪಲ್ವಾ ಸರ್… ನಾವು ಇಂಥ ತಪ್ಪು ಮಾಡೋದಿಲ್ಲ ಅಂಥಲ್ಲಾ.. ಆದರೆ ನೀವೇ ಮಾಡಿದ್ರೆ ಹೇಗೆ? ಬಡವರಿಗೊಂದು ನ್ಯಾಯ, …

Read More »

ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …

Read More »

ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶ

ಚಿಕ್ಕೋಡಿ – ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1987ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ, ಚಿಕ್ಕೋಡಿ ತಾಲೂಕು ಮಜಲಟ್ಟಿ ಗ್ರಾಮದಲ್ಲಿ ಜನಿಸಿದ್ದರು.  ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ …

Read More »

ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಮಹಾಮಾರಿ ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳಲ್ಲಿ ಶರವೇಗದಲ್ಲಿ ಹರಡುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸೂಚನೆ …

Read More »

ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

ಬೆಳಗಾವಿ: ಕೊರೊನಾ ಎರಡನೇ ಅಲೆ ರಾಜ್ಯದಾದ್ಯಂತ ತೀವ್ರವಾಗಿದ್ದು, ರಾಜ್ಯ ಸರ್ಕಾರ ಸೋಂಕಿನ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ನಡುವೆ ಜನರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಬೆಳಗಾವಿ ಮಹಾನಗರ ಪಾಲಿಗೆ ಅಧಿಕಾರಿಗಳು ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಮಹಾನಗರ ಪಾಲಿಕೆ ಮಾರ್ಷಲ್​​ಗಳು ನಗರದ ಬೀದಿಗಳಲ್ಲಿ ಒಂಟಿ ಏರಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದು, ಕೊರೊನಾ …

Read More »

ವಿದ್ಯಾರ್ಥಿಗಳನ್ನ ಹೊರಹಾಕಿದ ಹಾಸ್ಟೆಲ್; ಅನ್ನ-ನೀರಿಗಾಗಿ​ ವಿವಿ ಸ್ಟೂಡೆಂಟ್ಸ್ ಪರದಾಟ

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ಯಡವಟ್ಟಿನಿಂದಾಗಿ ಹಾಸ್ಟೆಲ್​ನಲ್ಲಿರುವ ವಿದ್ಯಾರ್ಥಿಗಳು ಕಳೆದೆರಡು ದಿನಗಳಿಂದ ಅನ್ನ ನೀರಿಗಾಗಿ ಪರದಾಡುತ್ತಿರುವ ಘಟನೆ ಚಿತ್ರದುರ್ಗ ನಗರದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್​ನಲ್ಲಿ ನಡೆದಿದೆ. ಕೊರೊನಾ ಕಾರಣ ಹೇಳಿ ಆರೋಗ್ಯ ಇಲಾಖೆ ಏಕಾ ಏಕಿ ಹಾಸ್ಟೆಲ್​ ಬಂದ್​ ಮಾಡಿದ್ದು.. ಹಾಸ್ಟೆಲ್​ ಸಿಬ್ಬಂದಿ ವಿದ್ಯಾರ್ಥಿಗಳ ಬಟ್ಟೆ ಲಗೇಜನ್ನು ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ಬಿ. ಎಡ್​ ಎಕ್ಸಾಮ್​ ಹಿನ್ನಲೆ ಹಾಸ್ಟೆಲ್​ನಲ್ಲಿ ಪರೀಕ್ಷಾ ಸಿದ್ಧತೆ ನಡೆಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ …

Read More »