ಭೋಪಾಲ್: ಕರೊನಾ ದೇಶದ ಜನರಲ್ಲಿ ಭಯ ಹುಟ್ಟಿಸಿದೆ. ಸೋಂಕು ಹರಡಿ ಕೆಲವೇ ದಿನಗಳಲ್ಲಿ ಜನರು ಪ್ರಾಣ ಬಿಡುತ್ತಿರುವ ಉದಾಹರಣೆಗಳು ಹೆಚ್ಚಾಗುತ್ತಿವೆ. ಇದೇ ರೀತಿ ಒಂದೇ ಕುಟುಂಬದ ಮೂವರು ಸದಸ್ಯರು ಕರೊನಾಕ್ಕೆ ಒಂದು ತಿಂಗಳ ಅವಧಿಯಲ್ಲಿ ಬಲಿಯಾಗಿದ್ದಾರೆ. ಅದನ್ನು ಕಂಡ ಮನೆಯ ಸೊಸೆ ಆಘಾತ ತಾಳಲಾರದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದೇವಾಸ್ ನಗರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಬಾಲಕಿಶನ್ ಅವರ ಪತ್ನಿ ಚಂದ್ರಕಲಾ (75) ಅವರು ಏಪ್ರಿಲ್ 14ರಂದು …
Read More »Yearly Archives: 2021
ಅಂದಿನ ತಪ್ಪಿಗೆ ಇಂದು ಬೆಲೆ ತೆರಬೇಕಾಗಿದೆ; ರಾಜ್ಯ ಸರ್ಕಾರದ ನಡೆಗೆ ಸಿ.ಟಿ.ರವಿ ಆಕ್ರೋಶ
ಬೆಂಗಳೂರು: ಕೊರೊನಾ ಸೋಂಕು ಕಟ್ಟುನಿಟ್ಟಾಗಿ ನಿಯಂತ್ರಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಯಾರೋ ಬಂದು ಹೇಳಿದ ಮಾತ್ರಕ್ಕೆ ನಿಯಮಗಳನ್ನೇ ವಾಪಸ್ ಪಡೆದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಕಳೆದ ಒಂದು ವಾರದಲ್ಲಿ 15 ಪಟ್ಟು ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಆದರೂ ಆ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿಲ್ಲ. ಕಳೆದ ಎಂಟು ದಿನಗಳ ಹಿಂದೆ ಥಿಯೇಟರ್, …
Read More »ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ ನೀಡಿದೆ. ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ ನೀಡಿದೆ. ಮೇ 4 ರ ವರೆಗೆ ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟು ಬಂದ್ ಆಗಲಿವೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮಾತ್ರ ಅಂಗಡಿ ಬಂದ್ ಮಾಡಬೇಕು ಎಂದುಕೊಂಡಿದ್ದವರಿಗೆ ಶಾಕ್ ನೀಡಿದೆ. ಅಗತ್ಯ ವಸ್ತುಗಳ …
Read More »ಪ್ರೀತಿಗಾಗಿ ಅಣ್ಣನ ರುಂಡ ಚೆಂಡಾಡಿದ ತಂಗಿ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಪೊಲೀಸರನ್ನೂ ಆತಂಕದಲ್ಲಿ ದೂಡಿದ್ದ ಪ್ರಕರಣದ ಹೊಸ ಸ್ವರೂಪ ಬಯಲಾಗಿದೆ. ರುಂಡ-ಮುಂಡ ಚೆಂಡಾಡಿದ ಪ್ರಕರಣದಲ್ಲಿ ಭೀಕರವಾಗಿ ಹತ್ಯೆಯಾದ ಯುವಕನ ಸಹೋದರಿ ಕಂ ಚಲನಚಿತ್ರ ನಟಿ ಕಂ ಮಾಡೆಲ್ ಕಂ ವಿಲನ್ ಪಾತ್ರ ಇರುವುದು ಸ್ಪಷ್ಟವಾಗಿದ್ದು, ಚಿತ್ರನಟಿ ಕೊನೆಗೂ ಜೈಲು ಪಾಲಾಗಿದ್ದಾಳೆ. ರಾಕೇಶ ಶೆಟ್ಟಿ ಎಂಬ ಸಹೋದರನನ್ನ ಮೂರು ಸೈಟ್ ವಿಚಾರಕ್ಕೆ ಕೊಲೆ ಮಾಡಿದ್ದು, ಈಗಾಗಲೇ ಸಿಕ್ಕಿರುವ ನಾಲ್ವರ ಜೊತೆ ರಾಕೇಶ ಶೆಟ್ಟಿಯ ಸಹೋದರಿ ಛೋಟಾ ಬಾಂಬೆ ಸಿನೇಮಾದ …
Read More »ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ
ಬೆಂಗಳೂರು: ಕಳೆದ ಒಂದು ವಾರದಲ್ಲಿ 15 ಪಟ್ಟು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಗಂಭೀರತೆ ಬಗ್ಗೆ ಇಷ್ಟು ದಿನ ನಾನೂ ಮಾಧ್ಯಮಗಳಲ್ಲಿ ನೋಡುತ್ತಿದ್ದೆ. ಇಂದು ಸ್ವತ: ಖುದ್ದಾಗಿ ಬಂದು ಪರಿಸ್ಥಿತಿ ಗಮನಿಸುತ್ತಿದ್ದೇನೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತು ಗಂಭೀರವಾಗಿ ಸಿದ್ಧತೆ ಮಾಡಿಕೊಳ್ಳಬೇಕು …
Read More »ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ವಿವಾಹ ,ವಧುವಿನ ಮನೆಗೇ ತಲುಪಲಿದೆ ವಿವಾಹ ಸಾಮಗ್ರಿ
ಧರ್ಮಸ್ಥಳ – ದಿನಾಂಕ ೨೯.೪.೨೦೨೧ ರಂದು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮಾಹಿಕ ವಿವಾಹ ಕಾರ್ಯಕ್ರಮವನ್ನು ವ್ಯವಸ್ಥೆಗೊಳಿಸಲಾಗಿದ್ದು, ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಸರಕಾರದ ಆದೇಶದಂತೆ ಈ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಇದರ ಬದಲಾಗಿ ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಮತ್ತಿತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಯ ಕಾರ್ಯಕರ್ತರ ಮುಖೇನ ವಧುವಿನ …
Read More »ಬೆಳಗಾವಿ, ಗೋಕಾಕ ಸೇರಿ ಜಿಲ್ಲೆಯಾದ್ಯಂತ ಏಕಾಏಕಿ ಅಂಗಡಿಗಳು ಬಂದ್
ಬೆಳಗಾವಿ : ಜಿಲ್ಲೆಯಲ್ಲಿ ಅಗತ್ಯ ಸೇವೆ ಹೊರತು ಪಡೆಸಿ ಉಳಿದೆಲ್ಲ ಅಂಗಡಿ, ಮಳಿಗೆಗಳನ್ನು ಏಕಾಏಕಿ ಪೊಲೀಸರು ಇಂದು ಮಧ್ಯಾಹ್ನ ಬಂದ್ ಮಾಡಿಸಿದ್ದು, ವ್ಯಾಪಾರಿಗಳು, ಜನರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಿತ್ತು. ಆದರೆ ಇಂದು ಮಧ್ಯಾಹ್ನ ಮತ್ತೊಂದು ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸರ್ಕಾರದ ಈ ನಿರ್ಧಾರದಿಂದ ಜನರು, ವ್ಯಾಪಾರಿಗಳು ಫುಲ್ ಶಾಕ್ ಆಗಿದ್ದಾರೆ. ಬೆಳಗಾವಿ ನಗರ, ಗೋಕಾಕ, ಘಟಪ್ರಬಾ ಸೇರಿದಂತೆ ಜಿಲ್ಲೆಯಾದ್ಯಂತ …
Read More »ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …
Read More »ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯದ ಆದೇಶ
ಬೆಳಗಾವಿ: ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಾಂಬ್ರಾ ವಿಮಾನ ನಿಲ್ದಾಣ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ಹತ್ತು ರೈತರು ಕೋರ್ಟ್ ಮೆಟ್ಟಿಲೇರಿದ್ದರು. ನಮಗೆ ನೀಡಬೇಕಿದ್ದ 5.5 ಕೋಟಿ ಪರಿಹಾರವನ್ನು ನೀಡದೇ ರೈತರಿಗೆ ವಂಚಿಸಲಾಗಿದೆ ಎಂದು ಆರೋಪಿಸಿದ್ದರು. ರೈತರ ಅರ್ಜಿ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ನ್ಯಾಯಾಲಯ …
Read More »ಲಾಕ್ ಡೌನ್ ಮಾದರಿಯಲ್ಲಿ ಬಿಗಿ ಕ್ರಮ ಕೈಗೊಳ್ಳಿ- ಬಸವರಾಜ ಬೊಮ್ಮಾಯಿ
ಬೆಂಗಳೂರು: ದಿನೇದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ …
Read More »