ನವದೆಹಲಿ: ದೇಶದಲ್ಲಿ ಕರೊನಾವೈರಸ್ನ ಎರಡನೇ ಅಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಇದಕ್ಕೆ ಪ್ರಮುಖ ಎರಡು ಕಾರಣಗಳನ್ನು ದೆಹಲಿಯ ಏಮ್ಸ್ ವೈದ್ಯರು ಕಂಡುಕೊಂಡಿದ್ದಾರೆ. ಏಮ್ಸ್ ನ ನಿರ್ದೇಶಕ ರಂದೀಪ್ ಗುಲೇರಿಯಾ ಅವರು ಹೇಳುವ ಪ್ರಕಾರ ಕಳೆದ ನಾಲ್ಕು ತಿಂಗಳಿನಿಂದ ಕೋವಿಡ್ ಕಡಿಮೆಯಾಗಿದೆಯಂದು ಜನ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದು ಹಾಗೂ ರೂಪಾಂತರಗೊಂಡಿರುವ ಕರೊನಾವೈರಸ್ನ ಆರ್ಭಟದಿಂದ ಇವತ್ತು ವ್ಯಾಪಕ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಡಿಸೆಂಬರ್ನಿಂದ ಏಪ್ರಿಲ್ವರೆಗೆ …
Read More »Yearly Archives: 2021
ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಕೋವಿಡ್ ಪರೀಕ್ಷೆ ವರದಿ ನೀಡುವುದರಲ್ಲಿ ವಿಳಂಬವಾಗುತ್ತಿದೆ. ಎಸ್ಎಂಎಸ್, ವಾಟ್ಸಾಪ್ ಮೂಲಕ ಶೀಘ್ರ ವರದಿಗೆ ಸೂಚನೆ ನೀಡಲಾಗಿದೆ. 24 ಗಂಟೆಯೊಳಗೆ ವರದಿ ನೀಡಲು ಹೈಕೋರ್ಟ್ ಸೂಚನೆ ನೀಡಿದ್ದು, ಟೆಸ್ಟ್ ಮಾಡಿಸಿದವರು ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ತಿಳಿಸಿದೆ. ಬೆಡ್ ನಿರ್ವಹಣೆಗೆ ವ್ಯವಸ್ಥೆ ಇರುವುದಾಗಿ ಸರ್ಕಾರದಿಂದ ಹೇಳಿಕೆ ನೀಡಲಾಗಿದೆ. ಬೆಡ್ ಒದಗಿಸುವುದು ಸರ್ಕಾರದ ಕರ್ತವ್ಯ. …
Read More »ಧಾರ್ಮಿಕ ಆಚರಣೆ-ಸಮಾರಂಭ ನಿಷೇಧ,ಮಾರ್ಗಸೂಚಿ ಪಾಲಿಸದಿದ್ದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ
ಬೆಳಗಾವಿ : ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಈ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಭಾರತ ಸರ್ಕಾರದ ಕೇಂದ್ರ ಗ್ರಹ ಮಂತ್ರಾಲಯದ ಆದೇಶದ ಪ್ರಕಾರ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕ ಸಮಾರಂಭ, ಆಚರಣೆ ಸೇರಿದಂತೆ ಮನರಂಜನೆ ಕಾರ್ಯಕ್ರಮ ಹಾಗೂ ಇತರೆ ಸಂದರ್ಭಗಳಲ್ಲಿ ಸೇರಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ಮಿತಿಗೊಳಿಸಲು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಒಟ್ಟಾರೆ ಶೇ.55.61 ರಷ್ಟು ಮತದಾನ..
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಒಟ್ಟಾರೆ ಶೇ.55.61 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ 02- ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಶನಿವಾರ (ಏ.17) ಮತದಾನ ನಡೆಯಿತು. ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಮತಕ್ಷೇತ್ರಗಳಲ್ಲಿ ಒಟ್ಟಾರೆ 2566 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನವು ಸಂಜೆ 7 …
Read More »ನಾಳೆ ಆರ್ ಅಶೋಕ್ ನೇತೃತ್ವದಲ್ಲಿ ಸಭೆ ಲಾಕ್ ಆಗತ್ತಾ ಬೆಂಗಳೂರು …?
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಕೂಡ ಸಿಗದ ದುಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಮಹಾನಗರದ ಎಲ್ಲಾ ಶಾಸಕರು, ಸಂಸದರು, ರಾಜ್ಯ ಸಭಾ ಸದಸ್ಯರು ಹಾಗೂ ಸಚಿವರುಗಳ …
Read More »ಸತೀಶ್ ಜಾರಕಿಹೊಳಿ ಒಂದು ಲಕ್ಷದಷ್ಟು ಗೆಲುವಿನ ಅಂತರ ಕಾಯ್ದುಕೊಳ್ಳಲಿದ್ದಾರೆ: ಹೆಬ್ಬಾಳಕರ್
ಬೆಳಗಾವಿ – ಶನಿವಾರ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕನಿಷ್ಠ 80 ಸಾವಿರದಿಂದ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ಭವಿಷ್ಯ ಹೆಳುವುದಿಲ್ಲ. ಆದರೆ ಕ್ಷೇತ್ರದ ಎಲ್ಲ ಕಡೆಯಿಂದ ಮಾಹಿತಿ ಪಡೆದು ಹೇಳುತ್ತಿದ್ದೇನೆ. ಸತೀಶ್ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೆ ಸಂಶಯವಿಲ್ಲ. ಒಂದು ಲಕ್ಷದಷ್ಟು ಗೆಲುವಿನ ಅಂತರ ಕಾಯ್ದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮತದಾನ …
Read More »ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟಾಗಿ ಪ್ರಚಾರ ಕಾರ್ಯ ನಡೆಸಿದ್ದೇವೆ. ಮತದಾರರು ಸಹ ಬಿಜೆಪಿ ಜನೋಪಯೋಗಿ …
Read More »ಎರಡು ಸಲ ವ್ಯಾಕ್ಸಿನ್ ಪಡೆದರೂ ಬಂತು ಕೊರೋನಾ
ಬೆಂಗಳೂರು, ಏಪ್ರಿಲ್ 17: ಕೋವಿಡ್19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮೊದಲ ಸಾಲಿನಲ್ಲಿ ನಿಂತು ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರು ಸಾಮಾಜಿಕ ಅಂತರ ಕಾಪಾಡುವ ಜತೆಗೆ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಕಾನೂನು ಕ್ರಮ ಜರುಗಿಸುವ ಮೂಲಕ ಕೊರೋನಾ ತಡೆಗಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಆದರೆ, ಪೊಲೀಸರೇ ಕೊರೋನಾ ಸೋಂಕಿನಿಂದ ಬಳಲುವಂತಾಗಿದೆ. ಬೆಂಗಳೂರು ನಗರದ ಎಂಟು ಪೊಲೀಸ್ ವಲಯಗಳಲ್ಲಿ 90 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ …
Read More »ಯಾರು ಕೊರೊನಾ ಇಲ್ಲ ಅಂತ ಬೇಜಬ್ದಾರಿತನ ತೋರಿಸುತ್ತಾರೋ ಅವರ ಕಪಾಳಕ್ಕೆ ಹೊಡೆಯಿರಿ: ಸುನೇತ್ರಾ ಪಂಡಿತ್
ಬೆಂಗಳೂರು: ಯಾರು ಕೊರೊನಾ ಇಲ್ಲ ಅಂತ ಬೇಜಬ್ದಾರಿತನ ತೋರಿಸುತ್ತಾರೋ ಅವರ ಕಪಾಳಕ್ಕೆ ಹೊಡೆಯಿರಿ ಅಂತ ನಟಿ ಸುನೇತ್ರಾ ಪಂಡಿತ್ ಹೇಳಿದ್ದಾರೆ. ಸುಮ್ಮನಳ್ಳಿ ಚಿತಾಗಾರ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಕ್ಕ ಕೋವಿಡ್ ನಿಂದ ಸತ್ತೋದ್ಳು. ಒಂದು ದಿನ ಕೇರ್ಲೆಸ್ ಹಾಗೂ ಮಿಸ್ ಗೈಡ್ ಆಗಿದ್ದಕ್ಕೆ ಅಂತ ಹೇಳೋಕೆ ನಾನು ಬಯಸಲ್ಲ. ಆದರೆ ಅದೂ ಒಂದು ಕಾರಣ ಎಂದು ಹೇಳಿದರು. ನಮ್ಮ ಅಕ್ಕ ಹೊರಟೋದ್ಳು. ಅವಳಿಗೆ ಮಕ್ಕಳಿದ್ದಾರೆ, ಆ ಮಕ್ಕಳು ಏನ್ …
Read More »ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖೂಬಾ ಪಕ್ಷದಿಂದ ಉಚ್ಛಾಟನೆ
ಬೆಂಗಳೂರು: ಬಸವಕಲ್ಯಾಣ ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಪಕ್ಷದಿಂದ ಉಚ್ಛಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಮಲ್ಲಿಕಾರ್ಜುನ್ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇಂದು ಮತದಾನ ಅರ್ಧ ಮುಗಿದ ನಂತರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ …
Read More »