Breaking News

Yearly Archives: 2021

ಬೆಡ್ ಕೊಡಿ ಇಲ್ಲವೇ ಕೊಂದು ಬಿಡಿ; ಸೋಂಕಿತ ತಂದೆಯ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್​ನಲ್ಲಿ 2 ರಾಜ್ಯಗಳನ್ನು ಸುತ್ತಿದ ಮಗ..!

ಮುಂಬೈ (ಏ. 15): ಆಸ್ಪತ್ರೆಯಲ್ಲಿ ಬೆಡ್ ಕೊಡಿ, ಇಲ್ಲವೇ ನನ್ನ ತಂದೆಗೆ ಇಂಜೆಕ್ಷನ್ ಕೊಟ್ಟು ಕೊಂಡು ಬಿಡಿ.. ಬೆಡ್​ಗಾಗಿ ಅಲೆದಾಡಿದ ನೊಂದ ಪುತ್ರನೊಬ್ಬನ ಆಕ್ರೋಶದ ನುಡಿಗಳಿವು. ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಇಂಥದೊಂದು ಕರುಣಾಜನಕ ಘಟನೆ ನಡೆದಿದೆ. ಚಂದ್ರಾಪುರದ ನಿವಾಸಿಯಾದ ಸಾಗರ್ ಕಿಶೋರ್ ಎಂಬುವರು ತಮ್ಮ ಸೋಂಕಿತ ತಂದೆಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಆಂಬ್ಯುಲೆನ್ಸ್​​ನಲ್ಲಿ ಅಲೆದಾಡಿದ್ದಾರೆ. ಮಹಾರಾಷ್ಟ್ರ ಮಾತ್ರವಲ್ಲದೇ ಆಂಧ್ರಪ್ರದೇಶಕ್ಕೂ ಕರೆದೊಯ್ದು ಆಸ್ಪತ್ರೆಗಳಲ್ಲಿ ಬೆಡ್​ಗಾಗಿ ಹುಡುಕಾಡಿದ್ದಾರೆ. ಅಲ್ಲಿಯೂ ಬೆಡ್ ಸಿಗದೆ …

Read More »

ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳು

ಮುಂಬೈ, ಏಪ್ರಿಲ್ 15: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಜನರಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಮಧ್ಯೆ ಮುಂಬೈ ಡಬ್ಬಾವಾಲಾಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನಲ್ಲಿ ಒಟ್ಟು 5 ಸಾವಿರ ಡಬ್ಬಾವಾಲಾಗಳಿದ್ದರು, ಆದರೆ ಕೊರೊನಾ ಬಳಿಕ ಅವರಲ್ಲಿ ಕೇವಲ 400,500ರಷ್ಟು ಡಬ್ಬಾವಾಲಾಗಳು ಮಾತ್ರ ಕೆಲಸ ಮಾಡುತ್ತಿದ್ದರು. ಇದೀಗ ಮತ್ತೆ ಹೊಸ ನಿಯಮಗಳು ಜಾರಿಗೊಂಡಬಳಿಕ 200-250 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಇದೀಗ ಡಬ್ಬಾವಾಲಾಗಳ ಪರಿಸ್ಥಿತಿ ತೀವ್ರ ಸಂಕಷ್ಟಕ್ಕೆ …

Read More »

ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!?’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಬಿಜೆಪಿ ಪ್ರಶ್ನಿಸಿದೆ. ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೋಟ್ಯಂತರ ಬೆಲೆಯ ಆಸ್ತಿ ಸಂಗ್ರಹಿಸಿದ್ದು ಹೇಗೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಶ್ನಿಸಿದ ಬೆನ್ನಲ್ಲೇ ಬಿಜೆಪಿ ಸರಣಿ ಟ್ವಿಟ್ ಮೂಲಕ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾಮಾಲೆ ರೋಗ ಬಾಧಿಸುತ್ತಿದೆ. ರಾಬರ್ಟ್ ವಾದ್ರಾ, …

Read More »

ಚುನಾವಣಾ ಪ್ರಚಾರದಲ್ಲಿದ್ದ ಸಿಎಂ ಬಿಎಸ್ ವೈಗೆ ಮತ್ತೆ ಜ್ವರ : ಅರ್ಧಕ್ಕೆ ಮೊಟಕುಗೊಂಡ ರೋಡ್ ಶೋ

ಬೆಳಗಾವಿ: ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರದ ಮತ್ತೆ ಜ್ವರ ಕಾಣಿಸಿಕೊಂಡಿದೆ. ಬುಧವಾರ ಅಷ್ಟೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಸಿಎಂ ಬಿಎಸ್ ವೈಗೆ ಜ್ವರ ಕಾಣಿಸಿಕೊಂಡಿತ್ತು. ಇಂದು ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ನಡೆಯುದಿದ್ದ ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ ಸಿಎಂ ವಿಶ್ರಾಂತಿ ಪಡೆಯಲು ಹೋಟೆಲ್ ಗೆ ತೆರಳಿದ ಪ್ರಸಂಗ ನಡೆಯಿತು.   ಗುರುವಾರ ಬೆಳಿಗ್ಗೆ ವಿವಿದ ಮಠಾಧೀಶರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಗಳು …

Read More »

ನಮ್ಮಪ್ಪ ಗಡಿಬಿಡಿಯಲ್ಲಿ ತಿಂಡಿ ತಿನ್ನದೆ ಕೆಲ್ಸಕ್ಕೆ ಹೋಗ್ತಿದ್ರು: ಸಾರಿಗೆ ನೌಕರರಿಗೆ ಧೈರ್ಯ ತುಂಬಿದ ಯಶ್‌

ಬೆಂಗಳೂರು: ಸಾರಿಗೆ ನೌಕರರು ತಮಗೆ ಬರೆದಿದ್ದ ಪತ್ರಕ್ಕೆ ನಟ ಯಶ್‌ ಪತ್ರದ ಮೂಲಕವೇ ಪ್ರತಿಕ್ರಿಯಿಸಿ ತಾವು ಸಾರಿಗೆ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ನೌಕರರ ಸಮಸ್ಯೆಗಳ ಬಗ್ಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ನೌಕರನ ಮಗ. ನಮ್ಮಪ್ಪ ಎಷ್ಟೋ ದಿನ ತಿಂಡಿ ತಿನ್ನದೆ ಗಡಿಬಿಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ದಿನಗಳು ಈಗಲೂ ನೆನಪಿವೆ. ನಿಮ್ಮ ಹೋರಾಟ, ಅಳಲು ನನ್ನನ್ನು ಬಹುವಾಗಿ ಕಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ …

Read More »

ಸಾರಿಗೆ ನೌಕರರ ಮುಷ್ಕರದಿಂದ 170 ಕೋಟಿ ಲಾಸ್, ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ : ಡಿಸಿಎಂ ಲಕ್ಷ್ಮಣ ಸವದಿ ಮನವಿ

ಬೀದರ್ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಇಂದು 9 ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ನೌಕರರ ಮುಷ್ಕರದಿಂದ 170 ಕೋಟಿ ರೂ. ನಷ್ಟವಾಗಿದೆ ಹೀಗಾಗಿ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇಂದು 4,500 ಸಾರಿಗೆ ಬಸ್ ಸಂಚರಿಸಲಿವೆ. ನಾಳೆ 5 ಸಾವಿರ ಬಸ್ ಗಳು ಓಡಾಡುವ ವಿಶ್ವಾಸವಿದೆ. …

Read More »

ಡಿ ಮಾರ್ಟ್‌ ಮಳಿಗೆಗೆ 5 ಸಾವಿರ ರೂ. ದಂಡ

ನೆಲಮಂಗಲ: ಪಟ್ಟಣದ ಹೊರವಲಯದ ಪ್ರತಿಷ್ಠಿತ ಡಿ.ಮಾರ್ಟ್‌ ಮಾರಾಟ ಮಳಿಗೆಯಲ್ಲಿ ಕೋವಿಡ್‌ ನಿಯಮಾವಳಿ ಉಲ್ಲಂ ಸಲಾಗುತ್ತದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಕೆ.ಮಂಜುನಾಥ್‌,ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿಡಿ.ಮಾರ್ಟ್‌ನ ಅಧಿಕಾರಿ, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಯುಗಾದಿ ಸಡಗರದಲ್ಲಿ ಡಿ.ಮಾರ್ಟ್‌ಗೆ ಲಗ್ಗೆ ಇಟ್ಟಿದ್ದಗ್ರಾಹಕರಿಗೆ ಕೊರೊನಾ ಕುರಿತಾಗಿ ಜಾಗೃತಿ ಸೇರಿದಂತೆನಿಯಮಗಳ ಪಾಲನೆ ಮಾಡದೆ ಕೋವಿಡ್‌ ನಿಯಮಗಾಳಿಗೆ ತೂರಿದರೆ ಸೂಕ್ತ ರೀತಿಯ ಕಟ್ಟುನಿಟ್ಟಿನಕ್ರಮಜರುಗಿಸಲಾಗುತ್ತದೆ. ನಿಯಮ ಪಾಲನೆ ಕಡ್ಡಾಯಕೋವಿಡ್‌ 2ನೇ ಅಲೆಯಿಂದಾಗಿ ನಾಗರಿಕ ಸಮಾಜ …

Read More »

ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಹುಮ್ನಾಬಾದ್ : ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ( Remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಮಿಡೆಸಿವಿರ್ ಔಷಧ ಕೊರತೆ ಇಲ್ಲ …

Read More »

ಸರಕಾರಿ ಶಾಲೆಗಳಿಗೆ ಬಣ್ಣ , ಚಿತ್ತಾರ : ಕ್ಯಾಂಪಸ್‌ ಟು ಕಮ್ಯೂನಿಟಿ ಬಳಗದ ಯುವಕರ ಸಾಧನೆ

ಬೆಂಗಳೂರು: ಸರಕಾರಿ ಶಾಲೆಯ ಸೌಂದರ್ಯ ಹೆಚ್ಚಿಸುವ ಜತೆಗೆ ಗುಣಾತ್ಮಕ ಕಲಿಕೆಗೂ ಯೋಗದಾನ ನೀಡುತ್ತಿರುವ ಯುವಕರ ದಂಡು. “ಕ್ಯಾಂಪಸ್‌ ಟು ಕಮ್ಯೂನಿಟಿ’ ಬಳಗದ ಸದಸ್ಯರು “ಸ್ಕೂಲ್‌ ಬೆಲ್‌’ ಹೆಸರಿನಲ್ಲಿ ಈ ಕಾರ್ಯ ನಡೆಸುತ್ತಿದ್ದಾರೆ. ಈ ಬಳಗದಲ್ಲಿ ಬಹುತೇಕ ಮಂದಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಉದ್ಯೋಗಿಗಳು. ಇವರು ವಾರಾಂತ್ಯದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಸ್ಥಳೀಯರು, ಎಸ್‌ಡಿಎಂಸಿಗಳ ಸಹಕಾರ ಪಡೆದು ಬಣ್ಣ ಬಳಿದು, ಧನಾತ್ಮಕ ಚಿಂತನೆಯ ಕಲಾಕೃತಿಗಳನ್ನು ಚಿತ್ರಿಸುತ್ತಾರೆ. ಗ್ರಾಮೀಣ ಶಾಲೆಗಳನ್ನು ಆಯ್ದುಕೊಂಡು …

Read More »

ಕರೋನಾ ಮಾರ್ಗಸೂಚಿ ಪಾಲಿಸಲು ವಿಫಲ: ಕುಂಭಮೇಳ ಇಂದೇ ಅಂತ್ಯಗೊಳ್ಳುವ ಸಾಧ್ಯತೆ!

ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕುರಿತಂತೆ ಉತ್ತರಾಖಂಡ್‌ ಸರ್ಕಾರ ಮತ್ತು ಧಾರ್ಮಿಕ ನೇತಾರರ ನಡುವೆ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ, ಇದೀಗ ಕುಂಭಮೇಳವನ್ನು ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಕೋವಿಡ್‌ ಎರಡನೇ ಅಲೆ ವಿಪರೀತವಾಗುತ್ತಿದ್ದರೂ ಕುಂಭಮೇಳದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ, ಯಾವುದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿಕೊಳ್ಳುತ್ತಿದ್ದಾರೆ. ಗಂಗಾನದಿಯ ತೀರದಲ್ಲಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೋವಿಡ್ …

Read More »