Breaking News

Yearly Archives: 2021

ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಕಿಶೋರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿ ಮಂಜುನಾಥ್ ನನ್ನು ಬಂಧಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಬಲ್ ಮರ್ಡರ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. …

Read More »

ಯುಗಾದಿ ‘ಹೊಸತೊಡಕು’ ಆಚರಣೆಗೆ ಭರ್ಜರಿ ಸಿದ್ದತೆ:‌ ಮಾಂಸದಂಗಡಿಗಳ ಮುಂದೆ ಕ್ಯೂ ನಿಂತ ಜನ

ರಾಜ್ಯದ ಜನತೆ ನಿನ್ನೆ ಭರ್ಜರಿಯಾಗಿ ಯುಗಾದಿ ಹಬ್ಬ ಆಚರಿಸಿ, ಬೇವು ಬೆಲ್ಲ, ಒಬ್ಬಟ್ಟು ತಿಂದು ಖುಷಿಪಟ್ಟಿದ್ರು. ಅಂತೆಯೇ ಇವತ್ತೂ ಕೂಡ ಹೊಸತೊಡಕು ಆಚರಿಸೋಕೆ ರೆಡಿಯಾಗಿದ್ದಾರೆ. ಕಳೆದ ವರ್ಷ ಕೊರೊನಾ ಲಾಕ್‌ ಡೌನ್‌ ನಡುವೆಯೂ ತಮ್ಮ ಎಂದಿನ ಆಚರಣೆಯನ್ನು ಬಿಡದ ಜನ ಹಲವು ನಿರ್ಬಂಧಗಳ ನಡುವೆಯೂ ಮಾರುದ್ದದ ಕ್ಯೂನಲ್ಲಿ ಕಾದು ನಿಂತು ಮಟನ್‌ – ಚಿಕನ್‌ ಖರೀದಿಸಿದ್ದರು. ಮಟನ್‌ – ಚಿಕನ್‌ ಬೆಲೆ ಗಗನಕ್ಕೇರಿದ್ದರೂ ಹೊಸ ತೊಡಕು ಆಚರಣೆ ಸಂಭ್ರಮವೇನು ಕಡಿಮೆಯಾಗಿಲ್ಲ. …

Read More »

8,778 ಹೊಸ ಪ್ರಕರಣ, 67 ಸಾವು, ಬೆಂಗ್ಳೂರಲ್ಲಿ 5,500 ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 8,778 ಜನರಿಗೆ ಕೊರೊನಾ ಸೋಂಕು ತಗುಲಿದೆ. 67 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 5,500 ಜನರಿಗೆ ಸೋಂಕು ತಗುಲಿದ್ದು, ಸಿಲಿಕಾನ್ ಸಿಟಿಯಲ್ಲಿ 55 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,617ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 6,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು …

Read More »

ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಅಗತ್ಯ ಸೇವೆಗಳು ಲಭ್ಯವಿರುತ್ತದೆ. ರಾತ್ರಿ 8ರ ಬಳಿಕ ಅಂಗಡಿಗಳನ್ನು ಮುಚ್ಚಬೇಕು:

ಮುಂಬೈ: ಕೊರೊನಾ ಹರಡುವಿಕೆ ನಿಯಂತ್ರಣಕ್ಕಾಗಿ ಮಹಾರಾಷ್ಟ್ರ ಸರ್ಕಾರ 15 ದಿನ ಜನತಾ ಕರ್ಫ್ಯೂ ವಿಧಿಸಿದೆ. ಈ ಕಠಿಣ ನಿಯಮಗಳಿಂದ ಶ್ರೀಸಾಮಾನ್ಯರು, ಬಡವರಿಗೆ ತೊಂದರೆ ಆಗದಿರುಲು ಮಹಾ ನೆರವು ಸಹ ಘೋಷಿಸಿದೆ. ಜೀವ ಮತ್ತು ಜೀವನ.. ಮಂತ್ರ ಪಠಿಸಿದ ‘ಮಹಾ’ ಅಘಾಡಿ ಸರ್ಕಾರ ಬೀದಿ ಬದಿ ವ್ಯಾಪಾರಿಗಳು, ಮನೆ ಕೆಲಸದವರ ಖಾತೆಗೆ ನಗದು ಪರಿಹಾರ ನೀಡಲು ಮುಂದಾಗಿದೆ. ಬಡ ಕುಟುಂಬಗಳಿಗೆ ಹೆಚ್ಚುವರಿ ಪಡಿತರದ ಜೊತೆ ‘ಶಿವ’ ಭೋಜನ್ ಆರಂಭಿಸಲು ಮುಂದಾಗಿದೆ. ಇದರ …

Read More »

ಹೊಂಬಾಳೆ ಫಿಲಂಸ್ ಬ್ಯಾನರಿ ಅಡಿ ಮತ್ತೊಂದು ಸಿನಿಮಾ

ಬೆಂಗಳೂರು: ಯುಗಾದಿ ಹಬ್ಬದಂದು ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಯುವರತ್ನ ಸಿನಿಮಾ ಬಳಿಕ ಮತ್ತೆ ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಕುರಿತು ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅವರಿಗೆ ಮತ್ತೊಂದು ಸಿನಿಮಾ ನಿರ್ಮಿಸುತ್ತಿರುವುದಾಗಿ ಘೋಷಿಸಿದ್ದಾರೆ. ಅಪ್ಪು ಸಹ ಇದನ್ನು ರೀ ಟ್ವೀಟ್ ಮಾಡಿದ್ದಾರೆ. ಇನ್ನೂ ವಿಶೇಷ ಎಂಬಂತೆ …

Read More »

ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು

ಬೆಂಗಳೂರು: ಅಕಾಲಿಕ ಮಳೆಯಿಂದ ಜನ ಕಂಗಾಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಟಿಎಪಿಸಿಎಂಎಸ್ ಅಧ್ಯಕ್ಷ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಬಳಿ ನಡೆದಿದೆ. ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿದು ಸಾವಿಗೀಡಾದ ದುರ್ದೈವಿ. 100 ಕುರಿ ಸಾಕಿದ್ದ ಸೋಮಣ್ಣ ಬೀರಪ್ಪ ತೇರದಾಳ, ಮಧ್ಯಾಹ್ನ ಕುರಿ ಕಾಯುವ ಆಳಿನ ಜೊತೆ ನೋಡಲು ಹೋಗಿದ್ದ. ಈ ವೇಳೆ ಮೊಬೈಲ್‍ನಲ್ಲಿ …

Read More »

10 ನಗರಗಳಲ್ಲಿ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಿ; ಅಧಿಕಾರಿಗಳಿಗೆ ಸಿಎಂ ಬಿಎಸ್​ವೈ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಪ್ರಾಯೋಗಿಕವಾಗಿ ಹತ್ತು ನಗರಗಳಲ್ಲಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಬೇಕೆಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಯುಗಾದಿ ದಿನವೂ ಹಿರಿಯ ಅಧಿಕಾರಿಗಳ ಜೊತೆ ತಮ್ಮ‌ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,  ಪೊಲೀಸ್ ಕಮಿಷನರ್ ಕಮಲ್ ಪಂಥ್, ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.  ಮೊದಲು ಸಾರಿಗೆ ನೌಕರರ ಮುಷ್ಕರದ ಬಗ್ಗೆ …

Read More »

ಅಪಘಾತದ ಸಮಯದಲ್ಲಿ ನಾನೇ ಕಾರನ್ನು ಓಡಿಸುತ್ತಿದ್ದೆ: ವಿಜಯ್ ಕುಲಕರ್ಣಿ

ಹುಬ್ಬಳ್ಳಿ:ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಸೋಮವಾರದ ಅಪಘಾತದ‌ ಘಟನೆಯಲ್ಲಿ ತಾನೇ ಕಾರನ್ನು ಓಡಿಸುತ್ತಿದ್ದೆ ಎಂದು ಹೇಳಿದ್ದಾರೆ. ಎದುರಿನಲ್ಲಿ ಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಪಕ್ಕದಲ್ಲಿನ ಗಾಡಿಗಳಿಗೆ ಡಿಕ್ಕಿ ಹೊಡೆಯಿತು. ಇದು ಆಕಸ್ಮಿಕ ಘಟನೆಯಷ್ಟೆ.ನಾನು ಕುಡಿದಿರಲಿಲ್ಲ.ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ.ನಾನೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದ್ದೇ‌ನೆ.ಆನಂತರವೇ ನಾನು ಹೋಗಿದ್ದೆ ಎಂದಿದ್ದಾರೆ. ಅಪಘಾತದಲ್ಲಿ ಮೃತರಾದವರು ಧಾರವಾಡದ ಶೇಖರ್ ಹುಡ್ಡರ್ (37) ಮತ್ತು ಚರಣ್ …

Read More »

ಕಂಟೇನ್ಮೆಂಟ್​ ಝೋನ್​ಗಳಲ್ಲಿರುವ ಮಸೀದಿಗಳು ಬಂದ್; ರಂಜಾನ್ ಹಬ್ಬಕ್ಕೆ ಗೈಡ್​ಲೈನ್ಸ್​

ಬೆಂಗಳೂರು: ನಾಳೆಯಿಂದ ರಂಜಾನ್ ಹಬ್ಬ ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಮಾರ್ಗಸೂಚಿಯನ್ನ ಪ್ರಕಟಿಸಿದೆ. ಕಂಟೇನ್ಮೆಂಟ್ ಝೋನ್‌ಗಳಲ್ಲಿರುವ ಮಸೀದಿಗಳು ಬಂದ್ ಮುಂದಿನ ಆದೇಶದವರೆಗೆ ಕಂಟೇನ್ಮೆಂಟ್ ಝೋನ್​ಗಳ ಮಸೀದಿ ಬಂದ್ ಕಂಟೇನ್ಮೆಂಟ್ ಝೋನ್ ಹೊರಗಿನ ಮಸೀದಿಗಳಲ್ಲಿ ಮಾತ್ರ ಅವಕಾಶ ಉಪವಾಸ ಬಿಡುವಾಗ ಮಸೀದಿಗೆ ಆಹಾರ ವಸ್ತು ತರಬಾರದು ಉಪವಾಸವನ್ನು ಮನೆಯಲ್ಲಿಯೇ ಬಿಟ್ಟು ಬರಬೇಕು ‌ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ಸಾಮಾಜಿಕ ಅಂತರ ಕಡ್ಡಾಯ ಪ್ರಾರ್ಥನೆಗೂ ಮೊದಲು ಮಾಡುವ ವಝು ಸ್ವಚ್ಛತೆಗೆ ಪ್ರತ್ಯೇಕ …

Read More »

ಹಬ್ಬದ ಶಾಪಿಂಗ್‌ನಲ್ಲಿ ದಂಪತಿ ಬಿಜಿ: ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಮಗುವಿನ ಹೋರಾಟ

ಬೆಂಗಳೂರು: ಕಾರಿನಲ್ಲಿ ಮಗುವನ್ನು ಬಿಟ್ಟು ಯುಗಾದಿ ಹಬ್ಬದ ಶಾಪಿಂಗ್‌ಗೆ ತೆರಳಿದ ಪರಿಣಾಮ ಮಗು ಉಸಿರುಗಟ್ಟಿ ನರಳಾಡಿದ ಘಟನೆ ನಗರದ ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ನಡೆದಿದೆ. ದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವಿನ ಪ್ರಾಣ ಉಳಿದೆ. ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ಸೋಮವಾರ ರಾತ್ರಿ ನಾಲ್ಕು ವರ್ಷದ ಮಗುವನ್ನು ಕಾರಿನಲ್ಲೇ ಬಿಟ್ಟು ದಂಪತಿ ಶಾಪಿಂಗ್​ಗೆ ತೆರಳಿದ್ದರು. ಕೀ ಕಾರಿನಲ್ಲೇ ಇದ್ದಿದ್ರಿಂದ ಆಟೋಮೆಟಿಕ್ ಲಾಕ್ ಆಗಿತ್ತು. ಇದಾದ ಕೆಲವೊತ್ತಿನಲ್ಲೇ ಉಸಿರುಗಟ್ಟಲು ಆರಂಭಿಸಿ ಮಗು ಚೀರಾಡಲು ಶುರು …

Read More »