Breaking News

Yearly Archives: 2021

ಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪ

ಬೆಂಗಳೂರು, ಏಪ್ರಿಲ್ 13; “ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ” ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಬಸವಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, “ಮೇ 2ರ ತನಕ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ” ಎಂದರು. ತಾಂತ್ರಿಕ ಸಹಲಾ ಸಮಿತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ …

Read More »

ಮೋದಿ ಅಂಗಡಿಯಲ್ಲಿ ಗ್ಯಾಸ್, ಗೊಬ್ಬರ ಸೇರಿ ಎಲ್ಲವೂ ಕಡಿಮೆ ದರದಲ್ಲಿ ಸಿಗುತ್ತಿದೆ. ಆ ಅಂಗಡಿ ಎಲ್ಲಿದೆ ಎಂಬುದನ್ನು ಜನರು ಹುಡುಕಬೇಕಿದೆ’: ಸತೀಶ್ ಜಾರಕಿಹೊಳಿ

ಸವದತ್ತಿ, ಏಪ್ರಿಲ್ 12: “ಪ್ರಧಾನಿ ನರೇಂದ್ರ ಮೋದಿ ಅಂಗಡಿಯಲ್ಲಿ ಗ್ಯಾಸ್, ಗೊಬ್ಬರ ಸೇರಿ ಎಲ್ಲವೂ ಕಡಿಮೆ ದರದಲ್ಲಿ ಸಿಗುತ್ತಿದೆ. ಆ ಅಂಗಡಿ ಎಲ್ಲಿದೆ ಎಂಬುದನ್ನು ಜನರು ಹುಡುಕಬೇಕಿದೆ’ ಎಂದು ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ಮತ ಕ್ಷೇತ್ರದ ಕಡಬಿ, ಶಿವಾಪುರ, ಯರಝರ್ವಿ ಗ್ರಾಮಗಳಲ್ಲಿ ಸೋಮವಾರ ಬೆಳಗಾವಿ ಲೋಕಸಭಾ ಉಪ ಚುನಾವಣಾ ಪ್ರಚಾರ ನಡೆಸಿ, ಅವರು ಮಾತನಾಡಿದರು. “ಚುನಾವಣೆಗೂ ಮೊದಲು ಬಿಜೆಪಿಯವರು, ಪೆಟ್ರೋಲ್, …

Read More »

ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಭೀತಿಗೆ ಗುಳೆ ಹೋಗುತ್ತಿರುವ ಕಾರ್ಮಿಕರು!

ಲಕ್ನೋ : ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅಲ್ಲದೇ, ಪ್ರತಿ ದಿನ 50 ಸಾವಿರದ ಗಡಿಯ ಆಸುಪಾಸಿನಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಅಲ್ಲಿ ಲಾಕ್ ಡೌನ್ ಘೋಷಣೆಯಾಗಬಹುದು ಎಂಬ ಭಯ ಜನರನ್ನು ಕಾಡುತ್ತಿದೆ. ಮುಂಬಯಿ ನಗರ ಸೇರಿದಂತೆ ವಿವಿಧ ನಗರದಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರು ಲಾಕ್ ಡೌನ್ ಘೋಷಣೆಯಾಗಬಹುದೆಂಬ ಆತಂಕದಿಂದ ಉತ್ತರ ಪ್ರದೇಶದ ರೈಲುಗಳನ್ನು ಹಿಡಿದು ಮರಳಿ ಹೋಗುತ್ತಿದ್ದಾರೆ. ಗೋರಖ್‌ ಪುರ, ವಾರಣಾಸಿ, ಪ್ರಯಾಗ್‌ …

Read More »

ಫ್ಲಿಪ್‌ ಕಾರ್ಟ್‌ ಹಾಗೂ ಅದಾನಿ ಗ್ರೂಪ್ ಒಪ್ಪಂದ : ಉಭಯ ಸಂಸ್ಥೆಗಳ ಮುಂದಿನ ಯೋಜನೆ ಏನು..?

ನವ ದೆಹಲಿ : ವಾಲ್‌ ಮಾರ್ಟ್‌ ಒಡೆತನದ ಫ್ಲಿಪ್‌ ಕಾರ್ಟ್‌ ಸಂಸ್ಥೆ ಅದಾನಿ ಗ್ರೂಪ್‌ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಲಾಜಿಸ್ಟಿಕ್ ಮತ್ತು ಡಾಟಾ ಸೆಂಟರ್‌ ಗಳ ಸಾಮರ್ಥ್ಯಗಳನ್ನು ಹೆಚ್ಚಿಸಲು ಹಾಗೂ 2,500ಕ್ಕೂ ಹೆಚ್ಚು ಹೊಸ ಉದ್ಯೋಗಗಳನ್ನು ಸೃಷ್ಟಿಸುವ ದೃಷ್ಟಿಯಲ್ಲಿ ಉಭಯ ಸಂಸ್ಥೆಗಳು ಒಪ್ಪಂದಕ್ಕೆ ಮುಂದಾಗಿವೆ ಎಂದು ವರದಿಯಾಗಿದೆ. ಈ ಪಾಲುದಾರಿಕೆಯ ಭಾಗವಾಗಿ, ಅದಾನಿ ಲಾಜಿಸ್ಟಿಕ್ಸ್ ಮುಂಬಯಿಯಲ್ಲಿರುವ ತನ್ನ ಮುಂಬರುವ ಲಾಜಿಸ್ಟಿಕ್ಸ್ 5,34,000 ಚದರ ಅಡಿ ಪೂರೈಸುವ ಕೇಂದ್ರವನ್ನು ನಿರ್ಮಿಸಲಿದ್ದು, ಪಶ್ಚಿಮ …

Read More »

ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ- ಸಿಎಂ ಬಿಎಸ್ ವೈ

ಬೆಂಗಳೂರು : ಇಂದು ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನರಿಗೆ ಸಿಎಂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಬಳಿಕ ನೌಕರರ ಮುಷ್ಕರದ ಬಗ್ಗೆ ಬಸವ ಕಲ್ಯಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಬ್ಬಹರಿದಿನಗಳಲ್ಲಿ ಈ ರೀತಿ ಮಾಡೋದು ಸರಿಯಿಲ್ಲ. ಹಠವನ್ನು ಬಿಟ್ಟು ಕೆಲಸಕ್ಕೆ ಹಾಜರಾಗಬೇಕು. ಕೆಲಸಕ್ಕೆ ಹಾಜರಾಗದವರಿಗೆ ಸಂಬಳ ಕೊಡಲ್ಲ ಎಂದು ಹೇಳಿದ್ದಾರೆ. ಸದ್ಯಕ್ಕೆ ಲಾಕ್ ಡೌನ್ ಇಲ್ಲ. ಏ.18, 19ಕ್ಕೆ ಸರ್ವಪಕ್ಷದ ಸಭೆ …

Read More »

ಅಂಬೇಡ್ಕರ್ ಪ್ರತಿಮೆ ಅನಾವರಣ ನಾಳೆ

ಶಿರಾ: ನಗರದ ಪ್ರವಾಸಿ ಮಂದಿರದ ಬಳಿ ಇರುವ ಉದ್ಯಾನದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯ ಅನಾವರಣವನ್ನು ಏ. 14ರಂದು ಹಮ್ಮಿಕೊಂಡಿದ್ದು ಸಾರ್ವಜನಿಕರಲ್ಲಿ‌ ಸಂತಸ ಮೂಡಿಸಿದೆ. ಕಳೆದ ಎರಡು ವರ್ಷದಿಂದ ಪ್ರತಿಮೆ ಅನಾವರಣ ಯಾವಾಗ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ‌ ಮೂಡಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಮಾ‌ರ್ಚ್‌ 26ರಂದು ‘ಅಂಬೇಡ್ಕರ್ ಪ್ರತಿಮೆ ಅನಾವರಣ ಯಾವಾಗ?’ ಎನ್ನುವ ಲೇಖನ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಅಂಬೇಡ್ಕರ್ ಜಯಂತಿಗೆ ಪ್ರತಿಮೆ ಅನಾವರಣಗೊಳಿಸಲು …

Read More »

ಸೌಲಭ್ಯ ಪಾವತಿ ಬಾಕಿ; ಮತ್ತೆ ಬಸ್‌ ಏರಲು ನಿವೃತ್ತರ ಹಿಂದೇಟು

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಮೊರೆಹೋಗಿದ್ದು, ಓರ್ವ ನಿವೃತ್ತನೌಕರ ಕೂಡ ಕರ್ತವ್ಯಕ್ಕೆ ಬರಲುಮುಂದೆ ಬಂದಿಲ್ಲ. ನಿವೃತ್ತಿನಂತರದ ಆರೋಗ್ಯ ಸಮಸ್ಯೆಒಂದೆಡೆಯಾದರೆ, ನಿವೃತ್ತರಿಗೆ ಆರ್ಥಿಕ ಸೌಲಭ್ಯ ಪಾವತಿ ಮಾಡದಿರುವುದು ಹಿಂದೇಟಿಗೆ ಕಾರಣವಾಗಿದೆ. 62 ವರ್ಷ ಮೀರದ ನಿವೃತ್ತ ಚಾಲಕ,ನಿರ್ವಾಹಕರು ಕರ್ತವ್ಯಕ್ಕೆ ಆಹ್ವಾನ ನೀಡಲಾಗಿತ್ತು.ದಿನಕ್ಕೆ ಚಾಲಕರಿಗೆ 800, ನಿರ್ವಾಹಕರಿಗೆ 700ರೂ. ನೀಡುವುದಾಗಿ ಸೂಚಿಸಲಾಗಿತ್ತು. ಆದರೆಮೂರ್‍ನಾಲ್ಕು ದಿನ ಕಳೆದರೂ ಒಬ್ಬನಿವೃತ್ತ ನೌಕರ ಕೂಡ ಸೇವೆಗೆಬರಲು …

Read More »

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿ ವಿಸ್ತರಿಸಿದ ಸರಕಾರ

ಬೆಂಗಳೂರು, ಎ.12: ಸಾರಿಗೆ ನೌಕರರು ಮುಷ್ಕರ ನಿರತರಾಗಿರುವುದರಿಂದ ಖಾಸಗಿ ವಾಹನ ಮಾಲಕರು ಸರಕಾರದ ಕೋರಿಕೆಗೆ ಸ್ಪಂದಿಸಿ ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯಿದೆ 1957ರ ಕಲಂ4(1) ನಿಯಮಗಳನ್ನು ಸಡಿಲಗೊಳಿಸಿ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎ.15ರೊಳಗಾಗಿ …

Read More »

7 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದುಉ 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಸಾರಿಗೆ ನೌಕರರು ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕು ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ಕುರಿತು ಮಾತನಾಡಿರುವ …

Read More »

ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಯುಗಾದಿ ಹಬಕ್ಕೂ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಹೂವು, ಹಣ್ಣು, ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ಯುಗಾದಿ ಪ್ರಯುಕ್ತ ನಗರದ ಕೆ.ಆರ್. ಮಾರ್ಕೆಟ್, ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ ಗ್ರಾಹಕರು ಹೂ, ಹಣ್ಣು ಖರೀದಿಯಲ್ಲಿ ಬ್ಯುಸಿಯಾಗಿದ್ರು, ಹಬ್ಬಕ್ಕೆ ತಳಿರು-ತೋರಣ ಸೇರಿದಂತೆ ಬೇವು ಬೆಲ್ಲ ಖರೀದಿಸಿದ್ದಾರೆ. ಈ ಬಾರಿ ಹೂವು, ಹಣ್ಣಿನ ಬೆಲೆ ಭಾರೀ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕನಕಾಂಬರ ಹೂವು …

Read More »