ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ಕಣ ಸಜ್ಜಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಇದು ಮತ್ತೂಂದು ಅಗ್ನಿಪರೀಕ್ಷೆಯಾದರೆ ಜೆಡಿಎಸ್ಗೆ ಅಸ್ತಿತ್ವ ಸಾಬೀತುಪಡಿಸುವ ಸವಾಲಿನ ಪ್ರಶ್ನೆಯಾಗಿದೆ. ಉಪ ಚುನಾವಣೆ ಫಲಿತಾಂಶದಿಂದ ದೊಡ್ಡ ಮಟ್ಟದ ರಾಜಕೀಯ ಬದಲಾವಣೆ ಆಗದು. ಆದರೆ ಸಿ.ಡಿ. ಪ್ರಕರಣ ಎಬ್ಬಿಸಿರುವ ರಾಡಿಯ ಹಿನ್ನೆಲೆಯಲ್ಲಿ ಜನರ ನಾಡಿ ಮಿಡಿತ ತಿಳಿಯಲಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ಉಪ ಚುನಾವಣೆ ಪ್ರತಿಷ್ಠೆ. …
Read More »Yearly Archives: 2021
ಡಿಕೆಶಿಯಿಂದ ಹೊಲಸು ರಾಜಕೀಯ: ನಮ್ಮ ಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ರಾಜಕಾರಣ – ಸಿಡಿ ಲೇಡಿ ಪೋಷಕರ ಆರೋಪ
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಯುವತಿ ಪೋಷಕರು ಇಡೀ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಎಸ್ಐಟಿ ವಿಚಾರಣೆ ಬಳಿಕ ಮಾತನಾಡಿದ ಯುವತಿಯ ತಂದೆ ಮಾಜಿ ಸೈನಿಕ, ಓರ್ವ ಮಾಜಿ ಸೈನಿಕನ ಹೆಣ್ಣುಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂಬುದಕ್ಕೆ ನನ್ನ ಮಗಳ ಪರಿಸ್ಥಿತಿಯೇ ಒಂದು ಉದಾಹರಣೆ ಎಂದರು. ನಾನು ಓರ್ವ ಮಾಜಿ ಸೈನಿಕ. ದೇಶ ಕಾಯುವುದು …
Read More »ಸಿಡಿ ಪ್ರಕರಣ ಕುರಿತು ತನ್ನ ಬಳಿ ಸಾಕ್ಷಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಕಂಡಿದ್ದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಸಾಕ್ಷಿ ಇದೆ ಎಂದು ಹೇಳುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಳಿ 11 ಸಾಕ್ಷ್ಯಗಳಿವೆ. ಈ ಎಲ್ಲಾ ಸಾಕ್ಷ್ಯಗಳನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡುವೆ . ಮಹಾನಾಯಕ ಡಿಕೆ ಶಿವಕುಮಾರ್ ಅವರೊಂದಿಗೆ ನೇರ ಹೋರಾಟಕ್ಕಿಳಿದು ಕನಕಪುರದಲ್ಲಿ ಸೋಲಿಸಲು ಹೋರಾಟ …
Read More »ನಾನು ಗಂಡಸು, ಆ ಮಹಾನಾಯಕ ‘ಗಾಂ…’; : ರಮೇಶ್ ಜಾರಕಿಹೊಳಿ
ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು …
Read More »ನನ್ನ ಮಗಳನ್ನು ನನಗೆ ಕೊಟ್ಟು ಬಿಡಿ: ಕೈ ಮುಗಿದು ಕೇಳಿದ ‘ಸಿಡಿ ಲೇಡಿ’ ತಂದೆ
ಬೆಂಗಳೂರು, ಮಾರ್ಚ್ 27: ನಾನು ದೇಶ ರಕ್ಷಣೆ ಮಾಡಿ ಬಂದ ಸೈನಿಕ. ನನ್ನ ಮಗಳನ್ನು ಒತ್ತೆಯಾಳನ್ನಾಗಿ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ನನ್ನ ಮಗಳನ್ನು ಮುಂದಿಟ್ಟುಕೊಂಡು ಹೊಲಸು ರಾಜಕಾರಣ ಮಾಡುತ್ತೀರಾ ? ದೇಶ ಕಾಯುವ ನಾನು ನನ್ನ ಮಗಳನ್ನು ರಕ್ಷಣೆ ಮಾಡಿಕೊಳ್ಳುತ್ತೇನೆ. ಮಾಧ್ಯಮಗಳ ಎದುರು ಕೈ ಮುಗಿದು ಕಣ್ಣೀರು ಹಾಕುತ್ತಲೇ ಸಿಡಿಲೇಡಿಯ ತಂದೆ ಕೇಳಿದ ಪರಿಯಿದು. ಯುವತಿ ತನ್ನ ಸಹೋದರ ಜತೆ ಮಾತನಾಡಿದ್ದ ಅಡಿಯೋ ಮೊಬೈಲ್ ನಲ್ಲಿ ಪ್ರಸಾರ ಮಾಡಿದ ಯುವತಿ …
Read More »ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್ ಜಾರಕಿಹೊಳಿ ಬೆಂಬಲಿಗರು;
ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್ನಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ …
Read More »ಮಹಾನಾಯಕನ ಷಡ್ಯಂತ್ರಕ್ಕೆ ಮಾಫಿ ಇಲ್ಲ; ಡಿ.ಕೆ. ಶಿವಕುಮಾರ್ ಗೆ ಬಹಿರಂಗ ಸವಾಲು ಹಾಕಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ಸಿಡಿ ಪ್ರಕರಣದ ಮಹಾನಾಯಕ ಎಂದೇ ಆರೋಪಿಸಲಾಗುತ್ತಿರುವ ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗ ಸವಾಲು ಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿಕೆಶಿ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಅವರನ್ನು ಮರ್ಯಾದೆಯಿಂದ ಸುರಕ್ಷಿತವಾಗಿ ನೋಡಿಕೊಳ್ಳುತ್ತೇವೆ. ಆದರೆ ಕನಕಪುರದಲ್ಲಿ ಮಾತ್ರ ಡಿಕೆಶಿ ವಿರುದ್ಧ ನೇರವಾಗಿ ಹೋರಾಡುತ್ತೇವೆ. ಕನಕಪುರದಲ್ಲಿ ಮಾತ್ರ ಅವರನ್ನು ಸೋಲಿಸದೇ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕೊಹೊಳಿ, ಸಿಡಿ ಪ್ರಕರಣದಲ್ಲಿ ನಾನು ನಿರಪರಾಧಿ ಎಂಬುದನ್ನು ಯುವತಿ ಪೋಷಕರೇ ಹೇಳಿದ್ದಾರೆ. …
Read More »ಡಿಕೆಶಿ ರಾಜಕೀಯಕ್ಕೆ ನಾಲಾಯಕ್ : ಮಹಾನಾಯಕನ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ
ಬೆಂಗಳೂರು : ಸಿಡಿ ಯುವತಿ ಪೋಷಕರು ನೀಡಿದ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಡಿಕೆಶಿ ವಿರುದ್ಧ ಹರಿಹಾಯ್ದಿರುವ ರಮೇಶ್, ಮಹಾನಾಯಕ ರಾಜಕೀಯಕ್ಕೆ ನಾಲಾಯಕ್, ಕನಕಪುರದಲ್ಲಿ ನಾನು ಅವರ ವಿರುದ್ಧ ನಿಲ್ತೀನಿ. ಅವರನ್ನು ಸೋಲಿಸಲು ಹೋರಾಡ್ತೀನಿ ಎಂದಿದ್ದಾರೆ. ನನ್ನ ಬಳಿ 11 ಸಾಕ್ಷಿಗಳಿವೆ, ಡಿಕೆಶಿ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕ್ತೀನಿ ಎಂದು ಸಿಡಿದೆದ್ದಿದ್ದಾರೆ
Read More »ಸಿಡಿ ಪ್ರಕರಣ: ಇದೊಂದು ಷಡ್ಯಂತ್ರ ಎಂದು ರಮೇಶ್ ಜಾರಕಿಹೊಳಿ ಪರ ನಿಂತ ಜೆಡಿಎಸ್
ಬೆಂಗಳೂರು:ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು ಜೆಡಿ ಎಸ್ ಪಕ್ಷವು ಇದೊಂದು ಷಡ್ಯಂತ್ರ ಆಗಿದೆ ಎಂದಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ರಮೇಶ್ ಜಾರಕಿಹೊಳಿಯ ಪರ ನಿಂತಿದೆ. ‘ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ …
Read More »ಬೆಳಗಾಗುವುದರೊಳಗೆ ಕೋಟ್ಯಾಧಿಪತಿಯಾದ ಅಜ್ಜಿ :ಗುಜರಿ ನಡೆಸುತ್ತಿದ್ದವರ ಮನೆ ತುಂಬಾ ಈಗ ಹಣದ ಹೊಳೆ!
ಚಂಡೀಗಢ: ಪಂಜಾಬ್ ಸ್ಟೇಸ್ ಡಿಯರ್ 100 ಮಾಸಿಕ ಲಾಟರಿ ಬೆಳಗಾಗುವುದರೊಳಗೆ ಒಂದು ಬಡ ಕುಟುಂಬವನ್ನು ಕೋಟ್ಯಾಧೀಶರನ್ನಾಗಿ ಮಾಡಿದೆ. ಹೌದು, ಬಾಗಾಪುರಾಣದ ನಿವಾಸಿ 61 ವರ್ಷದ ಆಶಾ ರಾಣಿ ಒಂದು ಕೋಟಿ ರೂಪಾಯಿಗಳನ್ನು ಲಾಟರಿ ಮೂಲಕ ಗೆದ್ದಿದ್ದಾರೆ. ಈ ತಿಂಗಳ ಲಾಟರಿ ವಿಜೇತರಲ್ಲಿ ಆಶಾ ಗೆದ್ದಿದ್ದು, ಈ ಸಂಬಂಧ ಹಣ ಪಡೆದುಕೊಳ್ಳಲು ಲಾಟರಿ ಟಿಕೆಟ್ ಮತ್ತು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಅಧಿಕಾರಿಗಳಿಗೆ ನೀಡಿದ್ದಾರೆ. ಬಹುಮಾನವನ್ನು ಗೆದ್ದ ನಂತರ ಪ್ರತಿಕ್ರಿಯೆ ನೀಡಿರುವ ಅವರು, …
Read More »