ಬೆಂಗಳೂರು, ಮಾ.23- ಸ್ಕೂಟರ್ನಲ್ಲಿ ಬಂದು ಬೆದರಿಸಿ ಹಣ-ಆಭರಣ ಸುಲಿಗೆ ಮಾಡಿದ್ದ ಮೂವರನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿ 3 ಲಕ್ಷ ರೂ. ಬೆಲೆಬಾಳುವ 102 ಗ್ರಾಂ ಚಿನ್ನದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ಕೆಜಿ ಹಳ್ಳಿ, ಪಿಳ್ಳಣ್ಣ ಗಾರ್ಡನ್ ನಿವಾಸಿ ಜಾಕೀರ್ ಹುಸೇನ್ (30), ವೆಂಕಟೇಶಪುರಂನ ಶಾಬಾಜ್ಖಾನ್ (25), ಫಾಜಿಲ್ (23) ಬಂಧಿತರು. ಭೈರವೇಶ್ವರನಗರ 9ನೆ ಕ್ರಾಸ್ನಲ್ಲಿ ಸಾರ್ವಜನಿಕರೊಬ್ಬರು ಮಾ.13ರಂದು ಹೋಗುತ್ತಿದ್ದಾಗ ಮೂವರು ಸುಲಿಗೆಕೋರರು ಸ್ಕೂಟರ್ನಲ್ಲಿ ಬಂದು …
Read More »Yearly Archives: 2021
ಅಂತರಾಜ್ಯ ಡ್ರಗ್ಸ್ ದಂಧೆ : ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಖ್ಯಾತ ಉದ್ಯಮಿ ಮಗಳು ಸೇರಿದಂತೆ ಇಬ್ಬರ ಬಂಧನ
ಹುಬ್ಬಳ್ಳಿ : ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಈ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಓರ್ವ ಯುವಕ, ಓರ್ವ ಯುವತಿ ಪೊಲೀಸರ ಬಲೆಗೆ ಬಿದ್ದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಪೆಡ್ಲರ್ ಸೇರಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಖಚಿತವಾದ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಪೆಡ್ಲರ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಅಪಾರ ಪ್ರಮಾಣದಲ್ಲಿ ಡ್ರಗ್ಸ್ ನ್ನು …
Read More »ಏ.1ಕ್ಕಿಂತ ಮೊದ್ಲೇ ಈ ಕೆಲ್ಸ ಮಾಡಿ.. ಇಲ್ಲದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತೆ..!
ಪ್ಯಾನ್ ಕಾರ್ಡ್ ಹೊಂದಿರುವವರು ಇದನ್ನ ಎಚ್ಚರಿಕೆಯಿಂದ ಓದಿ. ಯಾಕಂದ್ರೆ, ಆದಾಯ ತೆರಿಗೆ ಇಲಾಖೆಯು 2021ರ ಮಾರ್ಚ್ 31ಕ್ಕೆ ಆಧಾರ್ ಪ್ಯಾನ್ ಲಿಂಕ್ ಗಡುವು ನೀಡಿದೆ. ಒಂದ್ವೇಳೆ ನಿಮ್ಮ ಪ್ಯಾನ್ʼನ್ನ ನಿಮ್ಮ ಆಧಾರ್ʼಗೆ ಲಿಂಕ್ ಮಾಡದಿದ್ದರೆ, ಏಪ್ರಿಲ್ 1 ರಿಂದ ನೀವು ಯಾವುದೇ ಹಣಕಾಸು ವ್ಯವಹಾರವನ್ನ ಮಾಡೋಕೆ ಸಾಧ್ಯವಾಗೋಲ್ಲ. ಪ್ಯಾನ್ಗೆ ಆಧಾರ್ ಲಿಂಕ್ ಮಾಡದಿದ್ರೆ, ಆದಾಯ ತೆರಿಗೆ ಕಾಯ್ದೆಯಡಿ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಆದಾಯ ತೆರಿಗೆ ಇಲಾಖೆ (ಐಟಿ ಇಲಾಖೆ) ಹೇಳಿದೆ. …
Read More »ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 530 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದಾರೆ. ಪೌರಾಡಳಿತ ಇಲಾಖೆಯಲ್ಲಿ 9972 ಹುದ್ದೆಗಳು ಖಾಲಿ ಇವೆ. ಗ್ರೂಪ್ ಸಿ ವೃಂದದ ಖಾಲಿ ಹುದ್ದೆಗಳನ್ನು ಸರ್ಕಾರದ ಹಂತದಲ್ಲಿ ಹಾಗೂ ಗ್ರೂಪ್ …
Read More »ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಭರ್ಜರಿ ಗುಡ್ ನ್ಯೂಸ್
ನವದೆಹಲಿ: ಕಳೆದ 15 ದಿನಗಳ ಅವಧಿಯಲ್ಲಿ ಕಚ್ಚಾ ತೈಲದ ದರ ಭಾರೀ ಇಳಿಕೆಯಾಗಿದೆ. ಬ್ಯಾರಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಕಡಿಮೆಯಾಗಿದೆ. ಕಚ್ಚಾತೈಲದ ಬೆಲೆ ಇಳಿಕೆಯಾಗುತ್ತಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಕಡಿಮೆ ಮಾಡಲು ಅವಕಾಶ ಸೃಷ್ಟಿಯಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದ್ದು, ಕಚ್ಚಾತೈಲದ ಬೆಲೆ ಏರಿಕೆ ನೆಪ ಹೇಳುತ್ತಿದ್ದ ಕಂಪನಿಗಳು ಈಗ ಬೆಲೆ ಕಡಿಮೆ ಮಾಡಲಿವೆ ಎಂದು …
Read More »ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಕಠಿಣ ಕ್ರಮ : ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರು : ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಕೈಗಾರಿಕಾ ನೀತಿ 2020-25 ರ ಅನ್ವಯ ಸರ್ಕಾರದ ಸೌಲಭ್ಯ ಪಡೆದು ಸ್ಥಾಪಿಸಿರುವ ಕೈಗಾರಿಕೆಗಳಲ್ಲಿ ಅರ್ಹತೆ ಇರುವ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ. 100 …
Read More »ಪೊಲೀಸರಿಗೆ ಭರ್ಜರಿ ಸಿಹಿಸುದ್ದಿ : ಕಡ್ಡಾಯ ವಾರದ ರಜೆಗೆ ಮತ್ತೊಮ್ಮೆ ಆದೇಶ
ಬೆಂಗಳೂರು : ಪೊಲೀಸರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ನೀಡುವಂತೆ ಎಲ್ಲ ಠಾಣಾಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಕಚೇರಿ ಆಡಳಿತ ವಿಭಾಗ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಡಿಸಿಪಿ ನಿಶಾ ಜೇಮ್ಸ್ ಹೊರಡಿಸಿರುವ ಆದೇಶದ ಪ್ರಕಾರ, ವಿಪತ್ತು, ಚುನಾವಣೆ ಮತ್ತು ಬಂದೋಬಸ್ತ್ ಕರ್ತವ್ಯ ಹೊರತು ಪಡಿಸಿ ಉಳಿದ ಎಲ್ಲ ಸಮಯದಲ್ಲಿ ಸಿಬ್ಬಂದಿಗೆ ಕಡ್ಡಾಯವಾಗಿ ರಜೆ ನೀಡಬೇಕು. ಇದಕ್ಕಾಗಿ ಆಯಾ ಠಾಣಾಧಿಕಾರಿಗಳು ಸಿಬ್ಬಂದಿಯ …
Read More »ರೈಲಿನಲ್ಲಿ ಸ್ಮೋಕ್ ಮಾಡಿದ್ರೆ 1000 ರೂ. ದಂಡ, 3 ವರ್ಷ ಜೈಲು ಶಿಕ್ಷೆ!
ನವದೆಹಲಿ : ಧೂಮಪಾನಿಗಳಿಗೆ ರೈಲ್ವೆ ಇಲಾಖೆ ಬಿಗ್ ಶಾಕ್ ನೀಡಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ ಧೂಮಪಾನ ಮಾಡಿದರೆ 1000 ರೂ. ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದ್ದು, ಈ ನಿಯಮ ಸೋಮವಾರದಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ರೈಲುಗಳಲ್ಲಿ ಸಂಭವಿಸುತ್ತಿರುವ ಅಗ್ನಿ ದುರಂತ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಈ ಆದೇಶ ಹೊರಡಿಸಿದ್ದು, ಧೂಮಪಾನ ಮಾಡುವುದು ಮತ್ತು ಉರಿಯುವಂತಹ ವಸ್ತುಗಳ ಸಾಗಣೆಗೆ ರೈಲಿನಲ್ಲಿ ಸಂಪೂರ್ಣ ನಿಷೇಧ ಮಾಡಲಾಗಿದೆ. ರೈಲ್ವೆ ಕಾಯ್ದೆಯ …
Read More »BPL’ ಕಾರ್ಡ್ : ಟ್ಯಾಕ್ಸಿ, ಟ್ರ್ಯಾಕ್ಟರ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ
ಬೆಂಗಳೂರು : ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದೆ. ವಿಧಾನಪರಿಷತ್ ನಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಇರುವ ಕುಟುಂಬಸ್ಥರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಈ ಕುಟುಂಬಗಳು ಸಂಕಷ್ಟದಲ್ಲಿ …
Read More »ಠಾಕ್ರೆ ಬಗ್ಗೆ ಮಾತಾಡಿದರೆ ಆಸಿಡ್ ದಾಳಿ ಮಾಡುತ್ತೇವೆ ಎಂದು ಶಿವಸೇನೆ ಬೆದರಿಕೆ’ – ನವನೀತ್ ಕೌರ್
ವದೆಹಲಿ: ಲೋಕಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತಾಡಿದಕ್ಕಾಗಿ ನನಗೆ ಮಹಾರಾಷ್ಟ್ರ ಶಿವಸೇನಾ ಸಂಸದ ಅರವಿಂದ ಸಾವಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿರುವ ಅಮರಾವತಿಯ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ ಅವರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತನಾಡಿದ ಕಾರಣಕ್ಕೆ ನನಗೆ ಫೋನ್ ಕರೆ ಹಾಗೂ ಪತ್ರಗಳ ಮೂಲಕ ಆಸಿಡ್ ದಾಳಿ ಬೆದರಿಕೆ ಹಾಕಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ದೂರು ನೀಡಿದ್ದಾರೆ. ಆದರೆ ಈ ಆರೋಪವನ್ನು ಅಲ್ಲಗಳೆದಿರುವ …
Read More »