ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಸಿಡಿಯಲ್ಲಿದ್ದ ಯುವತಿಯ ರೂಮ್ ನಲ್ಲಿ ಬರೋಬ್ಬರಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ನಿನ್ನೆ ಸಂಜೆ ಎಸ್ಐಟಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಇಷ್ಟೊಂದು ನಗದು ಹೇಗೆ ಬಂತು ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ. ನರೇಶ್ ಮನೆಯಲ್ಲಿ ಶೋಧಿಸಿದಾಗ 18.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿದ …
Read More »Yearly Archives: 2021
ಸಚಿವರಿಗೆ ಸ್ವಪಕ್ಷೀಯರಿಂದಲೇ ಮುಜುಗರ
ಬೆಂಗಳೂರು: ನೇಕಾರರ ಸಮಸ್ಯೆ ಕುರಿತು ಆಡಳಿತ ಪಕ್ಷದ ಸದಸ್ಯರೇ ಪದೇ ಪದೇ ಪ್ರಶ್ನೆಗಳನ್ನು ಕೇಳುವ ಮೂಲಕ ಜವಳಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಮುಜುಗರ ತಂದ ವಿದ್ಯಮಾನ ವಿಧಾನಸಭೆಯಲ್ಲಿ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ, ನೇಕಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿದರು. ‘ನೇಕಾರ ಸಮ್ಮಾನ್ ಯೋಜನೆಯಡಿ ನೀಡಿದ ₹2 ಸಾವಿರ ಯಾವುದಕ್ಕೂ ಸಾಲದು. ಲಾಕ್ಡೌನ್ ಅವಧಿಯಲ್ಲಿ ನೇಕಾರರು ತಯಾರಿಸಿದ ಸೀರೆಗಳನ್ನು ಇಲಾಖೆ ಖರೀದಿ ಮಾಡಿಲ್ಲ. …
Read More »ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯುತ್ತದೆಯೇ?’
ಬೆಂಗಳೂರು: ಜೈ ಶ್ರೀರಾಮ್, ಜೈ ಹನುಮಾನ್ ಎಂದು ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯಿತ್ತದೆಯೇ ಎಂದು ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಬುಧವಾರ ಪ್ರಶ್ನಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆ ಉಂಟಾಗಿರುವ ಹೆಚ್ಚಳದ ಕುರಿತು ಪ್ರಸ್ತಾಪಿಸುತ್ತಾ ಅವರು ಈ ಪ್ರಶ್ನೆ ಹಾಕಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. …
Read More »ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆ ಇಲ್ಲ: B.S.Y.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ವಿಡಿಯೋ ಸಂವಾದದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮುಂದಿನ ನಿಲುವುಗಳ ಬಗ್ಗೆ ಸ್ಪಷ್ಟನೆ ನೀಡಿದ್ದು, ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ . ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸುವ ಯಾವುದೇ ಸಾಧ್ಯತೆ ಇಲ್ಲ. ರಾಜ್ಯದಲ್ಲಿ ಆರ್ ಟಿಪಿಎಸ್ ಪರೀಕ್ಷೆ ಪ್ರಮಾಣಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ …
Read More »ಲೋಕಸಭಾ ಉಪ ಚುನಾವಣೆ ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ ಕೈಗೊಳ್ಳಬೇಕು. : ಎಂ.ಜಿ.ಹಿರೇಮಠ
ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆ, ಅನುಮತಿ ನೀಡಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿದ್ದು, ಹೊಸ ಮಾರ್ಗಸೂಚಿ ಅನ್ವಯವೇ ಅನುಮತಿಯನ್ನು ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.17) ನಡೆದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮಾದರಿ ನೀತಿ ಸಂಹಿತೆ ಪಾಲನೆಗೆ …
Read More »ಜಾರಕಿಹೊಳಿ ಸಿಡಿ ಪ್ರಕರಣ: ಯುವತಿಗೆ ನೋಟಿಸ್ ಜಾರಿ, ಆಕೆಯಿಂದ ಸ್ಪಂದನೆ ಇಲ್ಲ
ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು ಸೋಮವಾರ 2 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸೋಮವಾರ ತಡರಾತ್ರಿ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ವಿಚಾರಣೆಗೆ ನಡೆಸಿದ್ದು, ಎಸ್ಐಟಿ ಪೊಲೀಸರ ಎದುರು 4 ಪುಟಗಳ ಹೇಳಿಕೆ ದಾಖಲಿಸಿದ್ದು, ಈತನಿಗೆ ಸಮಯದಲ್ಲಿ ಎಸಿಪಿ ಧರ್ಮೆಂದ್ರ ಎದುರು ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. …
Read More »ಬೈಕ್ ಸ್ಟಂಟ್ ರಾಣಿಯರಿಗೆ ಬಿತ್ತು ಭಾರೀ ದಂಡ
ಲಕ್ನೋ: ಹುಡುಗಿಯರಿಬ್ಬರು ಬೈಕ್ನಲ್ಲಿ ಸ್ಟಂಟ್ ಮಾಡಿ ಅದನ್ನು ಚಿತ್ರೀಕರಣ ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಇದನ್ನು ಗಮನಿಸಿರುವ ಪೊಲೀಸರು ಬೈಕ್ ರೈಡ್ ಮಾಡಿದ ಹುಡುಗಿಯ ಮೇಲೆ 28 ಸಾವಿರ ರೂಪಾಯಿ ದಂಡ ಪ್ರಯೋಗ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಉತ್ತರ ಪ್ರದೇಶದ ಗಾಜಿಯಾಬಾದ್ನ ಶಿವಾಂಗಿ ದಬಾಸ್ ತನ್ನ ಸ್ನೇಹಿತೆ ಕುಸ್ತಿಪಟು ಸ್ನೇಹಾ ರಘವಂಶಿಯ ಹೆಗಲ ಮೇಲೆ ಕೂತು ಬುಲೆಟ್ ಬೈಕ್ನಲ್ಲಿ ಗಾಜಿಯಾಬಾದ್ನಲ್ಲಿ ರೌಂಡ್ಸ್ ಹೊಡೆದಿದ್ದಾಳೆ. ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ …
Read More »ಗೋಕಾಕ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನುರುಲ್ಲಾ ಕೋತ್ವಾಲಗೌಡ..
ಗೋಕಾಕ: ನಗರದಲ್ಲಿ “ನಗರ ಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ನುರುಲ್ಲಾ ಕೋತ್ವಾಲಗೌಡ ಅವರು ನಗರಸಭೆ ಕಾರ್ಯಲಯದ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ 26 ನೇ ವಾರ್ಡ ನಂಬರನಿಂದ ಸ್ಪರ್ಧಿಸುತ್ತಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಅವರು ವಾರ್ಡ್ ನಂಬರ 26ನೇ ವಾರ್ಡಿನಿಂದ ನಾನು ಸ್ಪರ್ಧಿಸುತ್ತಿದ್ದು, ಮೊದಲು ನಮ್ಮ ಸಹೋದರ ಸ್ಪರ್ಧಿಸುತ್ತಿದ್ದು ಅವರು ಅಗಲಿದ ಬಳಿಕ ಅವರ ಸ್ಥಾನದಲ್ಲಿ ನಾನು ಸ್ಪರ್ಧಿಸುತ್ತಿದೆನೆ. ಇದರ ಬಗ್ಗೆಯು ಜಾರಕಿಹೊಳಿ ಮೂರು ಸಹೋದರರ …
Read More »ಕನ್ನಡ ದ್ರೋಹಿ MES ನಿಷೇಧಿಸಿ: ಶುಭಂ ಸೆಳಕೆ ಗಡಿಪಾರು ಮಾಡಿ ಎಂದು ಕನ್ನಡ ಸಂಘಟನೆ ಆಗ್ರಹ..
ಘಟಪ್ರಭಾ: ಬೆಳಗಾವಿಯಲ್ಲಿ ಇರುವ ಕನ್ನಡ ನಾಡ ದ್ರೋಹಿ ಶುಭಂ ಸೆಳಕೆ ಇತನು ಕನ್ನಡದ ಶಾಲು ಹಾಕಿಕೊಂಡು ಅಲೆದಾಡುವವರ ವಿರುದ್ಧ ಅಟ್ಟಿಸಿಕೊಂಡು ಹೊಡೆಯುವ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶಿಸಿ ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಮೃತ್ಯುಂಜಯ ಸರ್ಕಲನಲ್ಲಿ ಪ್ರತಿಭಟನೆ ಮಾಡಲಾಯಿತು. ಶ್ರೀಶೈಲ ಬ್ಯಾಕೂಡ ನಿರೀಕ್ಷಕರು, ಘಟಪ್ರಭಾ ಪೋಲಿಸ್ ಠಾಣೆ ಇವರ ಮುಖಾಂತರ ಲಕ್ಷ್ಮಣ ಣ ನಿಂಬರಗಿ ಪೋಲಿಸ್ ಅಧಿಕ್ಷಕರು ಬೆಳಗಾವಿ ಅವರಿಗೆ ಮನವಿ …
Read More »ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ
ಬೆಂಗಳೂರು – ರಾಜ್ಯದಲ್ಲಿ ಕೊರೋನಾದಿಂದ ತತ್ತರಿಸಿರುವ ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ. ಕೆಲವರು ಗುಳೆ ಹೋಗಿದ್ದರೆ ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರ ತಕ್ಷಣ ಅವರ ನೆರವಿಗೆ ಬರಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಜವಳಿ ಸಚಿವರು ನಮ್ಮ …
Read More »