ತುಮಕೂರು: ‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮನ್ನು 10 ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದರು. ಈಗ ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನೇತೃತ್ವದ ಸರ್ಕಾರ ಈವರೆಗೆ ದೇಶದಲ್ಲಿ ಜಾರಿಗೊಳಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಸಲುವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನಕ್ಕೆ ತುಮಕೂರಿನಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ …
Read More »Yearly Archives: 2021
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ
ಬೆಂಗಳೂರು : ರಾಜ್ಯ ಸರ್ಕಾರವು (State Government) ಸರ್ಕಾರಿ ನೌಕರರಿಗೆ (Government Employees) ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, …
Read More »ಪರಿಷತ್ ಚುನಾವಣೆ: ಮತದಾರರ ಅಂತಿಮಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್
ಬೆಳಗಾವಿ : 04-ಬೆಳಗಾವಿ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 511 ಮತಗಟ್ಟೆಗಳ ಅಂತಿಮ ಮತದಾರರ ಪಟ್ಟಿಗಳನ್ನು ಭಾನುವಾರ(ನ.21) ಪ್ರಸಿದ್ದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ. ಮತದಾರರ ಕರಡು ಪಟ್ಟಿಯನ್ನು 11-11-2021 ರಂದು ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಧರಿಸಿ ಸರಿಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಗಳು ಸಂಬಂಧಿಸಿದ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ, …
Read More »ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಫಲಿತಾಂಶ
ಬೆಳಗಾವಿ – ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿಕಟಪೂರ್ವ ಅಧ್ಯಕ್ಷೆ ಮಂಗಲಾ ಮೆಟಗುಡ್ ಪುನರಾಯ್ಕೆಯಾಗಿದ್ದಾರೆ. ಚಲಾಯಿತ 6805 ಮತಗಳ ಪೈಕಿ ಮಂಗಲಾ ಮೆಟಗುಡ್ 4935 ಮತ ಪಡೆದಿದ್ದಾರೆ. ಬಸವರಾಜ ಖಾನಪ್ಪನವರ್ 1155, ರವೀಂದ್ರ ತೋಟಿಗೇರ 582 ಹಾಗೂ ಸುರೇಶ ಮರಲಿಗನವರ್ 41 ಮತ ಪಡೆದಿದ್ದಾರೆ. 91 ಮತಗಳು ತಿರಸ್ಕೃತವಾಗಿವೆ.
Read More »ಕಂಪ್ಲಿಯ ಸೇತುವೆ ಮುಳುಗಡೆ: ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆ ಮಧ್ಯೆ ಸಂಚಾರ ಸ್ಥಗಿತ
ಕಂಪ್ಲಿ : ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ನೇರವಾಗಿ ಸಂಪರ್ಕಿಸುತ್ತಿದ್ದ ಕಂಪ್ಲಿಯ ಸೇತುವೆ ಮುಳುಗಡೆಯಾಗಿದ್ದು, ಉಭಯ ಜಿಲ್ಲೆಗಳ ಮಧ್ಯೆ ನೇರ ರಸ್ತೆ ಸಂಚಾರ ಸ್ಥಗಿತವಾಗಿದೆ. ಕಂಪ್ಲಿಯ ಸೇತುವೆ ಮೇಲೆ ಯಾವುದೇ ಸಂಚಾರಕ್ಕೆ ಅವಕಾಶವಿಲ್ಲದಂತೆ ಪೊಲೀಸರು ಪಹರೆ ಕಾಯುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಗೆ ಕೇವಲ ಎರಡು ಅಡಿ ಮಾತ್ರ ಬಾಕಿ ಉಳಿದಿದೆ. ಪ್ರವಾಹದ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸೇತುವೆ ಮೇಲೆ …
Read More »ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ನ.21- ಸಹೋದರ ಲಖನ್ ಜಾರಕಿಹೊಳಿಗೆ ಮೇಲ್ಮನೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಭೇಟಿ ಮಾಡಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಇಂದು ಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು , ಕುತೂಹಲ ಕೆರಳಿಸಿತು. ಈ ಹಿಂದೆ ಲಖನ್ ಜಾರಕಿಹೊಳಿಗೆ ಅವಕಾಶ ಕೊಡುವ ಆಶ್ವಾಸನೆ ನೀಡಿದ್ದ …
Read More »ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ
K.P.CC ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ, ಅಲ್ಲಿನ ಜನರ ಅಹವಾಲು ಆಲಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಕೆಲ ದಿನಗಳ ಹಿಂದೆ ದಕ್ಷಿಣ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಆಲಿಸಿದ್ದ ಅವರು, ಭಾನುವಾರ ಪುನಃ ಕ್ಷೇತ್ರದಲ್ಲಿ ಸಂಚರಿಸಿ ಅಹವಾಲು ಆಲಿಸಿದರು. ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ …
Read More »ಬಿಜೆಪಿ ಒಂದೇ ಟಿಕೆಟ್ ನೀಡುವ ನಿರ್ಧಾರದಿಂದ ಹಿಂದೆ ಸರಿಯುವ ಲಕ್ಷಣ ಕಾಣುತ್ತಿಲ್ಲ., ಪಕ್ಷೇತರರಾಗಿ ಲಖನ್ ಜಾರಕಿಹೊಳಿ ನಿಲ್ಲಿಸುವುದಾಗಿ ಪರೋಕ್ಷ ಎಚ್ಚರಿಕೆ
ಬೆಳಗಾವಿ – ವಿಧಾನಪರಿಷತ್ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ 2 ಸ್ಥಾನಗಳಿಗಾಗಿ ಡಿ.10ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. ಬಿಜೆಪಿಯಿಂದ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಸ್ಪರ್ಧಿಸಲಿದ್ದಾರೆ. ಬಿಜೆಪಿಯಲ್ಲಿರುವ ಜಾರಕಿಹೊಳಿ ಸಹೋದರರು ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯ ಎರಡನೇ ಟಿಕೆಟ್ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಒಂದೊಮ್ಮೆ ಬಿಜೆಪಿ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರರಾಗಿ ನಿಲ್ಲಿಸುವುದಾಗಿ ಪರೋಕ್ಷ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. …
Read More »ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ,ನಾನು ನೀಡಿದ್ದ ಭರವಸೆಯನ್ನು ಶೀಘ್ರವೇ ಈಡೇರಿಸುವೆ. :B.S.Y.
ಚಿಕ್ಕೋಡಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಕೆಲಸ ಮಾಡುತ್ತಿವೆ. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಟ್ಟು ರಚನಾತ್ಮಕ ಸಲಹೆಗಳನ್ನು ನೀಡಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯ ಚಿಕ್ಕೋಡಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ. ಭಾಗಶ: ಹಾನಿಯಾದವರಿಗೆ 50 ಸಾವಿರ ಕೊಟ್ಟಿದ್ದೇವೆ. ಈವರೆಗೂ ದೇಶದ ಯಾವ ಸರ್ಕಾರ ಕೂಡ ಇಂತಹ ಕಾರ್ಯ ಕೈಗೊಂಡಿಲ್ಲ. ನಮ್ಮದು ಜನಪರ ಸರ್ಕಾರವಾಗಿದೆ ಎಂದು ಹೇಳಿದರು. ಪರಿಷತ್ ಚುನಾವಣೆಯಲ್ಲಿ …
Read More »ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಕಣಕ್ಕಿಳಿದರೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೊದಲ ಪ್ರಾಶಸ್ತ್ಯದ ಮತದಲ್ಲಿ ಗೆಲ್ಲುವುದು ಕಷ್ಟ?
ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ 2 ಸ್ಥಾನಗಳ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಹಾಗೂ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಸ್ಪರ್ಧಿಸುತ್ತಿದ್ದು, ಪಕ್ಷೇತರರಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದರೂ ಇನ್ನೂ ಖಚಿತವಾಗಿಲ್ಲ. ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಎರಡೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಂದು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಕಣಕ್ಕಿಳಿಯುವುದು ನಿಜವಾದರೆ ಅವರೂ ಅಂದೇ ನಾಮಪತ್ರ ಸಲ್ಲಿಸುವರು. …
Read More »