Breaking News

Yearly Archives: 2021

ಕೋವಿಡ್ ಲಸಿಕೆ ಪಡೆಯಲು ಸಕಾರಾತ್ಮಕ ಸ್ಪಂದನೆ; ಮಾರ್ಚ್ ಅಂತ್ಯದವರೆಗೂ ಸ್ಲಾಟ್ ಗಳು ಫಿಕ್ಸ್!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 60 ವರ್ಷ ಮೇಲಿನವರು, ಬೇರೆ ಕಾಯಿಲೆ ಹೊಂದಿರುವ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಮುಂದುವರೆದಿದೆ. ಕೋವಿಡ್ ಲಸಿಕೆ ಪಡೆಯಲು ಜನರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಹೌದು.. ಕೋವಿನ್ ಪೋರ್ಟಲ್‌ನಲ್ಲಿ ಲಕ್ಷಾಂತರ ಮಂದಿ ಕೋವಿಡ್ ಲಸಿಕೆಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಪರಿಣಾಮ ಮಾರ್ಚ್ ಅಂತ್ಯದ ವರೆಗೂ ಸ್ಲಾಟ್ ಗಳು ಬುಕ್ ಆಗಿವೆ. ಏಪ್ರಿಲ್ ನಲ್ಲಷ್ಟೇ ಸ್ಲಾಟ್ ಗಳು ಖಾಲಿ ಇವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. …

Read More »

ಪಡಿತರ ಚೀಟಿ ಹೊಂದಿರುವವರಿಗೆ ʼನೆಮ್ಮದಿʼ ಸುದ್ದಿ: ವಿತರಣೆಯಲ್ಲಿ ವ್ಯತ್ಯಯವಾದರೆ ಈ ಸಂಖ್ಯೆಗೆ ಕರೆ ಮಾಡಿ

ಪಡಿತರ ಚೀಟಿ ಅನ್ನೋದು ಸರ್ಕಾರ ನೀಡಿರುವ ಸವಲತ್ತುಗಳಲ್ಲಿ ಒಂದಾಗಿದ್ದು, ಇದನ್ನ ಬಳಸಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ಇಲ್ಲವೇ ಕನಿಷ್ಟ ದರಕ್ಕೆ ದಿನಸಿ ಸಾಮಗ್ರಿಗಳನ್ನ ಪಡೀತಾರೆ. ಆದರೆ ನ್ಯಾಯಬೆಲೆ ಅಂಗಡಿಗಳಲ್ಲಿ ದಿನಸಿ ವಿತರಣೆ ವಿಚಾರವಾಗಿ ಸಾಕಷ್ಟು ದೂರುಗಳು ಕೇಳಿ ಬರ್ತಿದೆ. ಫಲಾನುಭವಿಗಳಿಗೆ ಸರಿಯಾದ ಪ್ರಮಾಣ ಆಹಾರ ಧಾನ್ಯಗಳನ್ನ ವಿತರಿಸಲಾಗ್ತಿಲ್ಲ ಎಂಬ ಆರೋಪವೂ ಕೆಲವು ಕಡೆ ಕೇಳಿ ಬಂದಿದೆ. ಒಂದು ವೇಳೆ ನೀವು ಕೂಡ ಇಂತಹದ್ದೇ ಯಾವುದಾದರೊಂದು ಸಮಸ್ಯೆಯನ್ನ ಎದುರಿಸ್ತಾ ಇದ್ದರೆ …

Read More »

ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ವದಂತಿಯೊಂದು ಹಬ್ಬಿದ್ದು, ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು, ಮಹಿಳೆಯರು ತಾಯಿಗೆ ಸೀರೆ ಕೊಡಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.   ಹೌದು, ಬಳ್ಳಾರಿ ಜಿಲ್ಲೆಯ ಗ್ರಾಮೀಣಾ ಭಾಗದಲ್ಲಿ ತಾಯಿಗೆ ಮಗಳು ಸೀರೆ ಕೊಡಿಸಬೇಕು. ಸೀರೆ ಕೊಡದಿದ್ದರೆ ಕೇಡಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ತಮ್ಮ ತಾಯಿಗೆ ಸೀರೆ ಖರೀದಿಸಲು ಮುಗಿಬಿದ್ದಿದ್ದಾರೆ. ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ …

Read More »

ಒಂದೇ ಓವರ್ ನಲ್ಲಿ 6,6,6,6,6.6: ಯುವಿ ದಾಖಲೆ ಸರಿಗಟ್ಟಿದ ಪೊಲಾರ್ಡ್

ಯಂಟಿಗುವಾ : ವೆಸ್ಟ್ ಇಂಡೀಸ್ ನ ನಾಯಕ ಕೀರನ್ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ಮೂರನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಮೈದಾನದಲ್ಲಿ ಶ್ರೀಲಂಕಾದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾದ ಅಕಿಲಾ ಧನಂಜಯ ಅವರ ಒವರ್ ನಲ್ಲಿ 6ಸಿಕ್ಸರ್ ಸಿಡಿಸುವ ಮೂಲಕ ಪೊಲಾರ್ಡ್ ಈ ಸಾಧನೆ ಮಾಡಿದ್ದಾರೆ. *6 Sixes in an …

Read More »

ರಮೇಶ್‌ ಜಾರಕಿಹೊಳಿ ರಾಜೀನಾಮೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ :ಸತೀಶ್‌ ಜಾರಕಿಹೊಳಿ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾಗಿದ್ದ ರಮೇಶ್‌ ಜಾರಕಿಹೊಳಿ ರಾಜೀನಾಮೆಯಿಂದ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ ಇದೆ. ಸರಕಾರದಲ್ಲಿರುವ ವಲಸಿಗ ಸಚಿವರ ವೇಗಕ್ಕೆ ಬಿಜೆಪಿಯಲ್ಲಿಯೇ ಬ್ರೇಕ್‌ ಹಾಕುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕುವಂತಾಗಿದ್ದು, ಜಾರಕಿಹೊಳಿ ಕುಟುಂಬಕ್ಕೆ ಪರ್ಯಾಯ ಅಧಿಕಾರ ಕಲ್ಪಿಸದಿದ್ದರೆ ಸರಕಾರ ಅಲುಗಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ವಲಸಿಗರ ನಾಯಕತ್ವ ವಹಿಸಿಕೊಂಡಿದ್ದ ಜಾರಕಿಹೊಳಿ ರಾಜ್ಯ ಬಿಜೆಪಿಯಲ್ಲಿ …

Read More »

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ಸಾಮಾನ್ಯರಿಗೂ ಸಿಗಲಿದೆ ಐಷಾರಾಮಿ ಪ್ರಯಾಣ

ನವದೆಹಲಿ: ಕಪುರ್ಥಾಲಾದ ರೈಲು ಕೋಚ್ ಕಾರ್ಖಾನೆ ಜನರಲ್‌ ಬೋಗಿಗಳಿಗೂ ಹವಾನಿಯಂತ್ರಿತ (ಎಸಿ) ತಯಾರಿಸಲು ಪ್ರಾರಂಭಿಸಿದೆ ಎನ್ನಲಾಗಿದೆ. ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಬೋಗಿಗಳು ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿವೆ ಅಂತ ತಿಳಿದು ಬಂದಿದೆ. ನಾಗ್ಡಾ-ಕೋಟಾ-ಸವಾಯಿ ಮಾಧೋಪುರ ವಿಭಾಗದಲ್ಲಿ 180 ಕಿ.ಮೀ ವೇಗದಲ್ಲಿ ಯಶಸ್ವಿ ಪ್ರಯೋಗಗಳ ನಂತರ ಎಸಿ 3-ಹಂತದ ಸಾಮಾನ್ಯ ಬೋಗಿಗಳನ್ನು ನಿರ್ಮಾಣ ಮಾಡಲಾಗುತ್ತಿದೆಯಂತೆ. ಭಾರತೀಯ ರೈಲ್ವೆಯ ಪಂಜಾಬ್ ಮೂಲದ ಕೋಚ್ ತಯಾರಿಕಾ ಘಟಕವು ಮೊದಲ …

Read More »

ಟಿಪ್ ಟಾಪಾಗಿ ಶರ್ಟ್-ಪ್ಯಾಂಟ್ ತೊಟ್ಟು ಗತ್ತಿನಿಂದ ಹೊರಟ ಆನೆ ನಡಿಗೆಗೆ ಆನಂದ್ ಮಹೀಂದ್ರಾ ಫಿದಾ!

ನವದೆಹಲಿ : ಮಹೀಂದ್ರಾ ಗ್ರೂಪ್​ ಮುಖ್ಯಸ್ಥ ಆನಂದ್ ಮಹೀಂದ್ರಾ ಟ್ವಿಟ್ಟರ್​ನಲ್ಲಿ ಸದಾ ಸಕ್ರಿಯವಾಗಿ ಇರುತ್ತಾರೆ. ಈ ಬಾರಿ ಅವರು ಟ್ವೀಟ್​ವೊಂದನ್ನು ಮಾಡಿದ್ದು ಅದು ಸೋಷಿಯಲ್​ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಆನಂದ್ ಮಹೀಂದ್ರಾ ಟ್ವಿಟ್ಟರ್​​ನಲ್ಲಿ ಹಂಚಿಕೊಂಡ ಹೊಸ ಪೋಸ್ಟ್​ನಲ್ಲಿ ಆನೆಯ ಚಿತ್ರವಿದೆ. ಆದರೆ, ಈ ಚಿತ್ರವನ್ನು ನೋಡಿದ ನಂತರ ನಿಮಗೆ ಒಂದು ಟ್ವಿಸ್ಟ್ ಇದೆ. ಆನೆಗೆ ಚಡ್ಡಿ ತೊಡಿಸೋಕಾಗುತ್ತಾ ಅನ್ನೋ ಮಾತೊಂದಿದೆ. ಆದರೂ ಕೆಲ ಸರ್ಕಸ್​​ ಕಂಪನಿಗಳಲ್ಲಿ ಆನೆಗಳಿಗೆ ಬಟ್ಟೆ …

Read More »

ನಗು ತರಿಸುತ್ತೆ ಪಲ್ಟಿಯಾದ ಲಾರಿ ಚಾಲಕನ ವರ್ತನೆ

ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ಫನ್ನಿ ಫೋಟೋಗಳು ವೈರಲ್​ ಆಗುತ್ತಲೇ ಇರುತ್ತವೆ. ಇದೇ ಸಾಲಿಗೆ ಸೇರಿದ ಮತ್ತೊಂದು ಫೋಟೋ ಇಂಟರ್ನೆಟ್​ನಲ್ಲಿ ಹರಿದಾಡ್ತಾ ಇದ್ದು ಇದನ್ನ ನೋಡಿದ ಬಳಿಕ ನಿಮಗೆ ನಿಮ್ಮ ಲವ್​ ಲೈಫ್​ ನೆನಪಾಗೋದಂತು ಫಿಕ್ಸ್. ಮನುಷ್ಯ ಪ್ರೀತಿಯಲ್ಲಿ ಬಿದ್ದ ಅಂದರೆ ಸಾಕು ಆತನಿಗೆ ಹಸಿವು – ನಿದ್ದೆಯ ಅರಿವು ಇರೋದಿಲ್ಲ ಅಂತಾರೆ. ಅಕ್ಕಪಕ್ಕದಲ್ಲಿ ಏನು ನಡೀತಾ ಇದೆ ಅನ್ನೋದೇ ಅವರ ಗಮನಕ್ಕೆ ಬರೋದಿಲ್ಲ. ಇಂಟರ್ನೆಟ್​ನಲ್ಲಿ ವೈರಲ್​ ಆದ ಫೋಟೋ ಕೂಡ …

Read More »

ಉದ್ಯೋಗಿಗಳಿಗೆ ಮಹತ್ವದ ಮಾಹಿತಿ : ಏಪ್ರಿಲ್ 1ರಿಂದ ಕೆಲಸದ ಅವಧಿ 12 ಗಂಟೆಗೆ ಹೆಚ್ಚಳ?

ನವದೆಹಲಿ: ಕಚೇರಿಗಳಲ್ಲಿ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಬಹುದು ಎನ್ನಲಾಗಿದ್ದು, ಅಂದ ಹಾಗೇ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಏಪ್ರಿಲ್ 1ರಿಂದ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಜಾರಿಗೆ ತರುತ್ತಿದ್ದು, ಇದರಿಂದ ದುಡಿಯುವ ಜನರ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಕಳೆದ ವರ್ಷ ಸಂಸತ್ತಿನಲ್ಲಿ ಅಂಗೀಕರಿಸಿದ ವೇತನ ಸಂಹಿತೆ ಮಸೂದೆಯಲ್ಲಿ ಮಂಡಿಸಲಾದ ಬದಲಾವಣೆಗಳ ಭಾಗವೇ ಇದಾಗಿದೆ. ಅಂದ ಹಾಗೇ ಹೊಸ ಕಾನೂನಿನ ಪ್ರಕಾರ, 15-30 ನಿಮಿಷಗಳ ಹೆಚ್ಚುವರಿ …

Read More »

ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 31 ರವರೆಗೆ ನಡೆಯಲಿದೆ. ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ. ಮಾರ್ಚ್ 8 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಇಂದಿನಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಎರಡು ದಿನ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಚಾರವಾಗಿ ವಿಧಾನಸಭೆಯಲ್ಲಿ ವಿಶೇಷ ಚರ್ಚೆ ನಡೆಯಲಿದೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ನಂತರ ಚರ್ಚೆಗೆ ಅವಕಾಶ ನೀಡಲಾಗುವುದು. ಇಂದಿನಿಂದ ಮಾರ್ಚ್ …

Read More »