Breaking News

Yearly Archives: 2021

ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್!

ತುಮಕೂರು : ಈಗಾಗಲೇ ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಅಡುಗೆ ಅನಿಲ ಸಿಲಿಂಡರ್ ತೂಕದಲ್ಲಿ ಮೋಸ ನಡೆಯುತ್ತಿದ್ದು, ತೂಕ ಪರೀಕ್ಷಿಸಿ ಪಡೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಶಿರಾ ತಾಲೂಕಿನಲ್ಲಿ ಹಾಡಹಾಗಲೇ ಕಡಿಮೆ ತೂಕದ ಅಡುಗೆ ಅನಿಲ ಪೂರೈಸುತ್ತಿರುವುದನ್ನು ಖುದ್ದು ಗ್ರಾಹಕರೇ ಪತ್ತೆ ಹಚ್ಚಿದ್ದಾರೆ. ಕಡಿಮೆ ತೂಕ ಹೊಂದಿದ್ದ ಅಡುಗೆ ಅನಿಲ ಸಿಲಿಂಡರ್ ಗಳೊಂದಿಗೆ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ಶಿರಾ ನಗರದ ಸಿಲಿಂಡರ್ ವಿತರಕರಿಂದ ಗ್ರಾಹಕರಿಗೆ …

Read More »

ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಮಾ. 4ರಿಂದ ಆರಂಭ: ಕಲಾಪಕ್ಕೆ ಸಜ್ಜಾಗುತ್ತಿವೆ ವಿಪಕ್ಷಗಳು..!

ಬೆಂಗಳೂರು:  ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೀಸಲಾತಿ ಹೋರಾಟ ಮತ್ತಿತರ ವಿಚಾರ ಸದ್ದು ಮಾಡುವ ನಿರೀಕ್ಷೆಯಿದೆ. ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಸರಕಾರದ ವಿರುದ್ಧ ಮುಗಿಬೀಳುವ ವಿಚಾರದಲ್ಲಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಕೂಡ ಗುರುವಾರ ಅಥವಾ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಯಿದೆ. ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿಯೂ ಸಜ್ಜಾಗುತ್ತಿದೆ. ಅಧಿವೇಶನ ಕುರಿತು ಮಂಗಳವಾರ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ …

Read More »

ದಾಖಲೆ ಪ್ರಮಾಣಕ್ಕೇರಿದ ಬಿಟ್‌ ಕಾಯಿನ್‌ ಮೌಲ್ಯ

ದಶಕಗಳ ಹಿಂದಷ್ಟೇ ಚಾಲ್ತಿಗೆ ಬಂದಿರುವ ಬಿಟ್‌ ಕಾಯಿನ್‌ (ಕ್ರಿಪ್ಟೋ ಕರೆನ್ಸಿ) ಮೌಲ್ಯ ಕೆಲವು ದಿನಗಳ ಹಿಂದೆ 38 ಲಕ್ಷ ರೂ. ದಾಟಿದೆ. ಈ ಬೆನ್ನಲ್ಲೇ ಬಿಟ್‌ ಕಾಯಿನ್‌ಗಳಿಗೆ ಬೇಡಿಕೆಯೂ ವಿಪರೀತವಾಗಿ ಹೆಚ್ಚಾಗಿದೆ. ಹೀಗಾಗಿ ಇಡೀ ಜಗತ್ತೇ ಈ ಬಿಟ್‌ ಕಾಯಿನ್‌ಗಳ ಹಿಂದೆ ಬಿದ್ದಿರುವಾಗ ಇವೂ ಸಾಮಾನ್ಯ ಹಣದಂತೆಯೇ ವ್ಯವಹಾರಗಳಲ್ಲಿ ಚಾಲ್ತಿಗೆ ಬರಲು ಹೆಚ್ಚು ಸಮಯವಿಲ್ಲ ಎಂಬುದು ಹೂಡಿಕೆದಾರರ ಲೆಕ್ಕಾಚಾರವಾಗಿದೆ. ಬಿಟ್‌ ಕಾಯಿನ್‌ಗಳಿಗೆ ಅದೃಷ್ಟ ಖುಲಾಯಿಸಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಇದರತ್ತ ಆಕರ್ಷಿತರಾಗಿದ್ದಾರೆ. …

Read More »

ಮಾ.4 ರಿಂದ ವಿಧಾನ ಪರಿಷತ್ ಅಧಿವೇಶನ: ಬಸವರಾಜ ಹೊರಟ್ಟಿ

ಬೆಂಗಳೂರು, : ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನವು ಮಾ.4 ರಿಂದ 31ರವರೆಗೆ ನಡೆಯಲಿದ್ದು, ಮಾ.8ರಂದು ಮುಖ್ಯಮಂತ್ರಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಜಾ ದಿನಗಳನ್ನು ಹೊರತುಪಡಿಸಿ ಒಟ್ಟಾರೆ 19 ದಿನಗಳು ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಮಂಡಿಸುವ ಸಲುವಾಗಿ ಒಟ್ಟು 496 ಪ್ರಶ್ನೆಗಳು ಬಂದಿವೆ. 45 ಚುಕ್ಕೆ ಗುರುತಿನ ಪ್ರಶ್ನೆಗಳು, 265 …

Read More »

ಬಸವಕಲ್ಯಾಣ ಉಪ ಚುನಾವಣೆ: ಬಿಜೆಪಿ ಆಕಾಂಕ್ಷಿಗಳ ಪ್ರತ್ಯೇಕ ಚಟುವಟಿಕೆ ಬಂದ್?

ಬಸವಕಲ್ಯಾಣ: ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪ್ರತ್ಯೇಕ ಚಟುವಟಿಕೆಗೆ ವರಿಷ್ಠರು ಕಡಿವಾಣ ಹಾಕಿದ್ದು ಏನೇ ಕಾರ್ಯಕ್ರಮ ಆಯೋಜಿಸಿದರೂ ಪಕ್ಷದ ಬ್ಯಾನರ್ ಅಡಿಯಲ್ಲಿ ಒಗ್ಗಟ್ಟಾಗಿಯೇ ಹಮ್ಮಿಕೊಳ್ಳಿ ಎಂದಿದ್ದರಿಂದ ಇನ್ನುಮುಂದೆ ಶಕ್ತಿ ಪ್ರದರ್ಶನಕ್ಕೆ ಯಾರಿಗೂ ಅವಕಾಶ ಇಲ್ಲದಂತಾಗಿದೆ. ಬೆಂಗಳೂರಿನಲ್ಲಿ ಈಚೆಗೆ ನಡೆದ ಆಕಾಂಕ್ಷಿಗಳ ಸಭೆಯಲ್ಲಿ ಈ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಪ್ರಭು ಚವಾಣ್ ಅವರು ಇನ್ನು ಮುಂದೆ ಕಾರ್ಯಕರ್ತರು …

Read More »

ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ!

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ದಿಢೀರ್ ಆಗಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಸಿಎಂ ಇಬ್ರಾಹಿಂ ಮೈತ್ರಿ ಸರ್ಕಾರದ …

Read More »

ಬೆಳಗಾವಿ ಝೂದಲ್ಲಿ ಸಿಂಹ ,ಶೀಘ್ರವೇ ಮೃಗಾಲಯದಲ್ಲಿ ಹುಲಿ ಸಫಾರಿ : ಸತೀಶ್ ಜಾರಕಿಹೊಳಿ

ಬೆಳಗಾವಿ – : ರಾಣಿ ಚನ್ನಮ್ಮ ಕಿರು ಮೃಗಾಲಯ ಉತ್ತರ ಕರ್ನಾಟಕದ ಹೆಮ್ಮೆಯಾಗಿದೆ. ಅದರ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಯಮಕನಮರಡಿ ಶಾಸಕರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಮಂಗಳವಾರ (ಮಾ.೦೨) ಭೇಟಿ ನೀಡಿ ಮಾಧ್ಯಮಗೋಷ್ಠಿ ನಡೆಸಿದರು.   ಈಗಾಗಲೇ ಮೃಗಾಲಯಕ್ಕೆ 3 ಸಿಂಹಗಳು ಆಗಮಿಸಿವೆ. ಮುಂಬರುವ ದಿನಗಳಲ್ಲಿ ಹುಲಿ,ಚಿರತೆ, ಕರಡಿ ಮುಂತಾದ ಪ್ರಾಣಿಗಳನ್ನು ಕರೆತರುವ ಯೋಜನೆ ಇದ್ದು, ಅವುಗಳಿಗೆ …

Read More »

ರೈತ ನಾಶವಾದರೆ ದೇಶವೂ ನಾಶ: ನೀರಾವರಿ ತಜ್ಞ ಪ್ರೊ.ಸಿ. ನರಸಿಂಹಪ್ಪ

ದಾವಣಗೆರೆ: ರೈತರು ನಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ನೀಡಿ ಎಂದು ಕೇಳಬೇಕಿತ್ತು. ಆದರೆ ಅದನ್ನು ಕೇಳದೆ ಕನಿಷ್ಠ ಇಷ್ಟು ಸಿಗದೇ ಹೋದರೆ ಕೃಷಿಕರಾಗಿಯೂ ಉಳಿಯುವುದಿಲ್ಲ. ಹಾಗಾಗಿ ಕನಿಷ್ಠ ಬೆಂಬಲ ಬೆಲೆಯನ್ನಾದರೂ ನೀಡಿ ಎಂದು ರೈತರು ಕೇಳುತ್ತಿದ್ದಾರೆ. ರೈತ ನಾಶವಾದರೆ ದೇಶ ನಾಶವಾಗುತ್ತದೆ. ರೈತತನವನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಕೃಷಿ ಮತ್ತು ನೀರಾವರಿ ತಜ್ಞ ಪ್ರೊ.ಸಿ. ನರಸಿಂಹಪ್ಪ ಎಚ್ಚರಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳವಾರ ನಡೆದ ‘ನೂತನ …

Read More »

ನೋಟು ಅಮಾನ್ಯೀಕರಣದ ನಿರ್ಧಾರದ ಕಾರಣ ನಿರುದ್ಯೋಗ ಹೆಚ್ಚಾಗಿದೆ : ಮಾಜಿ ಪ್ರಧಾನಿ ಸಿಂಗ್

ನವ ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 2016 ರಲ್ಲಿ ಪ್ರಧಾನಿ ಮೋದಿ ಅವರ ಸರ್ಕಾರ ತೆಗೆದುಕೊಂಡ “ಕೆಟ್ಟದಾಗಿ ಪರಿಗಣಿಸಲಾದ ನೋಟು ಅಮಾನ್ಯೀಕರಣ ನಿರ್ಧಾರ”ದ ನಂತರ ಅದರ ಅನೌಪಚಾರಿಕ ವಲಯವು ಅಸ್ತವ್ಯಸ್ತವಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ. ರಾಜ್ಯಗಳೊಂದಿಗೆ ಸರಿಯಾದ ರೀತಿಯಲ್ಲಿ ಕೇಂದ್ರ ಸರ್ಕಾರ ಸಮಾಲೋಚನೆಯನ್ನು ಮಾಡುತ್ತಿಲ್ಲ ಎಂದು ಕೂಡ ಮನಮಹೋಹನ್ ಸಿಂಗ್ ಕೇಂದ್ರ …

Read More »

ಸ್ಮಶಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಕಾಂಗ್ರೆಸ್ ಯುವ ಮುಖಂಡ ಆನಂದ ಪಾಟೀಲ

ಮಹಾಲಿಂಗಪುರ : ಸಮೀಪದ ರನ್ನಬೆಳಗಲಿ ಪಟ್ಟಣದ ಯುವ ಕಾಂಗ್ರೆಸ್ ಮುಖಂಡ ತಮ್ಮ 26ನೇ ವರ್ಷದ ಹುಟ್ಟು ಹಬ್ಬವನ್ನು ಮೂಢನಂಬಿಕೆಯನ್ನು ಹೋಗಲಾಡಿಸಬೇಕು ಎಂಬ ಒಂದು ಸಣ್ಣ ಪ್ರಯತ್ನವಾಗಿ ಸ್ಮಶಾನದಲ್ಲಿ (ರುದ್ರ ಭೂಮಿ) ಸರಳವಾಗಿ ಆಚರಿಸಿಕೊಂಡು ಗಮನ ಸೆಳೆದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಅವರ ಮೂಢನಂಬಿಕೆ ವಿರುದ್ಧ ಹಲವಾರು ಕಾರ್ಯಕ್ರಮಗಳನ್ನು ನೋಡಿ ತಾವು ಸಹ ತಮ್ಮ ಹುಟ್ಟುಹಬ್ಬ ಆಚರಣೆಯ ಮೂಲಕ ಮೂಢನಂಬಿಕೆಗೆ ಕಡಿವಾಣ ಹಾಕಬಹುದೆಂದು ತಿಳಿದು ತಮ್ಮ 26 ನೇ ವರ್ಷದ …

Read More »