Breaking News

Yearly Archives: 2021

ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್ (ತಿನಿಸು ಮಾರುಕಟ್ಟೆ) ಆರಂಭಿಸಲಾಗಿದೆ. ಇಲ್ಲಿನ ಗೋವಾ ವೇಸ್ ಬಳಿ ರಾಣಿ ಚೆನ್ನಭೈರಾದೇವಿ ಮಹಿಳಾ ಬಜಾರ ಮತ್ತು ತಿನಿಸು ಕಟ್ಟೆ ಮಳಿಗೆಗಳನ್ನು ನಿರ್ಮಾಣಮಾಡಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮವನ್ನು ರವಿವಾರ ಸಂಜೆ: 5 ಗಂಟೆಗೆ  ರಾಜ್ಯಸಭಾ ಮಾಜಿ ಸದಸ್ಯ, ಕೆ.ಎಲ್‌.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನೆರವೇರಿಸಲಿದ್ದಾರೆ.

Read More »

ರಾಮ ಮಂದಿರ ದೇಣಿಗೆ ಅಭಿಯಾನ ಸಂಪನ್ನ.ಇದುವರೆಗೆ ಸಂಗ್ರಹಗೊಂಡಿದ್ದು ಎಷ್ಟು ಕೋಟಿ ?

ಉತ್ತರಪ್ರದೇಶ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಳೆದ 44 ದಿನಗಳಿಂದ ನಡೆಯುತ್ತಿದ್ದ ದೇಣಿಗೆ ಸಂಗ್ರಹ ಅಭಿಯಾನ ಇಂದು (ಫೆ.27) ಮುಕ್ತಾಯಗೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ಗಿರಿ, ದೇಶ್ಯಾದ್ಯಂತ ನಡೆದ ಅಭಿಯಾನ ಇಂದಿಗೆ ಸಂಪನ್ನಗೊಂಡಿದೆ. ಇದುವರೆಗೆ ಮಂದಿರ ನಿರ್ಮಾಣಕ್ಕೆ ಸಂಗ್ರಹಗೊಂಡ 1900 ಕೋಟಿ ರೂ.ಗಳನ್ನು ಶ್ರೀ ರಾಮಲಲ್ಲಾ ಬ್ಯಾಂಕ್ ಖಾತೆಯಲ್ಲಿ ಜಮಾಮಾಡಲಾಗಿದೆ. ಇನ್ನೂ ಕೆಲವೊಂದು ಚೆಕ್ ಗಳ …

Read More »

ನಿವೃತ್ತ ಡಿಜಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ : ಹಣಕ್ಕೆ ಡಿಮ್ಯಾಂಡ್ ಇಟ್ಟ ದುಷ್ಕರ್ಮಿಗಳು!

ಬೆಂಗಳೂರು : ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿ ಇ ಮೇಲ್ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಶಂಕರ್ ಬಿದರಿ ಅವರ ಇ ಮೇಲ್ ಐಡಿಯನ್ನು ಹ್ಯಾಕ್ ಮಾಡಿ ಬಿದರಿ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣ ಕೇಳಿದ್ದಾರೆ. ಇದನ್ನು ನಂಬಿದ ಬಿದರಿ ಅವರ ಸ್ನೇಹಿತರೊಬ್ಬರು 25 ಸಾವಿರ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆ ಮಾಡಿದ ಬಳಿಕ ಶಂಕರ್ …

Read More »

ಅಂಬಾನಿ ಮನೆ ಬಳಿ ಮತ್ತೊಂದು ಕಾರನ್ನು ನೋಡಿದ ಪೊಲೀಸರು!

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಹತ್ತಿರ ಸ್ಫೋಟಕ ತುಂಬಿದ ಕಾರು ಪತ್ತೆಯಾದ ಸ್ಥಳದಲ್ಲಿ ಮತ್ತೊಂದು ಕಾರನ್ನು ಪೊಲೀಸರು ನೋಡಿರುವುದಾಗಿ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ. ಇದರ ವಿಚಾರಣೆ ನಡೆಯುತ್ತಿದ್ದು, ಇಲ್ಲಿಯವರೆಗೂ ಮುಂಬೈ ಅಪರಾಧ ವಿಭಾಗದ ಪೊಲೀಸರು 25 ಜನರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಂಬಾನಿ ಮನೆ ಬಳಿ ನಿಂತಿದ್ದ ಸ್ಪೋಟಕ ತುಂಬಿದ ಕಾರಿನಿಂದ ಇಳಿದ ಚಾಲಕ, ಇನ್ನೋವಾ ಕಾರಿನಲ್ಲಿ ತೆರಳುವುದು ಸಿಸಿಟಿವಿಯಲ್ಲಿ ಕಂಡುಬಂದಿದ್ದು, ಆ ಚಾಲಕನಿಗಾಗಿ ಪೊಲೀಸರ …

Read More »

ಮೊಬೈಲ್ ಬೇಕು ಅಂದ ಪ್ರೇಯಸಿ,ಸ್ನೇಹಿತನನ್ನೇ ಕೊಂದ ಪ್ರಿಯಕರ..

ತನ್ನ ಪ್ರೇಯಸಿ ಒಂದೊಳ್ಳೇ ಮೊಬೈಲ್ ಬೇಕು ಅಂತ ಕೇಳಿದ್ದಕ್ಕೆ ಪ್ರಿಯಕರ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.. ಜೀತೇಂದ್ರ ಕೊಲೆಯಾದ ವ್ಯಕ್ತಿ,ಮೋನು ಎಂಬ ವ್ಯಕ್ತಿ ಕಳೆದ ಕೆಲವುದಿನಗಳಿಂದ ಕೆಲಸ ಕಳೆದುಕೊಂಡು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕ್ಕಿದ್ದ,ಇದೇ ವೇಳೆ ತನ್ನ ಪ್ರೇಯಸಿ ಸ್ಮಾರ್ಟ್ ಫೋನ್ ಬೇಕು ಎಂದು ಕೇಳಿದ್ದಳು,ಏನೂ ಮಾಡೋದು ಎಂದು ಇದ್ದಾಗ ಮೋನುಗೆ ತನ್ನ ಸ್ನೇಹಿತ ಜೀತೇಂದ್ರ ಬಳಿ ಸ್ಮಾರ್ಟ್ ಇರೋದು ಗೊತ್ತಾಗಿದ್ದು,ಇನ್ನೊಬ್ಬ ಸ್ನೇಹಿತನ ಸಹಾಯದಿಂದ …

Read More »

ಹೆವಿ ಬ್ಯಾಡ್ಜ್ ಡಿಎಲ್ ರಿನಿವಲ್​ಗೆ ಹರಸಾಹಸ: ಸಾರಿಗೆ ಇಲಾಖೆ ಹೊಸ ನಿಯಮದಿಂದ ಚಾಲಕರಿಗೆ ಸಂಕಷ್ಟ

ಕರೊನಾ ನಂತರ ವಾಹನ ಚಾಲಕರು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಲೇ ಬಂದಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಮತ್ತೊಂದೆಡೆ ಬದುಕಿನ ಬವಣೆ. ಈ ನಡುವೆ ಡ್ರೖೆವಿಂಗ್ ಲೈಸೆನ್ಸ್ ಪರವಾನಗಿ ನವೀಕರಿಸಲು ದೂರದ ಬೆಂಗಳೂರು ಇಲ್ಲವೇ ಧಾರವಾಡಕ್ಕೆ ಹೋಗಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರುವ ಚಾಲಕರು ಈ ಹಿಂದೆ ಆಯಾ ಜಿಲ್ಲೆ ಇಲ್ಲವೇ ವಿಭಾಗೀಯ ಕೇಂದ್ರದಲ್ಲಿರುವ ಸಾರಿಗೆ ಇಲಾಖೆ ಕಚೇರಿಯಲ್ಲಿ ಚಾಲನಾ ಪರವಾನಗಿ ನವೀಕರಣ ಮಾಡಿಕೊಡಲಾಗುತ್ತಿತ್ತು. ಆದರೆ …

Read More »

ಪೊಲೀಸ್‌ ಠಾಣೆ ಬಳಿ ತುಕ್ಕು ಹಿಡಿಯುತ್ತಿವೆ ವಾಹನಗಳು

ಸುರತ್ಕಲ್: ಹಲವು ದಿನ, ತಿಂಗಳು, ವರ್ಷ ಕಳೆದರೂ ಮಾಲಕ ಬರುತ್ತಾನೋ ಇಲ್ಲವೋ. ಇನ್ನೊಬ್ಬರ ಕೈ ಸೇರಬೇಕಾ ಅಥವಾ ಹೀಗೆ ನಿಂತಲ್ಲಿಯೇ ಅವಶೇಷವಾಗಬೇಕಾ? ಸುರತ್ಕಲ್‌, ಪಣಂಬೂರು, ಕಾವೂರು ಪೊಲೀಸ್‌ ಠಾಣೆಗಳ ಮುಂದೆ, ಪಕ್ಕ ಇಲ್ಲವೇ ಠಾಣೆಗೆ ಸಮೀಪದಲ್ಲೇ ಮಾಲಕನ ಬರುವಿಕೆಗಾಗಿ ಕಾಯುತ್ತಿರುವ ನಾನಾ ರೀತಿಯ ವಾಹನಗಳ ವ್ಯಥೆಯಿದು. ಅಪಘಾತ, ಕಳ್ಳತನ, ರಸ್ತೆ ನಿಯಮ ಉಲ್ಲಂಘನೆ ಹೀಗೆ ವಿವಿಧ ಕಾರಣಗಳಿಂದ ಪೊಲೀಸರು ವಶಪಡಿಸಿಕೊಂಡ ದ್ವಿಚಕ್ರ ವಾಹನ, ಕಾರು, ಲಾರಿ, ದೋಣಿ ಇತ್ಯಾದಿಗಳು ಪೊಲೀಸ್‌ …

Read More »

ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು. ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ‌ ಅರಭಾವಿ‌‌ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು. ಕೆಎಂಎಫ್ನ ‌ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.

Read More »

ಮಾ.2ರಂದು ಅಂಗನವಾಡಿ ಕಾರ್ಯಕರ್ತರಿಂದ ‘ವಿಧಾನಸೌಧ ಚಲೋ

ಬೆಂಗಳೂರು, ಫೆ. 27: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರಕಾರದ ‘ಸಿ’ ಮತ್ತು ‘ಡಿ’ ಗ್ರೂಪ್ ನೌಕರರೆಂದು ಪರಿಗಣಿಸಬೇಕು. ಇಲಾಖೆಯು ಈ ವೃಂದಗಳ ನೌಕರರಿಗೆ ನೀಡುವ ಎಲ್ಲ ಶಾಸನಬದ್ಧ ಸೌಕರ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಮಾ.2ರಂದು ಎಐಯುಟಿಯುಸಿ ‘ವಿಧಾನಸೌಧ ಚಲೋ’ ಹಮ್ಮಿಕೊಂಡಿದೆ. ಸರಕಾರಿ ನೌಕರರಿಗೆ ಸರಿಸಮನಾಗಿ ಮಾಸಿಕ ವೇತನ ಮತ್ತಿತರ ಸೌಕರ್ಯಗಳನ್ನು ನೀಡಬೇಕು ಅಥವಾ ಕಾರ್ಯಕರ್ತೆಯರಿಗೆ 25 ಸಾವಿರ ರೂ.ಹಾಗೂ ಸಹಾಯಕಿಯರಿಗೆ 21 ಸಾವಿರ ರೂ.ಮಾಸಿಕ ವೇತನ ನೀಡಬೇಕು. ಸೇವಾ ಹಿರಿತನ …

Read More »

ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಹೊರಟ್ಟಿಯವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಟ್ಟಡದಲ್ಲಿ ಒಟ್ಟಾರೆ 36 …

Read More »