Breaking News

Yearly Archives: 2021

ಸುಧಾಕರ್ ಅವರ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡುತ್ತೇನೆ: ರೇಣುಕಾಚಾರ್ಯ

ಬೆಂಗಳೂರು (ಫೆ. 26): ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಂಪುಟ ವಿಸ್ತರಣೆಯ ಸಮಯದಿಂದಲೂ ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಮತ್ತೊಮ್ಮೆ ಸರ್ಕಾರದ ಕೆಲವು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು ತಮ್ಮದೇ ಸರ್ಕಾರದ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್​ಗಳು ಫೋನೇ …

Read More »

ಮುಷ್ಕರ ಕೈಬಿಡಿ; ಸಚಿವ ಕೆ.ಎಸ್.ಈಶ್ವರಪ್ಪ ಮನವಿ

ಬೆಂಗಳೂರು: “ಡೀಸೆಲ್ ಬೆಲೆ ಇಳಿಕೆಗೆ 6 ತಿಂಗಳಿಂದ ಮನವಿ ಮಾಡುತ್ತಿದ್ದೇವೆ. ಆದರೂ ಸಿಎಂ ಬಿ.ಎಸ್.ಯಡಿಯೂರಪ್ಪ ಡೀಸೆಲ್ ಬೆಲೆಯನ್ನು ಏಕೆ ಇಳಿಸುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ. ಇಂದು ನೈಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ,” ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮಾಲೀಕರ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದೆ. ಈ ಮುನ್ನ ಹೇಳಿಕೆ ನೀಡಿದ ರಾಜ್ಯ ಲಾರಿ ಮಾಲೀಕರ …

Read More »

ಜಿಎಸ್ ಟಿ, ತೈಲ ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್, ಮಿಶ್ರ ಪ್ರತಿಕ್ರಿಯೆ

ನವದೆಹಲಿ:ಜಿಎಸ್ ಟಿಯಲ್ಲಿ ಕೆಲವು ವಿವಾದಾತ್ಮ ಅಂಶಗಳು ತೈಲ ಬೆಲೆ ಏರಿಕೆ ಖಂಡಿಸಿ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ(ಫೆ.26, 2021) ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ಇದರಲ್ಲಿ 40 ಸಾವಿರ ವ್ಯಾಪಾರಿಗಳ ಸಂಘಟನೆಯ 8 ಕೋಟಿ ವರ್ತಕರು ಭಾಗಿಯಾಗಿದ್ದು, ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅತೀಯಾದ ‘ಮದ್ಯ’ ಸೇವನೆಯಿಂದ ‘ಸ್ತನ ಕ್ಯಾನ್ಸರ್’ ..ಮಹಿಳೆಯರೇ ಹುಷಾರ್ ಜಿಎಸ್ ಟಿ ವ್ಯವಸ್ಥೆಯಲ್ಲಿ ಇತ್ತೀಚೆಗೆ ಮಾಡಿರುವ ತಿದ್ದುಪಡಿಯನ್ನು ತೆಗೆದು ಹಾಕಬೇಕು, ತೆರಿಗೆ ಸ್ತರವನ್ನು ಇನ್ನಷ್ಟು ಸರಳೀಕರಣಗೊಳಿಸಬೇಕು, …

Read More »

ಸಿದ್ದರಾಮಯ್ಯನವರಿಗೆ ತಲೆ ಸರಿ ಇಲ್ಲ:ಈಶ್ವರಪ್ಪ ಟಾಂಗ್

ಚಿಕ್ಕೋಡಿ : ಸುಪ್ರೀಂ ಕೋರ್ಟ್​ ತೀರ್ಪಿನ ಬಳಿಕವೂ ಅಯೋಧ್ಯೆಯ ರಾಮ ಮಂದಿರ ವಿವಾದಿತ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ಕರಿಯೋಗಸಿದ್ದೇಶ್ವರ ಕನ್ನಡ ಮಾಧ್ಯಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಒಬ್ಬ ವಕೀಲ ಎಂದು ಹೇಳಿಕೊಳ್ಳಲು ಅವರಿಗೆ ನಾಚಿಕೆಯಾಗಬೇಕು. ಸುಪ್ರೀಂ ತೀರ್ಪಿನ ಬಳಿಕವೂ ರಾಮ ಮಂದಿರದ ಜಾಗ ವಿವಾದಿತ ಎಂದು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯದ …

Read More »

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ. ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆಯೋ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು …

Read More »

ಚೆನ್ನೈ-ಮಂಗಳೂರು ರೈಲಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ, ಮಹಿಳೆ ಸೆರೆ

ಕೋಯಿಕ್ಕೋಡ್: ಚೆನ್ನೈ- ಮಂಗಳೂರು ರೈಲಿನಲ್ಲಿ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಬಳಿ ಶುಕ್ರವಾರ ಭಾರಿ ಪ್ರಮಾಣದಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು ರೈಲ್ವೆ ಸಂರಕ್ಷಣಾ ಪಡೆ ಇವನ್ನು ವಶಪಡಿಸಿಕೊಂಡಿದೆ. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ವಿಭಾಗೀಯ ಭದ್ರತಾ ಆಯುಕ್ತ ಜಿತಿನ್‌ ಬಿ ರಾಜ್‌ ಅವರ ನೇತೃತ್ವದ ರೈಲ್ವೆ ಸಂರಕ್ಷಣಾ ಪಡೆಯು (ಆರ್‌ಪಿಎಫ್‌) ಶೋಧ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಅವರಿಗೆ ಮಹಿಳಾ ಪ್ರಯಣಿಕರೊಬ್ಬರ ಬಳಿ ಸ್ಫೋಟಕಗಳು ಸಿಕ್ಕಿವೆ. ‘ತಿರುವಣ್ಣಮಲೈ …

Read More »

ಬಸವಕಲ್ಯಾಣ ಉಪಚುನಾವಣೆ: ಲಕ್ಷ್ಮಣ ಸವದಿ, ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕೆ!

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. 18 ಟಿಕೆಟ್ ಆಕಾಂಕ್ಷಿಗಳ ಜೊತೆ ನಾವು ಸಭೆ ನಡೆಸಿದೆವು, ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಶುಕ್ರವಾರದಿಂದ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಪ್ರಚಾರ ಕಾರ್ಯದ ಉಸ್ತುವಾರಿಯೂ ಆಗಿರುವ ಲಕ್ಷ್ಮಣ ಸವದಿ ಹೇಳಿದ್ದಾರೆ, ಚುನಾವಣಾ ದಿನಾಂಕ ಪ್ರಕಟಿಸುವ ಮೊದಲೇ ಕ್ಷೇತ್ರದ ಎಲ್ಲಾ …

Read More »

ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು!?

ಮೈಸೂರು : ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಅಂತ್ಯವಾದ ನಂತರ ಕಾಂಗ್ರೆಸ್ ನಲ್ಲಿ ಭಿನ್ನಮತ ಶುರುವಾಗಿದೆ. ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿಗೆ ಅಪಸ್ವರ ಕೇಳಿ ಬಂದಿದೆ. ಶಾಸಕ ತನ್ವೀರ್ ಸೇಠ್‌ ಗೆ ಕೆಪಿಸಿಸಿ ವತಿಯಿಂದ ನೊಟೀಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಈ ಸಂದರ್ಭದಲ್ಲಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಕೋಮುವಾದಿ ಬಿಜೆಪಿಯನ್ನು ದೂರ ಮಾಡಲು …

Read More »

ಬಸವಕಲ್ಯಾಣ ಉಪಚುನಾವಣೆ : ಬಿಜೆಪಿಯಿಂದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕೆ?

ಬೆಂಗಳೂರು : ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು, ಅವರ ಜೊತೆಗೆ ಸಭೆ ನಡೆಸಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ. ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪಕ್ಷ …

Read More »

ಕೋವಿಡ್ ಎಂದು ಆಸ್ಪತ್ರೆಗೆ ದಾಖಲಾದ ಒಂದೇ ದಿನಕ್ಕೆ ಕೊನೆಯುಸಿರೆಳೆದ ಮಹಿಳೆ: ಬಿಲ್ ಎಷ್ಟಾಗಿತ್ತು ಗೊತ್ತಾ..?

ಕೋವಿಡ್-19 ಸೋಂಕಿಗೆ ತುತ್ತಾದ 38 ವರ್ಷದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮಾರನೇ ದಿನವೇ ಮೃತಪಟ್ಟಿದ್ದಾರೆ. ಆಕೆಯ ಅಗಲಿಕೆಯ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಬರೆಯ ರೂಪದಲ್ಲಿ ಮೂರು ಲಕ್ಷಗಳ ಆಸ್ಪತ್ರೆ ಬಿಲ್ ಬಂದಿದೆ. ಆರ್‌.ಟಿ. ನಗರದ ಮಹಿಳೆಗೆ ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಬೆನ್ನಿಗೇ, ಸೋಮವಾರದಂದು ಆಕೆಯನ್ನು ಅಸ್ಟೆರ್‌ ಸಿಎಂಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚೇತರಿಕೆ ಕಾಣದ ಆಕೆ ಮಂಗಳವಾದ ನಿಧನರಾಗಿದ್ದಾರೆ. ಇಷ್ಟರಲ್ಲಾಗಲೇ ಮೂರು ಲಕ್ಷ ರೂ.ಗಳ ಬಿಲ್‌ …

Read More »