Breaking News

Yearly Archives: 2021

ರಾತ್ರೋರಾತ್ರಿ ಕಾರ್ಯಾಚರಣೆ, ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರು ಅರೆಸ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಕ್ವಾರಿ ಮಾಲೀಕ ನಾಗರಾಜ್ ನನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್ ನನ್ನು ಬಂಧಿಸಿದ್ದಾರೆ. ನಿನ್ನೆ ನಾಲ್ವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯಾಗಿರುವ ಭ್ರಮರವಾಸಿನಿ ಕ್ರಷರ್ಸ್ ಮಾಲೀಕ ಜಿ.ಎಸ್. ನಾಗರಾಜ್ ಹಾಗೂ ಸ್ಪೋಟಕ ಸರಬರಾಜು ಮಾಡಿದ ಮತ್ತೋರ್ವ ಆರೋಪಿ ಗಣೇಶ್ ಎಂಬುವನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಸ್ಫೋಟ ಪ್ರಕರಣದ ನಂತರ ಆರೋಪಿಗಳು …

Read More »

10ನೇ ತರಗತಿ ಪಾಸಾದವರಿಗೆ Reserve Bank Of India ನಲ್ಲಿ ಉದ್ಯೋಗಾವಕಾಶ

ನವದೆಹಲಿ: RBI Vaccancies – ಭಾರತೀಯ ರಿಸರ್ವ್ ಬ್ಯಾಂಕ್ (RBI)ನಲ್ಲಿ ಉದ್ಯೋಗ (RBI Vacancies Latest News) ಮಾಡಲು ಬಯಸುವವರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. RBI ಖಾಲಿ ಇರುವ ಆಫೀಸ್ ಅಟೆಂಡೆಂಟ್ಸ್ ಹುದ್ದೆಗಳ ಭರ್ತಿಗಾಗಿ (RBI Office Attendant Recruitment 2021) ಅಧಿಕೃತ ಅಧಿಸೂಚನೆ ಜಾರಿಗೊಳಿಸಿದೆ. ಅರ್ಜಿ ಪ್ರಕ್ರಿಯೆಯನ್ನು RBI ತನ್ನ ಅಧಿಕೃತ ವೆಬ್‌ಸೈಟ್ rbi.org.in ನಲ್ಲಿ 24 ಫೆಬ್ರವರಿ 2021 ರಿಂದ ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು …

Read More »

Alert : ‘FDA ಸ್ಪರ್ಧಾತ್ಮಕ ಪರೀಕ್ಷೆ’ ಬರೆಯುತ್ತಿರುವ ‘ಅಭ್ಯರ್ಥಿ’ಗಳಿಗೆ ‘ಬಹುಮುಖ್ಯ ಸೂಚನೆ’ಗಳು ಹೀಗಿದೆ ನೋಡಿ, ತಪ್ಪದೇ ಪಾಲಿಸಿ

ಬೆಂಗಳೂರು : ಫೆಬ್ರವರಿ 28ರ, ಭಾನುವಾರದಂದು ಈಗಾಗಲೇ ಮುಂದೂಡಿಕೆಯಾಗಿದ್ದಂತ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಹಳೆಯ ಪ್ರವೇಶ ಪತ್ರ ರದ್ದು ಪಡಿಸಲಾಗಿದ್ದು, ಹೊಸ ಪ್ರವೇಶ ಪತ್ರ ಡೌನ್ ಲೋಡ್ ಗೆ ಕೆಪಿಎಸ್ಸಿ ಅನುಮತಿಸಿದೆ. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಪಾಲಿಸಬೇಕಾದಂತ ಸೂಚನೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಂತಹ ಅಭ್ಯರ್ಥಿಗಳ ಸೂಚನೆಗಳು ಈ ಕೆಳಗಿನಂತಿವೆ. ಎಫ್.ಡಿ.ಎ …

Read More »

UPSC’ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ಶಾಕ್!

ನವದೆಹಲಿ: 2020ರ ಅಕ್ಟೋಬರ್ʼನಲ್ಲಿ ಕೊನೆಯ ಪ್ರಯತ್ನ ನಡೆಸಿದ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಯುಪಿಎಸ್ ಸಿ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಆಗದ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ. ಸಿವಿಲ್ ಸರ್ವೀಸ್ ಎಕ್ಸಾಮಿನೇಷನ್ 2020ರಲ್ಲಿ ಕೊನೆಯ ಪ್ರಯತ್ನ ಮಾಡಿದ್ದ ಅರ್ಜಿದಾರರು, ಕೋವಿಡ್-19 …

Read More »

ಕ್ಷೇತ್ರದ ಸುಮಾರು ಪ್ರತಿಶತ ೯೦ ರಷ್ಟು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಹವಾಲುಗಳನ್ನು ಸ್ವೀಕರಿಸಿದ್ದೇನೆ: ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ – ಚಿಕ್ಕೋಡಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ಸುಮಾರು ಪ್ರತಿಶತ ೯೦ ರಷ್ಟು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಹವಾಲುಗಳನ್ನು ಸ್ವೀಕರಿಸಿದ್ದೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಸ್ತೆ ಸುಧಾರಣೆ, ಸಮುದಾಯ ಭವನಗಳ ನಿರ್ಮಾಣ, ಶುದ್ದ ಕುಡಿಯುವ ನೀರಿನ ಘಟಕ, ನೂತನ ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಪ.ಜಾತಿ.ಪ.ಪಂ ವಸಾಹತುಗಳಲ್ಲಿ ಚರಂಡಿ ಸಿಸಿ ರಸ್ತೆ ಸೇರಿದಂತೆ …

Read More »

ನೂರು ವರ್ಷದ ಬಳಿಕ ನಡೆಯುತ್ತಿರುವ ಹಿಂಡಲಗಾ ​ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆ

ಬೆಳಗಾವಿ​ – ನೂರು ವರ್ಷದ ಬಳಿಕ ನಡೆಯುತ್ತಿರುವ ಹಿಂಡಲಗಾ ​ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆಯ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ​ಹೆಬ್ಬಾಳಕರ್ ನೇತೃತ್ವದಲ್ಲಿ ಗ್ರಾಮಸ್ಥರು  ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.​   ​ಮಾರ್ಚ್ 16ರಿಂದ 20ರ ವರೆಗೆ ಜಾತ್ರೆ ನಡೆಯಲಿದ್ದು, ಜಾತ್ರೆಯ ಹಿನ್ನೆಲೆಯಲ್ಲಿ ಇಡೀ ಗ್ರಾಮದಲ್ಲಿ ಹ​ರ್ಷದ​​ ವಾತಾವರಣ ನಿರ್ಮಾಣವಾಗಿದೆ.​ ಜಾತ್ರಾ ಮಹೋತ್ಸವಕ್ಕೆ ಯಾವುದೇ ಅಡ್ಡಿ ಆತಂಕಗಳು, ಅಹಿತಕರ ಘಟನೆಗಳು ನಡೆಯ​ದ ಹಾಗೆ ಮುಂಜಾಗ್ರತಾ ಕ್ರಮಗಳನ್ನು ​ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಸದಸ್ಯ​ರು ಶಾಸಕಿ ಲಕ್ಷ್ಮಿ …

Read More »

ರಾಜ್ಯ ಬಿಜೆಪಿಗೆ 10 ಜನ ವಕ್ತಾರರ ನೇಮಕ: ನಳಿನ ಕುಮಾರ ಕಟೀಲು

ಬೆಂಗಳೂರು – ರಾಜ್ಯ ಬಿಜೆಪಿಗೆ 10 ಜನ ವಕ್ತಾರರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲು ಆದೇಶ ಹೊರಡಿಸಿದ್ದಾರೆ.                     ಮಂಗಳೂರಿನ ಕ್ಯಾ.ಗಣೇಶ ಕಾರ್ಮಿಕ್, ಬೆಂಗಳೂರಿನ ಜಗ್ಗೇಶ, ಯಾದಗಿರಿಯ ರಾಜೂ ಗೌಡ, ಕಲಬುರಗಿಯ ರಾಜಕುಮಾರ ಪಾಟೀಲ, ಬೆಂಗಳೂರಿನ ಚಲುವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಗಿರಿಧರ ಉಪಾಧ್ಯಾಯ, ಬೆಳಗಾವಿಯ ಪಿ.ರಾಜೀವ, ಎಂ.ಬಿ.ಜಿರಲಿ, ಮೈಸೂರಿನ ಮಹೇಶ್ ವಕ್ತಾರರಾಗಿ ನೇಮಕವಾಗಿದ್ದಾರೆ.

Read More »

ಶೇಂಗಾ ಖರೀದಿ ಮಾಡಿ ನಮ್ಮನ್ನು ಕಾಪಾಡ ಬೇಕೆಂದ ಶೇಂಗಾ ಬೆಳೆದ  ಜಿಲ್ಲೆಯ ರೈತರು

ಯಾದಗಿರಿ : ಶೇಂಗಾ ಬೆಳೆದ  ಜಿಲ್ಲೆಯ ರೈತರು ಉತ್ತಮ ದರ ಸಿಗದೆ ಪರದಾಡುವಂತಾಗಿದೆ.ನಿ ತ್ಯವೂ ಸಾವಿರಾರು ಕ್ವಿಂಟಾಲ್ ಶೇಂಗಾವನ್ನು ಹತ್ತಿಕುಣಿ, ಗುರುಮಠಕಲ್, ಬಂದಳ್ಳಿ,ಅರಕೇರಾ ಕೆ ಹಾಗೂ ಇನ್ನಿತರ ಭಾಗದಿಂದ ಹೊತ್ತು ತಂದ ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಜಿಲ್ಲೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಕಡಿಮೆ ದರಕ್ಕೆ ಶೇಂಗಾ ಖರೀದಿ ಮಾಡುತ್ತಿದ್ದಾರೆ. ಉತ್ತಮ ಬೆಲೆ ಸಿಗದೆ, ಸಿಕ್ಕ ಹಣಕ್ಕೆ ರೈತರು ಶೇಂಗಾ ಮಾರಾಟ ಮಾಡುತ್ತಿದ್ದಾರೆ. ‌ಯಾದಗಿರಿ, ಸುರಪುರ, ಶಹಾಪುರ, ವಡಗೇರಾ, ಗುರುಮಠಕಲ್, …

Read More »

ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಜೈ ಅಂದ ಸಿಂದಗಿ ನಾರಿಯರು!

ವಿಜಯಪುರ : ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರಣ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರ ಉಪಸ್ಥಿತಿಯಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲೆಯ ಸಿಂದಗಿಯಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಗೆ ಸಾರ್ವಜನಿಕರಿಂದ  ಅಭೂತಪೂರ್ವ ಪ್ರತಿಕ್ರಿಯೆ ಮತ್ತು ಸ್ಪಂದನೆ ದೊರೆತಿದೆ. ಸಿಂದಗಿ ಸಾತವಿರೇಶ್ವರ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ದೀಪ ಬೆಳಗಿಸಿ ಮಾತನಾಡಿ, …

Read More »

ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ

ಗೋಕಾಕ: ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ ವತಿಯಿಂದ ದಿ. 26 ರಂದು ಸಂಜೆ 5 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಅಸೋಸಿಯೇಷನ ಕಾರ್ಯದರ್ಶಿ ರಮೇಶ ಕಳ್ಳಿಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಈ ಸ್ಪರ್ಧೆಯಲ್ಲಿ 55, 60, 65, ಹಾಗೂ 65+ ಕೆಜಿ ದೇಹ ತೂಕದ ಸ್ಪರ್ಧಾಳುಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು …

Read More »