ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ 31 (ಜೆ) ಅಡಿ ಖಾಲಿ ಇರುವ ಉಪಕುಲಸಚಿವರು, ಸಹಾಯಕ ಕುಲಸಚಿವರು ಮತ್ತು ಕಛೇರಿ ಅಧೀಕ್ಷಕರ ಬೋಧಕೇತರ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನವೆಂಬರ್ 21 ರಂದು ಬೆಳಿಗ್ಗೆ 11 ರಿಂದ 1 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ರವರೆಗೆ ಎರಡು ಅವಧಿಗಳ ಪರೀಕ್ಷೆಯನ್ನು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಮಾಳ ಮಾರುತಿ ಬಡಾವಣೆ, ಬೆಳಗಾವಿಯಲ್ಲಿ ನಡೆಸಲಾಗಿದೆ. ಸದರಿ ದಿನದಂದು ಅರ್ಹರಾದ …
Read More »Yearly Archives: 2021
ಆನ್ ಲೈನ್ ಮೂಲಕ ಪ್ರಾದೇಶಿಕ ಸಾರಿಗೆ ಕಛೇರಿಯ ಸೇವೆಗಳು ಪ್ರಾರಂಭ
ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ನೀಡಲಾಗುತ್ತಿರುವ ಸೇವೆಗಳನ್ನು ಸಂಪರ್ಕರಹಿತ/ಭೇಟಿ ರಹಿತ (Contact less and Faceless) ಸೇವೆಗಳನ್ನಾಗಿ ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಇಲಾಖೆಯ 30 ಸೇವೆಗಳನ್ನು ಆನ್ಲೈನ್ (online) ಮುಖಾಂತರ ಪಡೆದುಕೊಳ್ಳಬಹುದು ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸೇವೆಗಳನ್ನು ಪಡೆಯಲು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ವೆಬ್ಸೈಟ್ https://parivahan.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಬಹುದಾಗಿದೆ ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಸ್.ಬಿ. ಮಗದುಮ್ಮ ಅವರು …
Read More »ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿ ಸ್ಥಾನಮಾನ ಪಡೆದ ಕರ್ನಾಟಕದ ಏಕೈಕ ಪಕ್ಷ J.D.S.: BJP TWEET
ಬೆಂಗಳೂರು: ಕುಟುಂಬ ರಾಜಕಾರಣದಲ್ಲೂ ( Family Politics ) ಮಾನದಂಡವನ್ನು ಹುಡುಕಲು ಹೊರಟರೆ ಅಲ್ಲಿಯೂ ಎಚ್ ಡಿ ದೇವೇಗೌಡರದು ( HD Devegowdha ) ಒಂದು ಆದರ್ಶ ಕುಟುಂಬ. ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿ ಸ್ಥಾನಮಾನ ಪಡೆದ ಕರ್ನಾಟಕದ ಏಕೈಕ ಪಕ್ಷ ಎಂಬ ಹೆಗ್ಗಳಿಕೆ ಪಡೆಯಲು ಕಾರಣವಾದ ನಿಮ್ಮ ಪ್ರಯತ್ನಕ್ಕೆ ಅಭಿನಂದನೆಗಳು ಎಂದು ಬಿಜೆಪಿ ತಿಳಿಸಿದೆ. ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಬಿಜೆಪಿ ಕರ್ನಾಟಕ ( BJP …
Read More »ಲಖನ್ ಜಾರಕಿಹೊಳಿ ಅವರಿಗೆB.J.P. ಟಿಕೆಟ್ ನೀಡಿಲ್ಲ, ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ..?
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ. ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. …
Read More »RTE ಶುಲ್ಕ ಮರುಪಾವತಿ’ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನ
ಬೆಂಗಳೂರು: 2021-22ನೇ ಸಾಲಿನ ಆರ್ ಟಿ ಇ ಶುಲ್ಕ ( RTE Seat School Fee ) ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ( School Education Department ) ಬಿಡುಗಡೆ ಮಾಡಿದೆ. ಈ ತಂತ್ರಾಂಶದಡಿ ಶಾಲಾ ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು, ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಹಕ್ಕು …
Read More »ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್ ಹಂಚಿಕೆಯ ಚೆಂಡು ಹೈಕಮಾಂಡ್ ಅಂಗಳಕ್ಕೆ
ಬಳ್ಳಾರಿ: ವಿಧಾನ ಪರಿಷತ್ ಚುನಾವಣೆಯ ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್ ಹಂಚಿಕೆಯ ಚೆಂಡು ಹೈಕಮಾಂಡ್ ಅಂಗಳಕ್ಕೆ ಹೋಗಿ ತಲುಪಿದೆ. ಆಕಾಂಕ್ಷಿಗಳ ಮಧ್ಯೆ ಹೆಚ್ಚಿದ ಪೈಪೋಟಿ, ಮುಖಂಡರಲ್ಲಿ ಒಮ್ಮತ ಮೂಡದಿರುವುದರಿಂದ ಅಭ್ಯರ್ಥಿ ಘೋಷಣೆಗೆ ವಿಳಂಬವಾಗುತ್ತಿದ್ದು, ಜಿಲ್ಲೆಯ ಮುಖಂಡರೊಂದಿಗೆ ಆಕಾಂಕ್ಷಿಗಳು ಸಹ ಗುರುವಾರ ದೆಹಲಿಗೆ ದೌಡಾಯಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಅ ಧಿಸೂಚನೆ ಪ್ರಕಟವಾಗಿ ಕೆಲ ದಿನ ಕಳೆದರೂ, ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಮುಖ್ಯವಾಗಿ ಕಾಂಗ್ರೆಸ್ …
Read More »ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಿದ್ದೇವೆ’; ಪಿಆರ್ಕೆ ಪ್ರೊಡಕ್ಷನ್ನಿಂದ ಭಾವುಕ ಪೋಸ್ಟ್
2017ರ ಜುಲೈ 20ರಂದು ಪಿಆರ್ಕೆ ಪ್ರೊಡಕ್ಷನ್ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್ ಹೌಸ್ನಿಂದ ಹೊರ ಬಂದ ಮೊದಲ ಸಿನಿಮಾ.ಪುನೀತ್ ರಾಜ್ಕುಮಾರ್ (Puneeth Rajkumar) ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಭೇಷ್ ಎನಿಸಿಕೊಂಡಿದ್ದಾರೆ. ಅವರು ಪಿಆರ್ಕೆ ಪ್ರೊಡಕ್ಷನ್ (PRK Production) ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್ವುಡ್ನಲ್ಲಿ ಅವರು ಎಲ್ಲರಿಂದಲೂ …
Read More »20 ಸ್ಥಾನಗಳಿಗೆ ಕಮಲಪಡೆ ಕಾದಾಟ: ಹಾಲಿ ಆರರಲ್ಲಿ ಒಬ್ಬರು ಅವಕಾಶ ವಂಚಿತ; ವಲಸಿಗರ, ಆಸೆಗೆ ತಣ್ಣೀರು
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಪ್ರಕಟಿಸಿದ್ದು, 25ರಲ್ಲಿ 20 ಸ್ಥಾನಗಳಿಗೆ ಸ್ಪರ್ಧಿಸುವ ತೀರ್ವನವೇ ಅಂತಿಮವಾಗಿದೆ. ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಬಿ.ಜಿ.ಪಾಟೀಲ್, ಮಾಜಿ ಸಿಎಂ ಜಗದೀಶ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಮತ್ತೊಮ್ಮೆ ಸ್ಪರ್ಧೆ ಅವಕಾಶ ಪಡೆದಿದ್ದಾರೆ. ಜೆಡಿಎಸ್ನ ಹಾಲಿ ಸದಸ್ಯರಾದ ಸಂದೇಶ ನಾಗರಾಜ್ ಮತ್ತು ಸಿ.ಆರ್.ಮನೋಹರ್ ಕಮಲ ಪಡೆಗೆ ಸೇರಲು …
Read More »ಪುನೀತ್ ಅಂದುಕೊಂಡಿದ್ದ ವೆಬ್ ಸೈಟ್ ಮೂಲಕ ಅಪ್ಪು ಕಂಡ ಕನಸು ನನಸಾಗಿಯೇ ಉಳಿದು ಹೋಯ್ತು. ಅಪ್ಪುಗಾಗಿ ಕಾಯುತ್ತೇನೆ ಎಂದ ಸಿಎಂ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಯ ನೋವಿನಿಂದ ಚಿತ್ರರಂಗ ನಿಧಾನವಾಗಿ ಹೊರಬರಲು ಯತ್ನಿಸುತ್ತಿದೆ. ಚಿತ್ರರಂಗದ ಒಂದೊಂದೇ ಕಾರ್ಯಕ್ರಮಗಳು ಆರಂಭ ಆಗಿವೆ. ಇಂದು (ನವೆಂಬರ್ 19) ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ‘ಮದಗಜ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪುನೀತ್ ರಾಜ್ಕುಮಾರ್ ಅವರಿಗೆ ನಮಿಸಿ ಕಾರ್ಯಕ್ರಮವನ್ನು ಆರಂಭ ಮಾಡಲಾಯಿತು. ಈ ವೇಳೆ ಮತ್ತೆ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ಕುಮಾರ್ ಅವರ …
Read More »ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 63 ಲಕ್ಷ ರೂಪಾಯಿ ಮೌಲ್ಯದ ನಕಲಿ ಛಾಪಾ ಕಾಗದ (stamp papers) ವಶಕ್ಕೆ ಪಡೆದಿದ್ದಾರೆ. ಹೈಕೋರ್ಟ್ (High court) ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್ಐಟಿ (SIT) ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಸದ್ಯ ವಿಚಾರಣೆಗೊಳಪಡಿಸಲಾಗಿದೆ. ನಕಲಿ …
Read More »