Breaking News

Yearly Archives: 2021

ಪಿಎಂ ಕೇರ್ಸ್​ ಲೆಕ್ಕವನ್ನೇ ಕೊಡದವರು ರಾಮ ಮಂದಿರ ಹಣದ ಲೆಕ್ಕಾ ಕೊಡ್ತಾರ?; ಸಿದ್ದರಾಮಯ್ಯ

ಬೆಂಗಳೂರು (ಫೆಬ್ರವರಿ 16); ಕೊರೋನಾ ಸಂದರ್ಭದಲ್ಲಿ ಜನರಿಂದ ಸಂಗ್ರಹಿಸಲಾದ ಪಿಎಂ ಕೇರ್ಸ್​ ಹಣದ ಲೆಕ್ಕವನ್ನೇ ಕೊಡದವರು, ಇದೀಗ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲು ಮುಂದಾಗಿರುವ ಹಣದ ಲೆಕ್ಕ ಕೊಡ್ತಾರಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ ನೀಡುತ್ತಿದ್ದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು. ಅಲ್ಲದೆ, ದೇವಾಲಯ …

Read More »

ಐವರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ‌‌. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು …

Read More »

ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …

Read More »

ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಗದಗ: ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು.   ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು …

Read More »

ಏರುತ್ತಿದೆ ಕೊರೊನಾ ಪ್ರಕರಣ; ಮುಂಬೈನಲ್ಲಿ ಮತ್ತೊಂದು ಲಾಕ್ ಡೌನ್?

ಮುಂಬೈ, ಫೆಬ್ರುವರಿ 16: ಮುಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನ ಕೆಲವು ಪ್ರದೇಶಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಕುರಿತು ಚರ್ಚೆ ನಡೆದಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೀಗೇ ಹೆಚ್ಚುತ್ತಿದ್ದರೆ, ರಾಜ್ಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಬಹುದು ಎಂದು ಎರಡು ದಿನಗಳ ಹಿಂದೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಬೃಹತ್ ಮುಂಬೈ ಮುನಿಸಿಪಾಲ್ ಕಾರ್ಪೊರೇಷನ್ ಮೇಯರ್ ಕಿಶೋರಿ ಪೆಡ್ನೇಕರ್, “ಜನರು …

Read More »

ಮೀಸಲಾತಿ ಹೋರಾಟಗಳು ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು: ಕುಮಾರಸ್ವಾಮಿ

ಶಿವಮೊಗ್ಗ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮೀಸಲಾತಿ ಬೇಡಿಕೆ ಹೋರಾಟಗಳು ಭವಿಷ್ಯದಲ್ಲಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಸಿದರು. ಮೀಸಲಾತಿಯ ವಾಸ್ತವಾಂಶ ಅಧಿಕಾರದಲ್ಲಿ ಇರುವ ಸರ್ಕಾರಕ್ಕೇ ಅರ್ಥವಾಗಿಲ್ಲ. ಅಂಬೇಡ್ಕರ್ ತಲತಲಾಂತದಿಂದ ಅಪಮಾನ, ತುಳಿತಕ್ಕೆ ಒಳಗಾದವರಿಗೆ, ಅವರು ಸಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವಾಗಲು ಮೀಸಲಾತಿ ಬೇಕೆಂದರು. ಇಂದು ಸರ್ಕಾರದ ಸಚಿವರು, ಶಾಸಕರೇ ತಮ್ಮ ಜಾತಿಗಳ ಪರ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಸಂಪುಟ ಸಭೆಯಲ್ಲೇ ನಿರ್ಧರಿಸಬಹುದಾದ ವಿಷಯವನ್ನು ಬೀದಿಗೆ …

Read More »

ಶ್ರೀಮಂತ ರೈತ..! ಹೆಲಿಕಾಪ್ಟರ್ ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಹಾಲು ಉತ್ಪಾದಕ..!!

ಭಿವಾಂಡಿ: ಮಹಾರಾಷ್ಟ್ರದ ಭಿವಾಂಡಿಯ ರೈತ ಮತ್ತು ಉದ್ಯಮಿ ಜನಾರ್ಧನ್ ಭೋಯಿರ್ ಅವರು 30 ಕೋಟಿ ರೂಪಾಯಿಯ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಹಾಲು ಉತ್ಪಾದಕರಾಗಿರುವ ಜನಾರ್ಧನ್ ಡೈರಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ದೇಶದ ವಿವಿಧ ನಗರಗಳಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದರಿಂದ ತಮ್ಮ ಪ್ರವಾಸ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಡೈರಿ ವ್ಯವಹಾರಗಳಿಗೆ ಆಗಾಗ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಗೆಪ್ರಯಾಣಿಸಬೇಕಿದೆ. ನಾನು ಭೇಟಿ ನೀಡಲಿರುವ ಎಲ್ಲಾ ನಗರಗಳಲ್ಲಿ ವಿಮಾನ ನಿಲ್ದಾಣಗಳು ಇರುವುದಿಲ್ಲ. …

Read More »

ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ

ಗಂಗಾವತಿ: ಕೃಷಿಯಲ್ಲಿ ಆಧುನಿಕ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳುತ್ತಿದ್ದು ಕೂಲಿಕಾರರ ಕೊರತೆಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ಭಾಗದಲ್ಲಿ ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆಯ ಮೂಲಕ ಶೇ.50 ರಷ್ಟು ಖರ್ಚು ಉಳಿತಾಯ ಮಾಡಲಾಗುತ್ತಿದೆ. ಒಂದು ಎಕರೆ ಭತ್ತದ ಗದ್ದೆಗೆ ಕ್ರಿಮಿನಾಶಕ ಸಿಂಪರಣೆಗೆ ನಾಲ್ಕು ಕೂಲಿ ಕಾರ್ಮಿಕರು ಬೇಕಾಗುತ್ತದೆ. ಸಹಜವಾಗಿ ಒಂದು ಲೀಟರ್ ಕ್ರಿಮಿನಾಶಕ ಒಂದು ಎಕರೆಗೆ ಸಿಂಪರಣೆ ಮಾಡಲಾಗುತ್ತದೆ.‌ ಆದರೆ ಡ್ರೋಣ್ ಮೂಲಕ ಒಂದು ಲೀಟರ್ ನಲ್ಲಿ ಎರಡು ಎಕರೆ …

Read More »

‘ರಾಬರ್ಟ್’ ಸಿನಿಮಾದ ಟ್ರೈಲರ್ ಔಟ್..!

ಸಾರಥಿ, ದಾಸ, ಡಿ ಬಾಸ್, ಚಾಲೆಂಜಿಂಗ್ ಸ್ಟಾರ್ ಎಂದೆಲ್ಲಾ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಲ್ಪಡುವ ದರ್ಶನ್ ಇಂದು 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಹುಟ್ಟುಹಬ್ಬದ ವಿಶೇಷವಾಗಿ ಇಂದು ‘ರಾಬರ್ಟ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಬಿಡುಗಡೆಯಾಗಿ 20 ನಿಮಿಷಗಳ ಅವಧಿಯಲ್ಲಿ ಸುಮಾರು 3.50 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 2:20 ನಿಮಿಷ ಅವಧಿಯ ಟ್ರೇಲರ್​​​ “ನನ್ನನ್ನು ಸಂಹಾರ ಮಾಡ್ತೀನಿ ಅಂತ ಬರೋನು ನನಗಿಂತ ದೊಡ್ಡ ಕ್ರಿಮಿನಲ್ ಆಗಿರಬೇಕು” ಎಂಬ ಧ್ವನಿಯಿಂದ …

Read More »

ಬಾಲಿವುಡ್​ಗೆ ರವಿ ಬಸ್ರೂರು

ಬೆಂಗಳೂರು: ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್​ಗೂ ಕಾಲಿಟ್ಟಿದ್ದಾರೆ. ಬಾಲಿವುಡ್​ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ …

Read More »