Breaking News

Yearly Archives: 2021

ಪಕ್ಷ ಬಯಸಿದ್ರೆ ಗೋಕಾಕ್​ನಿಂದ ನಾನೇ ಸ್ಪರ್ಧೆ ಮಾಡುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಪಕ್ಷ ಬಯಸಿದ್ರೆ ಗೋಕಾಕ್​ನಿಂದ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಟಾಂಗ್​ ಕೊಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಮೇಶ ಜಾರಕಿಹೊಳಿ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ ಎಂದಿದ್ದಾರೆ. ಗ್ರಾಮ ಪಂಚಾಯತಿ ಸದಸ್ಯರಿಗೆ …

Read More »

‘ಮಿಠಾಯಿ ಕಂಡ ಮಗುವಿನಂತಾಗಿರುವ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್’

ಮೈಸೂರು: ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನೋಡಿದಾಗ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಪಡೆಯಬೇಕೆಂದು ಚಡಪಡಿಸುತ್ತಾರೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ಸೋಲನ್ನು ಒಪ್ಪಿಕೊಳ್ಳುವುದಕ್ಕೆ ಸಿದ್ದರಾಮಯ್ಯ ಸಿದ್ಧರಿಲ್ಲ, ಅವರದು ಕಾಂಗ್ರೆಸ್ ಸಂಸ್ಕಾರ, ಸಂಸ್ಕೃತಿ …

Read More »

ಸಿದ್ದರಾಮಯ್ಯರ ಅಹಿಂದ ಲೆಕ್ಕಾಚಾರಕ್ಕೆ ಸತೀಶ ಜಾರಕಿಹೊಳಿ ಹೇಳಿದ್ದೇನು..?

ಕಾಂಗ್ರೆಸ್ ಪಕ್ಷ ಇರೋದೆ ಅಹಿಂದ್ ಬೇಸ್ ಮೇಲೆ, ಹೀಗಾಗಿ ಮತ್ತೆ ಅಹಿಂದ ಸಮಾವೇಶ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅಹಿಂದ ಸಮಾವೇಶ ನಡೆಸುತ್ತಾರೆ ಎಂಬ ಚರ್ಚೆ ಕೇಳಿ ಬರುತ್ತಿರುವ ವಿಚಾರಕ್ಕೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ ಜಾರಕಿಹೊಳಿ ಈ ಬಗ್ಗೆ ಎಲ್ಲಿಯೂ ಚರ್ಚೆ ಆಗಿಲ್ಲ, ಅಹಿಂದ ಚಳುವಳಿ ಎಲ್ಲಿಯೂ ಇಲ್ಲವೇ ಇಲ್ಲ, ಯಾಕೆಂದರೆ ಕಾಂಗ್ರೆಸ್ ಪಕ್ಷ ಇರೋದೇ …

Read More »

A.B.V.P.ಅಧ್ಯಕ್ಷರಾಗಿದ್ದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು..?

೪೦ ವರ್ಷದ ಎಬಿವಿಪಿಗೂ, ಜನಸಂಘಕ್ಕೂ ಈಗಿನ ಆರ್‌ಎಸ್‌ಎಸ್, ಬಿಜೆಪಿಗೂ ಸಾಕಷ್ಟು ವ್ಯತ್ಯಾಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.  ಸತೀಶ ಜಾರಕಿಹೊಳಿ ಎಬಿವಿಪಿ ಅಧ್ಯಕ್ಷರಾಗಿದ್ದರು ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಯಿಸಿದ ಸತೀಶ ಜಾರಕಿಹೊಳಿ ೪೦ ವರ್ಷದ ಎಬಿವಿಪಿ, ಆರ್‌ಎಸ್‌ಎಸ್, ಜನಸಂಘಕ್ಕೂ ಬಿಜೆಪಿಗೂ ಯಾವುದೇ ರೀತಿ ಸಂಬAಧ ಇಲ್ಲ. ಮೊದಲು ಜನಸಂಘದ ಕಾರ್ಯಕ್ರಮ ನೋಡಲು ಇಡೀ ಊರಿಗೆ ಊರೇ ಹೋಗುತ್ತಿತ್ತು. ಹೀಗಾಗಿ ಬಹಳಷ್ಟು ವ್ಯತ್ಯಾಸವಾಗಿದೆ, ಹೋರಾಟ, …

Read More »

ರಾಮ ಮಂದಿರದ ಹೆಸರಲ್ಲಿ ವಂಚಿಸುತ್ತಿದ್ದ ದುಷ್ಕರ್ಮಿಗಳ ಬಂಧನ

ಕಾನಪುರ: ಒಳ್ಳೆಯ ಕೆಲಸದ ಹೆಸರಲ್ಲಿ ಜನರನ್ನು ವಂಚಿಸಲು ದುಷ್ಕರ್ಮಿಗಳು ಸದಾ ಸಿದ್ಧವಿರುತ್ತಾರೆ. ಇದೀಗ ಅಯೋಧ್ಯೆಯಲ್ಲಿ ಕಟ್ಟಲು ಯೋಜಿಸಲಾಗಿರುವ ಭವ್ಯ ರಾಮ ಮಂದಿರದ ಹೆಸರಲ್ಲಿ ಕೂಡ ವಂಚನೆಗೆ ತೊಡಗಿರುವುದು ಬೆಳಕಿಗೆ ಬಂದಿದೆ. ಈ ರೀತಿಯ ಎರಡು ಪ್ರಯತ್ನಗಳನ್ನು ಉತ್ತರ ಪ್ರದೇಶ ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಉತ್ತರಪ್ರದೇಶದ ಕಾನಪುರದಲ್ಲಿ ಚಂದ್ರಪ್ರಕಾಶ್ ತ್ರಿಪಾಠಿ ಮತ್ತು ಅಶೋಕ್ ರಾಜಪೂತ್ ಎಂಬುವರು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವುದಾಗಿ ಜನರಿಂದ ಹಣ ಪಡೆಯುತ್ತಿದ್ದರು. …

Read More »

ತುಳು ಚಿತ್ರ ನಿರ್ದೇಶಕನಿಗೆ ಕನ್ನಡ ನಟಿಯಿಂದ ಮೋಸ

ಮಂಗಳೂರು : ತುಳು ಚಿತ್ರ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಇವರಿಗೆ ನೀಡಿದ 40 ಲಕ್ಷ ರೂ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಪದ್ಮಜಾ ರಾವ್‌ಗೆ ಮಂಗಳೂರಿನ ಜೆಎಂಎಫ್‌ಸಿ ಐದನೇ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ನೀಡಿದೆ. ವೀರೇಂದ್ರ ಶೆಟ್ಟಿ ಕಾವೂರು ಕನ್ನಡದ ಚಿತ್ರರಂಗದ ನಟಿ ಪದ್ಮಾಜಾ ರಾವ್ ವಿರುದ್ಧ ಮಂಗಳೂರಿನ ಕೋರ್ಟ್‌ನಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ಎರಡು ವರ್ಷಗಳ ಹಿಂದೆ ಪದ್ಮಜಾ ರಾವ್, …

Read More »

ದರ್ಶನ್ ಹುಟ್ಟುಹಬ್ಬದ ದಿನ ರಾಬರ್ಟ್ ಟ್ರೈಲರ್ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ರೋಬೋಟ್ ಚಿತ್ರದ ಎಂದು ಅಧಿಕೃತ ಮಾಹಿತಿಯನ್ನು ಚಿತ್ರತಂಡ ಹೊರಡಿಸಿದೆ. ಫೆಬ್ರವರಿ 16 ದರ್ಶನ್ ಅವರ ಹುಟ್ಟಿದ ದಿನವಾಗಿದ್ದು ಅಂದೇ ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಟ್ರೈಲರ್ ನನ್ನ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿದೆ. ಮಾರ್ಚ್ 11ರಂದು ಈ ಸಿನಿಮಾ ರಿಲೀಸ್ ಆಗುತ್ತಿದ್ದು ಈ ಚಿತ್ರದ ಟ್ರೈಲರ್ ಗಾಗಿ ದರ್ಶನ್ …

Read More »

ಮೀಸಲಾತಿ ‘ಬಲೆ’ಯಲ್ಲಿ ಸಿಲುಕಿ ಯಡಿಯೂರಪ್ಪ ಸರ್ಕಾರ ವಿಲವಿಲ..!

ಬೆಂಗಳೂರು, ಫೆ.12- ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿರುವುದು ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಒಂದೆಡೆ ಕುರುಬರು ಎಸ್ಟಿಗೆ ಸೇರಿಸಲು ಶಕ್ತಿ ಪ್ರದರ್ಶನ ತೋರುತ್ತಿದ್ದರೆ, ಇತ್ತ ಪಂಚಮಸಾಲಿ ಲಿಂಗಾಯತರು 2ಎ ಮೀಸಲಾತಿಗೆ ಪಟ್ಟು ಹಿಡಿದಿದ್ದಾರೆ. ಇನ್ನು ವಾಲ್ಮಿಕಿ ಸಮುದಾಯದವರು ಮೀಸಲಾತಿ ಹೆಚ್ಚಿಸುವಂತೆ ಪಟ್ಟು ಹಿಡಿದಿದ್ದಾರೆ.ಎಸ್ಟಿ ಮೀಸಲಾತಿ ಶೇ.7.5ರಷ್ಟು ಹೆಚ್ಚಿಸುವ ಸಂಬಂಧ ಸರ್ಕಾರದ ಮೇಲೆ ನಾನಾ ಸಮುದಾಯಗಳು ಒತ್ತಡ ಹೇರುತ್ತಿವೆ. ಪ್ರಸ್ತುತ ಕನಿಷ್ಠ 8 …

Read More »

ಈ ಬಾರಿಯ ಬಜೆಟ್‍ನಲ್ಲಿ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನವನ್ನು ಶೇ.10ರಿಂದ 15ರಷ್ಟು ಕಡಿತಗೊಳಿಸಲು ತೀರ್ಮಾನ:B.S.Y.

ಬೆಂಗಳೂರು, ಫೆ.12- ರಾಜ್ಯದಲ್ಲಿ ಈ ಬಾರಿ ಕೋವಿಡ್-19 ಬಂದ ಹಿನ್ನೆಲೆ ಎಲ್ಲಾ ಚಟುವಟಿಕೆಗಳು ಸ್ತಬ್ಧಗೊಂಡು ಬೊಕ್ಕಸಕ್ಕೆ ಆದಾಯ ಕುಸಿತಗೊಂಡಿರುವ ಕಾರಣ ಈ ಬಾರಿಯ ಬಜೆಟ್ ಗಾತ್ರ ಹಾಗೂ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನ ಕಡಿತವಾಗಲಿದೆ. ಮಾರ್ಚ್ 5ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಆದಾಯ ಸಂಪನ್ಮೂಲ ಕ್ರೂಢೀಕರಣವೇ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಲಾಕ್‍ಡೌನ್ ತೆರವುಗೊಳಿಸಿದ ನಂತರ ಸರ್ಕಾರದ ಬೊಕ್ಕಸಕ್ಕೆ ಆದಾಯ …

Read More »

ಪಡಿತರದಲ್ಲಿ ರಾಗಿ ಮತ್ತು ಜೋಳ ನೀಡುವಂತೆ ಕೇಂದ್ರ ಸಚಿವರಲ್ಲಿ ಕತ್ತಿ ಮನವಿ

ಬೆಂಗಳೂರು, ಫೆ.12- ಕಡಿತ ಮಾಡಲಾದ ಪಡಿತರಕ್ಕೆ ಪರ್ಯಾಯವಾಗಿ ರಾಗಿ ಮತ್ತು ಜೋಳವನ್ನು ವಿತರಿಸುವಂತೆ ಸಚಿವ ಉಮೇಶ್ ಕತ್ತಿ ಕೇಂದ್ರ ಆಹಾರ ಸಚಿವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರನ್ನು ಭೇಟಿ ಮಾಡಿದ ಅವರು ಭೇಟಿ ಮಾಡಿ ಚರ್ಚಿಸಿದ ಅವರು ಪ್ರಸ್ತುತ ಪಡಿತರ ಸರಬರಾಜು ವ್ಯವಸ್ಥೆಯಲ್ಲಿ ಅಕ್ಕಿ, ಗೋ ವಿತರಣೆ ಕಡಿತಗೊಳಿಸಿದ ಪ್ರಮಾಣಕ್ಕೆ ಪರ್ಯಾಯವಾಗಿ ರಾಗಿ, ಜೋಳ, ಸ್ಥಳೀಯ …

Read More »