Breaking News

Yearly Archives: 2021

ಸರ್ಕಾರದ ಆದೇಶ ಇಲ್ಲದಿದ್ರೂ ಯಾದಗಿರಿಯಲ್ಲಿ 1-5 ನೇ ತರಗತಿ ಆರಂಭ

ಯಾದಗಿರಿ: ಸರ್ಕಾರದ ಆದೇಶ ಇಲ್ಲದಿದ್ರೂ ಯಾದಗಿರಿಯಲ್ಲಿ ಸದ್ದಿಲ್ಲದೆ 1 ರಿಂದ 5 ನೇ ತರಗತಿ ನಡೆಯುತ್ತಿವೆ. ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಕೆಲ ಖಾಸಗಿ ಶಾಲೆಗಳು ತರಗತಿ ಆರಂಭಿಸಿ, ಮುಗ್ಧ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿವೆ. ಯಾದಗಿರಿ ನಗರದ ಸಪ್ತಗಿರಿ, ನವನಂದಿ, ಆರ್ ವಿ ಸೇರಿದಂತೆ ಬಹುತೇಕ ಖಾಸಗಿ ಶಾಲೆಗಳಲ್ಲಿ ಗಪ್ ಚುಪ್ ಆಗಿ ಕ್ಲಾಸ್ ಆರಂಭವಾಗಿವೆ. ಕ್ಲಾಸ್ ರೂಮ್ ಗಳಲ್ಲಿ ಯಾವುದೇ ಮಕ್ಕಳ ಮಧ್ಯೆ ಸಾಮಾಜಿಕ ಅಂತರ, ಮಾಸ್ಕ್ …

Read More »

ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.

ಹುಬ್ಬಳ್ಳಿ: ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಕುಟುಂಬಸ್ಥರೆಲ್ಲಾ ಸೇರಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.ಸಾಮಾನ್ಯವಾಗಿ ಮೊದಲ ಬಾರಿಗೆ ಗರ್ಭವತಿಯಾದ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡುವುದನ್ನು ನೋಡಿದ್ದೇವೆ. ಆದರೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿರುವ ಕುಟುಂಬವೊಂದು ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಇದೀಗ ಎಲ್ಲರ ಗಮನ ಸೆಳೆದಿದೆ. ಗ್ರಾಮದ ಸಾರಿಗೆ ನೌಕರ ರಮೇಶ್ ಪಡತೇರ್ ಎಂಬವರು ತಮ್ಮ ಮನೆಗೆ ಕಳೆದ ವರ್ಷ ಶ್ವಾನವೊಂದನ್ನು ತಗೆದುಕೊಂಡು ಬಂದಿದ್ದರು. ಅದಕ್ಕೆ ಲೂಸಿ …

Read More »

ಅಸೆಂಬ್ಲಿ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ: ಸಿದ್ದರಾಮಯ್ಯ

ಬೆಂಗಳೂರು: ಕಲಾಪ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಸಚಿವರು ಹಾಗೂ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಗರಂ ಆದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೀತಿದೆ. ಇಂತಹ ಸಂದರ್ಭದಲ್ಲಿ ಸಚಿವರು, ಅಧಿಕಾರಿಗಳು ಇರಬೇಕು. ಇವರು ಇಲ್ಲದೆ ಚರ್ಚೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೀಗಂದ ಕೂಡಲೇ ಡಿಸಿಎಂ ಗೋವಿಂದ ಕಾರಜೋಳ ಎದ್ದು ನಿಂತು …

Read More »

5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ಒಂದು ಸಾವಿರ ರೂ. ದಂಡ

ಅರಸಿಕೆರೆ – ಪ್ರಯಾಣಿಕರೊಬ್ಬರಿಂದ 5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಂದು ಸಾವಿರ ರೂ. ದಂಡ ವಿಧಿಸಿದೆ. ಸೋಮಶೇಖರ ಎನ್ನುವವರು ಅರಸಿಕೆರೆಯಿಂದ ತಿಪಟೂರಿಗೆ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. 35 rs. ಟಿಕೆಟ್ ಗೆ 10 ರೂ.ಗಳ 3 ನೋಟು ಮತ್ತು 5 ರೂ.ಗಳಒಂದು ನೋಟನ್ನು ಅವರು ನೀಡಿದರು. ಆದರೆ 5 ರೂ. ನೋಟನ್ನು ನಿರಾಕರಿಸಿದ ಕಂಡಕ್ಟರ್ ಗಲಾಟೆ …

Read More »

ದೆಹಲಿ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಪೂಜಾರಿ ಒತ್ತಾಯ

ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ರಾಜಕೀಯದ ಬಣ್ಣಕೊಡುತ್ತಿರುವುದು ದುರ್ದೈವದ ಸಂಗತಿ ಎಂದು ಜೆ‌ಡಿಎಸ್ ಮುಖಂಡ ಅಶೋಕ ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಯಾವುದೇ ಪ್ರತಿಭಟನೆಗಳಲ್ಲಿ ನಡೆಯುವ ಹಿಂಸಾಕೃತ್ಯಗಳು ಅಕ್ಷಮ್ಯ ಮತ್ತು ಖಂಡನೀಯ. ದೆಹಲಿಯಲ್ಲಿ ಜ.26 ರಂದು ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಕಾಣದ ಕೈಗಳು ದುಷ್ಕೃತ್ಯ ನಡೆಸಿವೆ ಎಂಬ ಅನುಮಾನ ಕಂಡುಬರುತ್ತಿದೆ. …

Read More »

ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

ಬೆಂಗಳೂರು, : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆನ್ನಲಾದ ಚಿಂತಕ, ಹಿರಿಯ ಸಾಹಿತಿ ಕೆ.ಎಸ್ ಭಗವಾನ್ ಅವರ ಮುಖಕ್ಕೆ ಬಿಜೆಪಿ ಕಾರ್ಯಕರ್ತೆ, ವಕೀಲೆಯೊಬ್ಬರು ಮಸಿ ಬಳಿದ ಘಟನೆ ನಗರದ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಇಂದು ಮದ್ಯಾಹ್ನ ನಡೆದಿದೆ. ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಈ ಕೃತ್ಯ ಎಸಗಲಾಗಿದೆ ಎಂದು …

Read More »

ಮಹಿಳೆಗೆ ಚೂಡಾಯಿಸಿದ ಆರೋಪ ಮರಕ್ಕೆ ಕಟ್ಟಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ.

ಗೋಕಾಕ ಬ್ರೇಕಿಂಗ್   ಸಂಗನಕೇರಿ ಗ್ರಾಮದ ಗೋಕಾಕ್ ರಸ್ತೆಯಲ್ಲಿ ನಡೆದಿರುವ ಘಟನೆ. ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮ ಹನುಮಂತ ಹಿರೇಮಠ ಎಂಬ ಯುವಕನನ್ನು ತೆಂಗಿನ ಮರಕ್ಕೆ ಕಟ್ಟಿ ಥಳಿತ *ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಚೂಡಾಯಿಸಿದ ಆರೋಪ *ತೆಂಗಿನಮರಕ್ಕೆ ಯುವಕನ ಕಟ್ಟಿ ಥಳಿಸುತ್ತಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ …

Read More »

ಶಿವಳ್ಳಿ ಗ್ರಾಮ ಪಂಚಾಯತಿ “ಕೈ” ಪಾಲು..!

ಧಾರವಾಡ: ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷದ ಬಲ ಹೆಚ್ಚಿದಂತಾಗಿದೆ.           ಶಿವಳ್ಳಿ ಗ್ರಾಮದ ಮೂರನೇಯ ವಾರ್ಡಿನಲ್ಲಿ ಜಯ ಗಳಿಸಿದ ವಿಜಯಮಹಾಂತೇಶ ಶಿವಲಿಂಗಯ್ಯ ವಸ್ತ್ರದ ಅವರು ಅಧ್ಯಕ್ಷರಾಗಿಯೂ, ಉಪಾಧ್ಯಕ್ಷರಾಗಿ ಶಂಕರೆವ್ವ ಈಶ್ವರಪ್ಪ ಸಣ್ಣಮುದ್ದಿಯವರು ಅವಿರೋಧವಾಗಿ ಆಯ್ಕೆಯಾದರು.   ಶಿವಳ್ಳಿ ಪಂಚಾಯತಿಯಲ್ಲಿ ಒಟ್ಟು ಒಂಬತ್ತು ಸದಸ್ಯರ ಬಲ ಹೊಂದಿದ್ದು, ಅತೀ ಹೆಚ್ಚು ಸದಸ್ಯರು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ-ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ವಿಸ್ತರಣೆ..!

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಮಾವನವರಾದ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನವನ್ನ ಮತ್ತೆ ಹದಿನಾಲ್ಕು ದಿನಗಳವರೆಗೆ ಮುಂದೂಡಿ ಆದೇಶ ಮಾಡಲಾಗಿದೆ. ನವೆಂಬರ್ 5ರಂದು ಬಂಧನವಾಗಿರುವ ವಿನಯ ಕುಲಕರ್ಣಿ ಹಾಗೂ ಕೆಲವು ದಿನಗಳ ಹಿಂದೆ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಚಂದ್ರಶೇಖರ ಇಂಡಿಯವರನ್ನ ಕಾರಾಗೃಹದಲ್ಲಿ ಇಡಲಾಗಿದ್ದು, ಇಂದು ಮತ್ತೆ 14 ದಿನದ ನ್ಯಾಯಾಂಗ ಬಂಧನವನ್ನ …

Read More »

ಬೆಳಗಾವಿಯಲ್ಲಿ ಸೇನಾ ಭರ್ತಿ ರ್ಯಾಲಿ ಆರಂಭ

ಬೆಳಗಾವಿ: ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಫೆ.4ರಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ …

Read More »