Breaking News

Yearly Archives: 2021

ಆಕರ್ಷಕ ತುಟಿಗಳನ್ನು ಪಡೆಯಲು ಹೀಗೆ ಮಾಡಿ

ತುಟಿಗಳು ಉಬ್ಬಿಕೊಂಡಿದ್ದರೆ ಅದು ಅಂದವಾಗಿ ಕಾಣುತ್ತದೆ ಮತ್ತು ನಿಮ್ಮ ಚೆಂದ ಕೂಡ ಹೆಚ್ಚಾಗುತ್ತದೆ. ಹಾಗೇ ಉಬ್ಬಿದ ತುಟಿಗಳಿಗೆ ತುಂಬಾ ಸುಲಭವಾಗಿ , ನೀಟಾಗಿ ಲಿಪ್ ಸ್ಟಿಕ್ ಹಚ್ಚಬಹುದು. ಆದರೆ ಕೆಲವರ ತುಟಿಗಳು ಚಿಕ್ಕದಾಗಿ, ಚಪ್ಪಟೆಯಾಗಿರುತ್ತದೆ. ಅಂತವರು ನಿಮ್ಮ ತುಟಿಗಳು ಉಬ್ಬಿಕೊಳ್ಳಲು ಹೀಗೆ ಮಾಡಿ. *ನೀವು ಸ್ನಾನ ಮಾಡುವ ಮೊದಲು ತುಟಿಗಳಿಗೆ ಪೆಟ್ರೋಲಿಯಂ ಜೆಲ್ಲಿ ಹಚ್ಚಿ ಸ್ನಾನ ಮಾಡಿ. ಆದರೆ ತುಟಿಗಳಿಗೆ ಹಚ್ಚಿದ ಪೆಟ್ರೋಲಿಯಂ ಜೆಲ್ಲಿಯನ್ನು ಅಳಿಸಬೇಡಿ. ಇದರಿಂದ ಬಿಸಿ ನೀರಿನ …

Read More »

ಮಾನ, ಮರ್ಯಾದೆ, ಲಜ್ಜೆ ಮೂರೂ ಬಿಟ್ಟಿರುವ ಪಕ್ಷವೇನಾದರೂ ಇದ್ದರೆ ಅದು ಬಿಜೆಪಿ ಮಾತ್ರ – ಕಾಂಗ್ರೆಸ್ ಕಿಡಿ

ಬೆಂಗಳೂರು : ಮಾನ, ಮರ್ಯಾದೆ, ಲಜ್ಜೆ ಮೂರೂ ಬಿಟ್ಟಿರುವ ಪಕ್ಷವೇನಾದರೂ ಇದ್ದರೆ ಅದು ಕರ್ನಾಟಕ ಬಿಜೆಪಿ ಮಾತ್ರ. ನಾಡಿಗೆ ಹಸಿವಿನ ಚಿಂತೆ, ಯುವಕರಿಗೆ ಉದ್ಯೋಗದ ಚಿಂತೆ, ರೈತರಿಗೆ ಬದುಕಿನ ಚಿಂತೆ,ಸರ್ಕಾರಕ್ಕೆ ಮಾತ್ರ ಲೂಟಿಯದ್ದೇ ಚಿಂತೆಯಾಗಿದೆ. ದಿನಕ್ಕೆ ಎರೆಡೆರೆಡು ಭಾರಿ ಖಾತೆ ಬದಲಾವಣೆ ಮಾಡುತ್ತಾ, ಅಭಿವೃದ್ಧಿ ಮರೆತ ಬಿಜೆಪಿಯಿಂದ ರಾಜ್ಯ ನಲುಗುತ್ತಿದೆ ಎಂಬುದಾಗಿ ಕಾಂಗ್ರೆಸ್ ಕಿಡಿ ಕಾರಿದೆ. ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸರಣಿ ಟ್ವಿಟ್ ಮಾಡಿದ್ದು, ಎಪಿಎಂಸಿ ಮುಚ್ಚಿ …

Read More »

ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ:ಕೋಡಿಹಳ್ಳಿ ಚಂದ್ರಶೇಖರ್‌

ಬೆಂಗಳೂರು: ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು ಹೇಳಿದ್ದಾರೆ. ಫ್ರೀಡಂ ಪಾರ್ಕ್‌ʼನಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು, ‘ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ.ಅನ್ನದಾತದ ವಿರೋಧಿ ಕಾಯ್ದೆಗಳನ್ನ ತಕ್ಷಣ ವಾಪಸ್‌ ಪಡೆಯಿರಿ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯನ್ನ ತರಬೇಕೋ ಬೇಡ್ವಾ ಅಂತಾ ನಾವು ನಿರ್ಧರಿಸ್ಬೇಕು. ಹಸು ಸಾಕುವ ಕುರಿತು ನಿಮ್ಮಿಂದ ಕಲಿಯಬೇಕಿಲ್ಲ’ …

Read More »

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಭಾರತೀಯ ಜನತಾ ಪಕ್ಷ ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದು,ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಭಕ್ತಿಯ ಭಂಡಾರ ಹರಿಸಿದ್ದಾರೆ.ದೇಶಾದ್ಯಂತ ಶ್ರೀ ರಾಮ ಮಂದಿರ ನಿರ್ಮಾಣಕ್ಕೊಸ್ಕರ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎನ್ನುವ …

Read More »

ದೆಹಲಿ ಟ್ರ್ಯಾಕ್ಟರ್ ಪರೇಡ್‍ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಸಾವು

ನವದೆಹಲಿ,ಜ.26- ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್‍ನಲ್ಲಿ ಗುಂಡೇಟಿನಿಂದ ಒಬ್ಬ ರೈತ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ರೈತರ ಸಂಘರ್ಷದಲ್ಲಿ ಕೆಲ ಪೊಲೀಸರಿಗೂ ಗಾಯಗಳಾಗಿದ್ದು, ಗಾಯಗೊಂಡ ಪೊಲೀಸರನ್ನು ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಐಟಿಒ ಮೆಟ್ರೋ ನಿಲ್ದಾಣದ ಸಮೀಪ ಡಿಡಿಯು ಮಾರ್ಗದಲ್ಲಿ ನಡೆದ ಸಂಘರ್ಷದಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದು, ಗುಂಡು ತಗುಲಿ ರೈತರೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ, ಪೊಲೀಸ್ ಮೂಲಗಳ ಪ್ರಕಾರ ಟ್ರ್ಯಾಕ್ಟರ್ ಚಲಾವಣೆಯ …

Read More »

ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಪ್ರತಿಭಟನಾಕಾರರು ಕೆಂಪುಕೋಟೆಗೆ ನುಗ್ಗಿ ಕೆಂಪುಕೋಟೆಯ ಮೂರು ಕಡೆಗಳಲ್ಲಿ ಧ್ವಜಾರೋಹಣ ಮಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಸ್ಥಳದಿಂದ ಎಲ್ಲರನ್ನೂ ಚದುರಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ …

Read More »

ಗೋಕಾಕ ಬಳಿ ಭಾರಿ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿ ವಶ

ಗೋಕಾಕ ತಾಲೂಕನಲ್ಲಿ ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿದ್ದ 49 ಜಿಲಿಟಿನ್ ಸ್ಫೋಟಕ ಪದಾರ್ಥಗಳನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಮಣ್ಣಿಕೇರಿ ರಾಮೇಶ್ವರ ಕೆನಾಲ್ ಹತ್ತಿರ ಈ ಸ್ಫೋಟಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಯಬಾಗ ತಾಲೂಕಿನ ನಿಪನಾಳದ ವಿಠ್ಠಲ ಯಮನಪ್ಪ ಹಳಬರ ಟ್ರ್ಯಾಕ್ಟರ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ. 23 ಇಡಿ ಕೇಬಲ್ ಹಾಗೂ ಬ್ಲಾಸ್ಟಿಂಗ್ ಚಾರ್ಜರ್ ಬ್ಯಾಟರಿ ಕೂಡ ಆತನ ಬಳಿ ಇತ್ತು. ಇದರ ಮೌಲ್ಯ 2,03,500 ರೂ. ಕುಲಗೋಡ ಪೊಲೀಸ್ ಠಾಣೆಯಲ್ಲಿ …

Read More »

ಗೋಕಾಕ: ನಗರದ ತಾಲೂಕಾ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದ ಆಶ್ರಯದಲ್ಲಿ ಜರುಗಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಮಾತನಾಡುತ್ತಿರುವುದು.

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »

ಬಿಡುವಿಲ್ಲದೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ, ಗ್ರಾಹಕರು ಕಂಗಾಲು

ನವದೆಹಲಿ: ತೈಲ ದರ ಏರಿಕೆಗೆ ಬಿಡುವಿಲ್ಲದಂತಾಗಿ, ಮಂಗಳವಾರ ಸಹ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ ಗ್ರಾಹಕರು ದಾರಿ ಕಾಣದೆ ಪರಿತಪಿಸುವಂತಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಗೆ 86ರ ಗಡಿಯನ್ನು ದಾಟಿದೆ ಡೀಸೆಲ್ ದರವು ಕಳೆದ ಒಂದು ವರ್ಷದಲ್ಲಿ ಗರಿಷ್ಠ ಏರಿಕೆ ಕಂಡು ಲೀಟರ್ ಗೆ 76ಕ್ಕಿಂತಲೂ ಹೆಚ್ಚಿದೆ. ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ …

Read More »

72ನೇ ಗಣರಾಜ್ಯೋತ್ಸವ: ಗೂಗಲ್​ ಡೂಡಲ್​ದಲ್ಲಿ ಭಾರತದ ಪರಂಪರೆ ಪ್ರದರ್ಶನ

ನವದೆಹಲಿ: ರಾಷ್ಟ್ರದ 72ನೇ ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಪ್ರಪಂಚದ ಜನಪ್ರಿಯ ಸರ್ಚ್ ಎಂಜಿನ್ ಗೂಗಲ್ ಸಹ ಗಣರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದ್ದು, ದೇಶದ ಕಲೆ ಮತ್ತು ವಾಸ್ತುಶಿಲ್ಪ, ಸಾಂಸ್ಕೃತಿಕ ಮತ್ತು ಏಕತೆಯ ಪರಂಪರೆಯನ್ನು ಡೂಡಲ್‌ನಲ್ಲಿ ಗೂಗಲ್ ಕಟ್ಟಿಕೊಟ್ಟಿದೆ. ಡೂಡಲ್ ಕಲಾಕೃತಿಯಲ್ಲಿ ಕೆಂಪು ಕೋಟೆ ಸೇರಿದಂತೆ ದೇಶದ ಐತಿಹಾಸಿಕ ಕಟ್ಟಡಗಳು, ರಾಷ್ಟ್ರಧ್ವಜದಲ್ಲಿರುವ ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ಮುಂಭಾಗದಲ್ಲಿ ದೇಶದ ವಿವಿಧ ಸಂಸ್ಕೃತಿಯ ಜನರನ್ನು ಪ್ರದರ್ಶಿಸುತ್ತಿದೆ. ಗೂಗಲ್ ಎಂಬ ಪದದ …

Read More »