ಬೆಳಗಾವಿ - ಬೆಕ್ಕಿನಕೇರಿ ಗ್ರಾಮದ ಗವಳಿ ಗಲ್ಲಿಯಲ್ಲಿ ಸುಮಾರು ಏಳು ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ಅಧಿಕೃತವಾಗಿ ಚಾಲನೆಯನ್ನು ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿ ಊರಿನಲ್ಲಿ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಲವೆಡೆ ಪೂರ್ಣಗೊಂಡಿದ್ದರೆ ಇನ್ನು ಕಲವೆಡೆ ವಿವಿಧ ಹಂತಗಳಲ್ಲಿವೆ. ಜಾತಿ, ಪಕ್ಷ, ಭಾಷೆ ಯಾವುದೇ ಭೇದವಿಲ್ಲದೆ ನಿರಂತರವಾಗಿ ಅಭಿವೃದ್ಧಿಯೆಡೆಗೆ ಕ್ಷೇತ್ರವನ್ನು ಕೊಂಡೊಯ್ಯುತ್ತಿದ್ದೇನೆ. ಅಭಿವೃದ್ಧಿ ಜನರ ಹಕ್ಕು. ಅದರಿಂದ ಯಾರೂ ವಂಚಿತರಾಗಬಾರದು …
Read More »Yearly Archives: 2021
ಜನೆವರಿ 26 ರಾಯಣ್ಣನ ಪುಣ್ಯ ದಿನ
ಸಂಗ್ರಹ: ಇಂಗಳಗಿ ದಾವಲಮಲೀಕ ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 – 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನನ – ಆಗಸ್ಟ್ ೧೫, ೧೭೯೬ ಜನ್ಮ ಸ್ಥಳ – …
Read More »ಬೆಳಗಾವಿ ಮತ್ತು ನಾಸಿಕ್ ನಡುವೆ ತಡೆರಹಿತ ವಿಮಾನಯಾನಗಳನ್ನು ಪ್ರಾರಂಭಿಸಿದ ಸ್ಟಾರ್ ಏರ್
ಬೆಳಗಾವಿ – ಸ್ಟಾರ್ ಏರ್ ತನ್ನ ಎರಡನೇ ವಾರ್ಷಿಕೋತ್ಸವದಂದು ಬೆಳಗಾವಿ ಮತ್ತು ನಾಸಿಕ್ ನಡುವೆ ತಡೆರಹಿತ ವಿಮಾನಯಾನಗಳನ್ನು ಪ್ರಾರಂಭಿಸಿದೆ. ಭಾರತದ ಪ್ರಮುಖ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ಸ್ಟಾರ್ ಏರ್, 2021 ಜನವರಿ 25 ರಿಂದ ಬೆಳಗಾವಿ ಮತ್ತು ನಾಸಿಕ್ ನಡುವೆ ನೇರ ವಿಮಾನ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್ ಅಡಿಯಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಯೋಜಿಸಿದೆ. ಸ್ಟಾರ್ ಏರ್ ಎರಡು ವರ್ಷಗಳ ಹಿಂದೆ ಈ ದಿನದಂದು …
Read More »ಮೂವರು ಸಚಿವರ ಖಾತೆಗಳಲ್ಲಿ ಮತ್ತೆ ಬದಲಾವಣೆ : ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ
ಬೆಂಗಳೂರು: ಬಿಎಸ್ ವೈ ಸಂಪುಟದ ಸಚಿವರುಗಳ ಖಾತೆಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಡಾ.ಕೆ ಸುಧಾಕರ್, ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರುಗಳ ಖಾತೆಯನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ರಾಜ್ಯಪಾಲರ ಅಂಕಿತವೂ ದೊರೆತಿದೆ. ಆರೋಗ್ಯ ಸಚಿವ ಕೆ ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿದೆ. ಮೊನ್ನೆ ಖಾತೆ ಬದಲಾವಣೆ ಸಂದರ್ಭದಲ್ಲಿ ಈ ಖಾತೆಯನ್ನು ಮಾಧುಸ್ವಾಮಿಯವರಿಗೆ ನೀಡಲಾಗಿತ್ತು. ಇದಕ್ಕೆ ಸುಧಾಕರ್ ಆಕ್ಷೇಪ ವ್ಯಕ್ತಪಡಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ ಸಿ …
Read More »ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ
ಮೈಸೂರು: ನಮ್ಮ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ. ಕಾಂಗ್ರೆಸ್- ಬಿಜೆಪಿ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಮ್ಮವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು. ಈ ಸರ್ಕಾರ ಬಲಿಷ್ಠವಾಗಿದೆ. ಬಹಳಷ್ಟು ಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ. ಸರ್ಕಾರದಲ್ಲಿ ಏನೇನು ಗೊಂದಲವಿಲ್ಲ. …
Read More »ಬೆಳಗಾವಿ ಸೇರಿ ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ರಾಜ್ಯ ಗುಪ್ತದಳ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ, ಬೆಳಗಾವಿ ಉತ್ತರ ವಲಯದ ಎಸಿಬಿಯ ಎಸ್ಪಿ ಬಿ.ಎಸ್. ನೇಮೆಗೌಡ, ಬೆಂಗಳೂರಿನ ಸಿಐಡಿಯ ಆರ್ಥಿಕ ಅಪರಾಧಗಳ ಘಟಕದ ಡಿವೈಎಸ್ಪಿ ಬಸವಣ್ಣಪ್ಪ ರಾಮಚಂದ್ರ, ಬೆಂಗಳೂರು ರೈಲ್ವೆ ವಿಭಾಗದ ಡಿವೈಎಸ್ಪಿ ಡಿ.ಅಶೋಕ್, ಬಿಡಿಎ ವಿಶೇಷ ಕಾರ್ಯಪಡೆಯ ಡಿವೈಎಸ್ಪಿ ಸಿ.ಬಾಲಕೃಷ್ಣ, ಪೊಲೀಸ್ ಕೇಂದ್ರ ಕಚೇರಿಯ ಅಪರಾಧ …
Read More »ಮಾರ್ಚ್ ನಂತರ ಶಾಸಕ ಮಹೇಶ್ ಕುಮಠಳ್ಳಿ ಸಚಿವರಾಗ್ತಾರೆ : ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ : ರಾಜ್ಯದಲ್ಲಿ ಖಾತೆ ಕ್ಯಾತೆ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಪರಮ ಆಪ್ತ ಶಾಸಕ ಮಹೇಶ್ ಕುಮಠಳ್ಳಿ ಕುರಿತು ರಾಜಕೀಯ ಭವಿಷ್ಯ ನುಡಿದ್ದಿದ್ದು, ಮಾರ್ಚ್ ಬಳಿಕ ಅವರು ಕೂಡ ಸಚಿವರಾಗ್ತಾರೆ ಎಂದು ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ಬಳಿಕ ಮಹೇಶ್ ಕುಮಟಳ್ಳಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ವಿಚಾರವಾಗಿ ಶಿಷ್ಯನಿಗೆ ಸಚಿವ ಸ್ಥಾನ ಕೊಡಿಸಲು ತಲೆ …
Read More »ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ 2.36 ಕೋಟಿ ರೂ. ವೆಚ್ಚದ ಕಾಮಗಾರಿ
ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …
Read More »ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು. ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು …
Read More »ಪುತ್ರಿಯರನ್ನು ಹೊಡೆದು ಕೊಂದ ದಂಪತಿ ವಿದ್ಯಾವಂತ ದಂಪತಿಯಿಂದ ಕೃತ್ಯ, ಚಿತ್ತೂರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ
ಚಿತ್ತೂರ್: ಮೂಢನಂಬಿಕೆಗೆ ಮೊರೆ ಹೋದ ದಂಪತಿ ತಮ್ಮಿಬ್ಬರು ವಿದ್ಯಾವಂತ ಪುತ್ರಿಯರನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ಆಂಧ್ರ ಪ್ರದೇಶ ಚಿತ್ತೂರ್ ಜಿಲ್ಲಿಯ ಮದನಪಲ್ಲಿ ಸಮೀಪದ ಶಿವನಗರ್ ಪ್ರದೇಶದಲ್ಲಿ ನಡೆದಿದೆ. ಹೆತ್ತವರ ಕೈಯಿಂದಲೇ ದುರಂತ ಅಂತ್ಯ ಕಂಡ ಪುತ್ರಿಯರನ್ನು ಅಲೇಖ್ಯಾ(27) ಮತ್ತು ಸಾಯಿ ದಿವ್ಯಾ ಎಂದು ಗುರುತಿಸಲಾಗಿದೆ. ಆರೋಪಿ ದಂಪತಿ ಪುರುಷೋತಮ್ಮ ನಾಯ್ಡು, ಪದ್ಮಜಾ ಎಂದು ಗುರುತಿಸಲಾಗಿದೆ. ಪದ್ಮಜಾ ಖಾಸಗಿ ಶಾಲೆಯ ಸಂಚಾಲಕಿಯಾದ್ರೆ ಪುರುಷೋತ್ತಮ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ. ಅಲೇಖ್ಯಾ …
Read More »