Breaking News

Yearly Archives: 2021

ಗೋಕಾಕದಲ್ಲಿ ಟ್ರಾಫಿಕ್ ಸ್ಟೇಷನ್ ಚಾಲನೆಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ನೀಡಿದರು

ಗೋಕಾಕ:  ಗೋಕಾಕ ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಅವಶ್ಯಕತೆ ಇದೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕನಲ್ಲಿ ಟ್ರಾಫಿಕ್ ಠಾಣೆಗೆ ಬೇಡಿಕೆ ಇಟ್ಟಿದ್ದೇವೆ. ಸರ್ಕಾರದಿಂದ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಈ ಎರಡು ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಠಾಣೆ ಆರಂಭಿಸಲಾಗತ್ತೆ ಎಂದು ಹೇಳಿದರು.

Read More »

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ : ಹೆಣ್ಣು ಮಕ್ಕಳ ಸಬಲೀಕರಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಉಪಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾನುವಾರ ತಿಳಿಸಿದರು. ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ನಾವು ನಮ್ಮ #DeshKiBeti ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ …

Read More »

ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಭೂಷಣ ಅವರಿಗೆ ಪತ್ರ ಬರೆದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಿಸಾನ್ ಸಂಸದ್ ಸಭೆಗೆ ವೈದ್ಯಕೀಯ ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಹಾಜರಾಗದಿದ್ದರೂ ನಾನು ರೈತರ ಪರವಾಗಿದ್ದೇನೆಂದು ಹೇಳಿದ್ದಾರೆ. ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ರೈತರ ಮತ್ತು ಸ್ನೇಹಿತರ …

Read More »

ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ

ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಬಗ್ಗೆ ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿರುವಾಗ ಸರ್ಕಾರ ತೆರಿಗೆ ಸಂಗ್ರಹ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಮೋದಿ ಜಿ ಅವರು ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆಯನ್ನು ತೋರಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಕಷ್ಟ ಅನುಭವಿಸುತ್ತಿದ್ದಾರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ” ಎಂದು …

Read More »

ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ:

ಹೊಸದಿಲ್ಲಿ: ಆರ್ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಏರ್ ಲಿಫ್ಟ್ ಮೂಲಕ ಕರೆದೊಯ್ಯಲಾಗಿದೆ. ಲಾಲೂ ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್‌ಲಿಫ್ಟ್‌ ಮೂಲಕ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, …

Read More »

ಹಿಂದಿ ರಾಷ್ಟ್ರ ಭಾಷೆ ಅಲ್ಲ:ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದನ್ನು ಶಾಲಾ ಹಂತದಿಂದಲೇ ತಿಳಿಸಬೇಕಿದೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ‌ನಿಯೋಜಿತ ಅಧ್ಯಕ್ಷರಾದ ಸಾಹಿತಿ ದೊಡ್ಡರಂಗೇಗೌಡರು ‘ಹಿಂದಿ ರಾಷ್ಟ್ರ ಭಾಷೆ’ ಎಂದು ಶುಕ್ರವಾರ ಹೇಳಿಕೆ ನೀಡಿದ್ದರು. ಆ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿಖಿಲ್‌ ಕುಮಾರಸ್ವಾಮಿ ಶನಿವಾರ ಟ್ವೀಟ್‌ ಮಾಡಿದ್ದಾರೆ. ‘ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು …

Read More »

ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ : ಈವರೆಗೆ 14 ಲೀಕಾಸುರರ ಬಂಧನ..!

ಬೆಂಗಳೂರು, ಜ.24- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಸಿದಂತೆ ಸಿಸಿಬಿ ಪೊಲೀಸರು ಈವರೆಗೂ 14 ಮಂದಿ ಆರೋಪಿಗಳನ್ನು ಬಂಸಿದ್ದಾರೆ.ಬಂತ ಆರೋಪಿಗಳಿಂದ 35 ಲಕ್ಷ ನಗದು ಮತ್ತು 4 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ನಮಗೆ ಖಚಿತ ಮಾಹಿತಿ ಬಂದಿತ್ತು. ಆ ಆಧಾರದ …

Read More »

ಬಸವಕಲ್ಯಾಣದಲ್ಲಿ ಹಾಲಿ-ಮಾಜಿ ಸಿಎಂ ಪುತ್ರರ ಫೈಟ್ ಫಿಕ್ಸ್..!?

ಬೆಂಗಳೂರು, ಜ.24- ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಯಿದ್ದು, ಬಸವ ಕಲ್ಯಾಣ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪುತ್ರರ ಅಖಾಡಕ್ಕೆ ಸಜ್ಜಾಗುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ದಿ.ಧರಂಸಿಂಗ್ ಪುತ್ರ ವಿಜಯ್ ಸಿಂಗ್ ಮುಖಾಮುಖಿಯಾಗಲಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಬಸವ ಕಲ್ಯಾಣ ಕ್ಷೇತ್ರವು ಹೈವೋಲ್ಟೇಜ್ …

Read More »

ಮಂಗಳೂರು ಬ್ರಾಂಡ್ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ

ಮಂಗಳೂರು, – ಮಂಗಳೂರಿನ ಬ್ರಾಂಡ್ ಹಾಳಾಗುವಂತಹ ದುಷ್ಕøತ್ಯ ನಡೆಸುವವರ ಬಗ್ಗೆ ಮಾಹಿತಿ ನೀಡುವಂತೆ ಮಂಗಳೂರಿನ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಂಗಳೂರು ಸುಂದರ ನಗರ. ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಇಲ್ಲಿಗೆ ಹಲವಾರು ಮಂದಿ ಬರುತ್ತಾರೆ. ಮಂಗಳೂರಿಗೆ ಒಂದು ಬ್ರಾಂಡ್ ಇದೆ. ಅದನ್ನು ಹಾಳು ಮಾಡುವಂತೆ ಇತ್ತೀಚೆಗೆ ಕೆಲ ಕೃತ್ಯಗಳು ನಡೆಯುತ್ತಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆಕೆಲವು ವ್ಯಕ್ತಿಗಳು ಧಾರ್ಮಿಕ ಕೇಂದ್ರಗಳಿಗೆ ಆಕ್ಷೇಪಾರ್ಹ ವಸ್ತುಗಳನ್ನು …

Read More »

ಗಣರಾಜ್ಯೋತ್ಸವಕ್ಕೆ ದಿನಗಣನೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ….!?

ನೋಯ್ಡಾ,- ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ನೋಯ್ಡಾ, ಘಾಜಿಯಾಬಾದ್, ಕಾನ್ಪುರ್ ಮತ್ತು ಅಲಹಬಾದ್‍ನಲ್ಲಿ ದುಷ್ಕರ್ಮಿಗಳು ಹುಸಿ ಬೆದರಿಕೆ ಕರೆ ಮಾಡಿ ಗಣರಾಜ್ಯೋತ್ಸವದಂದು ಬಾಂಬ್ ಸ್ಪೋಟಿಸುವುದಾಗಿ ಹೆದರಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿರುವ ಪ್ರಮುಖ ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳು, ಶಾಪಿಂಗ್ ಮಾಲ್‍ಗಳನ್ನು ಸ್ಪೋಟಿಸುವ ಕರೆ ಮಾಡುತ್ತಿದ್ದು ಈ ಕುರಿತಂತೆ ಸಂಬಂಧಪಟ್ಟ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ. ನಿನ್ನೆ ನೋಯ್ಡಾದ ಜನವಸತಿ ಸೆಕ್ಟರ್ 63 ರಲ್ಲಿ ಬಾಂಬ್ ಸ್ಫೋಟದ ಬೆದರಿಕೆ …

Read More »