Breaking News

Yearly Archives: 2021

ವಿನೂತನ ಪ್ರಯೋಗದಿಂದ ಗಮನ ಸೆಳೆದ ನವ ದಂಪತಿಗಳು

ಮಧುರೈ: ಇತ್ತೀಚಿನ ದಿನಗಳಲ್ಲಿ ವಿವಾಹ ಸಮಾರಂಭಗಳು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿವೆ. ಅದರಲ್ಲೂ ಕೊರೊನಾ ಕಾರಣದಿಂದಾಗಿ ವಿವಾಹಗಳಲ್ಲಿ ಹಲವು ಬದಲಾವಣೆಗಳಾಗಿರುವುದಂತು ಸುಳ್ಳಲ್ಲ. ಇಲ್ಲೊಂದು ಮದುವೆ ಸಮಾರಂಭದಲ್ಲಿ ಆಮಂತ್ರಣ ಪತ್ರಿಕೆಯಲ್ಲಿ ಗೂಗಲ್ ಪೇ ಹಾಗೂ ಫೋನ್ ಪೇ ಕ್ಯೂ ಆರ್ ಕೋಡ್ ಹಾಕಿಸಿರುವ ಪ್ರಸಂಗ ಬೆಳಕಿಗೆ ಬಂದಿದೆ. ಈ ಮೂಲಕ ವಧು-ವರರಿಗೆ ಉಡುಗೊರೆ ನೀಡ ಬಯಸುವವರು ಹಣದ ರೂಪದಲ್ಲಿ ಖಾತೆಗೆ ವರ್ಗಾಯಿಸುವಂತೆ ಮಾಡಲಾಗಿದೆ. ಇಂತದ್ದೊಂದು ವಿನೂತನ ಪ್ರಯೋಗಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿವಾಹ …

Read More »

ಬ್ರೇಕ್ ಫೇಲ್ ಆದ ಸರಕು ತುಂಬಿದ ಟ್ರಕ್ ನ್ನು 3 ಕಿ.ಮೀ ರಿವರ್ಸ್ ಓಡಿಸಿದ ಚಾಲಕ

ಮಹಾರಾಷ್ಟ್ರ: ಬ್ರೇಕ್ ಫೇಲ್ ಆದ ಟ್ರಕ್ ಒಂದನ್ನು ಚಾಲಕ 3 ಕಿಲೋಮೀಟರ್ ದೂರದವರೆಗೆ ರಿವರ್ಸ್ ನಲ್ಲಿ ಓಡಿಸಿದ್ದು, ಆಕ್ಸಿಡೆಂಟ್ ಅಪಾಯದಿಂದ ತಪ್ಪಿಸಿ ಸಮರ್ಪಕವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕು ತುಂಬಿದ ಟ್ರಕ್ ಇದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿದೆ. ಆ ವಾಹನ ರಿವರ್ಸ್ ಗೇರ್‌ನಲ್ಲಿದ್ದ ಕರಣ ನಿಲ್ಲಿಸುವುದು ಇನ್ನು ಕಷ್ಟವಾಗಿ ಪರಿವರ್ತನೆಯಾಗಿತ್ತು. ಅದು ಕೂಡ ಕಿರಿದಾದ ರಸ್ತೆ, ಜೊತೆಗೆ ವಾಹನ ಸಂಚಾರ ಇರುವ ರಸ್ತೆಯಲ್ಲಿ ವಾಹನಗಳು ಎಂದಿನಂತೆ ಓಡಾಡುತ್ತಲೇ ಇದೆ. ಇಂತಹ ರಸ್ತೆಯಲ್ಲಿ …

Read More »

ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ ಮಾಜಿ ಸಚಿವರ ಪುತ್ರ; ಡ್ರಗ್ ಪೂರೈಕೆ ಪ್ರಕರಣದಲ್ಲಿ ಮತ್ತೋರ್ವನ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆಯನ್ನು ಸಿಸಿಬಿ ಚುರುಕುಗೊಳಿಸಿದೆ. ಈ ನಡುವೆ ಪ್ರಮುಖ ಆರೋಪಿಗಳಿಗೆ ಡಗ್ಸ್ ಪೂರೈಕೆ ಮಾಡ್ತಿದ್ದ ಫೆಡ್ಲರ್ ಗಳಿಗೂ ಬಿಸಿ ಮುಟ್ಟಿಸಲಾಗುತ್ತಿದೆ. ಲೂಮ್ ಪೆಪ್ಪರ್, ಬೆನಾಲ್ಡ್ ಅಲ್ಲದೇ ಮತ್ತೊಬ್ಬ ಪೆಡ್ಲರ್​ ಈಗ ಅಂದರ್ ಆಗಿದ್ದಾನೆ. ಈ ನಡುವೆ ವಿರೇನ್ ಖನ್ನಾ ಶಿಷ್ಯನನ್ನು ಮತ್ತೆ ಬಾಡಿವಾರೆಂಟ್ ಪಡೆಯಲಾಗಿದೆ. ಹೌದು ಆದಿತ್ಯಾ ಆಳ್ವ ಬಂಧನ ಬೆನ್ನಲ್ಲೇ ಫೆಡ್ಲರ್ ಗಳಿಗೆ ಬಿಸಿ ಮುಟ್ಟಿಸಲು ಸಿಸಿಬಿ ಮುಂದಾಗಿದೆ. ಈ ನಡುವೆ ಹಲವು …

Read More »

ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ನಾಳೆ ‘ರಾಜಭವನ ಚಲೋ’ ರ‍್ಯಾಲಿ

ಬೆಂಗಳೂರು, ಜ.19- ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ಮತ್ತು ರಾಜ್ಯ, ಕೇಂದ್ರ ಸರ್ಕಾರಗಳ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ನಾಳೆ ರಾಜಭವನ ಚಲೋ ಹಮ್ಮಿಕೊಂಡಿದೆ. ಬೆಳಗ್ಗೆ 11 ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೂ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್ ಹಾಗೂ ಇತರ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಎಪಿಎಂಸಿ …

Read More »

“ಸಿದ್ದರಾಮಯ್ಯಗೆ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು”

ಮೈಸೂರು,ಜ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು …

Read More »

ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಿದ್ದು, ಮೂರು ದಿನಗಳಲ್ಲಿ 580 ಜನರಿಗೆ ಸೈಡ್ ಎಫೆಕ್ಟ್ !

ನವದೆಹಲಿ: ದೇಶಾದ್ಯಂತ ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಿದ್ದು, ಮೂರು ದಿನಗಳಲ್ಲಿ 580 ಜನರಿಗೆ ಸೈಡ್ ಎಫೆಕ್ಟ್ ಆರಂಭವಾಗಿದೆ. ಸೋಮವಾರ ದೇಶಾದ್ಯಂತ 1,48,266 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದಿದ್ದು, 133 ಜನರಿಗೆ ಅಡ್ಡಪರಿಣಾಮವುಂಟಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳಲ್ಲಿ 3,81,305 ಆರೋಗ್ಯ ಕಾರ‍್ಯಕರ್ತರಿಗೆ ಲಸಿಕೆ ನೀಡಲಾಗಿದ್ದು, ಈ ಪೈಕಿ 580 ಜನರಲ್ಲಿ ಅಡ್ದ ಪರಿಣಾಮ ಉಂಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಉತ್ತರ …

Read More »

ಮಹಾರಾಷ್ಟ್ರ ಉದ್ಭವವಾಗಿದ್ದೆ ಕನ್ನಡ ನೆಲದಿಂದ’

ಬೆಳಗಾವಿ: ‘ಬೆಳಗಾವಿಯೂ ಐತಿಹಾಸಿಕ ಕಾಲದಿಂದಲೂ, ವರ್ತಮಾನದಲ್ಲೂ ಹಾಗೂ ಭವಿಷ್ಯದಲ್ಲೂ ಕನ್ನಡಿಗರದೆ. ಇದರಲ್ಲಿ ಯಾವುದೇ ಸಂಶಯ ಬೇಡ. ಹಾಗೆ ನೋಡಿದರೆ ಇಂದಿನ ಮಹಾರಾಷ್ಟ್ರವು ಹಿಂದೊಮ್ಮೆ ಕನ್ನಡ ನೆಲವಾಗಿತ್ತು’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದ್ದಾರೆ. ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ’ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ‍ಪ್ರಕಟಣೆ ನೀಡಿರುವ ಅವರು, ‘ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆ ಉದ್ಭವವಾಗಿದ್ದೆ ಕನ್ನಡ …

Read More »

ಕಳ್ಳರ ಕೈಚಳಕ, ಹಣದ ಸಮೇತ ಎಂಟಿಎಂ ಯಂತ್ರ ಮಾಯ..!

ತುಮಕೂರು,ಜ.19- ಎಂಟಿಎಂ ಕೇಂದ್ರವೊಂದಕ್ಕೆ ನುಗ್ಗಿರುವ ಕಳ್ಳರು ಹಣದ ಸಮೇತ ಎಟಿಎಂ ಯಂತ್ರವನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಹೆಗ್ಗೆರೆಯಲ್ಲಿ ನಡೆದಿದೆ. ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಇಂಡಿಯನ್ ಓವರ್‍ಸಿಸ್ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಈ ಕಳ್ಳತನ ನಡೆದಿದೆ. ಮಧ್ಯರಾತ್ರಿ ನಾಲ್ಕು ಚಕ್ರದ ವಾಹನದ ಬಂದಿರುವ ಕಳ್ಳರು ಎಟಿಎಂ ಕೇಂದ್ರಕ್ಕೆ ನುಗ್ಗಿ ಚಾಣಾಕ್ಷತನದಿಂದ ಹಣದ ಸಮೇತ ಎಟಿಎಂ ಯಂತ್ರವನ್ನು ಕದ್ದೊಯ್ದಿದ್ದಾರೆ. ಬ್ಯಾಂಕ್ ಬಳಿಯೇ ಎಟಿಎಂ ಕೇಂದ್ರ ಹಾಗೂ …

Read More »

“ಮದುವೆಯಾಗುವುದಾಗಿ ನಂಬಿಸಿ ರೇಪ್ ಮಾಡಿದ್ದಾನೆ” : ಪೈಲಟ್ ವಿರುದ್ ನಟಿ ದೂರು

ಮುಂಬೈ, ಜ.19- ವೃತ್ತಿಪರ ಪೈಲಟ್ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಮೋಸಗೊಳಿಸಿದ್ದಾನೆ ಎಂದು ಹಿಂದಿ ಕಿರುತೆರೆ ನಟಿ ಮತ್ತು ಮಾಡೆಲ್ ಪೊಲೀಸರಿಗೆ ದೂರು ನೀಡಿರುವ ಘಟನೆ ಇಲ್ಲಿ ನಡೆದಿದೆ. ಆಕೆ ಸಲ್ಲಿಸಿರುವ ದೂರಿನ ಮೇರೆಗೆ ಓಶಿವಾರ ಪೊಲೀಸರು ಆರೋಪಿ ಪೈಲಟ್ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಕಳೆದ ಡಿಸೆಂಬರ್‍ನಲ್ಲಿ ಆರೋಪಿಯನ್ನು ಮ್ಯಾಟ್ರಿಮೋನಿಯಲ್ ಸೈಟ್‍ನಲ್ಲಿ ಪರಿಚಯ ಮಾಡಿಕೊಂಡಿದ್ದಾಳೆ. ಆರೋಪಿ ವೃತ್ತಿಪರ ಪೈಲಟ್ ಎಂದು ಹೇಳಿಕೊಂಡು ಈಕೆ ಸಂಬಂಧ ಬೆಳೆಸಿ, …

Read More »

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು,ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಂಗಳೂರು (ಜ. 19): ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಜೊತೆ ಗುರುತಿಸಿಕೊಂಡಿದ್ದ ಆರೋಪಿಯೊಬ್ಬನ ಮೇಲೆ ಕೊಲೆ ಪ್ರಯತ್ನದ ಆರೋಪವಿತ್ತು. ಆತನನ್ನು ಬಂಧಿಸಲು ಹೋದಾಗ ಇಂದು ಮುಂಜಾನೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ.  ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ 22 ವರ್ಷದ ಪ್ರವೀಣ್ ಕಾಲಿಗೆ ಪೀಣ್ಯ ಪೊಲೀಸ್ ಠಾಣೆ ಸಬ್​ ಇನ್​ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿದ್ದಾರೆ. …

Read More »