Breaking News

Daily Archives: ಜನವರಿ 2, 2022

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಎಂಎಲ್ಸಿ ಚುನಾವಣೆ ಹಿನ್ನೆಲೆ ಡಿಸಿ ಮಹಾಂತೇಶ ಹಿರೇಮಠರನ್ನು ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡಿ ಆರ್.ವೆಂಕಟೇಶಕುಮಾರ್ ಅವರನ್ನು ಡಿಸಿಯಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ಅವಧಿಗೆ ನೇಮಕ ಮಾಡಿತ್ತು. ಇದೀಗ ಪುನಃ ಮಹಾಂತೇಶ ಹಿರೇಮಠ್ ಅವರನ್ನೆ ಬೆಳಗಾವಿ ಡಿಸಿಯಾಗಿ ನಿಯುಕ್ತಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ

Read More »

ಇಂಡಿಯಾಸ್ ಫಸ್ಟ್ ಲೇಡಿ ಟೀಚರ್ ಎಂದೇ ಪ್ರಸಿದ್ಧರಾಗಿರುವ ಮಹಿಳೆ ಸಾವಿತ್ರಿಬಾಯಿ ಫುಲೆ.

ಇಂಡಿಯಾಸ್ ಫಸ್ಟ್ ಲೇಡಿ ಟೀಚರ್ ಎಂದೇ ಪ್ರಸಿದ್ಧರಾಗಿರುವ ಮತ್ತು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ. ಇಂದು ಅವರ 191 ಜನ್ಮವಾರ್ಷಿಕೋತ್ಸವ ದಿನ. ಈ ದಿನದಂದು ಭಾರತದಲ್ಲಿ ಅಕ್ಷರ ಕ್ರಾಂತ್ರಿ ಮೊದಲ ಮಹಿಳಾ ಶಿಕ್ಷಕಿಯ ಕುರಿತಾದ ಒಂದಷ್ಟು ಆಸಕ್ತಿದಾಯಕ ಸಂಗತಿಗಳನ್ನು ಇಲಿ ನೀಡಲಾಗಿದೆ ತಪ್ಪದೇ ಓದಿ ತಿಳಿಯಿರಿ.   ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ ‘ನೈಗಾಂನ್’ನಲ್ಲಿ ಹುಟ್ಟಿದರು. ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ …

Read More »

ಒಂದೇ ದಿನ 60 ಸಾವಿರ ಮೆಟ್ರಿಕ್‌ ಟನ್‌ ಕಬ್ಬು ನುರಿಸಿದ ನಿರಾಣಿ ಶುಗರ್

ಬಾಗಲಕೋಟೆ: ದೇಶದ ಅತಿ ದೊಡ್ಡ ಸಕ್ಕರೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಜಿಲ್ಲೆಯ ಮುಧೋಳದ ನಿರಾಣಿ ಉದ್ಯಮ ಸಮೂಹ ಸಂಸ್ಥೆ ಒಂದೇ ದಿನದಲ್ಲಿ 60,975 ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ಮೂಲಕ ಹೊಸ ದಾಖಲೆ ಬರೆದಿದೆ. ದಕ್ಷಿಣ ಭಾರತದಲ್ಲಿ ಒಂದೇ ದಿನದಲ್ಲಿ ಸಕ್ಕರೆ ಉದ್ಯಮ ಸಮೂಹವೊಂದು ಅತ್ಯಧಿಕ ಕಬ್ಬು ನುರಿಸಿದ ದಾಖಲೆ ಇದಾಗಿದೆ ಎಂದು ಸಮೂಹದ ತಾಂತ್ರಿಕ ಸಲಹೆಗಾರ ಆರ್‌. ವಿ. ವಟ್ನಾಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯಶಸ್ಸು ಬಾಗಲಕೋಟೆ, …

Read More »

ಒಳನೋಟ| ಕ್ಯಾನ್ ಮಾಫಿಯಾ ಮನೆ ಮನೆಗೆ ವಿಷಯುಕ್ತ ನೀರು

ಕಲಬುರಗಿ:‌ ಕುಡಿಯುವ ನೀರು ಪೂರೈಸುವ ಘಟಕಗಳು ಐಎಸ್‌ಐ ಗುರುತು ಹೊಂದಿರುವುದು ಕಡ್ಡಾಯ ಎಂಬ ಆದೇಶ ಪೂರ್ಣಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ. ಬೆಂಗಳೂರೂ ಸೇರಿ ರಾಜ್ಯದ ಎಲ್ಲಾ ನಗರ, ತಾಲ್ಲೂಕು ಕೇಂದ್ರಗಳಲ್ಲಿ ಕ್ಯಾನ್‌ಗಳ ಮೂಲಕ ವಿಷಯುಕ್ತ ನೀರು ಪೂರೈಕೆಯಾಗುತ್ತಿದೆ.   ಕಲಬುರಗಿ ನಗರದಲ್ಲಿ 44 ನೀರು ಶುದ್ಧೀಕರಣ ಘಟಕಗಳು ಅನುಮತಿ ಪಡೆದಿದ್ದು, ಅವುಗಳಲ್ಲಿ 22ಕ್ಕೆ ಮಾತ್ರ ಐಎಸ್‌ಐ ಮಾರ್ಕ್‌ ಇದೆ. ಜಿಲ್ಲೆಯಾದ್ಯಂತ 400ಕ್ಕೂ ಹೆಚ್ಚು ಅನಧಿಕೃತ ನೀರು ಸರಬರಾಜು ಘಟಕಗಳಿವೆ. 20 ಲೀಟರ್‌ ನೀರಿನ ಒಂದು …

Read More »

ಕೋರೆಗಾಂವ್ ವಿಜಯೋತ್ಸವ: ವಿಜಯಸ್ತಂಭ ಮೆರವಣಿಗೆ

ಚಾಮರಾಜನಗರ: 204ನೇ ಭೀಮ ಕೋರೆಗಾಂವ್‌ ವಿಜಯೋತ್ಸವದ ಅಂಗವಾಗಿ ನಗರದಲ್ಲಿ ಶನಿವಾರ ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಶಾಖೆಯ ವತಿಯಿಂದ ಕೋರೆಗಾಂವ್‌ ವಿಜಯಸ್ತಂಭದ ಪ್ರತಿಕೃತಿಯ ಮೆರವಣಿಗೆ ನಡೆಯಿತು. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮೆರವಣಿಗೆಗೆ ಕಾಂಗ್ರೆಸ್‌ ಮುಖಂಡ ಎಸ್.ನಂಜುಂಡಸ್ವಾಮಿ ಅವರು ಚಾಲನೆ ನೀಡಿದರು.   ಮೆರವಣಿಗೆಯು ಸತ್ಯಮಂಗಲ ರಸ್ತೆ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಚಾಮರಾಜೇಶ್ವರ ಉದ್ಯಾನವನ ರಸ್ತೆ, ನಗರಸಭಾ ಕಚೇರಿ ಮೂಲಕ ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, …

Read More »

ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕೆತ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ 2022ರ ಜನವರಿ 10 …

Read More »