Breaking News

Monthly Archives: ಜನವರಿ 2022

ಕಾಂಗ್ರೆಸ್​ ಬಿಟ್ಟು ಹೋದವರು ಮತ್ತೇ ವಾಪಸ್​ ಆದರೆ ಆಶ್ಚರ್ಯವೆನಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ

ಬೆಳಗಾವಿ: ಈಗಾಗಲೇ ಕಾಂಗ್ರೆಸ್​ ಬಿಟ್ಟು ಹೋದವರು ಮತ್ತೇ ವಾಪಸ್​ ಆದರೆ ಆಶ್ಚರ್ಯವೆನಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಗೋಕಾಕ್​ನಲ್ಲಿ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ನ ಕೆಲ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ಸತ್ಯ. ಹೀಗಾಗಿ ಮುಂದಿನ ದಿನದಲ್ಲಿ ಕಾಂಗ್ರೆಸ್​ ತೊರೆದು ಹೋದವರು ಮತ್ತೆ ಬಂದರೆ ಅಚ್ಚರಿ ಪಡುವಂತದ್ದು ಏನಿಲ್ಲ ಎಂದು ಹೇಳುವ ಮೂಲಕ ಹೊಸ ಬಾಂಬ್​ ಸಿಡಿಸಿದ್ದಾರೆ. ಸಿದ್ಧರಾಮಯ್ಯ ನನ್ನ ಗುರುಗಳು ಎಂಬ ಲಖನ್ ಜಾರಕಿಹೊಳಿ …

Read More »

ರವಿ ಚೆನ್ನಣ್ಣನವರ್ ವರ್ಗಾವಣೆ; ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ನೇಮಕ

ಬೆಂಗಳೂರು: ಇತ್ತೀಚೆಗೆ ಸಾಕಷ್ಟು ಆರೋಪ ಹಾಗೂ ವಿವಾದಗಳಿಗೆ ಈಡಾಗಿದ್ದ ಹಿರಿಯ ಐಪಿಎಸ್​ ಅಧಿಕಾರಿ ರವಿ ಚನ್ನಣ್ಣನವರ್​ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಎಕ್ಸಿಕ್ಯೂಟಿವ್​​ ಸ್ಥಾನದಿಂದ ನಾನ್​​-ಎಕ್ಸಿಕ್ಯೂಟಿವ್ ಸ್ಥಾನಕ್ಕೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ. ಸಿಐಡಿಯಲ್ಲಿ ಅಧಿಕಾರಿಯಾಗಿದ್ದ ರವಿ ಚನ್ನಣ್ಣನವರ್​​ ಅವರನ್ನ ಸರ್ಕಾರ ನಿಗಮ ಮಂಡಳಿಗೆ ವರ್ಗಾವಣೆ ಮಾಡಿರೋದು ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೇವಲ ರವಿ ಚನ್ನಣ್ಣನವರ್ ಮಾತ್ರವಲ್ಲ, ಒಟ್ಟು ಒಂಬತ್ತು ಐಪಿಎಸ್​ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ …

Read More »

ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ ಮೊದಲ ವಾರದಲ್ಲಿ ಬಜೆಟ್

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.

Read More »

ವಾರದಲ್ಲಿ 5 ದಿನ ಆದೇಶ ವಾಪಾಸ್ ಪಡೆದ ರಾಜ್ಯ ಸರ್ಕಾರ: ಇನ್ಮುಂದೆ ಶನಿವಾರವೂ ಸರ್ಕಾರಿ ನೌಕರಿಗೆ ಕೆಲಸ

ಬೆಂಗಳೂರು: ಕೊರೋನಾ ಸೋಂಕಿನ ( Coronavirus ) ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ( Weekend Curfew ) ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ( Government Employees ) ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ( Holiday ) ಮಾಡಲಾಗಿತ್ತು. ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 …

Read More »

ಸಂಪುಟ ರಚನೆಯ ಬಿಸಿಬಿಸಿ ಸುದ್ದಿ: ಬೊಮ್ಮಾಯಿ ಸೇಫ್, 6 ಸಚಿವರು ಔಟ್, 9 ಇನ್?

ಜನವರಿ 28ರ ದಿನಾಂಕ ಬಸವರಾಜ ಬೊಮ್ಮಾಯಿಯವರಿಗೆ ಮಹತ್ವದ ದಿನ. ಅಂದು ಅವರು 62ನೇ ವಸಂತಕ್ಕೆ ಕಾಲಿಡುತ್ತಿರುವುದು ಒಂದು ಕಡೆಯಾದರೆ, ಮುಖ್ಯಮಂತ್ರಿಯಾಗಿ ಆರು ತಿಂಗಳು ಪೂರ್ಣಗೊಳಿಸುತ್ತಿರುವುದು ಇನ್ನೊಂದು ಕಡೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಜೊತೆಗೆ, ಆಡಳಿತದ ಪಕ್ಷಿನೋಟ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ಬದಲಾದ ರಾಜಕೀಯದಲ್ಲಿ ಯಡಿಯೂರಪ್ಪನವರ ನಿರ್ಗಮನದ ನಂತರ, ರಾಜಕೀಯ ವಿಶ್ಲೇಷಕರ ಲೆಕ್ಕಾಚಾರವನ್ನೂ ಮೀರಿ ಬೊಮ್ಮಾಯಿಯವರಿಗೆ ಸಿಎಂ ಪಟ್ಟ ಒಲಿದಿತ್ತು. ಆದರೆ, ಬಿಟ್ ಕಾಯಿನ್ ಸದ್ದು …

Read More »

ನಾಳೆ ಸಿಎಂ ಜನ್ಮದಿನ. ಹೀಗಾಗಿ ನಾಡಿನ ಜನತೆಗೆ ಬರ್ತ್​ಡೇ ಗಿಫ್ಟ್ ಕೊಡುವ ಬಗ್ಗೆ ಸಿಎಂ ಏನ್​ ಹೇಳಿದ್ರು..? ಈ ವರದಿ ಓದಿ.

  ಬೆಂಗಳೂರು: ನಮ್ಮದು ಸ್ಪಂದನಾಶೀಲ ಸರ್ಕಾರ. ಹಾಗಾಗಿ ನಾವು ಯಾವುದೇ ಸರ್ಪೈಸ್ ಘೋಷಣೆ ಮಾಡುವುದಿಲ್ಲ. ಅಗತ್ಯಕ್ಕೆ ತಕ್ಕಂತೆ ಸ್ಪಂದಿಸುತ್ತಾ ಹೋಗುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಸಿಎಂ ಬೊಮ್ಮಾಯಿ ಹೇಳಿಕೆಆರ್.ಟಿ. ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಜೆಂಡಾ ಪ್ರಕಾರ ಚರ್ಚೆ ನಡೆಯಲಿದೆ. ನಂತರ ಇತರ ವಿಷಯಗಳ ಚರ್ಚೆ ವೇಳೆ ಹಲವಾರು ವಿಚಾರಗಳ ಕುರಿತು ಚರ್ಚೆ ಮಾಡುತ್ತೇವೆ. 

Read More »

ದೇಶದಲ್ಲಿ 2.86 ಲಕ್ಷ ಹೊಸ ಪ್ರಕರಣ,

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,86,384 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೂಲಕ ಬುಧವಾರಕ್ಕೆ ಹೋಲಿಸಿದಾಗ ಅಲ್ಪ ಏರಿಕೆ ಕಂಡುಬಂದಿದೆ. ಬುಧವಾರದಂದು 2.85 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಕಳೆದ 24 ತಾಸಿನಲ್ಲಿ 573 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 3,06,357 ಮಂದಿ ಗುಣಮುಖರಾಗಿದ್ದು, ಒಟ್ಟು 3,76,77,328 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣ …

Read More »

‘ಈ ಬಾರಿ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ’ – ಸಚಿವ ನಾಗೇಶ್

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು. ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ …

Read More »

ಹೃದಯಾಘಾತದಿಂದ ಎಎಸ್‌ಐ ಸುರೇಶ್​ ಸಾವು

ಶಿವಮೊಗ್ಗ: ನಗರದ ದೊಡ್ಡಪೇಟೆ ಠಾಣೆಯ ಎಎಸ್‌ಐ ಸುರೇಶ್(49) ಅವರು ಗುರುವಾರ ಬೆಳಗಿನಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಅವರು ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇರ್ಪಡೆಯಾಗಿದ್ದರು. ಸೇವಾ ಹಿರಿತನದ ಮೇಲೆ ಎಎಸ್‌ಐಗೆ ಬಡ್ತಿ ಪಡೆದಿದ್ದರು.  

Read More »

ಡಿ.ಕೆ. ಶಿವಕುಮಾರ್ ಗೂ ನಮಗೂ ಹೊಂದಾಣಿಕೆಯಾಗಲ್ಲ. ,ಶೀಘ್ರವೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ: ಸಿ.ಎಂ. ಇಬ್ರಾಹಿಂ

ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು …

Read More »