Breaking News

Monthly Archives: ಜನವರಿ 2022

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಸಲುವಾಗಿ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ವಿಜಯಪುರ ಜಿಲ್ಲೆಯ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಡೆದಾಡುವ ದೇವರು ಎಂದೇ ಖ್ಯಾತಿ. ತಮ್ಮ ಪ್ರವಚನಾಮೃತದಿಂದ ವಿಶ್ವದೆಲ್ಲೆಡೆ ಖ್ಯಾತಿ ಹೊಂದಿದ್ದಾರೆ. ಉತ್ತರ ಕರ್ನಾಟಕದ ಆರಾಧ್ಯದೈವರು ಇತ್ತಿಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲೆಂದು ಮುಸ್ಲಿಂ ಬಾಂಧವರು ಬಸವನಾಡು ವಿಜಯಪುರದ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.  ನಡೆದಾಡುವ ದೇವರು ಭಕ್ತರ ಆರಾಧ್ಯ ದೈವ ಸಿದ್ದೇಶ್ವರ ಸ್ಮಾಮಿಜಿಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ಮುಸ್ಲಿಂ ‌ಬಾಂಧವರು ದರ್ಗಾದಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಿದ್ದೇಶ್ವರ …

Read More »

ಗೋಕಾಕ ತಾಲೂಕಿನ ಕೊಣ್ಣೂರಿನ ಬೈಕ್ ಸವಾರ. ಪೋಲಿಸ ಸಿಬ್ಬಂದಿಗೆ ಎಕವಚನದಲ್ಲಿ ವಾಗ್ವಾದ

ಎರಡನೆಯ ವಾರದ ವಿಕೆಂಡ್ ಕರ್ಪ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಕೊರೊನಾ ನಿಯಮ ಪಾಲಿಸದೆ ಇರುವವರಿಗೆ ದಂಡ ವಿಧಿಸುವ ಸಮಯದಲ್ಲಿ ಪೋಲಿಸನ ಜೊತೆಯಲ್ಲಿ ಕಿರಿಕ್ ಮಾಡಿಕೊಂಡು ನಾವು ದುಡಿಯೋದು ಹತ್ತುರೂಪಾಯಿ,ದಿನಾಲು ದುಡಿದ್ದನ್ನ ನಿಮಗೆ ಕೊಡಬೇಕಾ,ಯಾವದ್ರಿ ಗವರ್ನಮೆಂಟ್,ನಾನು ದಂಡ ನೀಡೊದಿಲ್ಲ ನನ್ನ ಹತ್ತಿರ ಹಣವಿಲ್ಲ. ನೀನು ಬೇಕಾದರೆ ಕೊರ್ಟಿಗೆ ಹಾಕೊಗು ಎಂದು ಪೋಲಿಸ ಸಿಬ್ಬಂದಿಗೆ ಎಕವಚನದಲ್ಲಿ ವಾಗ್ವಾದಕ್ಕಿಳಿದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಿನ ನಡೆದಿದೆ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳು ಹರಡದಂತೆ ತಡೆಯಲು ರಾಜ್ಯಾದ್ಯಂತ …

Read More »

ಜಿಲ್ಲೆಯಲ್ಲಿ ಇಂದು ಮತ್ತೆ 393 ಪಾಸಿಟಿವ್ ಕೇಸ್

ರಾಜ್ಯದಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 32,793 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 393 ಕೇಸ್‍ಗಳು ಪತ್ತೆಯಾಗಿವೆ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ರಾಜ್ಯದಲ್ಲಿ 32,793 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದೇ ರೀತಿ 7 ಜನರು ಇಂದು ಸಾವನ್ನಪ್ಪಿದ್ದಾರೆ. ಇಂದು ಶೇ.15ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿದೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 393 …

Read More »

ಒಂದೇ ವಾರದಲ್ಲಿ 5 ರಿಂದ 155ಕ್ಕೇರಿದ ಸೋಂಕಿತರ ಸಂಖ್ಯೆ ಏರಿಕೆ; ನವೋದಯ ವಿದ್ಯಾಲಯಲ್ಲಿ ಕೊರೊನಾ ಸ್ಫೋಟ

ಕೊಪ್ಪಳ: ಕೊರೊನಾ ಮೊದಲು ಹಾಗೂ ಎರಡನೆಯ ಅಲೆಯು (Corona Wave) ಕೊಪ್ಪಳ (Koppal) ಜಿಲ್ಲೆಗೆ ಸ್ವಲ್ಪ ತಡವಾಗಿ ಎಂಟ್ರಿ ಕೊಟ್ಟರೂ ನಂತರ ಅಬ್ಬರಕ್ಕೆ ಇಡೀ ಜಿಲ್ಲೆ ನಲುಗುವಂತೆ ಮಾಡಿತ್ತು ಇದೇ ರೀತಿ ರಾಜ್ಯದಲ್ಲಿ ಕೊರೊನಾ ಮೂರನೆಯ ಅಲೆಯ (Corona Third Wave) ಅಬ್ಬರ ಆರಂಭವಾಗಿದ್ದರೂ, ಅತ್ಯಂತ ಕಡಿಮೆ ಇದ್ದ ಸೋಂಕಿತರ ಪ್ರಕರಣಗಳು ಕಳೆದೊಂದು ವಾರದಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ. ಅದರಲ್ಲಿಯೂ ಕುಕನೂರಿನಲ್ಲಿ ನವೋದಯ ವಿದ್ಯಾಲಯದಲ್ಲಿ (Navodaya Vidyalaya) ಕೊರೊನಾ ಸ್ಫೋಟವಾಗಿದೆ. ಜಿಲ್ಲೆಯಲ್ಲಿ …

Read More »

ಬ್ರಿಟನ್ ಪ್ರಧಾನಿ ಹುದ್ದೆಗೆ ಇನ್ಪೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್?

ಲಂಡನ್: ಇನ್ಪೋಸಿಸ್ ಸಂಸ್ಥಾಪಕ ಡಾ. ಎನ್.ಆರ್ ನಾರಾಯಣ ಮೂರ್ತಿ ಅವರ ಅಳಿಯ, ಬ್ರಿಟನ್ ನ ವಿತ್ತ ಸಚಿವ ರಿಷಿ ಸುನಕ್ ಆ ದೇಶದ ಪ್ರಧಾನ ಮಂತ್ರಿಯಾಗಲಿದ್ದಾರೆಯೇ? ಹೀಗೊಂದು ಸುದ್ದಿ ಬ್ರಿಟನ್ ನಲ್ಲಿ ಹರಿದಾಡುತ್ತಿವೆ. ಹಾಲಿ ಪ್ರಧಾನಿ ಬೋರಿಸ್ ಜಾನ್ಸನ್ ಲಾಕ್ ಡೌನ್ ಜಾರಿಯಲ್ಲಿದ್ದಾಗ 2020 ಮೇ ನಲ್ಲಿ ಅವರ ಅಧಿಕೃತ ನಿವಾಸದಲ್ಲಿ ಮದ್ಯದ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿ ಆಡಳಿತ ರೂಢ ಕನ್ಸರ್ವೆಟಿವ್ ಪಕ್ಷದಿಂದ ಹಾಗೂ ವಿಪಕ್ಷದಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. …

Read More »

6 ವರ್ಷದ ಮಗನ ಜತೆ ತಡರಾತ್ರಿ ಗಂಡ ಆತ್ಮಹತ್ಯೆ! ಡೆತ್​ನೋಟ್​ನಲ್ಲಿದೆ ಪತ್ನಿ ಮತ್ತು ಎಲ್​ಐಸಿ ಏಜೆಂಟ್​ ಕೊಟ್ಟ ಕಾಟ.

ನಾಗಮಂಗಲ: 6 ವರ್ಷದ ಮಗನ ಜತೆ ತಡರಾತ್ರಿ ಕೆರೆಗೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಗ್ಗೆ ಶವಗಳನ್ನು ಹೊರ ತೆಗೆಯುತ್ತಿದ್ದಂತೆ ಈತನ ಪತ್ನಿಯೂ ಕೆರೆಗೆ ಹಾರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಪಿಟ್ಟೆಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಆತ ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿ ಪತ್ನಿ ಮತ್ತು ಮತ್ತೊಬ್ಬ ಪುರುಷನ ಹೆಸರಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪಿಟ್ಟೆಕೊಪ್ಪಲು ಗ್ರಾಮದ ಲೇಟ್​ ಬೋರೇಗೌಡರ ಮಗ ಗಂಗಾಧರಗೌಡ (36) ಮತ್ತು ಇವರ …

Read More »

2 ದಿನ ಮೊದಲೇ ಗಣರಾಜ್ಯೋತ್ಸವ ಆಚರಣೆಗೆ ಕೇಂದ್ರ ನಿರ್ಧಾರ

ನವದೆಹಲಿ, ಜ.15- ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮದಿನದ ಮೂಲಕ ಗಣರಾಜ್ಯೋತ್ಸವದ ಆಚರಣೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಜನವರಿ 26 ಗಣರಾಜ್ಯೋತ್ಸವವರಾದರೆ ಜನವರಿ 23ರ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವಾಗಿದೆ. ಸಾಮಾನ್ಯವಾಗಿ ಗಣರಾಜ್ಯತ್ಸವದ ಆಚರಣೆಗಳು ಜನವರಿ 24ರಿಂದ ಆರಂಭವಾಗುತ್ತಿದ್ದವು. ಇನ್ನು ಮುಂದೆ ನೇತಾಜಿ ಜನ್ಮ ದಿನಾಚರಣೆಯ ಜೊತೆಯಲ್ಲಿ ಗಣರಾಜ್ಯೋತ್ಸವದ ಆಚರಣೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ದೇಶದ ಇತಿಹಾಸ ಮತ್ತು ಸಂಸ್ಕøತಿಯ …

Read More »

ಬೆಳಗಾವಿಯಲ್ಲಿ ನಂದಿನಿ ಫುಡ್‍ಪಾರ್ಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ : ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು, ಜ.15- ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪನ್ನೀರ್ ಹಾಗೂ ಚೀಸ್ ಆಧಾರಿದ ಉತ್ಪನ್ನಗಳು ಮತ್ತು ಇತರೆ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದರು.ಕೆಎಂಎಫ್ 2020-21ನೆ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮೆಗಾ …

Read More »

ಸಂಕ್ರಾಂತಿ ಹಿನ್ನೆಲೆ ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರುಪಾಲು

ರಾಯಚೂರು: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ ಇಬ್ಬರು ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಶಕ್ತಿನಗರದ ಬಳಿಯ ಕೃಷ್ಣಾ ಸೇತುವೆ ಬಳಿ ಶನಿವಾರ ಈ ದುರ್ಘಟನೆ ಸಂಭವಿಸಿದೆ. ರಾಯಚೂರು ನಗರದ ಕೆಇಬಿ ಕಾಲೋನಿಯ ಗಣೇಶ್(40), ಉದಯಕುಮಾರ್ (38) ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ. ಗಣೇಶ್​​ ಮೃತದೇಹ ಪತ್ತೆಯಾಗಿದ್ದು, ಉದಯಕುಮಾರ್ ಶವಕ್ಕಾಗಿ ನದಿಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ.ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಶುಕ್ರವಾರದಂದು ನದಿಗೆ ಇಬ್ಬರು …

Read More »

ಸೇನಾ ದಿನಕ್ಕೆ ಅಭಿನಂದನೆ ಕೋರಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು

ಸೇನಾ ದಿನಕ್ಕೆ ಅಭಿನಂದನೆ ಕೋರಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು ಒಂದು ಕಡೆ ರೈತ ಹೇಗೆ ದೇಶದ ಬೆನ್ನೆಲುಬು ಇದಾರೋ ಹಾಗೆ ಸೈನಿಕ ನಮ್ಮ ಭಾರತದ ಹಿರಿಮೆ ಹೆಚ್ಚಿಸುವ ವ್ಯಕ್ತಿಗಳು ನಮ್ಮ ದೇಶದ ಗಡಿ ಭಾಗದಲ್ಲಿ ದೇಶದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಟ್ಟಿದ್ದ ಅವರು ನಮ್ಮ ಜೀವನದ ರಿಯಲ್ ಹೀರೋಗಳು ಮಳೆ ,ಬಿಸಿಲು , ಚಳಿ ಏನೇ ಇದ್ರೂ ನಮ್ಮ ಗಡಿಯಲ್ಲಿ ನಿಂತು ನಮ್ಮ ದೇಶದ ಸೇವೆಯನ್ನು ಮಾಡುತ್ತಿರುವ ಅವರಿಗೆ …

Read More »