Breaking News

Monthly Archives: ಜನವರಿ 2022

“ತುಪ್ಪ” ಖರೀದಿಸುವವರೇ ಎಚ್ಚರ .! ರಾಜಧಾನಿ ಬೆಂಗಳೂರಿನಲ್ಲಿ “ನಕಲಿ ನಂದಿನಿ ತುಪ್ಪ” ಪತ್ತೆ..!

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ದಂಧೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಜಯನಗರ, ಹನುಮಂತನಗರ ಮತ್ತು ಇತರ ಪ್ರದೇಶದಲ್ಲಿ ಸ್ಯಾಂಪಲ್‌ ಸಂಗ್ರಹಿಸಿದ ಬಳಿಕ ನಡೆಸಲಾದ ಪರೀಕ್ಷೆಯ ವೇಳೆ ನಕಲಿ ತುಪ್ಪ ಎಂದು ಬೆಳಕಿಗೆ ಬಂದಿದೆ. ನಂದಿನಿ ಮಾರ್ಕೇಟಿಂಗ್‌ ವಿಭಾದ ಹಿರಿಯ ಅಧಿಕಾರಿ ಸುರೇಶ್‌ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿಂದೆ ಮೈಸೂರಿನಲ್ಲಿ ನಕಲಿ …

Read More »

ಮಾಜಿ ಸಿಎಂ ʻಬಿಎಸ್‌ ಯಡಿಯೂರಪ್ಪʼನವರ ಮೊಮ್ಮಗಳು ಸೌಂದರ್ಯ ನೇಣಿಗೆ ಶರಣು

ಬೆಂಗಳೂರು: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ 2 ನೇ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ(30 ) ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.   30 ವರ್ಷದ ಸೌಂದರ್ಯ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2018 ರಲ್ಲಿ ಸೌಂದರ್ಯ ಡಾ. ನೀರಜ್‌ರನ್ನು ಮದುವೆಯಾಗಿದ್ದರು. ಇವರಿಗೆ ಒಂದು ಮಗುವಿದೆ. ಇಂದು ಪತಿ ಬೆಳಗ್ಗೆ 8 ಗಂಟೆಗೆ …

Read More »

ನಿಯೋಕೋವ್ ಎಂಬ ಮತ್ತೊಂದು ಕೊವಿಡ್ ರೂಪಾಂತರಿ ವಿಶ್ವಾದ್ಯಂತ ಆತಂಕ, :

ನವದೆಹಲಿ : ಭಾರತದಲ್ಲಿ ಈಗಾಗಲೇ ಕೊರೊನಾ ರೂಪಾಂತರಿಯಾದ (Covid-19 Variant) ಡೆಲ್ಟಾ ವೈರಸ್ (Delta Virus), ಒಮಿಕ್ರಾನ್ (Omicron) ವೈರಸ್​ಗಳ ಆತಂಕ ಹೆಚ್ಚಾಗಿದ್ದು, ಇದರ ನಡುವೆ ನಿಯೋಕೋವ್ ಎಂಬ ಮತ್ತೊಂದು ಕೊವಿಡ್ ರೂಪಾಂತರಿ ವಿಶ್ವಾದ್ಯಂತ ಆತಂಕ ಹೆಚ್ಚಿಸಿದೆ. ವುಹಾನ್‌ನ ಚೀನೀ ವಿಜ್ಞಾನಿಗಳ ತಂಡ ನಿಯೋಕೋವ್ ಎಂಬ ಈ ಹೊಸ ಕೊರೊನಾವೈರಸ್ ಬಗ್ಗೆ ಎಚ್ಚರಿಕೆ ನೀಡಿದೆ. ನಿಯೋಕೋವ್ (NeoCov) ರೂಪಾಂತರಿಯಿಂದ ಹೆಚ್ಚಿನ ಸಾವು ಸಂಭವಿಸುತ್ತದೆ ಮತ್ತು ಸೋಂಕಿನ ಪ್ರಮಾಣವೂ ಹೆಚ್ಚಾಗಿರುತ್ತದೆ ಎಂದು …

Read More »

ತೆರಿಗೆದಾರರಿಗೆ ಕೇಂದ್ರ ಸರ್ಕಾರದಿಂದ ಬಿಗ್‌ ಗಿಫ್ಟ್‌ : ತೆರಿಗೆ ವಿನಾಯಿತಿ ಮಿತಿ ಹೆಚ್ಚಳ

ನವದೆಹಲಿ : ಕೇಂದ್ರ ಸರ್ಕಾರವು ವೇತನದಾರರು(Wage earners) ಮತ್ತು ಪಿಂಚಣಿದಾರರಿಗೆ(pensioners) ಆಶ್ರಯ ನೀಡುವ ಸಾಧ್ಯತೆಯಿದೆ. ಸದ್ಯದಲ್ಲೇ ಮಂಡಿಸಲಿರುವ ಬಜೆಟ್ ಮೂಲಕ ಏರುತ್ತಿರುವ ಹಣದುಬ್ಬರ(Inflation) ಹೊರೆ ತಗ್ಗಿಸುವತ್ತ ಚಿತ್ತ ಹರಿಸಿದ್ದು, ತೆರಿಗೆ ಹೊರೆ ತಗ್ಗಿಸಲು ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿ(Standard deduction limit)ಯನ್ನ ಹೆಚ್ಚಿಸಲಾಗುವುದು ಎನ್ನಲಾಗ್ತಿದೆ. ಅದ್ರಂತೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಫೆಬ್ರವರಿ 1, 2022 ರಂದು ಮಂಡಿಸಲಿರುವ ಬಜೆಟ್ ಮೂಲಕ ಒಳ್ಳೆಯ ಸುದ್ದಿ ನೀಡುವ ನಿರೀಕ್ಷೆಯಿದೆ. ತೆರಿಗೆ …

Read More »

ರಾಯಚೂರು: ಅಂಬೇಡ್ಕರ್ ಭಾವಚಿತ್ರ ತೆರವು- ವ್ಯಾಪಕ ಆಕ್ರೋಶ

ರಾಯಚೂರು: ‘ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಧ್ವಜಾರೋಹಣ ನೆರವೇರಿಸಲಾಗಿದೆ’ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳಿಂದ ಜಿಲ್ಲೆಯಾದ್ಯಂತ ಗುರುವಾರ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.   ರಾಯಚೂರು ನಗರದಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಕಾರರು ಧರಣಿ ನಡೆಸಿದ್ದರಿಂದ ವಾಹನ ಸಂಚಾರ ಸ್ಥಗಿತವಾಗಿತ್ತು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಗಡೀಪಾರು ಮಾಡುವಂತೆ ಆಗ್ರಹಪಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

Read More »

ರಾಷ್ಟ್ರೀಯ ಪಕ್ಷಗಳತ್ತ ಹೋಗಿಲ್ಲ, ಮುಂದೆಯೂ ಹೋಗಲ್ಲ:H.D.K.

ಬೆಂಗಳೂರು: ‘ಅಧಿಕಾರಕ್ಕಾಗಿ ರಾಷ್ಟ್ರೀಯ ಪಕ್ಷಗಳ ಮನೆಬಾಗಿಲಿಗೆ ನಾನು ಈವರೆಗೆ ಹೋಗಿಲ್ಲ. ಮುಂದೆಯೂ ಹೋಗುವುದಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗುರುವಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಅವರು, ‘ಬೇರೆ ಪಕ್ಷಗಳು ಅತಂತ್ರವಾದಾಗ ಜೆಡಿಎಸ್ ಸ್ವತಂತ್ರವಾಗುತ್ತದೆ. ಅದು ಕುಮಾರಸ್ವಾಮಿ ಸದಾಶಯ ಆಗಿರಬಹುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಮ್ಮ ಪಕ್ಷ ಅತಂತ್ರವಾಗಿಲ್ಲ. ಅತಂತ್ರ ವಿಧಾನಸಭೆ ನಿರ್ಮಾಣವಾದಾಗ ರಾಷ್ಟ್ರೀಯ ಪಕ್ಷಗಳೇ ನಮ್ಮ ಮನೆ ಬಾಗಿಲಿಗೆ ಬಂದಿವೆ’ ಎಂದು ಹೇಳಿದರು. ಸಿ.ಎಂ ಪ್ರತಿನಿಧಿಸುವ ಪಕ್ಷದ …

Read More »

ಕಲಬುರಗಿ-ಮೇಯರ್, ಉಪಮೇಯರ್ ಚುನಾವಣೆ ಫೆ 5ಕ್ಕೆ:

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್‌ ಚುನಾವಣೆಯ ಮೀಸಲಾತಿಯನ್ನು ಬದಲಾಯಿಸಿ ಹೊಸ ಆದೇಶ ಹೊರಡಿಸಿದ ಬೆನ್ನಲ್ಲೇ ಗುರುವಾರ ಪ್ರಾದೇಶಿಕ ಆಯುಕ್ತರು ಫೆಬ್ರುವರಿ 5ರಂದು ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ್ದಾರೆ.   ಫೆ 5ರಂದು ಬೆಳಿಗ್ಗೆ 10.30ಕ್ಕೆ ನಾಮಪತ್ರವನ್ನು ಉಪ ವಿಭಾಗಾಧಿಕಾರಿಗೆ ಸಲ್ಲಿಸಬೇಕು. ಮಧ್ಯಾಹ್ನ 12ರ ಮತದಾನ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್‌ ತಿಳಿಸಿದ್ದಾರೆ. …

Read More »

ಜೆಡಿಎಸ್‌ ಶಾಸಕ ಪುಟ್ಟರಾಜು-ಸಿದ್ದರಾಮಯ್ಯ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ

ಬೆಂಗಳೂರು: ಮೇಲುಕೋಟೆ ಜೆಡಿಎಸ್‌ ಶಾಸಕ ಸಿ.ಎಸ್‌. ಪುಟ್ಟರಾಜು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಂಜೆ 7.30ರ ಸುಮಾರಿಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಟ್ಟರಾಜು ಬಂದಿದ್ದರು. ಇಬ್ಬರೂ ಸುಮಾರು 1 ಗಂಟೆ ರಾಜ್ಯ ರಾಜಕೀಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಮೇಲುಕೋಟೆಯ ವಲ್ಲಿ ಡೆಂಕಾಪುರ ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನದ ಉದ್ಘಾಟನೆ ಫೆ. 14ರಂದು ನಡೆಯಲಿದ್ದು, …

Read More »

ನಿರಾಣಿಯಾಗಲಿ, ಗುರಾಣಿಯಾಗಲಿ… ಯಾರೇ ಭ್ರಷ್ಟಾಚಾರ ಮಾಡಿದ್ರೂ ತನಿಖೆ ಆಗಲೇಬೇಕು:

ಬಿಜೆಪಿ ಹಿರಿಯ ಶಾಸಕ ಯತ್ನಾಳ್ (BJP MLA Yatnal) ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಹೆಚ್ಚು ಪ್ರಸಿದ್ಧ ಎಂದರೆ ತಪ್ಪಲ್ಲ. ಕೇವಲ ವಿರೋಧ ಪಕ್ಷದವರನ್ನು ಮಾತ್ರವಲ್ಲ ತಮ್ಮದೇ ಪಕ್ಷದವರ ಬಗ್ಗೆ ಸಹ ಹೇಳಿಕೆ ನೀಡುತ್ತಾರೆ. ಈ ಬಾರಿ ಸಹ ತಮ್ಮದೇ ಪಕ್ಷದ ಸಚಿವ ಮುರುಗೇಶ್​ ನಿರಾಣಿ (Murugesh Nirani) ವಿರುದ್ಧ ಕೆಂಡಕಾರಿದ್ದಾರೆ. ನಿರಾಣಿಯಾಗಲಿ- ಗುರಾಣಿಯಾಗಲಿ, ಯಾರೇ ಭ್ರಷ್ಟಾಚಾರ ಮಾಡಿದ್ರು ತನಿಖೆ ಆಗಬೇಕು. ಭ್ರಷ್ಟಾಚಾರ  (Corruption) ವಿಷಯ ಬಂದ್ರೆ ನಾನು ಬಹಿರಂಗವಾಗಿ ಮಾತಾಡ್ತೀನಿ …

Read More »

ಫುಡ್ ಡೆಲಿವರಿ ಬಾಯ್‌ನಿಂದ ಯುವತಿಗೆ ಕಿರುಕುಳ; ಮೊಬೈಲ್‌ಗೆ ಅಶ್ಲೀಲ ಫೋಟೋ ಕಳಿಸಿ ಕಿರಿಕಿರಿ

ಬೆಂಗಳೂರು: ಫುಡ್ ಡೆಲಿವರಿ ಬಾಯ್‌(Food delivery boy) ಯುವತಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕಸವನಹಳ್ಳಿಯಲ್ಲಿ ನಡೆದಿದೆ. ಮೊಬೈಲ್‌ಗೆ ಅಶ್ಲೀಲ ಫೋಟೋ(Photos) ಕಳಿಸಿ ಕಿರಿಕಿರಿ ಮಾಡಿದ ಯುವಕನ ವಿರುದ್ಧ ಯುವತಿ ಸ್ನೇಹಿತ ಪೊಲೀಸ್ ಆಯುಕ್ತರಿಗೆ(police commissioner) ಟ್ವೀಟ್ ಮಾಡಿದ್ದು, ಯುವತಿಗೆ ಕಿರುಕುಳ ನೀಡಿರುವ ಬಗ್ಗೆ ಪ್ರಸ್ತಾಪಿಸಿದ್ದಾನೆ. ಫುಡ್ ಡೆಲಿವರಿಗಾಗಿ ನಂಬರ್ ನೀಡಿದ್ದ ಬೆಂಗಳೂರಿನ ಕಸವನಹಳ್ಳಿಯ ಯುವತಿಗೆ ಮೆಸೇಜ್ ಮಾಡಿ ಕಿರಿಕಿರಿ ಮಾಡಿದ್ದಾನೆ. ಬಿಹಾರದ ಮೊಬೈಲ್ ಸಂಖ್ಯೆಯಿಂದ ಮೆಸೇಜ್ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ. …

Read More »