Breaking News

Daily Archives: ಮಾರ್ಚ್ 17, 2022

KSRTC: ಕರ್ನಾಟಕದಲ್ಲಿ ಸಾರಿಗೆ ನೌಕರರು ಲೈನ್‌ಮನ್‌ಗಳಿಗಿಂತ ಕಡೆ !

ಬೆಂಗಳೂರು, ಮಾ. 17: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಕೆಪಿಟಿಸಿಎಲ್ ಲೈನ್‌ಮನ್‌ಗಳಿಗಿಂತಲೂ ಕಡೆ. ಸಾರಿಗೆ ಇಲಾಖೆಯಲ್ಲಿ ಇಪ್ಪತ್ತೆಂಟು ವರ್ಷ ಸೇವೆ ಸಲ್ಲಿಸಿದ ನೌಕರರು 35 ಸಾವಿರ ವೇತನ ಪಡೆಯೋದು ಕಷ್ಟ. ಅದೇ ಕೆಪಿಟಿಸಿಎಲ್ ನಲ್ಲಿ ಲೈನ್‌ಮನ್‌ಗಳು ಗರಿಷ್ಠ 80 ಸಾವಿರ ವರೆಗೂ ಸಂಬಳ ತಗೋತಾರೆ. ಆರು ವರ್ಷವಾದ್ರೂ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಿಲ್ಲ. ನಮ್ಮ ವೇತನ ನ್ಯಾಯಸಮ್ಮತವಾಗಿ ಪರಿಷ್ಕರಣೆ ಮಾಡದಿದ್ದರೆ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕರಿಸಿ ವೋಟು …

Read More »

ಪುಟ್ಟ ಅಭಿಮಾನಿಯಿಂದ ʼಅಪ್ಪುʼ ನಮನ

ಕರ್ನಾಟಕ ರತ್ನʼ ಡಾ. ಪುನೀತ್​ ರಾಜ್​ಕುಮಾರ್​ ಜನ್ಮದಿನದ ಸಂಭ್ರಮ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಅಪ್ಪು ಜನ್ಮ ದಿನದ ಪ್ರಯುಕ್ತ ʼಜೇಮ್ಸ್ʼ​​​​ ಸಿನಿಮಾ ಕೂಡ ರಿಲೀಸ್​ ಆಗಿದ್ದು ಪುನೀತ್​ ಅಭಿಮಾನಿಗಳು ಸಿನಿಮಾ ಮಂದಿರಗಳತ್ತ ಧಾವಿಸುತ್ತಿದ್ದಾರೆ. ದೈಹಿಕವಾಗಿ ಪುನೀತ್​ ನಮ್ಮೊಂದಿಗೆ ಇಲ್ಲದೇ ಇದ್ದರೂ ಸಹ ತಾವು ಬದುಕಿದ ರೀತಿಯ ಮೂಲಕ, ತಮ್ಮ ಪ್ರತಿಭೆಯ ಮೂಲಕ ಇನ್ನೂ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ʼಕರ್ನಾಟಕ ರತ್ನʼನ ಜನ್ಮದಿನದ ಪ್ರಯುಕ್ತ ಇಂದು ಇಡೀ ರಾಜ್ಯವೇ ಸಂಭ್ರಮದಲ್ಲಿದೆ. …

Read More »

ಗೋ.ಮಧುಸೂದನ್ ಗೆ ಬಿಜೆಪಿ ಕೊಕ್: ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ್ರಾ ಬಿ.ಎಲ್ ಸಂತೋಷ್?

ಬೆಂಗಳೂರು: ಮೂರು ಬಾರಿ ಎಂಎಲ್ ಸಿಯಾಗಿ ಆಯ್ಕೆಯಾಗಿದ್ದ ಗೋ.ಮಧುಸೂದನ್ ಅವರಿಗೆ ಈ ಬಾರಿ ಟಿಕೆಟ್ ನೀಡದಿರುವುದು ಅವರ ಬೆಂಬಲಿಗರಿಗೆ ಆಘಾತ ಉಂಟು ಮಾಡಿದೆ. ವಿಧಾನ ಪರಿಷತ್ ಚುನಾವಣೆಗಾಗಿ ನಾಲ್ಕು ಸೆಟ್ ವೋಟರ್ ಲಿಸ್ಟ್ ನೊಂದಿಗೆ ಹೊಸ ಸದಸ್ಯರನ್ನು ಸೇರಿಸಲು 50 ಸಾವಿರ ಅರ್ಜಿ ಫಾರಂ ನೊಂದಿಗೆ ಸಿದ್ಧರಾಗಿದ್ದ ಮಧುಸೂದನ್ ಅವರಿಗೆ ಟಿಕೆಟ್ ನಿರಾಕರಿಸಿರುವುದು ನುಂಗಲಾರದ ತುತ್ತಾಗಿದೆ. ಮಧುಸೂಧನ್ ಅವರು ಸ್ಪರ್ಧೆಯಿಂದ ಹೊರಗುಳಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ನಗುಮೊಗದಿಂದಲೇ ಬಿಜೆಪಿ ಪದಾಧಿಕಾರಿಗಳಿಗೆ …

Read More »

ಮೂರು ನಾಗರ ಹಾವುಗಳೊಂದಿಗೆ ಯುವಕನ ಸಾಹಸ: ಸಿಟ್ಟಿಗೆದ್ದು ಕಚ್ಚಿದ ಹಾವು

ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆನಾಗರ ಹಾವಿನೊಂದಿಗ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದು ಹೇಳುತ್ತಾರೆ. ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾಜ್ …

Read More »

ಬೆಂಗಳೂರು ವಿವಿ ಉಪಕುಲಪತಿಯಾಗಿ ಕೆ.ಆರ್. ವೇಣುಗೋಪಾಲ್ ನೇಮಕ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಕೆ.ಆರ್. ವೇಣುಗೋಪಾಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯಪೀಠದ ಆದೇಶವನ್ನು ವಿಭಾಗೀಯಪೀಠ ಬುಧವಾರ ಎತ್ತಿಹಿಡಿದಿದೆ.   ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಅವರು ಈವರೆಗೆ ಕುಲಪತಿಯಾಗಿ ಮುಂದುವರಿದಿದ್ದರು. ಆದರೆ ಈಗ ಉಪಕುಲಪತಿ ವೇಣುಗೋಪಾಲ್ ತಮ್ಮ ಹುದ್ದೆ ತ್ಯಜಿಸಬೇಕಾಗುತ್ತದೆ. ಅವರ ಸೇವಾವಧಿ ಜೂನ್ 12ರವರೆಗೆ ಇದೆ, ಆದರೂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹುದ್ದೆ ತ್ಯಜಿಸಬೇಕು, ಇಲ್ಲವೇ ಸುಪ್ರೀಂಕೋರ್ಟ್ ಮೊರೆ ಹೋಗಿ ಕೂಡಲೇ …

Read More »

ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ನಿವಾಸಿ ಸೇನಾ ಸಮವಸ್ತ್ರ ಧರಿಸಿ ಕುಟುಂಬ ಸಮೇತ ಜೇಮ್ಸ್ ಚಿತ್ರ ನೋಡಲು ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾನೆ.

ಬೆಳಗಾವಿ-ಗಡಿನಾಡು ಗುಡಿ ಬೆಳಗಾವಿಯಲ್ಲಿ ಈಗ ಅಪ್ಪು ಅಭಿನಯಿಸಿದ ಜೇಮ್ಸ್ ಚಿತ್ರದ ಹವಾ ಜೋರಾಗಿದೆ.ನಿವೃತ್ತ ಯೋಧನೊಬ್ಬ ಸೇನಾ ಸಮವಸ್ತ್ರ ಧರಿಸಿ ಕುಟುಂಬ ಸಮೇತ ಜೇಮ್ಸ್ ಚಿತ್ರ ನೋಡಲು ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಬೆಳಗಾವಿಯ ಚಿತ್ರಾ ಚಿತ್ರಮಂದಿರಕ್ಕೆ ಕುಟುಂಬ ಸಮೇತ ಬಂದ ನಿವೃತ್ತ ಯೋಧ ಜೇಮ್ಸ್ ಚಿತ್ರ ನೋಡಿ ಅಪ್ಪು ಅವರನ್ನು ಸ್ಮರಿಸಿದ್ದಾನೆ.ಕುಂದಾನಗರಿ ಬೆಳಗಾವಿಯಲ್ಲಿ ಜೇಮ್ಸ್ ಮೇನಿಯಾ ಜೋರಾಗಿದ್ದು ಕೇಕ್ ಕಟ್ ಮಾಡುವ ಮೂಲಕ ನಿವೃತ್ತ ಯೋಧ ವಿನಾಯಕ ಮೇದಾರ್ ಪುನೀತ್ …

Read More »

ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಡಾ.ಪುನೀತ್ ರಾಜ್‍ಕುಮಾರ್ ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಭೇಟಿ ನೀಡಿ ದರ್ಶನ ಪಡೆದರು.ಇಂದು ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬದ ಹಿನ್ನೆಲೆ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಭೇಟಿ ನೀಡಿ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಇದೇ ವೇಳೆ ವರನಟ ಡಾ. ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ರಾಜ್‍ಕುಮಾರ್ ಅವರ ಸಮಾಧಿಯ ದರ್ಶನವನ್ನು ಸಹ ಪಡೆದರು.  ಅಪ್ಪು ಜನುಮ ದಿನದ ಪ್ರಯುಕ್ತ ಇಂದು …

Read More »

ಎಸಿಬಿಯವರನ್ನು ಬೀಗರೆಂದು ಭಾವಿಸಿದ ಕೆಲಸದಾಕೆ – ಡಸ್ಟ್‌ಬಿನ್, ಸಿಂಟೆಕ್ಸ್‌ನಲ್ಲೂ ಕಾಂಚಾಣ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯಾ ಸುಮಾರು 78 ಕಡೆ ಎಸಿಬಿ ಮಿಂಚಿನ ದಾಳಿ ನಡೆಸಿದೆ. ರಾಯಚೂರಿನಲ್ಲಿ ಅಶೋಕ್ ರೆಡ್ಡಿ ಮನೆಗೆ ರೇಡ್ ಮಾಡಲು ಬಂದ ಎಸಿಬಿ ಅಧಿಕಾರಿಗಳನ್ನು ನೋಡಿ ಮನೆ ಕೆಲಸದಾಕೆ ಬೀಗರೆಂದು ಭಾವಿಸಿ ಸ್ವಾಗತಿಸಿದ್ದಾರೆ. ಎಸಿಬಿ 18 ಮಂದಿ ಸರ್ಕಾರಿ ಭ್ರಷ್ಟ ಕುಬೇರರ ಜನ್ಮ ಜಾಲಾಡಿದೆ. ಬೆಂಗಳೂರು, ಮೈಸೂರು, ಮಂಗಳೂರು, ಹಾಸನ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು ಹೀಗೆ ಹಲವೆಡೆ ಏಕಕಾಲಕ್ಕೆ ರೇಡ್ ಆಗಿದೆ. ಈ ವೇಳೆ ಅಪಾರ ಪ್ರಮಾಣದ ನಗದು, …

Read More »

ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.

ಬೆಂಗಳೂರು: ಡಿಸೆಂಬರ್ 17ರ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ. ಎಂಇಎಸ್‍ನ 38 ಪುಂಡರ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣಗಳನ್ನು ಕೈಬಿಟ್ಟು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವುದಾಗಿ ಬೆಳಗಾವಿ ಅಧಿವೇಶನ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ಗುಡುಗಿದ್ದರು. ಬೆಳಗಾವಿ ರಾಜಕಾರಣಿಗಳ ಒತ್ತಡಕ್ಕೆ ತಲೆಬಾಗಿ ಪೊಲೀಸ್ ಇಲಾಖೆ ಈ …

Read More »

ರಾಜ್ಯದ 400 ಥಿಯೇಟರ್‌ಗಳಲ್ಲಿ ಜೇಮ್ಸ್ ರಿಲೀಸ್

ಬೆಂಗಳೂರು: ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬವಾಗಿದ್ದು, ಇಂದೇ ಅಪ್ಪು ಅಭಿನಯದ ಕೊನೆ ಚಿತ್ರ ಜೇಮ್ಸ್ ರಾಜ್ಯದ 400 ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಥಿಯೇಟರಿಗೆ ಆಗಮಿಸಿ ಹಬ್ಬ ಮಾಡುತ್ತಿದ್ದಾರೆ. ಅಪ್ಪು ಇಲ್ಲದೇ ಮೊದಲ ಬಾರಿಗೆ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅಪ್ಪು ಅಗಲಿದ ನೋವಿದ್ದರೂ, ಅವರ ಕೊನೆ ಸಿನಿಮಾ ಜೇಮ್ಸ್‍ನ್ನು ನೋಡುವ ಮೂಲಕ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಚಿತ್ರ …

Read More »