ಲಾತೂರು(ಮಹಾರಾಷ್ಟ್ರ): ಹಾವಿನ ದ್ವೇಷ 12 ವರ್ಷ ಎನ್ನುತ್ತಾರೆ. ಆದರೆ ಅಲ್ಲಲ್ಲಿ ಕೆಲವೊಂದು ಘಟನೆಗಳನ್ನು ನೋಡಿದರೆ ಮೈ ಝುಂ ಎನ್ನುವುದು ಉಂಟು. ಒಂದೇ ಹಾವು ಪದೇ ಪದೇ ಬಂದು ಒಬ್ಬ ವ್ಯಕ್ತಿಯನ್ನು ಕಚ್ಚುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇಎಉತ್ತವೆ. ಆದರೆ ಅಚ್ಚರಿ ಮಹಾರಾಷ್ಟ್ರದ ಲಾತೂರಿನಲ್ಲಿ ವ್ಯಕ್ತಿಯೊಬ್ಬನಿಗೆ ಇದಾಗಲೇ 500ಕ್ಕೂ ಅಧಿಕ ಬಾರಿ ಹಾವು ಬಂದು ಕಚ್ಚಿದೆ. ಅನೇಕ ಜನರು ಒಟ್ಟಿಗೆ ಕೆಲಸ ಮಾಡ್ತಿದ್ದ ಸಂದರ್ಭದಲ್ಲೂ ಅಂದರೆ ಜನ ನಿಬಿಡ ಪ್ರದೇಶದಲ್ಲಿಯೂ ಈತನಿಗೆ …
Read More »Daily Archives: ಮಾರ್ಚ್ 21, 2022
ಕೇಸರಿ ಧ್ವಜವೇ ಒಂದು ದಿನ ರಾಷ್ಟ್ರಧ್ವಜ ಆಗತ್ತೆ- ಕಲ್ಲಡ್ಕ ಪ್ರಭಾಕರ್
ಮಂಗಳೂರು: ‘ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು’ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ನೀಡಿದ್ದಾರೆ. ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ ಹೆಸರಿನಲ್ಲಿ ನಡೆದ ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿನಲ್ಲಿ ಬೃಹತ್ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ …
Read More »ಸಿಎಂ ವಿರುದ್ಧ ಎಚ್ಡಿಕೆ ಗರಂ;
ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿದ್ದಾರೆ. ಅದಕ್ಕೆ ಕಾರಣ ಆ ಮೂರು ಆರ್ ಮತ್ತು ನಾಲ್ಕು ಗಂಟೆ.. ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿನ್ನೆ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡವರನ್ನು ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಸಿಎಂ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದರು. ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆದ ಆರ್ಆರ್ಆರ್ ಸಿನಿಮಾ ಪ್ರಚಾರಾರ್ಥ ಕಾರ್ಯಕ್ರಮದಲ್ಲಿ …
Read More »ಅಂತಿಮ ದಿನದಂದು ರಕ್ತದೋಕುಳಿ; ಹೋಳಿಯಾಟದ ವೇಳೆ ಚೂರಿ ಇರಿತ, ಕಣ್ಣಿಗೂ ಚುಚ್ಚಿದ್ರು ಚಾಕು..
ಬಾಗಲಕೋಟೆ: ಈ ಊರಲ್ಲಿನ ಅಂತಿಮ ದಿನದಂದು ನಡೆದ ಹೋಳಿಯಾಟ ಅಕ್ಷರಶಃ ರಕ್ತದೋಕುಳಿ ಎಂಬಂತಾಗಿದೆ. ಏಕೆಂದರೆ ಹೋಳಿಯಾಟದಲ್ಲಿ ತೊಡಗಿದ್ದವರ ಪೈಕಿ ಇಬ್ಬರಿಗೆ ಚೂರಿ ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಬಾಗಲಕೋಟೆಯಲ್ಲಿ ಮೂರು ದಿನ ಹೋಳಿ ಹಬ್ಬ ಆಚರಣೆ ಇದ್ದು, ಇಂದು ಮೂರನೇ ದಿನ ಹೋಳಿ ಆಡುವ ಸಂದರ್ಭ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಬಣ್ಣ ಎರಚುವ ವಿಚಾರದಲ್ಲಿ ಉಂಟಾದ ಗಲಾಟೆ ಹಲ್ಲೆಯವರೆಗೂ ತಲುಪಿದೆ. ಹೋಳಿಯಾಡುತ್ತಿದ್ದ ಅವಿನಾಶ್ (24) ಮತ್ತು ಬಸವರಾಜ (22) ಈ …
Read More »ಡೀಸೆಲ್ ಬೆಲೆ ಲೀಟರ್ಗೆ 25 ರೂಪಾಯಿ ಹೆಚ್ಚಳ; ಚಿಂತೆ ಯಾರಿಗೆ?
ನವದೆಹಲಿ: ಈ ಹಿಂದೆಯೇ ಸುಳಿವು ಇದ್ದಂತೆ ತೈಲ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಡೀಸೆಲ್ ದರ ಲೀಟರ್ವೊಂದಕ್ಕೆ 25 ರೂಪಾಯಿ ಏರಿದೆ. ಅದಾಗ್ಯೂ ಚಿಲ್ಲರೆಯಾಗಿ ಡೀಸೆಲ್ ಭರಿಸಿಕೊಳ್ಳುವ ವಾಹನ ಮಾಲೀಕರು ಚಿಂತೆ ಮಾಡುವಂತಿಲ್ಲ. ಹಾಗಾದರೆ, ಈ ಬೆಲೆ ಏರಿಕೆಯ ಚಿಂತೆ ಯಾರಿಗೆ? ಹೌದು.. ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 25 ರೂ. ಹೆಚ್ಚಳವಾಗಿದ್ದರೂ ಚಿಲ್ಲರೆಯಾಗಿ ಡೀಸೆಲ್ ಭರಿಸಿಕೊಳ್ಳುವ ವಾಹನ ಮಾಲೀಕರಿಗೆ ಅದರ ಬಿಸಿ ಸದ್ಯಕ್ಕಂತೂ ತಟ್ಟುವಂತಿಲ್ಲ. ಏಕೆಂದರೆ ಈ ಬೆಲೆ ಏರಿಕೆ …
Read More »ಭಗ್ನ ಪ್ರೇಯಸಿ ಉಪನ್ಯಾಸಕಿ; ಪ್ರಿಯಕರನ ಮದುವೆ ದಿನವೇ ಆತ್ಮಹತ್ಯೆ!
ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜಿನ ಅತಿಥಿ ಉಪನ್ಯಾಸಕಿಯೊಬ್ಬರು ಪ್ರೇಮವೈಫಲ್ಯದಿಂದ ಮನನೊಂದು ತನ್ನ ಪ್ರಿಯಕರ ಮದುವೆಯಾದ ದಿನವೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಭಾನುವಾರ ಬೆಳಗ್ಗೆ ತಮ್ಮ ಮನೆಯ ಬೆಡ್ರೂಮ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಏನಿದು ಪ್ರಕರಣ?: ಸಹ್ಯಾದ್ರಿ ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಆಕೆಗೆ ವಿನೋಬನಗರದ ನಿವಾಸಿಯಾದ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆದಿತ್ತು. ಆನಂತರ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ವೈಮನಸ್ಸು ಉಂಟಾಗಿತ್ತು. ನಂತರ ಪ್ರಿಯಕರನಿಗೆ …
Read More »38 ಲಕ್ಷ ರೂ. ಬಾಡಿಗೆ ಬಾಬ್ತು ಪಾವತಿಸದ ಜಮೀರ್ ಅಹಮದ್; ಐವರು ಮಾಜಿ ಸಚಿವರಿಂದಲೂ ಬಾಕಿ..
ಬೆಂಗಳೂರು: ರಾಜ್ಯದಲ್ಲಿ ಬಿ.ಝಡ್. ಜಮೀರ್ ಅಹಮದ್ ಖಾನ್ ಸೇರಿ 6 ಮಾಜಿ ಸಚಿವರು ಸರ್ಕಾರದಿಂದ ನೀಡಲಾಗಿದ್ದ ವಸತಿ ಗೃಹಗಳ ಬಾಡಿಗೆ ಮತ್ತು ಗೃಹೋಪಯೋಗಿ ವಸ್ತುಗಳ ಬಾಬ್ತುಗಳನ್ನು ಮೂರು ವರ್ಷವಾದರೂ ಪಾವತಿಸಿಲ್ಲ. ರಾಜ್ಯದಲ್ಲಿ ಸಚಿವರಾದವರಿಗೆ ಸರ್ಕಾರದಿಂದ ಆಡಳಿತ ಕಾರ್ಯವೈಖರಿಗೆ ಅನುಕೂಲ ಆಗುವಂತೆ ವಸತಿ ಗೃಹ ನೀಡಲಾಗುತ್ತದೆ. ಕೆಲವರು ಅಧಿಕಾರ ಪೂರ್ಣಗೊಂಡರೂ ವಸತಿ ಮನೆ ಬಿಟ್ಟು ಹೋಗದೇ ಇದ್ದಲ್ಲಿ, ಎಷ್ಟು ದಿನಗಳವರೆಗೆ ಉಳಿದುಕೊಂಡಿರುತ್ತಾರೋ ಅಷ್ಟು ಅವಧಿಗೆ ಬಾಡಿಗೆ ಮತ್ತು ಗೃಹೋಪಯೋಗಿ ವಸ್ತುಗಳ ಬಾಬ್ತು ಪಾವತಿಸಬೇಕು. …
Read More »ಮತ್ತೆ ಬೆಲೆ ಏರಿಕೆಯ ಬರೆ: ದಿನಬಳಕೆ ಗ್ರಾಹಕ ಉತ್ಪನ್ನಗಳು ಶೇ.10 ತುಟ್ಟಿ ಸಾಧ್ಯತೆ
ನವದೆಹಲಿ: ಬೆಲೆ ಏರಿಕೆ ಆಘಾತದಿಂದ ಈಗಾಗಲೇ ಕಂಗೆಟ್ಟಿರುವ ಸಾಮಾನ್ಯ ಜನರಿಗೆ ಮತ್ತೊಂದು ಸುತ್ತಿನ ದುಬಾರಿ ಬರೆ ಬೀಳುವುದು ಖಚಿತವಾಗಿದೆ. ಸಗಟು ಮತ್ತು ಚಿಲ್ಲರೆ ಮಾರಾಟ ಹಣದುಬ್ಬರದ ದರ ಏರಿಕೆಯಾದ ಬೆನ್ನಲ್ಲೇ ದಿನಬಳಕೆಯ ಶೀಘ್ರ ಬಿಕರಿಯಾಗುವ ಗ್ರಾಹಕ ಸರಕುಗಳ (ಎಫ್ಎಂಸಿಜಿ) ಬೆಲೆಯನ್ನು ಶೇ.10 ಹೆಚ್ಚಿಸಲು ತಯಾರಿಕಾ ಕಂಪನಿಗಳು ಮುಂದಾಗಿವೆ. ಕೆಲವು ಕಂಪನಿಗಳು ಈಗಾಗಲೇ ಏರಿಕೆ ಮಾಡಿಯೂ ಆಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಉತ್ಪಾದನಾ ವೆಚ್ಚ ಹೆಚ್ಚಳದ ಕಾರಣ ಕಳೆದ ಜನವರಿಯಲ್ಲಿ ಎಫ್ಎಂಸಿಜಿ …
Read More »ಕೋ-ಜನರೇಷನ್ಗೆ ಬೇಕಿದೆ ನವೀಕರಣ; 62 ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಂಕಷ್ಟ!
ಬೆಳಗಾವಿ :ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 72 ಸಕ್ಕರೆ ಕಾರ್ಖಾನೆಗಳ ಪೈಕಿ 60 ಸಕ್ಕರೆ ಕಾರ್ಖಾನೆಗಳು ಕೋಜನರೇಷನ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದರೂ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ನೆರೆ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಠಿಯಿಂದ ಮಹಾರಾಷ್ಟ್ರ ಸರ್ಕಾರ, ಅಲ್ಲಿನ ಸಕ್ಕರೆ ಕಾರ್ಖಾನೆಗಳಿಗೆ ಪ್ರತಿ ಯುನಿಟ್ಗೆ 5.80 ರೂ. ವಿದ್ಯುತ್ ದರ ನೀಡುತ್ತಲಿದೆ. ಆದರೆ ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಕೋ-ಜನರೇಷನ್ ವಿದ್ಯುತ್ ಉತ್ಪಾದನೆಯ …
Read More »ನಾಲ್ಕನೇ ಅಲೆಯಿಂದ ಭಾರತದಲ್ಲಿ ಗಂಭೀರ ಪರಿಣಾಮ ಇಲ್ಲ: ಕಡ್ಡಾಯ ಮಾಸ್ಕ್ ನಿಯಮ ತೆರವಿಗೆ ಸಲಹೆ
ನವದೆಹಲಿ: ಆಗ್ನೇಯ ಏಷ್ಯಾ ಮತ್ತು ಯುರೋಪ್ನ ಕೆಲ ಭಾಗಗಳಲ್ಲಿ ಕೋವಿಡ್ ಸೋಂಕು ಮತ್ತೆ ಅಬ್ಬರಿಸುತ್ತಿದ್ದು ಕಳವಳ ಸೃಷ್ಟಿಸಿರುವುದರ ನಡುವೆ ಭಾರತದಲ್ಲಿ ಹೊಸ ಅಲೆ ಅಪ್ಪಳಿಸಿದರೂ ಗಂಭೀರ ಪರಿಣಾಮ ಬೀರದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕಡ್ಡಾಯ ಮಾಸ್ಕ್ ಧಾರಣೆ ನಿಯಮವನ್ನು ಸಡಿಲಿಸಲೂ ಕೆಲವರು ಸಲಹೆ ಮಾಡಿದ್ದಾರೆ. ನೈಸರ್ಗಿಕ ಸೋಂಕಿನ ಕಾರಣದಿಂದ ರೋಗನಿರೋಧಕತೆ (ಇಮ್ಯುನಿಟಿ) ಹೆಚ್ಚಳ ಮತ್ತು ಅಧಿಕ ಲಸಿಕೆ ನೀಡಿಕೆಯಿಂದಾಗಿ ದೇಶದಲ್ಲಿ ಮುಂದೆ ಕರೊನಾ ಅಲೆ ಅಪ್ಪಳಿಸಿದರೂ ಅದು ದೊಡ್ಡ ರೀತಿಯಲ್ಲಿ …
Read More »
Laxmi News 24×7