Breaking News

Monthly Archives: ಮಾರ್ಚ್ 2022

ಬಹುನಿರೀಕ್ಷಿತ ಆರ್​ಆರ್​ಆರ್​ ಚಿತ್ರ ರಿಲೀಸ್​; ಪಟಾಕಿ ಹೊಡೆದು, ಕೇಕೆ ಹಾಕಿ ಅಭಿಮಾನಿಗಳ ಹರ್ಷೋದ್ಘಾರ

ಬೆಂಗಳೂರು: ಬಹುನಿರೀಕ್ಷಿತ ಆರ್​ಆರ್​ಆರ್​ ಸಿನಿಮಾ (RRR Movie) ರಾಜ್ಯಾದ್ಯಂತ 450 ಥಿಯೇಟರ್​ಗಳಲ್ಲಿ ರಿಲೀಸ್ ಆಗಿದೆ. 170ಕ್ಕೂ ಹಚ್ಚು ಸಿಂಗಲ್ ಸ್ಕ್ರೀನ್‌ ಮತ್ತು 450 ಮಲ್ಟಿಪ್ಲೆಕ್ಸ್ ಸ್ಕ್ರೀನ್‌ಗಳಲ್ಲಿ ಆರ್​ಆರ್​ಆರ್​ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ಶೋ ಆರಂಭವಾಗಿದ್ದು, ಟಿಕೆಟ್ ಕೂಡ ಸೋಲ್ಡ್​ಔಟಾಗಿ, ನಾಳಿನ ಟಿಕೆಟ್​ಗೂ ಬೇಡಿಕೆ ಹೆಚ್ಚಾಗಿದೆ. ರಾಮ್‌ಚರಣ್, ಜೂ.ಎನ್‌ಟಿಆರ್ ಮತ್ತು ಆಲಿಯಾ ಭಟ್ ಅಭಿನಯದ, ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದೇ ವೇಳೆ ಜೂ.ಎನ್‌ಟಿಆರ್, ಚರಣ್ ಅಭಿಮಾನಿಗಳ …

Read More »

ದೇವನಹಳ್ಳಿ: ಸಿಮೆಂಟ್ ಲಾರಿಗಳ ಡಿಕ್ಕಿ, ಚಾಲಕ ಸಜೀವ ದಹನ

ಬೆಂಗಳೂರು: ಎರಡು ಸಿಮೆಂಟ್ ಲಾರಿಗಳು ಡಿಕ್ಕಿಯಾಗಿ, ಹೊತ್ತಿಕೊಂಡ ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ. ಭುಕ್ತಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಎರಡೂ ಸಿಮೆಂಟ್ ಸಾಗಣೆ ಲಾರಿಗಳು ಹೊತ್ತಿ ಉರಿದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಓರ್ವ ಚಾಲಕನನ್ನು ಸ್ಥಳೀಯರು ರಕ್ಷಿಸಿದರು. ಆದರೆ ಮತ್ತೋರ್ವ ಚಾಲಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟ. ಅಪಘಾತ ಮತ್ತು ಬೆಂಕಿಯಿಂದಾಗಿ ರಾಷ್ಟ್ರೀಯ …

Read More »

ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ

ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ ಬೆಳಗಾವಿ: ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ದೇಶ. ವಿವಿಧ ಜಾತಿ, ಧರ್ಮ ಕೂಡಿದ ದೇಶ. ಎಲ್ಲರೊಂದಿಗೂ ಸಂಬಂಧ ಇರುತ್ತದೆ. ಮುಸ್ಲಿಮ್‌ರಿಗೆ ವ್ಯಾಪಾರ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯಗಳು …

Read More »

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ 

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ   ಈ ಬಾರಿ ಕೋವಿಡ್ ಲಕ್ಷಣಗಳು ಕಡೆಮೇ ಆದರೂ ಸಹ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ತಾಲ್ಲೂಕು ಆಡಳಿತ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಿದ್ದಾರೆ,   ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ‌ಅಧಿಕಾರಿ‌ ಬಿ ಇ ಒ ಅವರು ನೇತೃತ್ವದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ರೀತಿಯ …

Read More »

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಏಪ್ರಿಲ್ ನಿಂದ ಗೋಧಿ, 5 ಕೆಜಿ ಅಕ್ಕಿ ಕಟ್

ಬೆಂಗಳೂರು: ಪಡಿತರ ಚೀಟಿದಾರರಿಗೆ ಸರ್ಕಾರ ಶಾಕ್ ನೀಡಿದೆ. ಪಡಿತರ ಚೀಟಿದಾರರಿಗೆ ವಿತರಿಸುವ ರಾಗಿ, ಜೋಳ ಖರೀದಿ ಪ್ರಕ್ರಿಯೆ ನಿಗದಿತ ಪ್ರಮಾಣದಲ್ಲಿ ನಡೆದಿಲ್ಲ. ಈ ಕಾರಣದಿಂದ ಏಪ್ರಿಲ್‌ 1ರಿಂದ ಪಡಿತರ ಗೋಧಿಯನ್ನು ಕೈಬಿಡಲಾಗಿದ್ದು, ಕೇವಲ ಅಕ್ಕಿ ಮತ್ತು ಹೆಚ್ಚುವರಿಯಾಗಿ 1 ಕೆ.ಜಿ ರಾಗಿ ಅಥವಾ ಜೋಳ ವಿತರಿಸಲಿದೆ.   ಈವರೆಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ (ಪಿಎಂಜಿಕೆಎವೈ)ಯಡಿ ಪ್ರತಿ ವ್ಯಕ್ತಿಗೆ 5 ಕೆ.ಜಿ ನೀಡಲಾಗ್ತಿತ್ತು. ಕೋವಿಡ್ ಬಾಬ್ತು …

Read More »

ಪಬ್ಲಿಕ್ ಟಿವಿಯ ರಂಗನಾಥ್, ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

ಬೆಂಗಳೂರು, ಮಾ.24: ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಲು ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಫೆಬ್ರವರಿ 3ರಂದು ಪಬ್ಲಿಕ್ ಟಿವಿ ವಾಹಿನಿಯು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯಡಿಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ವಾಹಿನಿಯ ಮುಖ್ಯಸ್ಥ ಎಚ್ ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗರ್ ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ’ …

Read More »

ಹಿಜಾಬ್ ಬಳಿಕ ರಾಜ್ಯವ್ಯಾಪಿ ಹರಡುತ್ತಿರುವ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ

ಬೆಂಗಳೂರು, ಮಾರ್ಚ್ 24: ಹಿಜಾಬ್ ಕಿಚ್ಚು ಕೊಂಚ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಧರ್ಮ ಧರ್ಮಗಳ ನಡುವೆ ಬಿರುಕು ಮೂಡಿಸುತ್ತಿದೆ. ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಈ ಕಿಚ್ಚು ಸದ್ಯ ವ್ಯಾಪಾರಕ್ಕೂ ಅಂಟಿಕೊಂಡಿದೆ. ಇದು ಕೊರೊನಾ ಅದರ ರೂಪಾಂತರಿಗಳಿಗಿಂತಲೂ ವೇಗವಾಗಿ ಹರಡುತ್ತಿದೆ.   ಕರಾವಳಿಯ ದೇವಸ್ಥಾನಗಳ ಜಾತ್ರೋತ್ಸವದ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ರಾಜ್ಯದಾದ್ಯಂತ ದೊಡ್ಡ ಚರ್ಚೆಯನ್ನು ಉಂಟು ಮಾಡಿದೆ. ಇದು ಸದ್ಯ ಸಿಲಿಕಾನ್ ಸಿಟಿಯತ್ತ …

Read More »

ಬಾಲಕನನ್ನು ಬೆತ್ತಲೆಗೊಳಿಸಿ ಗುಪ್ತಾಂಗಕ್ಕೆ ಬಣ್ಣ ಹಾಕಿ ವಿಕೃತಿ ಮೆರದ ಊರ ಮುಖಂಡ!

ಹೋಳಿ ಹಬ್ಬದ ದಿನ ಅಶ್ಲೀಲವಾಗಿ ನಿಂದಿಸಿದ ಅಂತ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಗುಪ್ತಾಂಗಕ್ಕೆ ಬಣ್ಣ ಹಾಕಿ ಊರ ಮುಖಂಡ ವಿಕೃತಿ ಮೆರೆದ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಡಿಯಲ್ಲಿ ನಡೆದಿದೆ. ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಹಣಮಂತರಾಯ ಎಂಬಾತ ವಿಕೃತಿ ಮೆರೆದಿದ್ದೂ ಅಲ್ಲದೇ ಅದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವಿಕೃತಿ ಮೆರೆದಿದ್ದಾನೆ.   ಹೋಳಿ ಹಬ್ಬದ ಮರುದಿನ ಅಂದರೆ ಮಾರ್ಚ್ 18ರಂದು ಹೋಳಿಹಬ್ಬದ ದಿನ …

Read More »

ನಾನು ನಿತ್ಯಾ ಮೆನನ್​ರನ್ನು ಮದ್ವೆ ಆಗಲ್ಲ, ಒಂದಲ್ಲ ಒಂದು ದಿನ ಆಕೆ ಪಶ್ಚಾತಾಪ ಪಟ್ಟೆ ಪಡುತ್ತಾಳೆ

ಕೊಚ್ಚಿ: ಮೋಹನ್ ​ಲಾಲ್​ ಅಭಿಮಾನಿಯೊಬ್ಬ ನಟಿ ನಿತ್ಯಾ ಮೆನನ್​ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಕಾಮೆಂಟ್ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅಭಿಮಾನಿ ಸಂತೋಷ್​ ವಾರ್ಕಿ, ನಿತ್ಯಾ ಮೆನನ್​ ಅವರನ್ನು ತುಂಬಾ ಇಷ್ಟ ಪಡುತ್ತಿದ್ದಾರೆ. ಹಿಂದೊಮ್ಮೆ ಮದುವೆ ಆಗಲು ಅನುಮತಿ ಕೇಳಲು ಆಕೆಯ ಮನೆಗೆ ಹೋಗಿದ್ದರಂತೆ. ಇದೀಗ ನಿತ್ಯಾ ಬಗ್ಗೆ ಸಂತೋಷ್​ ಮತ್ತೊಂದು ಫೇಸ್​ಬುಕ್​ ಪೋಸ್ಟ್​ ಮಾಡಿದ್ದಾರೆ. ​ ಇದುವರೆಗೂ ಮದುವೆ ಆಗುತ್ತೇನೆ ಅಂತಿದ್ದ ಸಂತೋಷ್​ ಇದೀಗ ನಿತ್ಯಾ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. …

Read More »

ಬಸ್​ನಲ್ಲಿ ಹುಡುಗರ ಜತೆ ಎಣ್ಣೆ ಹೊಡೆದ ವಿದ್ಯಾರ್ಥಿನಿಯರ ವೈರಲ್​ ವಿಡಿಯೋ ಅಸಲಿಯತ್ತು ಬಯಲು!

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ವಿದ್ಯಾರ್ಥಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿರುವ ಈ ವಿಡಿಯೋವನ್ನು ವಿದ್ಯಾರ್ಥಿಯೊಬ್ಬ ರೆಕಾರ್ಡ್​ ಮಾಡಿದ್ದಾನೆಂದು ತಿಳಿದುಬಂದಿದೆ. ಹುಡುಗಿಯರು ಮತ್ತು ಹುಡುಗರ ಗುಂಪೊಂದು ಶಾಲಾ ಸಮವಸ್ತ್ರದಲ್ಲೇ ಬಸ್​ನಲ್ಲಿ ಬಿಯರ್​ ಸೇವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಎಲ್ಲ ವಿದ್ಯಾರ್ಥಿಗಳು ಚೆಂಗಲ್ಪಟ್ಟು ಸರ್ಕಾರಿ ಶಾಲೆಯವರು ಎಂದು ನಂಬಲಾಗಿದೆ. ಆರಂಭದಲ್ಲಿ ಇದನ್ನು ಹಳೇ ವಿಡಿಯೋ ಎಂದು ನಂಬಲಾಗಿತ್ತು. ಆದರೆ, …

Read More »