Breaking News

Monthly Archives: ಮಾರ್ಚ್ 2022

ಬಿಜೆಪಿ ಅಭ್ಯರ್ಥಿ ಘೋಷಣೆ; ಕಾಂಗ್ರೆಸ್‌ನಿಂದ ಯಾರು?

ಬಾಗಲಕೋಟೆ: ಪದವೀಧರರು ಮತ್ತು ಶಿಕ್ಷಕರ ವಲಯದಲ್ಲಿ ಪ್ರತಿಷ್ಠೆಯ ಚುನಾವಣೆ ಮುಂಬರುವ ಮೇ ತಿಂಗಳಲ್ಲಿ ನಡೆಯಲಿದೆ. ಈ ಚುನಾವಣೆಗೆ ಆಡಳಿತಾರೂಢ ಬಿಜೆಪಿಯಿಂದ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಯಾರಿಗೆ ಕಣಕ್ಕಿಳಿಸಬೇಕೆಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆಯುತ್ತಿದೆ. ವಾಯವ್ಯ ಪದವೀಧರರ ಮತಕ್ಷೇತ್ರಕ್ಕೆ ಈ ಕ್ಷೇತ್ರದ ಹಾಲಿ ಸದಸ್ಯ ಹನಮಂತ ಆರ್‌. ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಹಾಲಿ ಸದಸ್ಯ ಅರುಣ ಶಹಾಪುರ ಅವರನ್ನೇ ಬಿಜೆಪಿ ಅಭ್ಯರ್ಥಿಗಳನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. …

Read More »

ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವ‌ನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರುಗೋಡ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವ‌ನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಮುರುಗೋಡ ಡಿಸಿಸಿ ಬ್ಯಾಂಕಿನಲ್ಲಿ ನಕಲಿ ಕೀ ಉಪಯೋಗಿಸಿ ಸುಮಾರು ನಾಲ್ಕು ಕೋಟಿಗೂ ಅಧಿಕ ನಗರದು 4.41 ಕೋಟಿ ಮತ್ತು ಬ್ಯಾಂಕಿನಲ್ಲಿ ಅಡವಿಟ್ಟ 1.5 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಮಾರ್ಚ್ 6 ರಂದು ನಡೆದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು …

Read More »

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ: ನಾರಾಯಣಗೌಡ

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ನಿಖಿಲ್ ಸೋಲುವುದಕ್ಕೆ ಅವರ ದೊಡ್ಡಪ್ಪ ರೇವಣ್ಣನೇ ಕಾರಣ ಎಂದು ಸಚಿವ ಕೆ.ಸಿ. ನಾರಾಯಣ ಹೇಳಿದ್ದಾರೆ. ನಗರದ ಕೆ.ಆರ್.ಪೇಟೆಯ ಸಿಂಧಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ. ನಿಖಿಲ್ ಕುಮಾರಸ್ವಾಮಿ ಬಗ್ಗೆ ನನಗೆ ಗೌರವ ಇದೆ. ಅವರು ಸುಮ್ಮನೆ ಮಾತನಾಡುವುದು ತಪ್ಪು. ಕುಮಾರಸ್ವಾಮಿ ಸುಪುತ್ರ ನಿಖಿಲ್ ಇನ್ನೂ ಚಿಕ್ಕ ರಾಜಕಾರಣಿ. ಪ್ರತಿಯೊಂದರ ಬಗ್ಗೆ ಮಾಹಿತಿ ತಿಳಿದಕೊಂಡು ನಿಖಿಲ್ ಮಾತನಾಡಬೇಕು. ಒಂದೂವರೆ ವರ್ಷ ಸರ್ಕಾರ …

Read More »

ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ: ಸಿದ್ದರಾಮಯ್ಯ

ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಲ್ಲ. ನನಗೆ ನಾಲ್ಕೈದು ಕ್ಷೇತ್ರಗಳಿಂದ ಸ್ಪರ್ಧಿಸಲು ಆಹ್ವಾನ ಬಂದಿದೆ. ನಾನು ಇನ್ನೂ ಎಲ್ಲಿ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನನ್ನ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಬರಲ್ಲ. ಈ ಬಗ್ಗೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, …

Read More »

ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಖಾನಾಪೂರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳಗಾವಿ: ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಖಾನಾಪೂರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಗಂಗವಾಳಿ ಗ್ರಾಮದ ನಿವಾಸಿ ಉಜ್ವಲಾ ಅರುಣ ಶಿಂಧೆ(24) ಮೃತ ಮಹಿಳೆ. ಉಜ್ವಲಾ ನಿನ್ನೆ ತೀವ್ರ ಹೆರಿಗೆ ನೋವಿನಿಂದಾಗಿ ಖಾನಾಪೂರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆರೋಗ್ಯ ಪರೀಕ್ಷಿಸಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹೊಟ್ಟೆಯಲ್ಲಿ ಅವಳಿ ಮಕ್ಕಳಿರುವುದನ್ನು ಗಮನಿಸಿ ಕೂಡಲೇ ಹೆರಿಗೆ ಮಾಡಿಸಿದ್ದಾರೆ.    ಹೆರಿಗೆ ಸಮಯದಲ್ಲಿ …

Read More »

ಗೂಂಡಾಗಿರಿ ಮಾಡಲು ಡಿಕೆಶಿ ಗೋವಾ ಹೋಗಿದ್ರಾ: ಪ್ರಹ್ಲಾದ್ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಯಾಕೆ ಗೋವಾಕ್ಕೆ ಹೋಗಿದ್ದರೂ ಎನ್ನುವುದು ಇನ್ನೂ ಅರ್ಥವಾಗಿಲ್ಲ, ತೋಳಬಳ ತೋರಿಸಲು, ಗೂಂಡಾಗಿರಿ ಮಾಡಲು ಹೋಗಿದ್ರಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದ್ರು ಎಂಬಂತೆ ಕಾಂಗ್ರೆಸ್ ನಡೆಯಾಗಿದೆ. ಫಲಿತಾಂಶ ಬರುವ ಮುನ್ನವೇ ಗೋವಾಕ್ಕೆ ಹೋಗಿ ಗೂಂಡಾಗಿರಿ ಮಾಡಲು ತಯಾರಿ ಮಾಡಿದ್ದರು ಎಂದು ಟೀಕಿಸಿದರು. ಸ್ವಾತಂತ್ರ್ಯ ನಂತರದ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧಿ ಹೇಳಿದ್ದರು. ಅದನ್ನು …

Read More »

ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ

ವಿಜಯನಗರ; ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ನಡೆದಿದೆ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಯುವಕ-ಯುವತಿ ಬಿದ್ದಿರೋ ಶಂಕೆ ಕಂಡು ಬಂದಿದೆ. ರೈಲ್ವೆ ಹಳಿಯಿಂದ 50 ಅಡಿ ದೂರದಲ್ಲಿ ಯುವತಿ ಮತ್ತು ಯುವಕನ ಮೃತದೇಹ ಪತ್ತೆಯಾಗಿದೆ. ಮೃತರ ಹೆಸರು, ವಿಳಾಸದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಇಬ್ಬರ ಮೊಬೈಲ್​​ಗಳು ಆಫ್​ ಆಗಿದ್ದು, ಸ್ಥಳಕ್ಕೆ …

Read More »

ಬೆಂಗಳೂರು; ನಿಂತಿದ್ದ ವಾಹನಗಳಿಂದ ಡೀಸೆಲ್​ ಕದಿಯುತ್ತಿದ್ದ ಕಳ್ಳರ ಕಾಲಿಗೆ ಗುಂಡಿಟ್ಟ ಪೊಲೀಸ್

ಬೆಂಗಳೂರು: ರಾತ್ರಿ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಪೊಲೀಸರು, ಆರೋಪಿಗಳನ್ನು ಬಂಧನ ಮಾಡಿರೋ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ಬಳಿ ನಡೆದಿದೆ. ಶ್ರೀನಿವಾಸ್ ಅಲಿಯಾಸ್ ರಾಜು ಗುಂಡೇಟು ತಿಂದ ಆರೋಪಿಯಾಗಿದ್ದು, ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಟಾಟಾ ಸುಮೋನಲ್ಲಿ ಬಂದು ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್, ಆನೇಕಲ್​​ನ ಜಿಗಣಿಯ ಕೆಇಬಿ ಸರ್ಕಲ್ ಬಳಿ …

Read More »

ಸಿನಿಮಾದ ಮೊದಲ ದಿನದ ಪ್ರತಿ ಶೋನ ತಲಾ 100 ಟಿಕೆಟ್​ಗಳನ್ನು ಮೇಯರ್​ ಕಚೇರಿಗೆ ಕಳುಹಿಸಿಕೊಡಿ.

ವಿಜಯವಾಡ(ಆಂಧ್ರಪ್ರದೇಶ) : ನಿಮ್ಮ ಚಿತ್ರಮಂದಿರದಲ್ಲಿ ಬಿಡುಗಡೆಯಾಗುವ ಸಿನಿಮಾದ ಮೊದಲ ದಿನದ ಪ್ರತಿ ಶೋನ ತಲಾ 100 ಟಿಕೆಟ್​ಗಳನ್ನು ಮೇಯರ್​ ಕಚೇರಿಗೆ ಕಳುಹಿಸಿಕೊಡಿ. ಹೀಗೆಂದು ವಿಜಯವಾಡ ಮೇಯರ್​ ಚಿತ್ರಮಂದಿರಗಳಿಗೆ ಕಟ್ಟಾಜ್ಞೆ ಹೊರಡಿಸಿದ್ದಾರೆ. ಪಾಲಿಕೆ ಸದಸ್ಯರು ಮತ್ತು ಮುಖಂಡರು ಸಿನಿಮಾ ಟಿಕೆಟ್​​ಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಕಾರಣಕ್ಕೆ ಮೇಯರ್​​ ರಾಯನ ಭಾಗ್ಯಲಕ್ಷ್ಮಿ ವಿಜಯವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಚಿತ್ರಮಂದಿರಗಳಿಗೆ ಇಂತಹದೊಂದು ಪತ್ರ ಬರೆದು ಸೂಚಿಸಿದ್ದಾರೆ. ಮಲ್ಟಿಪ್ಲೆಕ್ಸ್​​ನಲ್ಲಿ ತೆರೆ ಕಾಣುವ ಪ್ರತಿ ಸಿನಿಮಾದ ಮೊದಲ …

Read More »

ಯುಪಿಯಲ್ಲಿ ಬಿಜೆಪಿ ಗೆಲ್ಲಿಸಿದ ಮಾಯಾವತಿ,ಓವೈಸಿಗೆ ಪದ್ಮವಿಭೂಷಣ, ಭಾರತ ರತ್ನ ನೀಡಬೇಕು’: ಶಿವಸೇನೆ

ಮುಂಬೈ(ಮಹಾರಾಷ್ಟ್ರ): ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ದಾಖಲು ಮಾಡಿ, ಸತತ ಎರಡನೇ ಅವಧಿಗೆ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಈ ವಿಷಯವಾಗಿ ಮಾತನಾಡಿರುವ ಶಿವಸೇನೆಯ ಸಂಜಯ್ ರಾವತ್,​​ ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷೆ ಮಾಯಾವತಿ ಹಾಗೂ ಎಐಎಂಐಎಂ ಮುಖ್ಯಸ್ಥ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಕೊಡುಗೆ ನೀಡಿರುವ ಓವೈಸಿ, ಮಾಯಾವತಿಗೆ ಪದ್ಮ ವಿಭೂಷಣ ಅಥವಾ ಭಾರತ ರತ್ನ ನೀಡಬೇಕು …

Read More »