ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಕೊಂಡೋತ್ಸವ ನಡೆಯುತ್ತಿದ್ದ ವೇಳೆ ಅವಘಡ ನಡೆದಿದೆ. ಕಟ್ಟಡ ಒಂದರ ಸಜ್ಜ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾಳೆ. ಪುಟ್ಟಲಿಂಗಮ್ಮ ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸವ ಇತ್ತು. ಈ ಕೊಂಡೋತ್ಸವ ನೋಡಲು ಹಳೆಯ ಕಟ್ಟಡದ ಮೇಲೆ ಜನರು ನಿಂತಿದ್ದರು. ಹಳೆ ಕಟ್ಟಡವಾದ್ದರಿಂದ ಮನೆಯ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ದುರ್ಘಟನೆಯಲ್ಲಿ ಸುಮಾರು 30 ರಿಂದ 40 ಜನರಿಗೆ ಗಾಯವಾಗಿದೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ …
Read More »Monthly Archives: ಮಾರ್ಚ್ 2022
ಡೆತ್ನೋಟ್ ಬರೆದಿಟ್ಟು ಶಂಕರಪ್ಪ ಆತ್ಮಹತ್ಯೆ! ಮದ್ವೆಯಾದ 5 ತಿಂಗಳಲ್ಲೇ ದುರಂತ, ಪತ್ನಿ ಮೇಘನಾಳ ಗೋಳಾಟ ನೋಡಲಾಗ್ತಿಲ್ಲ.
ಕುಣಿಗಲ್: ವಯಸ್ಸಿನಲ್ಲಿ ತನಗಿಂತ 20 ವರ್ಷ ದೊಡ್ಡವನ ಜತೆ ಯುವತಿಯೇ ಇಷ್ಟಪಟ್ಟು ಸರಳವಾಗಿ ಮದುವೆ ಆಗಿದ್ದರು. ಈ ಜೋಡಿಯ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು ಕೂಡ. ‘ಒಲವಿನ ಬದುಕಿಗೆ ಪ್ರೀತಿಯೊಂದಿದ್ದರೆ ಸಾಕು ಬೇರೇನೂ ಬೇಡ. ಶುಭವಾಗಲಿ’ ಎಂದು ನೂರಾರು ಜನ ಹರಸಿದ್ದರು ಕೂಡ. ಆದರೀಗ ಈ ಜೋಡಿಯ ಬಾಳಲ್ಲಿ ದುರಂತ ಸಂಭವಿಸಿದೆ. ಯುವತಿ ಜತೆ ಸಪ್ತಪದಿ ತುಳಿದಿದ್ದ ರೈತ ಶಂಕರಪ್ಪ ಇಂದು (ಮಂಗಳವಾರ) ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ …
Read More »ನಾಲ್ಕು ಲಕ್ಷ ಹೊಸ ಬಿಪಿಎಲ್ ಕಾರ್ಡ್, ತಿಂಗಳೊಳಗೆ ವಿತರಣೆ: ಸಚಿವ ಉಮೇಶ್ ಕತ್ತಿ ಭರವಸೆ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ (ಬಿಪಿಎಲ್ ಕಾರ್ಡ್) ಬಯಸಿ ಅರ್ಜಿ ಸಲ್ಲಿಸಿದವರ ಪೈಕಿ ಮನೆ ಮನೆ ಸಮೀಕ್ಷೆ ಪೂರ್ಣಗೊಂಡ 4.25 ಲಕ್ಷ ಅರ್ಜಿದಾರರ ಜೈವಿಕ ದತ್ತಾಂಶ ಸಂಗ್ರಹಿಸಿ, ಒಂದು ತಿಂಗಳೊಳಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಭರವಸೆ ನೀಡಿದರು. ವಿಧಾನಪರಿಷತ್ನಲ್ಲಿ ಸೋಮವಾರ ಕಾಂಗ್ರೆಸ್ನ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿ, ಕಳೆದ ಮೂರು ವರ್ಷ (2022ರ ಫೆಬ್ರವರಿ ಅಂತ್ಯ)ಗಳಲ್ಲಿ ಆದ್ಯತಾ ಪಡಿತರ …
Read More »53.79 ಟನ್ ಕಬ್ಬು ಸಾಗಿಸಿ ದಾಖಲೆ
ಮುಧೋಳ: ಜಮಖಂಡಿ ತಾಲ್ಲೂಕು ನಾವಲಗಿ ಗ್ರಾಮದ ಪ್ರಗತಿಪರ ರೈತ ಬಸಪ್ಪ ಸದಪ್ಪ ಮುಗಳಖೋಡ ತಮ್ಮ ಜಮೀನಿನಲ್ಲಿ ಬೆಳೆದ 53.79 ಟನ್ ಕಬ್ಬನ್ನು ತಮ್ಮ ಟ್ರ್ಯಾಕ್ಟರ್ ನಲ್ಲಿ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಗೆ ಸಾಗಿಸಿ ದಾಖಲೆ ಮಾಡಿದರು. ನಿರಾಣಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ನಿರ್ದೇಶಕ ಎನ್.ವಿ ಪಡಿಯಾರ ಮತ್ತು ಡಿ.ಬಿ.ನಾಯಕ, ಕೆ. ದ್ವಾರಕೀಶ್, ಅವರು ಪ್ರಗತಿಪರ ರೈತ ಬಸಪ್ಪ ಅವರನ್ನು ಸನ್ಮಾನಿಸಿದರು. ‘53.79 ಟನ್ ಕಬ್ಬು ಸಾಗಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ’ ಎಂದು …
Read More »40 ಕ್ಕೂ ಹೆಚ್ಚು ಕೃಷಿ ಸಾಧನಗಳ ಆವಿಷ್ಕಾರ: ಧಾರವಾಡದ ರೈತ ಅಬ್ದುಲ್ ಖಾದರ್ ನಡಕಟ್ಟಿನ್ಗೆ ‘ಪದ್ಮಶ್ರಿ’
ನವದೆಹಲಿ: ಧಾರವಾಡದ ಕೃಷಿ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ್ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು. ಭಾರತದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಹಾಯ ಮಾಡುವ 40 ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಅವರು ಈ ವಿಶೇಷ ಮನ್ನಣೆ ಪಡೆದಿದ್ದಾರೆ. ನಾನೊಬ್ಬ ಸಾಮಾನ್ಯ ರೈತ. ಆದರೆ, ಕಳೆದ 35 ವರ್ಷಗಳಲ್ಲಿ ಕೃಷಿಯಲ್ಲಿ ಬಳಸುವ ಯಂತ್ರಗಳ ಕುರಿತು ನಾನು ನಡೆಸಿದ ಸಂಶೋಧನೆಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ …
Read More »ಹೋಮ್ ಮಿನಿಸ್ಟರ್ಗೆ ಹೇಳ್ತೀಯಾ ಹೇಳ್ಕೋ ಹೋಗು. ಆಡಿಯೋ ವೈರಲ್ ಆಗ್ತಿದ್ದಂತೆ PSI ಎತ್ತಂಗಡಿ
ಶಿವಮೊಗ್ಗ: ಹೋಮ್ ಮಿನಿಸ್ಟರ್ಗೆ ಹೇಳ್ತೀಯಾ ಹೇಳ್ಕೋ ಹೋಗು ಎಂದು ಲಾರಿ ಮಾಲೀಕರಿಗೆ ಬೆದರಿಕೆ ಹಾಕಿದ್ದರು ಎನ್ನಲಾದ ತೀರ್ಥಹಳ್ಳಿ ತಾಲೂಕು ಮಾಳೂರು ಠಾಣೆ ಪಿಎಸ್ಐ ಜಯಪ್ಪ ನಾಯ್ಕ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಜಯಪ್ಪ ನಾಯ್ಕ್ ವಿರುದ್ಧ ಇತ್ತೀಚಿಗೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ತೀರ್ಥಹಳ್ಳಿ ತಾಲೂಕಲ್ಲಿ ಮರಳು ದಂಧೆ ಅತಿಹೆಚ್ಚಾಗಿ ನಡೆಯುತ್ತಿದ್ದು, ಕೆಲ ಲಾರಿ ಮಾಲೀಕರು ಮತ್ತು ಚಾಲಕರು ಮಾಳೂರು ಪಿಎಸ್ಐ ವಿರುದ್ಧ ಎಸ್ಪಿಗೆ ದೂರು ನೀಡಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ಪಿಎಸ್ಐ ಜಯಪ್ಪ ನಾಯ್ಕ, …
Read More »ಏಪ್ರಿಲ್ 1 ರಿಂದ ಬದಲಾಗಲಿವೆ ಈ 5 ನಿಯಮಗಳು: ತಪ್ಪದೇ ಈ ಮಾಹಿತಿ ತಿಳಿದುಕೊಳ್ಳಿ
ದೆಹಲಿ: ಹಣಕಾಸು ವರ್ಷವು ಮಾರ್ಚ್ 31 ರಂದು ಕೊನೆಗೊಳ್ಳಲಿದೆ. ಹಣಕಾಸು ವರ್ಷ ಏಪ್ರಿಲ್ 1 ರಿಂದ ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳಿವೆ. ಏಪ್ರಿಲ್ 1 ರಿಂದ ಟ್ರ್ಯಾಕ್ಗಳು, ಜಿಎಸ್ಟಿ, ಪ್ಯಾನ್-ಆಧಾರ್ ಲಿಂಕ್, ಎಫ್ಡಿ ಸೇರಿದಂತೆ ಬ್ಯಾಂಕ್ನ ನಿಯಮಗಳು ಬದಲಾಗುತ್ತವೆ. ಹೀಗಾಗಿ ಅಂತಹ ಬದಲಾವಣೆಗಳ ಬಗ್ಗೆ ಅರಿತುಕೊಳ್ಳುವುದು ತುಂಬಾ ಅತ್ಯಗತ್ಯ. ಅವುಗಳು ಯಾವುವು ಎಂದು ಎಲ್ಲರೂ ತಿಳಿದುಕೊಂಡರೆ ಮುಂದಾಗುವ …
Read More »ಬಿಜೆಪಿ ಗೆಲುವಿಗೆ ಶ್ರಮಿಸಿದ ಮುಸ್ಲಿಂ ಯುವಕನ ಕೊಂದ ಕಿರಾತಕರು: ಮೃತದೇಹಕ್ಕೆ ಹೆಗಲು ಕೊಟ್ಟ ಶಾಸಕ
(ಉತ್ತರಪ್ರದೇಶ) : ಜಿಲ್ಲೆಯ ರಾಮಕೋಲಾ ಪೊಲೀಸ್ ಠಾಣೆಯ ಕಥಘರ್ಹಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮುಸ್ಲಿಂ ಯುವಕನೊಬ್ಬ ಬಿಜೆಪಿ ಪರ ಪ್ರಚಾರ ಮಾಡಿ ಸರ್ಕಾರ ರಚನೆಯಾದ ವೇಳೆ ಸಿಹಿ ಹಂಚಿದ್ದಕ್ಕೆ ಪ್ರಾಣ ಕಳೆದುಕೊಂಡಿದ್ದಾನೆ. ಪ್ರಕರಣ ಹಿನ್ನೆಲೆ ಕುಟುಂಬಸ್ಥರು ಶವ ಸಂಸ್ಕಾರ ಮಾಡಲು ನಿರಾಕರಿಸಿದ್ದರು. ಮೃತ ಬಾಬರ್ನ ಸಂಬಂಧಿಕರ ಪ್ರಕಾರ, ಇತ್ತೀಚೆಗೆ ಬಾಬರ್ 2022 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದನಂತೆ. ಇದರಿಂದ ಅಕ್ಕಪಕ್ಕದ ಜನರು ಸಿಟ್ಟಿಗೆದ್ದಿದ್ದರು …
Read More »ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಜೂನ್ ಒಳಗೆ 8 ಲಕ್ಷ `BPL’ ಕಾರ್ಡ್ ವಿತರಣೆ
ಬೆಂಗಳೂರು : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬರುವ ಜೂನ್ ಒಳಗಾಗಿ 8 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಭರವಸೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯ ನಿಧಾನವಾಗಿದೆ …
Read More »ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷತೆ ಎಂ.ಬಿ. ಪಾಟೀಲ್ ಅಧಿಕಾರ ಸ್ವೀಕಾರ
ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಚುನಾವಣ ಸಿದ್ಧತೆ ಗರಿ ಗೆದರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕೂಡ ಚುನಾವಣೆಗೆ ಕಹಳೆ ಮೊಳಗಿಸಿದೆ. ಪ್ರದೇಶ ಕಾಂಗ್ರೆಸ್ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್ ಸೋಮವಾರ ಜವಾಬ್ದಾರಿ ಸ್ವೀಕರಿಸಿದ್ದಾರೆ. ಸಮಾರಂಭವು ಕಾಂಗ್ರೆಸ್ನ ಚುನಾವಣ ಪ್ರಚಾರದ ಆರಂಭ ದಂತೆಯೇ ಇತ್ತು ಹಾಗೂ ರಾಜ್ಯ ಮುಖಂಡರ ಒಗ್ಗಟ್ಟು ಪ್ರದರ್ಶನಕ್ಕೂ ವೇದಿಕೆಯಾಯಿತು. ಎಂ.ಬಿ.ಪಾಟೀಲ್ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕರ್ನಾ ಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿ ಕಾರಕ್ಕೆ ಬರಬೇಕಾಗಿದೆ. ಅನ್ನ, ಅಕ್ಷರ, …
Read More »
Laxmi News 24×7